Homeಕರ್ನಾಟಕ‌ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

‌ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

ನೆಟ್‌ವರ್ಕ್ ಸಿಗುವ ದೇವಳಮಕ್ಕಿ ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣದ ತಂಗುದಾಣ, ಅಂಗಡಿಗಳು, ತಮ್ಮ ಸ್ನೇಹಿತರ ಮನೆಯಲ್ಲಿ ಕುಳಿತು ವಿದ್ಯಾರ್ಥಿಗಳು ಪಾಠ ಕೇಳಿಸಿಕೊಳ್ಳುತ್ತಾರೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದಿಂದಾಗಿ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳಿಗೆ ಹೋಗಲು ನಿರ್ಬಂಧವಿರುವ ಕಾರಣ ಆನ್‌ಲೈನ್ ತರಗತಿಗಳನ್ನು ಜಾರಿ ಮಾಡಲಾಗಿದೆ. ನಗರ ಪ್ರದೇಶಗಳಿಂದ ಅನತಿ ದೂರದಲ್ಲಿರುವ ವಿದ್ಯಾರ್ಥಿಗಳಿಗೆ ಇದು ಉಪಯೋಗವಾದರೂ, ಹಳ್ಳಿಗಳಲ್ಲಿ ವಾಸಿಸುವವರಿಗೆ, ಆರ್ಥಿಕ ಪರಿಸ್ಥಿತಿ ಸರಿಯಿಲ್ಲದಿರುವವರಿಗೆ, ‌ನೆಟ್‌ವರ್ಕ್‌ ಸಿಗದ ಪ್ರದೇಶಗಳಲ್ಲಿ ವಾಸಿಸುವವರಿಗೆ ಶಾಪವಾಗಿ ಪರಿಣಮಿಸಿದೆ.

ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿನ ದೇವಳಮಕ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಗೆ, ಶಿರ್ವೆ, ಹಾಗೂ ಕೋವೆ ಗ್ರಾಮಗಳ ವಿದ್ಯಾರ್ಥಿಗಳು ನಿತ್ಯವೂ ಆನ್‌ಲೈನ್ ತರಗತಿಗಳಿ ಹಾಜರಾಗಲು 5 ಕಿಲೋಮೀಟರ್‌ ನಡೆಯಬೇಕಾಗಿದೆ.

ಈ ಹಳ್ಳಿಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಿಗದ ಕಾರಣ ಇಲ್ಲಿನ ವಿದ್ಯಾರ್ಥಿಗಳು ತಮ್ಮ ಊರಿನಿಂದ ಐದಾರು ಕಿ.ಮೀ ನಡೆದುಕೊಂಡು ಬರುತ್ತಾರೆ. ಕೆಲವರು ಸೈಕಲ್‌ನಲ್ಲಿ ಬರುತ್ತಾರೆ. ‌ನೆಟ್‌ವರ್ಕ್ ಸಿಗುವ ದೇವಳಮಕ್ಕಿ ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣದ ತಂಗುದಾಣ, ಅಂಗಡಿ, ತಮ್ಮ ಸ್ನೇಹಿತರ ಮನೆಯಲ್ಲಿ ಕುಳಿತು ಪಾಠ ಕೇಳಿಸಿಕೊಳ್ಳುತ್ತಾರೆ.

ಇದನ್ನೂ ಓದಿ: ಆನ್‌ಲೈನ್‌ ತರಗತಿಗೆ ಹಾಜರಾಗಲು ಅಸಾಧ್ಯ: 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಕಾರವಾರದಲ್ಲಿರುವ ಕಾಮಧೇನು ಕಾಲೇಜಿನಲ್ಲಿ ಬಿಸಿಎ (ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್ಸ್) ಓದುತ್ತಿರುವ ಪವಿತ್ರಾ ಹೇಳುವಂತೆ, ’ಕಾಲೇಜು ಆಡಳಿತ ಮಂಡಳಿ ಆನ್‌ಲೈನ್ ತರಗತಿಗಳಿಗೆ ಹಾಜರಾಗುವಂತೆ ಹೇಳಿದಾಗ ನಾವು ಗೊಂದಲಕ್ಕೆ ಒಳಗಾದೆವು. ಏಕೆಂದರೆ ನಮ್ಮ ಊರಿನಲ್ಲಿ ಯಾವುದೇ ಮೋಬೈಲ್ ‌ನೆಟ್‌ವರ್ಕ್ ಇಲ್ಲ. ನಂತರ ನಾವು ದೇವಳಮಕ್ಕಿ ಬಸ್ ನಿಲ್ದಾಣದಲ್ಲಿ ಕುಳಿತು ಆನ್‌ಲೈನ್ ತರಗತಿಗಳಿಗೆ ಹಾಜರಾಗುತ್ತೇವೆ. ಅಲ್ಲಿ ಬೇರೆ ಸ್ಥಳಗಳಿಗಿಂತ ನೆಟ್‌ವರ್ಕ್ ಉತ್ತಮವಾಗಿದೆ ಮತ್ತು ನಮಗೆ ಕುಳಿತುಕೊಳ್ಳಲು ಸ್ಥಳವಿದೆ’ ಎನ್ನುತ್ತಾರೆ.

“ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 3 ರವರೆಗೆ ಅಧ್ಯಯನ ಮಾಡುತ್ತೇವೆ ಮತ್ತು ಉಪನ್ಯಾಸಕರು ಟಿಪ್ಪಣಿಗಳನ್ನು ಕಳುಹಿಸಿದ್ದರೆ, ಅದನ್ನು ಅಲ್ಲಿ ಡೌನ್‌ಲೋಡ್ ಮಾಡಿಕೊಂಡು ನಂತರ ಮನೆಗೆ ಹಿಂತಿರುಗುತ್ತೆವೆ” ಎಂದು ವಿದ್ಯಾರ್ಥಿನಿ ಪವಿತ್ರಾ ಹೇಳಿದ್ದಾರೆ.

In Uttara Kannada, students travel miles for cell signal to take online classes | The News Minute
PC: The News Minute

ಈ ಮೂರು ಗ್ರಾಮಗಳಲ್ಲಿ 1,500 ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಇಲ್ಲಿ ಪ್ರಸ್ತುತ ಆನ್‌ಲೈನ್ ತರಗತಿಗಳಿಗೆ ಹಾಜರಾಗುತ್ತಿರುವ 15 ವಿದ್ಯಾರ್ಥಿಗಳಿದ್ದಾರೆ.

ದೇವಳಮಕ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಂಟು ಗ್ರಾಮಗಳಿದ್ದು, ಅವುಗಳಲ್ಲಿ ಐದು ಗ್ರಾಮಗಳಿಗೆ ನೆಟ್‌ವರ್ಕ್ ಸಂಪರ್ಕವಿದೆ. ಆದರೆ, ದೇವಳಮಕ್ಕಿ ಸಮೀಪವೇ ಇರುವ ನಗೆ, ಶಿರ್ವೆ, ಕೋವೆ ಗ್ರಾಮಗಳಿಗೆ ಈವರೆಗೆ ನೆಟ್‌ವರ್ಕ್ ಸಂಪರ್ಕ ಏರ್ಪಟ್ಟಿಲ್ಲ. ದೇವಳಮಕ್ಕಿಯಲ್ಲಿ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್‌ಎನ್‌ಎಲ್) ನ ಒಂದೇ ಒಂದು ಮೊಬೈಲ್ ಟವರ್ ಇದೆ.

ಇದನ್ನೂ ಓದಿ: LKG ಯಿಂದ 7 ನೇ ತರಗತಿಯವರೆಗೆ ಆನ್‌ಲೈನ್‌ ಕ್ಲಾಸ್‌ ರದ್ದು: ಸಚಿವ ಸಂಪುಟ ತೀರ್ಮಾನ

ಕಠಿಣ ತುರ್ತು ಪರಿಸ್ಥಿತಿಯಲ್ಲಿಯೂ ಸಹ, ನಾವು ಮೊಬೈಲ್ ಸಿಗ್ನಲ್‌ಗಾಗಿ ಕಿಲೋಮೀಟರ್‌ಗಟ್ಟಲೆ  ಪ್ರಯಾಣಿಸಬೇಕಾಗಿದೆ. ಇಲ್ಲೂ ಬಿಎಸ್ಎನ್ಎಲ್ ನೆಟ್ವರ್ಕ್ ಮಾತ್ರ ಲಭ್ಯವಿದೆ. ಪವರ್ ಕಟ್ ಇದ್ದಾಗ ಯಾವುದೇ ನೆಟ್ವರ್ಕ್ ದೊರೆಯುವುದಿಲ್ಲ ಎಂದು ಗ್ರಾಮಸ್ಥರು ಹೇಳುತ್ತಾರೆ.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಅಭ್ಯಸಿಸುತ್ತಿರುವ ದೇವಳಮಕ್ಕಿ ಗ್ರಾಮದ ವಿದ್ಯಾರ್ಥಿ ಪ್ರಜ್ವಲ್ ಹೇಳುವಂತೆ ’ ನನಗೆ ಆನ್‌ಲೈನ್ ತರಗತಿಗಳಿಲ್ಲ. ಆದರೆ ನೆಟ್ವರ್ಕ್ ಸಿಗದೆ ಸಮಸ್ಯೆ ಅನುಭವಿಸುತ್ತಯಿರುವ ವಿದ್ಯಾರ್ಥಿಗಳನ್ನು ನೋಡುತ್ತಿದ್ದೇನೆ. ಆನ್‌ಲೈನ್ ತರಗತಿಗಳು ನಡೆಯಲೇಬೇಕೆಂಬ ನಿಯಮಗಳಿದ್ದರೇ, ನಮ್ಮ ಹಳ್ಳಿಗಳಲ್ಲಿ ಸಂಪರ್ಕವು ಸುಧಾರಿಸಬೇಕು’ ಎಂದಿದ್ದಾರೆ ಎಂದು ಟಿಎನ್‌ಎಂ ವರದಿ ಮಾಡಿದೆ.

PC: The News Minute

ಶಿಕ್ಷಣದ 2017-18ರ ರಾಷ್ಟ್ರೀಯ ಮಾದರಿ ಸಮೀಕ್ಷೆಯ ವರದಿಯ ಪ್ರಕಾರ, ಕೇವಲ 24% ಭಾರತೀಯ ಕುಟುಂಬಗಳು ಮಾತ್ರ ಇಂಟರ್ನೆಟ್ ಸೌಲಭ್ಯವನ್ನು ಹೊಂದಿದ್ದರೆ, ಕೇವಲ 15% ರಷ್ಟು ಗ್ರಾಮೀಣ ಕುಟುಂಬಗಳು ಮಾತ್ರ ಇಂಟರ್ನೆಟ್ ಸೇವೆಗಳನ್ನು ಹೊಂದಿದ್ದಾರೆ. ಖಾಸಗಿ ನೆಟ್‌ವರ್ಕ್ ಪೂರೈಕೆದಾರರು ಚಂದಾದಾರರಿಗೆ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸಂಪರ್ಕವನ್ನು ಖಾತರಿಪಡಿಸಿಲ್ಲ ಎಂದು ಶಿಕ್ಷಣ ಸಂಸ್ಥೆಗಳಿಗೆ ಜಾಗತಿಕ ಶ್ರೇಯಾಂಕವನ್ನು ಪ್ರಕಟಿಸುವ ಕ್ಯೂಎಸ್(Quacquarelli Symonds) ವರದಿ ಮಾಡಿದೆ.

ರಾಜ್ಯದ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ಕರ್ನಾಟಕ ಸರ್ಕಾರ ಇನ್ನೂ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ. ಶಾಲೆ ತೆರೆಯುವ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.


ಇದನ್ನೂ ಓದಿ: ಮಕ್ಕಳಿರುವಲ್ಲೇ ಶಾಲೆ!: ಛತ್ತಿಸ್‌ಘಡ ಶಿಕ್ಷಕನ ಮನಮೆಚ್ಚುವ ಕಾರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...