Homeಮುಖಪುಟ'ಅನ್ನಪೂರಣಿ' ಸಿನಿಮಾವನ್ನು ತೆಗೆದುಹಾಕಿದ ನೆಟ್‌ಫ್ಲಿಕ್ಸ್ , ವಿಹೆಚ್‌ಪಿಗೆ ಕ್ಷಮಾಪನಾ ಪತ್ರ ಬರೆದ ಝೀ ಸ್ಟುಡಿಯೋ!

‘ಅನ್ನಪೂರಣಿ’ ಸಿನಿಮಾವನ್ನು ತೆಗೆದುಹಾಕಿದ ನೆಟ್‌ಫ್ಲಿಕ್ಸ್ , ವಿಹೆಚ್‌ಪಿಗೆ ಕ್ಷಮಾಪನಾ ಪತ್ರ ಬರೆದ ಝೀ ಸ್ಟುಡಿಯೋ!

- Advertisement -
- Advertisement -

‘ಅನ್ನಪೂರಣಿ’ ತಮಿಳು ಚಲನಚಿತ್ರ ಧಾರ್ಮಿಕ ಭಾವನೆಗಳಿಗೆ ನೋವುಂಟುಮಾಡಿದೆ ಎಂದು ಹಿಂದೂ ಬಲಪಂಥೀಯ ಗುಂಪುಗಳು ವಿವಾದ ಸೃಷ್ಟಿಸಿದ ಬೆನ್ನಲ್ಲಿ ನಯನತಾರಾ ಅವರ  ‘ಅನ್ನಪೂರಣಿ’ ಚಲನ ಚಿತ್ರವನ್ನು ನೆಟ್‌ಫ್ಲಿಕ್ಸ್ ತೆಗೆದು ಹಾಕಿದ್ದು, ‘ಅನ್ನಪೂರಣಿ’ ಚಲನಚಿತ್ರದ ನಿರ್ಮಾಪಕರು ಮತ್ತು ಝೀ ಸ್ಟುಡಿಯೊ ಕ್ಷಮೆಯಾಚಿಸಿ ವಿಹೆಚ್‌ಪಿಗೆ ಪತ್ರವನ್ನು ಬರೆದಿದೆ.

ಪತ್ರದಲ್ಲಿ Zee ಸ್ಟುಡಿಯೋ, ನಾವು ಹಿಂದೂ ಮತ್ತು ಬ್ರಾಹ್ಮಣ ಸಮುದಾಯಗಳಿಗೆ ಉಂಟಾದ ಅನಾನುಕೂಲತೆ ಮತ್ತು ನೋವಿಗೆ ಈ ಮೂಲಕ ಕ್ಷಮೆಯಾಚಿಸಲು ಬಯಸುತ್ತೇವೆ ಎಂದು ಹೇಳಿದೆ. ಝೀ ಸ್ಟುಡಿಯೋ ಸಹ-ನಿರ್ಮಾಪಕರಾದ ಟ್ರೈಡೆಂಟ್ ಆರ್ಟ್ಸ್‌ನೊಂದಿಗೆ ಚಲನಚಿತ್ರವನ್ನು ಎಡಿಟ್ ಮಾಡುವವರೆಗೆ ನೆಟ್‌ಫ್ಲಿಕ್ಸ್‌ನಿಂದ ತೆಗೆದುಹಾಕಲು ಕೆಲಸ ಮಾಡುತ್ತಿದೆ ಎಂದು ಪತ್ರದಲ್ಲಿ ತಿಳಿಸಿತ್ತು.

ಚಿತ್ರದ ವಿವಾದಾತ್ಮಕ ಅಂಶಗಳನ್ನು ತಕ್ಷಣವೇ ತೆಗೆದುಹಾಕಲು ಸಹ-ನಿರ್ಮಾಪಕರಾದ ಟ್ರೈಡೆಂಟ್ ಆರ್ಟ್ಸ್‌ಗೆ Zee ಸ್ಟುಡಿಯೋಸ್ ಮನವಿ ಮಾಡಿದೆ ಎಂದು ಪತ್ರವು ಬಹಿರಂಗಪಡಿಸಿದೆ. ಹೆಚ್ಚುವರಿಯಾಗಿ ಅಗತ್ಯ ಬದಲಾವಣೆಗಳನ್ನು ಮಾಡುವವರೆಗೆ ತನ್ನ OTT ಪ್ಲಾಟ್‌ಫಾರ್ಮ್‌ನಿಂದ ‘ಅನ್ನಪೂರಣಿ’ ಯನ್ನು ತಾತ್ಕಾಲಿಕವಾಗಿ ತೆಗೆದುಹಾಕುವಂತೆ ಸ್ಟುಡಿಯೋ ನೆಟ್‌ಫ್ಲಿಕ್ಸ್‌ಗೆ ಒತ್ತಾಯಿಸಿತ್ತು.

ಇಂದು ನೆಟ್‌ಫ್ಲಿಕ್ಸ್ ಚಲನಚಿತ್ರವನ್ನು ತೆಗೆದುಹಾಕಿದೆ, ಚಲನಚಿತ್ರವನ್ನು ಆವರಿಸಿರುವ ವಿವಾದವನ್ನು  ಗಂಭೀರವಾಗಿ ಪರಿಗಣಿಸಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ತಮಿಳುನಾಡಿನಲ್ಲಿ ಚಿತ್ರವು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿದೆ. ಅಂದರೆ ಅದು ಈಗಾಗಲೇ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ನಿಂದ ಅನುಮತಿ ಪಡೆದಿದೆ.

ಜನವರಿ 8 ರಂದು ಶಿವಸೇನೆಯ ಮಾಜಿ ಕಾರ್ಯಕರ್ತ ರಮೇಶ್ ಸೋಲಂಕಿ ಮುಂಬೈನಲ್ಲಿ ‘ಅನ್ನಪೂರಣಿ’ ತಮಿಳು ಚಲನ ಚಿತ್ರದ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಚಲನಚಿತ್ರವು ಲವ್ ಜಿಹಾದ್‌ನ್ನು ಉತ್ತೇಜಿಸುತ್ತದೆ ಮತ್ತು ಅದರ ಒಂದು ಪಾತ್ರವು ವಾಲ್ಮೀಕಿ ರಾಮಾಯಣವನ್ನು ತಪ್ಪಾಗಿ ಅರ್ಥೈಸುತ್ತದೆ, ಭಗವಾನ್ ರಾಮನನ್ನು ‘ಮಾಂಸ ಭಕ್ಷಕ’ ಎಂದು ಚಿತ್ರಿಸುತ್ತದೆ ಎಂದು ಆರೋಪಿಸಿ ಮುಂಬೈನ ಎಲ್‌ಟಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಈ ಎಫ್‌ಐಆರ್ ದಾಖಲಿಸಿದ್ದಾರೆ.

ಅನ್ನಪೂರಣಿ’ ನಯನತಾರಾ ಅಭಿನಯಿಸುತ್ತಿರುವ 75ನೇ ಸಿನಿಮಾ. ಈ ಚಿತ್ರಕ್ಕೆ ನಿಲೇಶ್ ಕೃಷ್ಣ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಯುವತಿಯೊಬ್ಬಳು ಸಮಾಜದ ವಿರೋಧದ ನಡುವೆ ಹೇಗೆ ಶೆಫ್ ಆಗುವ ಕನಸನ್ನು ನನಸಾಗಿಸಿಕೊಳ್ಳಲು ಪ್ರಯತ್ನಿಸುತ್ತಾಳೆ ಎನ್ನುವುದರ ಸುತ್ತ ಕಥೆ ಸಾಗುತ್ತದೆ. ಬ್ರಾಹ್ಮಣರ ಮನೆತನದ ಯುವತಿ ಮಾಂಸಾಹಾರ ತಯಾರಿಸುವ ಸವಾಲನ್ನು ಹೇಗೆ ನಿಭಾಯಿಸುತ್ತಾಳೆ ಎನ್ನುವುದು ಸಿನಿಮಾದ ಕಥೆಯಾಗಿದೆ.

ನಟಿ ನಯನತಾರಾ, ನಿರ್ದೇಶಕರಾದ ನೀಲೇಶ್ ಕೃಷ್ಣ ಮತ್ತು ನಿರ್ಮಾಪಕರಾದ ಜತಿನ್ ಸೇಥಿ, ಆರ್ ರವೀಂದ್ರನ್ ಮತ್ತು ಪುನಿತ್ ಗೋಯೆಂಕಾ, ಜೀ ಸ್ಟುಡಿಯೋಸ್, ಶಾರಿಕ್ ಪಟೇಲ್ ಮತ್ತು ನೆಟ್‌ಫ್ಲಿಕ್ಸ್ ಇಂಡಿಯಾದ ಮುಖ್ಯಸ್ಥೆ ಮೋನಿಕಾ ಶೆರ್ಗಿಲ್ ವಿರುದ್ಧ ದೂರು ದಾಖಲಿಸಲಾಗಿತ್ತು.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ರಮೇಶ್‌ ಸೋಲಂಕಿ, ನಾನು AntiHinduZee ಮತ್ತು #AntiHinduNetflix ವಿರುದ್ಧ ದೂರು ದಾಖಲಿಸಿದ್ದೇನೆ. ಭಗವಾನ್ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆಯ ನಿರೀಕ್ಷೆಯಲ್ಲಿ ಇಡೀ ವಿಶ್ವವೇ ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ ಝೀ ಸ್ಟುಡಿಯೋಸ್, ನಾಡ್ ಸ್ಟುಡಿಯೋಸ್ ಮತ್ತು ಟ್ರೈಡೆಂಟ್ ಆರ್ಟ್ಸ್ ನಿರ್ಮಾಣದ ಈ ಹಿಂದೂ ವಿರೋಧಿ ಸಿನಿಮಾ ಅನ್ನಪೂರಣಿ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾದೆ. ಹಿಂದೂ ಪೂಜಾರಿಯ ಮಗಳು ಬಿರಿಯಾನಿ ಅಡುಗೆ ಮಾಡಲು ನಮಾಜ್ ಮಾಡುತ್ತಾಳೆ, ಈ ಚಿತ್ರದಲ್ಲಿ ಲವ್ ಜಿಹಾದ್‌ ಪರ ಪ್ರಚಾರ ಮಾಡಲಾಗಿದೆ. ಫರ್ಹಾನ್ (ನಟ) ಭಗವಾನ್ ಶ್ರೀ ರಾಮ್ ಕೂಡ ಮಾಂಸಾಹಾರಿ ಎಂದು ನಟಿಯನ್ನು ಮಾಂಸ ತಿನ್ನಲು ಮನವೊಲಿಸುವುದು ಚಿತ್ರದಲ್ಲಿದೆ. @NetflixIndia
ಮತ್ತು @ZeeStudios_ ಹಿಂದೂ ಭಾವನೆಗಳಿಗೆ ಧಕ್ಕೆ ತರಲು ಉದ್ದೇಶಪೂರ್ವಕವಾಗಿ ಈ ಸಿನಿಮಾ ಮಾಡಿ    ಮಂದಿರದ ಪ್ರಾಣ ಪ್ರತಿಷ್ಠೆಯ ವೇಳೆ ಬಿಡುಗಡೆ ಮಾಡಿದೆ ಎಂದು ಆರೋಪಿಸಿದ್ದರು.

ಇದನ್ನು ಓದಿ: ‘ಎಲ್ಲಾ ಮಹಿಳೆಯರ ಗೆಲುವು’: ಬಿಲ್ಕಿಸ್ ಬಾನು ತೀರ್ಪಿನ ಬಗ್ಗೆ ಕುಸ್ತಿಪಟು ವಿನೇಶ್ ಫೋಗಟ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...