Homeಮುಖಪುಟ'ಅನ್ನಪೂರಣಿ' ಸಿನಿಮಾವನ್ನು ತೆಗೆದುಹಾಕಿದ ನೆಟ್‌ಫ್ಲಿಕ್ಸ್ , ವಿಹೆಚ್‌ಪಿಗೆ ಕ್ಷಮಾಪನಾ ಪತ್ರ ಬರೆದ ಝೀ ಸ್ಟುಡಿಯೋ!

‘ಅನ್ನಪೂರಣಿ’ ಸಿನಿಮಾವನ್ನು ತೆಗೆದುಹಾಕಿದ ನೆಟ್‌ಫ್ಲಿಕ್ಸ್ , ವಿಹೆಚ್‌ಪಿಗೆ ಕ್ಷಮಾಪನಾ ಪತ್ರ ಬರೆದ ಝೀ ಸ್ಟುಡಿಯೋ!

- Advertisement -
- Advertisement -

‘ಅನ್ನಪೂರಣಿ’ ತಮಿಳು ಚಲನಚಿತ್ರ ಧಾರ್ಮಿಕ ಭಾವನೆಗಳಿಗೆ ನೋವುಂಟುಮಾಡಿದೆ ಎಂದು ಹಿಂದೂ ಬಲಪಂಥೀಯ ಗುಂಪುಗಳು ವಿವಾದ ಸೃಷ್ಟಿಸಿದ ಬೆನ್ನಲ್ಲಿ ನಯನತಾರಾ ಅವರ  ‘ಅನ್ನಪೂರಣಿ’ ಚಲನ ಚಿತ್ರವನ್ನು ನೆಟ್‌ಫ್ಲಿಕ್ಸ್ ತೆಗೆದು ಹಾಕಿದ್ದು, ‘ಅನ್ನಪೂರಣಿ’ ಚಲನಚಿತ್ರದ ನಿರ್ಮಾಪಕರು ಮತ್ತು ಝೀ ಸ್ಟುಡಿಯೊ ಕ್ಷಮೆಯಾಚಿಸಿ ವಿಹೆಚ್‌ಪಿಗೆ ಪತ್ರವನ್ನು ಬರೆದಿದೆ.

ಪತ್ರದಲ್ಲಿ Zee ಸ್ಟುಡಿಯೋ, ನಾವು ಹಿಂದೂ ಮತ್ತು ಬ್ರಾಹ್ಮಣ ಸಮುದಾಯಗಳಿಗೆ ಉಂಟಾದ ಅನಾನುಕೂಲತೆ ಮತ್ತು ನೋವಿಗೆ ಈ ಮೂಲಕ ಕ್ಷಮೆಯಾಚಿಸಲು ಬಯಸುತ್ತೇವೆ ಎಂದು ಹೇಳಿದೆ. ಝೀ ಸ್ಟುಡಿಯೋ ಸಹ-ನಿರ್ಮಾಪಕರಾದ ಟ್ರೈಡೆಂಟ್ ಆರ್ಟ್ಸ್‌ನೊಂದಿಗೆ ಚಲನಚಿತ್ರವನ್ನು ಎಡಿಟ್ ಮಾಡುವವರೆಗೆ ನೆಟ್‌ಫ್ಲಿಕ್ಸ್‌ನಿಂದ ತೆಗೆದುಹಾಕಲು ಕೆಲಸ ಮಾಡುತ್ತಿದೆ ಎಂದು ಪತ್ರದಲ್ಲಿ ತಿಳಿಸಿತ್ತು.

ಚಿತ್ರದ ವಿವಾದಾತ್ಮಕ ಅಂಶಗಳನ್ನು ತಕ್ಷಣವೇ ತೆಗೆದುಹಾಕಲು ಸಹ-ನಿರ್ಮಾಪಕರಾದ ಟ್ರೈಡೆಂಟ್ ಆರ್ಟ್ಸ್‌ಗೆ Zee ಸ್ಟುಡಿಯೋಸ್ ಮನವಿ ಮಾಡಿದೆ ಎಂದು ಪತ್ರವು ಬಹಿರಂಗಪಡಿಸಿದೆ. ಹೆಚ್ಚುವರಿಯಾಗಿ ಅಗತ್ಯ ಬದಲಾವಣೆಗಳನ್ನು ಮಾಡುವವರೆಗೆ ತನ್ನ OTT ಪ್ಲಾಟ್‌ಫಾರ್ಮ್‌ನಿಂದ ‘ಅನ್ನಪೂರಣಿ’ ಯನ್ನು ತಾತ್ಕಾಲಿಕವಾಗಿ ತೆಗೆದುಹಾಕುವಂತೆ ಸ್ಟುಡಿಯೋ ನೆಟ್‌ಫ್ಲಿಕ್ಸ್‌ಗೆ ಒತ್ತಾಯಿಸಿತ್ತು.

ಇಂದು ನೆಟ್‌ಫ್ಲಿಕ್ಸ್ ಚಲನಚಿತ್ರವನ್ನು ತೆಗೆದುಹಾಕಿದೆ, ಚಲನಚಿತ್ರವನ್ನು ಆವರಿಸಿರುವ ವಿವಾದವನ್ನು  ಗಂಭೀರವಾಗಿ ಪರಿಗಣಿಸಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ತಮಿಳುನಾಡಿನಲ್ಲಿ ಚಿತ್ರವು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿದೆ. ಅಂದರೆ ಅದು ಈಗಾಗಲೇ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ನಿಂದ ಅನುಮತಿ ಪಡೆದಿದೆ.

ಜನವರಿ 8 ರಂದು ಶಿವಸೇನೆಯ ಮಾಜಿ ಕಾರ್ಯಕರ್ತ ರಮೇಶ್ ಸೋಲಂಕಿ ಮುಂಬೈನಲ್ಲಿ ‘ಅನ್ನಪೂರಣಿ’ ತಮಿಳು ಚಲನ ಚಿತ್ರದ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಚಲನಚಿತ್ರವು ಲವ್ ಜಿಹಾದ್‌ನ್ನು ಉತ್ತೇಜಿಸುತ್ತದೆ ಮತ್ತು ಅದರ ಒಂದು ಪಾತ್ರವು ವಾಲ್ಮೀಕಿ ರಾಮಾಯಣವನ್ನು ತಪ್ಪಾಗಿ ಅರ್ಥೈಸುತ್ತದೆ, ಭಗವಾನ್ ರಾಮನನ್ನು ‘ಮಾಂಸ ಭಕ್ಷಕ’ ಎಂದು ಚಿತ್ರಿಸುತ್ತದೆ ಎಂದು ಆರೋಪಿಸಿ ಮುಂಬೈನ ಎಲ್‌ಟಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಈ ಎಫ್‌ಐಆರ್ ದಾಖಲಿಸಿದ್ದಾರೆ.

ಅನ್ನಪೂರಣಿ’ ನಯನತಾರಾ ಅಭಿನಯಿಸುತ್ತಿರುವ 75ನೇ ಸಿನಿಮಾ. ಈ ಚಿತ್ರಕ್ಕೆ ನಿಲೇಶ್ ಕೃಷ್ಣ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಯುವತಿಯೊಬ್ಬಳು ಸಮಾಜದ ವಿರೋಧದ ನಡುವೆ ಹೇಗೆ ಶೆಫ್ ಆಗುವ ಕನಸನ್ನು ನನಸಾಗಿಸಿಕೊಳ್ಳಲು ಪ್ರಯತ್ನಿಸುತ್ತಾಳೆ ಎನ್ನುವುದರ ಸುತ್ತ ಕಥೆ ಸಾಗುತ್ತದೆ. ಬ್ರಾಹ್ಮಣರ ಮನೆತನದ ಯುವತಿ ಮಾಂಸಾಹಾರ ತಯಾರಿಸುವ ಸವಾಲನ್ನು ಹೇಗೆ ನಿಭಾಯಿಸುತ್ತಾಳೆ ಎನ್ನುವುದು ಸಿನಿಮಾದ ಕಥೆಯಾಗಿದೆ.

ನಟಿ ನಯನತಾರಾ, ನಿರ್ದೇಶಕರಾದ ನೀಲೇಶ್ ಕೃಷ್ಣ ಮತ್ತು ನಿರ್ಮಾಪಕರಾದ ಜತಿನ್ ಸೇಥಿ, ಆರ್ ರವೀಂದ್ರನ್ ಮತ್ತು ಪುನಿತ್ ಗೋಯೆಂಕಾ, ಜೀ ಸ್ಟುಡಿಯೋಸ್, ಶಾರಿಕ್ ಪಟೇಲ್ ಮತ್ತು ನೆಟ್‌ಫ್ಲಿಕ್ಸ್ ಇಂಡಿಯಾದ ಮುಖ್ಯಸ್ಥೆ ಮೋನಿಕಾ ಶೆರ್ಗಿಲ್ ವಿರುದ್ಧ ದೂರು ದಾಖಲಿಸಲಾಗಿತ್ತು.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ರಮೇಶ್‌ ಸೋಲಂಕಿ, ನಾನು AntiHinduZee ಮತ್ತು #AntiHinduNetflix ವಿರುದ್ಧ ದೂರು ದಾಖಲಿಸಿದ್ದೇನೆ. ಭಗವಾನ್ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆಯ ನಿರೀಕ್ಷೆಯಲ್ಲಿ ಇಡೀ ವಿಶ್ವವೇ ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ ಝೀ ಸ್ಟುಡಿಯೋಸ್, ನಾಡ್ ಸ್ಟುಡಿಯೋಸ್ ಮತ್ತು ಟ್ರೈಡೆಂಟ್ ಆರ್ಟ್ಸ್ ನಿರ್ಮಾಣದ ಈ ಹಿಂದೂ ವಿರೋಧಿ ಸಿನಿಮಾ ಅನ್ನಪೂರಣಿ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾದೆ. ಹಿಂದೂ ಪೂಜಾರಿಯ ಮಗಳು ಬಿರಿಯಾನಿ ಅಡುಗೆ ಮಾಡಲು ನಮಾಜ್ ಮಾಡುತ್ತಾಳೆ, ಈ ಚಿತ್ರದಲ್ಲಿ ಲವ್ ಜಿಹಾದ್‌ ಪರ ಪ್ರಚಾರ ಮಾಡಲಾಗಿದೆ. ಫರ್ಹಾನ್ (ನಟ) ಭಗವಾನ್ ಶ್ರೀ ರಾಮ್ ಕೂಡ ಮಾಂಸಾಹಾರಿ ಎಂದು ನಟಿಯನ್ನು ಮಾಂಸ ತಿನ್ನಲು ಮನವೊಲಿಸುವುದು ಚಿತ್ರದಲ್ಲಿದೆ. @NetflixIndia
ಮತ್ತು @ZeeStudios_ ಹಿಂದೂ ಭಾವನೆಗಳಿಗೆ ಧಕ್ಕೆ ತರಲು ಉದ್ದೇಶಪೂರ್ವಕವಾಗಿ ಈ ಸಿನಿಮಾ ಮಾಡಿ    ಮಂದಿರದ ಪ್ರಾಣ ಪ್ರತಿಷ್ಠೆಯ ವೇಳೆ ಬಿಡುಗಡೆ ಮಾಡಿದೆ ಎಂದು ಆರೋಪಿಸಿದ್ದರು.

ಇದನ್ನು ಓದಿ: ‘ಎಲ್ಲಾ ಮಹಿಳೆಯರ ಗೆಲುವು’: ಬಿಲ್ಕಿಸ್ ಬಾನು ತೀರ್ಪಿನ ಬಗ್ಗೆ ಕುಸ್ತಿಪಟು ವಿನೇಶ್ ಫೋಗಟ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...