Homeಮುಖಪುಟ'ಅನ್ನಪೂರಣಿ' ಸಿನಿಮಾವನ್ನು ತೆಗೆದುಹಾಕಿದ ನೆಟ್‌ಫ್ಲಿಕ್ಸ್ , ವಿಹೆಚ್‌ಪಿಗೆ ಕ್ಷಮಾಪನಾ ಪತ್ರ ಬರೆದ ಝೀ ಸ್ಟುಡಿಯೋ!

‘ಅನ್ನಪೂರಣಿ’ ಸಿನಿಮಾವನ್ನು ತೆಗೆದುಹಾಕಿದ ನೆಟ್‌ಫ್ಲಿಕ್ಸ್ , ವಿಹೆಚ್‌ಪಿಗೆ ಕ್ಷಮಾಪನಾ ಪತ್ರ ಬರೆದ ಝೀ ಸ್ಟುಡಿಯೋ!

- Advertisement -
- Advertisement -

‘ಅನ್ನಪೂರಣಿ’ ತಮಿಳು ಚಲನಚಿತ್ರ ಧಾರ್ಮಿಕ ಭಾವನೆಗಳಿಗೆ ನೋವುಂಟುಮಾಡಿದೆ ಎಂದು ಹಿಂದೂ ಬಲಪಂಥೀಯ ಗುಂಪುಗಳು ವಿವಾದ ಸೃಷ್ಟಿಸಿದ ಬೆನ್ನಲ್ಲಿ ನಯನತಾರಾ ಅವರ  ‘ಅನ್ನಪೂರಣಿ’ ಚಲನ ಚಿತ್ರವನ್ನು ನೆಟ್‌ಫ್ಲಿಕ್ಸ್ ತೆಗೆದು ಹಾಕಿದ್ದು, ‘ಅನ್ನಪೂರಣಿ’ ಚಲನಚಿತ್ರದ ನಿರ್ಮಾಪಕರು ಮತ್ತು ಝೀ ಸ್ಟುಡಿಯೊ ಕ್ಷಮೆಯಾಚಿಸಿ ವಿಹೆಚ್‌ಪಿಗೆ ಪತ್ರವನ್ನು ಬರೆದಿದೆ.

ಪತ್ರದಲ್ಲಿ Zee ಸ್ಟುಡಿಯೋ, ನಾವು ಹಿಂದೂ ಮತ್ತು ಬ್ರಾಹ್ಮಣ ಸಮುದಾಯಗಳಿಗೆ ಉಂಟಾದ ಅನಾನುಕೂಲತೆ ಮತ್ತು ನೋವಿಗೆ ಈ ಮೂಲಕ ಕ್ಷಮೆಯಾಚಿಸಲು ಬಯಸುತ್ತೇವೆ ಎಂದು ಹೇಳಿದೆ. ಝೀ ಸ್ಟುಡಿಯೋ ಸಹ-ನಿರ್ಮಾಪಕರಾದ ಟ್ರೈಡೆಂಟ್ ಆರ್ಟ್ಸ್‌ನೊಂದಿಗೆ ಚಲನಚಿತ್ರವನ್ನು ಎಡಿಟ್ ಮಾಡುವವರೆಗೆ ನೆಟ್‌ಫ್ಲಿಕ್ಸ್‌ನಿಂದ ತೆಗೆದುಹಾಕಲು ಕೆಲಸ ಮಾಡುತ್ತಿದೆ ಎಂದು ಪತ್ರದಲ್ಲಿ ತಿಳಿಸಿತ್ತು.

ಚಿತ್ರದ ವಿವಾದಾತ್ಮಕ ಅಂಶಗಳನ್ನು ತಕ್ಷಣವೇ ತೆಗೆದುಹಾಕಲು ಸಹ-ನಿರ್ಮಾಪಕರಾದ ಟ್ರೈಡೆಂಟ್ ಆರ್ಟ್ಸ್‌ಗೆ Zee ಸ್ಟುಡಿಯೋಸ್ ಮನವಿ ಮಾಡಿದೆ ಎಂದು ಪತ್ರವು ಬಹಿರಂಗಪಡಿಸಿದೆ. ಹೆಚ್ಚುವರಿಯಾಗಿ ಅಗತ್ಯ ಬದಲಾವಣೆಗಳನ್ನು ಮಾಡುವವರೆಗೆ ತನ್ನ OTT ಪ್ಲಾಟ್‌ಫಾರ್ಮ್‌ನಿಂದ ‘ಅನ್ನಪೂರಣಿ’ ಯನ್ನು ತಾತ್ಕಾಲಿಕವಾಗಿ ತೆಗೆದುಹಾಕುವಂತೆ ಸ್ಟುಡಿಯೋ ನೆಟ್‌ಫ್ಲಿಕ್ಸ್‌ಗೆ ಒತ್ತಾಯಿಸಿತ್ತು.

ಇಂದು ನೆಟ್‌ಫ್ಲಿಕ್ಸ್ ಚಲನಚಿತ್ರವನ್ನು ತೆಗೆದುಹಾಕಿದೆ, ಚಲನಚಿತ್ರವನ್ನು ಆವರಿಸಿರುವ ವಿವಾದವನ್ನು  ಗಂಭೀರವಾಗಿ ಪರಿಗಣಿಸಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ತಮಿಳುನಾಡಿನಲ್ಲಿ ಚಿತ್ರವು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿದೆ. ಅಂದರೆ ಅದು ಈಗಾಗಲೇ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ನಿಂದ ಅನುಮತಿ ಪಡೆದಿದೆ.

ಜನವರಿ 8 ರಂದು ಶಿವಸೇನೆಯ ಮಾಜಿ ಕಾರ್ಯಕರ್ತ ರಮೇಶ್ ಸೋಲಂಕಿ ಮುಂಬೈನಲ್ಲಿ ‘ಅನ್ನಪೂರಣಿ’ ತಮಿಳು ಚಲನ ಚಿತ್ರದ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಚಲನಚಿತ್ರವು ಲವ್ ಜಿಹಾದ್‌ನ್ನು ಉತ್ತೇಜಿಸುತ್ತದೆ ಮತ್ತು ಅದರ ಒಂದು ಪಾತ್ರವು ವಾಲ್ಮೀಕಿ ರಾಮಾಯಣವನ್ನು ತಪ್ಪಾಗಿ ಅರ್ಥೈಸುತ್ತದೆ, ಭಗವಾನ್ ರಾಮನನ್ನು ‘ಮಾಂಸ ಭಕ್ಷಕ’ ಎಂದು ಚಿತ್ರಿಸುತ್ತದೆ ಎಂದು ಆರೋಪಿಸಿ ಮುಂಬೈನ ಎಲ್‌ಟಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಈ ಎಫ್‌ಐಆರ್ ದಾಖಲಿಸಿದ್ದಾರೆ.

ಅನ್ನಪೂರಣಿ’ ನಯನತಾರಾ ಅಭಿನಯಿಸುತ್ತಿರುವ 75ನೇ ಸಿನಿಮಾ. ಈ ಚಿತ್ರಕ್ಕೆ ನಿಲೇಶ್ ಕೃಷ್ಣ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಯುವತಿಯೊಬ್ಬಳು ಸಮಾಜದ ವಿರೋಧದ ನಡುವೆ ಹೇಗೆ ಶೆಫ್ ಆಗುವ ಕನಸನ್ನು ನನಸಾಗಿಸಿಕೊಳ್ಳಲು ಪ್ರಯತ್ನಿಸುತ್ತಾಳೆ ಎನ್ನುವುದರ ಸುತ್ತ ಕಥೆ ಸಾಗುತ್ತದೆ. ಬ್ರಾಹ್ಮಣರ ಮನೆತನದ ಯುವತಿ ಮಾಂಸಾಹಾರ ತಯಾರಿಸುವ ಸವಾಲನ್ನು ಹೇಗೆ ನಿಭಾಯಿಸುತ್ತಾಳೆ ಎನ್ನುವುದು ಸಿನಿಮಾದ ಕಥೆಯಾಗಿದೆ.

ನಟಿ ನಯನತಾರಾ, ನಿರ್ದೇಶಕರಾದ ನೀಲೇಶ್ ಕೃಷ್ಣ ಮತ್ತು ನಿರ್ಮಾಪಕರಾದ ಜತಿನ್ ಸೇಥಿ, ಆರ್ ರವೀಂದ್ರನ್ ಮತ್ತು ಪುನಿತ್ ಗೋಯೆಂಕಾ, ಜೀ ಸ್ಟುಡಿಯೋಸ್, ಶಾರಿಕ್ ಪಟೇಲ್ ಮತ್ತು ನೆಟ್‌ಫ್ಲಿಕ್ಸ್ ಇಂಡಿಯಾದ ಮುಖ್ಯಸ್ಥೆ ಮೋನಿಕಾ ಶೆರ್ಗಿಲ್ ವಿರುದ್ಧ ದೂರು ದಾಖಲಿಸಲಾಗಿತ್ತು.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ರಮೇಶ್‌ ಸೋಲಂಕಿ, ನಾನು AntiHinduZee ಮತ್ತು #AntiHinduNetflix ವಿರುದ್ಧ ದೂರು ದಾಖಲಿಸಿದ್ದೇನೆ. ಭಗವಾನ್ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆಯ ನಿರೀಕ್ಷೆಯಲ್ಲಿ ಇಡೀ ವಿಶ್ವವೇ ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ ಝೀ ಸ್ಟುಡಿಯೋಸ್, ನಾಡ್ ಸ್ಟುಡಿಯೋಸ್ ಮತ್ತು ಟ್ರೈಡೆಂಟ್ ಆರ್ಟ್ಸ್ ನಿರ್ಮಾಣದ ಈ ಹಿಂದೂ ವಿರೋಧಿ ಸಿನಿಮಾ ಅನ್ನಪೂರಣಿ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾದೆ. ಹಿಂದೂ ಪೂಜಾರಿಯ ಮಗಳು ಬಿರಿಯಾನಿ ಅಡುಗೆ ಮಾಡಲು ನಮಾಜ್ ಮಾಡುತ್ತಾಳೆ, ಈ ಚಿತ್ರದಲ್ಲಿ ಲವ್ ಜಿಹಾದ್‌ ಪರ ಪ್ರಚಾರ ಮಾಡಲಾಗಿದೆ. ಫರ್ಹಾನ್ (ನಟ) ಭಗವಾನ್ ಶ್ರೀ ರಾಮ್ ಕೂಡ ಮಾಂಸಾಹಾರಿ ಎಂದು ನಟಿಯನ್ನು ಮಾಂಸ ತಿನ್ನಲು ಮನವೊಲಿಸುವುದು ಚಿತ್ರದಲ್ಲಿದೆ. @NetflixIndia
ಮತ್ತು @ZeeStudios_ ಹಿಂದೂ ಭಾವನೆಗಳಿಗೆ ಧಕ್ಕೆ ತರಲು ಉದ್ದೇಶಪೂರ್ವಕವಾಗಿ ಈ ಸಿನಿಮಾ ಮಾಡಿ    ಮಂದಿರದ ಪ್ರಾಣ ಪ್ರತಿಷ್ಠೆಯ ವೇಳೆ ಬಿಡುಗಡೆ ಮಾಡಿದೆ ಎಂದು ಆರೋಪಿಸಿದ್ದರು.

ಇದನ್ನು ಓದಿ: ‘ಎಲ್ಲಾ ಮಹಿಳೆಯರ ಗೆಲುವು’: ಬಿಲ್ಕಿಸ್ ಬಾನು ತೀರ್ಪಿನ ಬಗ್ಗೆ ಕುಸ್ತಿಪಟು ವಿನೇಶ್ ಫೋಗಟ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...