Homeಮುಖಪುಟ'ಅನ್ನಪೂರಣಿ' ಸಿನಿಮಾವನ್ನು ತೆಗೆದುಹಾಕಿದ ನೆಟ್‌ಫ್ಲಿಕ್ಸ್ , ವಿಹೆಚ್‌ಪಿಗೆ ಕ್ಷಮಾಪನಾ ಪತ್ರ ಬರೆದ ಝೀ ಸ್ಟುಡಿಯೋ!

‘ಅನ್ನಪೂರಣಿ’ ಸಿನಿಮಾವನ್ನು ತೆಗೆದುಹಾಕಿದ ನೆಟ್‌ಫ್ಲಿಕ್ಸ್ , ವಿಹೆಚ್‌ಪಿಗೆ ಕ್ಷಮಾಪನಾ ಪತ್ರ ಬರೆದ ಝೀ ಸ್ಟುಡಿಯೋ!

- Advertisement -
- Advertisement -

‘ಅನ್ನಪೂರಣಿ’ ತಮಿಳು ಚಲನಚಿತ್ರ ಧಾರ್ಮಿಕ ಭಾವನೆಗಳಿಗೆ ನೋವುಂಟುಮಾಡಿದೆ ಎಂದು ಹಿಂದೂ ಬಲಪಂಥೀಯ ಗುಂಪುಗಳು ವಿವಾದ ಸೃಷ್ಟಿಸಿದ ಬೆನ್ನಲ್ಲಿ ನಯನತಾರಾ ಅವರ  ‘ಅನ್ನಪೂರಣಿ’ ಚಲನ ಚಿತ್ರವನ್ನು ನೆಟ್‌ಫ್ಲಿಕ್ಸ್ ತೆಗೆದು ಹಾಕಿದ್ದು, ‘ಅನ್ನಪೂರಣಿ’ ಚಲನಚಿತ್ರದ ನಿರ್ಮಾಪಕರು ಮತ್ತು ಝೀ ಸ್ಟುಡಿಯೊ ಕ್ಷಮೆಯಾಚಿಸಿ ವಿಹೆಚ್‌ಪಿಗೆ ಪತ್ರವನ್ನು ಬರೆದಿದೆ.

ಪತ್ರದಲ್ಲಿ Zee ಸ್ಟುಡಿಯೋ, ನಾವು ಹಿಂದೂ ಮತ್ತು ಬ್ರಾಹ್ಮಣ ಸಮುದಾಯಗಳಿಗೆ ಉಂಟಾದ ಅನಾನುಕೂಲತೆ ಮತ್ತು ನೋವಿಗೆ ಈ ಮೂಲಕ ಕ್ಷಮೆಯಾಚಿಸಲು ಬಯಸುತ್ತೇವೆ ಎಂದು ಹೇಳಿದೆ. ಝೀ ಸ್ಟುಡಿಯೋ ಸಹ-ನಿರ್ಮಾಪಕರಾದ ಟ್ರೈಡೆಂಟ್ ಆರ್ಟ್ಸ್‌ನೊಂದಿಗೆ ಚಲನಚಿತ್ರವನ್ನು ಎಡಿಟ್ ಮಾಡುವವರೆಗೆ ನೆಟ್‌ಫ್ಲಿಕ್ಸ್‌ನಿಂದ ತೆಗೆದುಹಾಕಲು ಕೆಲಸ ಮಾಡುತ್ತಿದೆ ಎಂದು ಪತ್ರದಲ್ಲಿ ತಿಳಿಸಿತ್ತು.

ಚಿತ್ರದ ವಿವಾದಾತ್ಮಕ ಅಂಶಗಳನ್ನು ತಕ್ಷಣವೇ ತೆಗೆದುಹಾಕಲು ಸಹ-ನಿರ್ಮಾಪಕರಾದ ಟ್ರೈಡೆಂಟ್ ಆರ್ಟ್ಸ್‌ಗೆ Zee ಸ್ಟುಡಿಯೋಸ್ ಮನವಿ ಮಾಡಿದೆ ಎಂದು ಪತ್ರವು ಬಹಿರಂಗಪಡಿಸಿದೆ. ಹೆಚ್ಚುವರಿಯಾಗಿ ಅಗತ್ಯ ಬದಲಾವಣೆಗಳನ್ನು ಮಾಡುವವರೆಗೆ ತನ್ನ OTT ಪ್ಲಾಟ್‌ಫಾರ್ಮ್‌ನಿಂದ ‘ಅನ್ನಪೂರಣಿ’ ಯನ್ನು ತಾತ್ಕಾಲಿಕವಾಗಿ ತೆಗೆದುಹಾಕುವಂತೆ ಸ್ಟುಡಿಯೋ ನೆಟ್‌ಫ್ಲಿಕ್ಸ್‌ಗೆ ಒತ್ತಾಯಿಸಿತ್ತು.

ಇಂದು ನೆಟ್‌ಫ್ಲಿಕ್ಸ್ ಚಲನಚಿತ್ರವನ್ನು ತೆಗೆದುಹಾಕಿದೆ, ಚಲನಚಿತ್ರವನ್ನು ಆವರಿಸಿರುವ ವಿವಾದವನ್ನು  ಗಂಭೀರವಾಗಿ ಪರಿಗಣಿಸಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ತಮಿಳುನಾಡಿನಲ್ಲಿ ಚಿತ್ರವು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿದೆ. ಅಂದರೆ ಅದು ಈಗಾಗಲೇ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ನಿಂದ ಅನುಮತಿ ಪಡೆದಿದೆ.

ಜನವರಿ 8 ರಂದು ಶಿವಸೇನೆಯ ಮಾಜಿ ಕಾರ್ಯಕರ್ತ ರಮೇಶ್ ಸೋಲಂಕಿ ಮುಂಬೈನಲ್ಲಿ ‘ಅನ್ನಪೂರಣಿ’ ತಮಿಳು ಚಲನ ಚಿತ್ರದ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಚಲನಚಿತ್ರವು ಲವ್ ಜಿಹಾದ್‌ನ್ನು ಉತ್ತೇಜಿಸುತ್ತದೆ ಮತ್ತು ಅದರ ಒಂದು ಪಾತ್ರವು ವಾಲ್ಮೀಕಿ ರಾಮಾಯಣವನ್ನು ತಪ್ಪಾಗಿ ಅರ್ಥೈಸುತ್ತದೆ, ಭಗವಾನ್ ರಾಮನನ್ನು ‘ಮಾಂಸ ಭಕ್ಷಕ’ ಎಂದು ಚಿತ್ರಿಸುತ್ತದೆ ಎಂದು ಆರೋಪಿಸಿ ಮುಂಬೈನ ಎಲ್‌ಟಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಈ ಎಫ್‌ಐಆರ್ ದಾಖಲಿಸಿದ್ದಾರೆ.

ಅನ್ನಪೂರಣಿ’ ನಯನತಾರಾ ಅಭಿನಯಿಸುತ್ತಿರುವ 75ನೇ ಸಿನಿಮಾ. ಈ ಚಿತ್ರಕ್ಕೆ ನಿಲೇಶ್ ಕೃಷ್ಣ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಯುವತಿಯೊಬ್ಬಳು ಸಮಾಜದ ವಿರೋಧದ ನಡುವೆ ಹೇಗೆ ಶೆಫ್ ಆಗುವ ಕನಸನ್ನು ನನಸಾಗಿಸಿಕೊಳ್ಳಲು ಪ್ರಯತ್ನಿಸುತ್ತಾಳೆ ಎನ್ನುವುದರ ಸುತ್ತ ಕಥೆ ಸಾಗುತ್ತದೆ. ಬ್ರಾಹ್ಮಣರ ಮನೆತನದ ಯುವತಿ ಮಾಂಸಾಹಾರ ತಯಾರಿಸುವ ಸವಾಲನ್ನು ಹೇಗೆ ನಿಭಾಯಿಸುತ್ತಾಳೆ ಎನ್ನುವುದು ಸಿನಿಮಾದ ಕಥೆಯಾಗಿದೆ.

ನಟಿ ನಯನತಾರಾ, ನಿರ್ದೇಶಕರಾದ ನೀಲೇಶ್ ಕೃಷ್ಣ ಮತ್ತು ನಿರ್ಮಾಪಕರಾದ ಜತಿನ್ ಸೇಥಿ, ಆರ್ ರವೀಂದ್ರನ್ ಮತ್ತು ಪುನಿತ್ ಗೋಯೆಂಕಾ, ಜೀ ಸ್ಟುಡಿಯೋಸ್, ಶಾರಿಕ್ ಪಟೇಲ್ ಮತ್ತು ನೆಟ್‌ಫ್ಲಿಕ್ಸ್ ಇಂಡಿಯಾದ ಮುಖ್ಯಸ್ಥೆ ಮೋನಿಕಾ ಶೆರ್ಗಿಲ್ ವಿರುದ್ಧ ದೂರು ದಾಖಲಿಸಲಾಗಿತ್ತು.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ರಮೇಶ್‌ ಸೋಲಂಕಿ, ನಾನು AntiHinduZee ಮತ್ತು #AntiHinduNetflix ವಿರುದ್ಧ ದೂರು ದಾಖಲಿಸಿದ್ದೇನೆ. ಭಗವಾನ್ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆಯ ನಿರೀಕ್ಷೆಯಲ್ಲಿ ಇಡೀ ವಿಶ್ವವೇ ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ ಝೀ ಸ್ಟುಡಿಯೋಸ್, ನಾಡ್ ಸ್ಟುಡಿಯೋಸ್ ಮತ್ತು ಟ್ರೈಡೆಂಟ್ ಆರ್ಟ್ಸ್ ನಿರ್ಮಾಣದ ಈ ಹಿಂದೂ ವಿರೋಧಿ ಸಿನಿಮಾ ಅನ್ನಪೂರಣಿ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾದೆ. ಹಿಂದೂ ಪೂಜಾರಿಯ ಮಗಳು ಬಿರಿಯಾನಿ ಅಡುಗೆ ಮಾಡಲು ನಮಾಜ್ ಮಾಡುತ್ತಾಳೆ, ಈ ಚಿತ್ರದಲ್ಲಿ ಲವ್ ಜಿಹಾದ್‌ ಪರ ಪ್ರಚಾರ ಮಾಡಲಾಗಿದೆ. ಫರ್ಹಾನ್ (ನಟ) ಭಗವಾನ್ ಶ್ರೀ ರಾಮ್ ಕೂಡ ಮಾಂಸಾಹಾರಿ ಎಂದು ನಟಿಯನ್ನು ಮಾಂಸ ತಿನ್ನಲು ಮನವೊಲಿಸುವುದು ಚಿತ್ರದಲ್ಲಿದೆ. @NetflixIndia
ಮತ್ತು @ZeeStudios_ ಹಿಂದೂ ಭಾವನೆಗಳಿಗೆ ಧಕ್ಕೆ ತರಲು ಉದ್ದೇಶಪೂರ್ವಕವಾಗಿ ಈ ಸಿನಿಮಾ ಮಾಡಿ    ಮಂದಿರದ ಪ್ರಾಣ ಪ್ರತಿಷ್ಠೆಯ ವೇಳೆ ಬಿಡುಗಡೆ ಮಾಡಿದೆ ಎಂದು ಆರೋಪಿಸಿದ್ದರು.

ಇದನ್ನು ಓದಿ: ‘ಎಲ್ಲಾ ಮಹಿಳೆಯರ ಗೆಲುವು’: ಬಿಲ್ಕಿಸ್ ಬಾನು ತೀರ್ಪಿನ ಬಗ್ಗೆ ಕುಸ್ತಿಪಟು ವಿನೇಶ್ ಫೋಗಟ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...