Homeಕರ್ನಾಟಕಮುಸ್ಲಿಮರ ಬಗ್ಗೆ ಅವಹೇಳನಾಕಾರಿಯಾಗಿ ಅನಿಮೇಟೆಡ್ ವೀಡಿಯೊ ಹಂಚಿಕೊಂಡ ಬಿಜೆಪಿ: 'ಎಕ್ಸ್‌' ಬಳಕೆದಾರರು ತರಾಟೆ

ಮುಸ್ಲಿಮರ ಬಗ್ಗೆ ಅವಹೇಳನಾಕಾರಿಯಾಗಿ ಅನಿಮೇಟೆಡ್ ವೀಡಿಯೊ ಹಂಚಿಕೊಂಡ ಬಿಜೆಪಿ: ‘ಎಕ್ಸ್‌’ ಬಳಕೆದಾರರು ತರಾಟೆ

- Advertisement -
- Advertisement -

ಮುಸ್ಲಿಮರ ಬಗ್ಗೆ ಕೆಟ್ಟದಾಗಿ ಬಿಂಬಿಸುವ, ಮುಸ್ಲಿಮರ ಬಗ್ಗೆ ಕಾಂಗ್ರೆಸ್‌ ತುಷ್ಟೀಕರಣ ಮಾಡುತ್ತದೆ ಎಂದು ಪ್ರತಿಪಾದಿಸುವ ಅನಿಮೇಟೆಡ್ ವೀಡಿಯೊವೊಂದನ್ನು ಬಿಜೆಪಿ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ.

ಎಚ್ಚರ..ಎಚ್ಚರ..ಎಚ್ಚರ.. ಎಂಬ ತಲೆ ಬರಹದಲ್ಲಿ ಬಿಜೆಪಿ ವಿಡಿಯೋವನ್ನು ಹಂಚಿಕೊಂಡಿದ್ದು, ಇದರಲ್ಲಿ ರಾಹುಲ್‌ ಗಾಂಧಿ ಮತ್ತು ಸಿದ್ದರಾಮಯ್ಯ ಅವರ ಕಾರ್ಟೂನ್‌ಗಳಿವೆ. ಈ ಇಬ್ಬರು ಎಸ್ಸಿ,ಎಸ್ಟಿ, ಒಬಿಸಿ ಎಂದು ಬರೆದ ಮೊಟ್ಟೆ ಬಳಿ ಮುಸ್ಲಿಂ ಎಂದು ಬರೆದ ದೊಡ್ಡ ಮೊಟ್ಟೆಯನ್ನು ತಂದು ಇಡುತ್ತಾರೆ. ಈ ಮೊಟ್ಟೆಯಿಂದ ಹೊರಬಂದ ಮುಸ್ಲಿಂ ಎಂದು ಬರೆದ ಹಕ್ಕಿಗೆ ರಾಹುಲ್‌ ಗಾಂಧಿ ಸಂಪತ್ತನ್ನು ತಂದು ಸುರಿಯುವುದು, ಬಳಿಕ ಎಸ್ಸಿ, ಎಸ್ಟಿ ಒಬಿಸಿ ಎಂದು ಬರೆದ ಹಕ್ಕಿಯನ್ನು ಮುಸ್ಲಿಂ ಎಂದು ಬರೆದ ಹಕ್ಕಿ ಹೊರದಬ್ಬುವ ದ್ವೇಷ ಪೂರಿತ ಅಂಶಗಳು ಅನಿಮೇಟೆಡ್ ವೀಡಿಯೊದಲ್ಲಿ ಉಲ್ಲೇಖವಾಗಿದೆ.

ಈ ದ್ವೇಷವನ್ನು ಹರಡುವ, ಸುಳ್ಳು ಬಿಂಬಿಸುವ ವಿಡಿಯೋವನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡುತ್ತಿದ್ದಂತೆ ಬಿಜೆಪಿ ವಿರುದ್ಧ ವ್ಯಾಪಕವಾದಂತಹ ಆಕ್ರೋಶ ವ್ಯಕ್ತವಾಗಿದೆ.

ಬಿಜೆಪಿ ಪೋಸ್ಟ್ ಬಗ್ಗೆ ಪ್ರತಿಕ್ರಿಯಿಸಿದ ಬಹುಭಾಷಾ ನಟ ಪ್ರಕಾಶ್ ರಾಜ್, ಇದನ್ನು ನಾಚಿಕೆಗೇಡು ಎಂದು ಬಣ್ಣಿಸಿದ್ದಾರೆ. ಎಲ್ಲರನ್ನೂ ಒಳಗೊಳ್ಳುವ, ಶಾಂತಿಪ್ರಿಯ ಕರ್ನಾಟಕ ಮತ್ತು ದೇಶದ ಜನತೆ ಹಿಂದುತ್ವ ಪಕ್ಷಗಳಿಗೆ  ಸೂಕ್ತ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.

ಭಾರತೀಯ ಮೂಲದ ಬ್ರಿಟಿಷ್ ಶಿಕ್ಷಣ ತಜ್ಞ ಪ್ರೊಫೆಸರ್ ನಿತಾಶಾ ಕೌಲ್ ಅವರು ವಿಡಿಯೊ ಬಗ್ಗೆ ಪ್ರತಿಕ್ರಿಯಿಸಿ, 1930ರ ದಶಕದ ಜರ್ಮನಿ ಶೈಲಿಯ ಕಾರ್ಟೂನ್ ಎಂದು ಇದನ್ನು ಬಣ್ಣಿಸಿದ್ದಾರೆ. ನಾಝಿಗಳು ಅಪಪ್ರಚಾರಕ್ಕೆ ಇಂಥ ವಿಡಿಯೊ ಬಳಸುತ್ತಿದ್ದರು. ಇದು ಚುನಾವಣಾ ನೀತಿಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಕೆಪಿ ಸಿಂಗ್‌ ಎಂಬವರು, ಸಮಾಜದಲ್ಲಿ ದ್ವೇಷವನ್ನು ಹರಡುವ ಗುರಿಯನ್ನು ಹೊಂದಿರುವ ಈ ದ್ವೇಷಪೂರಿತ ಮತ್ತು ಕೋಮುವಾದಿ ಪೋಸ್ಟ್‌ ವಿರುದ್ಧ ಕಾಂಗ್ರೆಸ್‌ ಪ್ರಕರಣ ದಾಖಲಿಸುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.

ಶ್ರೀನಿವಾಸ್‌ ಕಾರ್ಕಳ ಎಂಬವರು ಎಕ್ಸ್‌ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಎಲ್ಲಾ ಜನರನ್ನು ಎಲ್ಲಾ ಸಮಯದಲ್ಲೂ ಮರುಳು ಮಾಡಲು ಸಾಧ್ಯವಿಲ್ಲ. ದ್ವೇಷವೂ ಕೊನೆಯನ್ನು ಕಾಣಲಿದೆ. ನನ್ನ ಮಾತುಗಳನ್ನು ನೆನಪಿಟ್ಟುಕೊಳಳಿ, ಬಿಜೆಪಿ ಈ ಚುನಾವಣೆಯಲ್ಲಿ ದೊಡ್ಡ ರೀತಿಯಲ್ಲಿ ಸೋಲಲಿದೆ ಎಂದು ಹೇಳಿದ್ದು, ಈ ಪೋಸ್ಟ್‌ನ್ನು ಕರ್ನಾಟಕದ ಸಿಎಂ, ಡಿಸಿಎಂ ಗೃಹಸಚಿವರು ಮತ್ತು ಡಿಜಿಪಿಗೆ ಟ್ಯಾಗ್‌ ಮಾಡಿ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇಂತಹ ವಿಷಪೂರಿತ ಕಸದ ಬಗ್ಗೆ ಮಾತ್ರ ಹತ್ತು ವರ್ಷ ಅಧಿಕಾರದಲ್ಲಿದ್ದ ಸರ್ಕಾರಕ್ಕೆ ಮಾತನಾಡಲಿದೆ. ಚುನಾವಣಾ ಆಯೋಗವು ತಪ್ಪು ಮಾಹಿತಿ ಮತ್ತು ವಿಭಜನೆಯ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬಲವಾಗಿ ಹೇಳುತ್ತಿದೆ. ಇದನ್ನು ಪ್ರಧಾನಿ ಮೋದಿಯವರು ಮುಂಭಾಗದಿಂದ ಮುನ್ನಡೆಸುತ್ತಿದ್ದಾರೆ, ಅವರ ಹೆಸರನ್ನು ಕೂಡ ಚುನಾವಣಾ ಆಯೋಗ ಉಲ್ಲೇಖಿಸುವುದಿಲ್ಲ, ಈ ಬಗ್ಗೆ ನ್ಯಾಯಾಲಯ ನಿಗಾ ವಹಿಸುತ್ತಾ? ಎಂದು ಸೀಮಾ ಎಂಬವರು ಪ್ರತಿಕ್ರಿಯಿಸಿದ್ದಾರೆ.

ಇದು ಮುಸ್ಲಿಮರು ಮತ್ತು ಎಸ್‌ಸಿ, ಎಸ್‌ಟಿ, ಒಬಿಸಿಗಳ ವಿರುದ್ಧದ  ಬ್ರಾಹ್ಮಣ ಬನಿಯಾ ಬಿಜೆಪಿಯ ದ್ವೇಷದ  ಭಾಗವಾಗಿದೆ. ಬಿಜೆಪಿ SC ST OBC ಮುಸ್ಲಿಂ ಕ್ರಿಶ್ಚಿಯನ್ ಸಿಖ್ಖರು ಜಗಳವಾಡಬೇಕೆಂದು ಬಯಸುತ್ತದೆ ಇನ್ನೋರ್ವ ಎಕ್ಸ್‌ ಬಳಕೆದಾರರು ಪ್ರತಿಕ್ರಿಯಿಸಿದ್ದಾರೆ.

ಇವು ಮಾತ್ರ ನಿಮಗೆ ತಿಳಿದಿರುವ ತಂತ್ರಗಳು. 2024ರ ಮತದಾರ 2014ರಂತೆಯೇ ಇಲ್ಲ. ಕನ್ನಡಿಗರು ಈ ಬಾರಿ ನಿಮಗೆ ಸಂಪೂರ್ಣ ಸೋಲಿನ ರುಚಿ ತೋರಿಸುತ್ತಾರೆ ಎಂದು ಇಂಡಿಯನ್‌ ಡಾಕ್ಟರ್‌ ಎಂಬ ಎಕ್ಸ್‌ ಖಾತೆಯು ಪ್ರತಿಕ್ರಿಯಿಸಿದೆ.

ಸೂರಜ್‌ ಯಾದವ್‌ ಎಂಬವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ಖಾತೆಯು ಯಾವುದೇ ಸಮುದಾಯದ ವಿರುದ್ಧ ದ್ವೇಷವನ್ನು ಹರಡಲು ಮುಕ್ತವಾಗಿದೆಯೇ? ನೀವು ಅಂತಹ ವಿಷಯಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಎಕ್ಸ್‌ಗೆ ಪೋಸ್ಟ್‌ನ್ನು ಟ್ಯಾಗ್‌ ಮಾಡಿದ್ದು, ಬಿಜೆಪಿ ಎಕ್ಸ್‌ ಖಾತೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಯಾಸಿರ್‌ ಅಹ್ಮದ್‌ ಎಂಬವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಿಮ್ಮ ನಿಜವಾದ ಬಣ್ಣಗಳನ್ನು ತೋರಿಸುವ ಮಾರ್ಗ, ನಿಮ್ಮ ವಿಷಕಾರಿ ರಾಜಕಾರಣ ಕರ್ನಾಟಕಕ್ಕೆ ಬೇಕಾಗಿಲ್ಲ ಎಂದು ಬರೆದುಕೊಂಡಿದ್ದಾರೆ. ತಲಪತಿ ರಿಶಿ ಎಂಬವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ದ್ವೇಷ ಹರಡಬೇಡಿ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದೇ ರೀತಿ ಹಲವರು ಬಿಜೆಪಿಗೆ ‘ಸುಳ್ಳು ಮತ್ತು ದ್ವೇಷವನ್ನು ಹರಬೇಡಿ’ ಎಂದು ಎಕ್ಸ್‌ನಲ್ಲಿ ಪಾಠ ಮಾಡಿದ್ದಾರೆ.

ಇದನ್ನು ಓದಿ: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....