Homeಕರ್ನಾಟಕ‌ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

‌ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

ನೆಟ್‌ವರ್ಕ್ ಸಿಗುವ ದೇವಳಮಕ್ಕಿ ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣದ ತಂಗುದಾಣ, ಅಂಗಡಿಗಳು, ತಮ್ಮ ಸ್ನೇಹಿತರ ಮನೆಯಲ್ಲಿ ಕುಳಿತು ವಿದ್ಯಾರ್ಥಿಗಳು ಪಾಠ ಕೇಳಿಸಿಕೊಳ್ಳುತ್ತಾರೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದಿಂದಾಗಿ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳಿಗೆ ಹೋಗಲು ನಿರ್ಬಂಧವಿರುವ ಕಾರಣ ಆನ್‌ಲೈನ್ ತರಗತಿಗಳನ್ನು ಜಾರಿ ಮಾಡಲಾಗಿದೆ. ನಗರ ಪ್ರದೇಶಗಳಿಂದ ಅನತಿ ದೂರದಲ್ಲಿರುವ ವಿದ್ಯಾರ್ಥಿಗಳಿಗೆ ಇದು ಉಪಯೋಗವಾದರೂ, ಹಳ್ಳಿಗಳಲ್ಲಿ ವಾಸಿಸುವವರಿಗೆ, ಆರ್ಥಿಕ ಪರಿಸ್ಥಿತಿ ಸರಿಯಿಲ್ಲದಿರುವವರಿಗೆ, ‌ನೆಟ್‌ವರ್ಕ್‌ ಸಿಗದ ಪ್ರದೇಶಗಳಲ್ಲಿ ವಾಸಿಸುವವರಿಗೆ ಶಾಪವಾಗಿ ಪರಿಣಮಿಸಿದೆ.

ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿನ ದೇವಳಮಕ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಗೆ, ಶಿರ್ವೆ, ಹಾಗೂ ಕೋವೆ ಗ್ರಾಮಗಳ ವಿದ್ಯಾರ್ಥಿಗಳು ನಿತ್ಯವೂ ಆನ್‌ಲೈನ್ ತರಗತಿಗಳಿ ಹಾಜರಾಗಲು 5 ಕಿಲೋಮೀಟರ್‌ ನಡೆಯಬೇಕಾಗಿದೆ.

ಈ ಹಳ್ಳಿಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಿಗದ ಕಾರಣ ಇಲ್ಲಿನ ವಿದ್ಯಾರ್ಥಿಗಳು ತಮ್ಮ ಊರಿನಿಂದ ಐದಾರು ಕಿ.ಮೀ ನಡೆದುಕೊಂಡು ಬರುತ್ತಾರೆ. ಕೆಲವರು ಸೈಕಲ್‌ನಲ್ಲಿ ಬರುತ್ತಾರೆ. ‌ನೆಟ್‌ವರ್ಕ್ ಸಿಗುವ ದೇವಳಮಕ್ಕಿ ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣದ ತಂಗುದಾಣ, ಅಂಗಡಿ, ತಮ್ಮ ಸ್ನೇಹಿತರ ಮನೆಯಲ್ಲಿ ಕುಳಿತು ಪಾಠ ಕೇಳಿಸಿಕೊಳ್ಳುತ್ತಾರೆ.

ಇದನ್ನೂ ಓದಿ: ಆನ್‌ಲೈನ್‌ ತರಗತಿಗೆ ಹಾಜರಾಗಲು ಅಸಾಧ್ಯ: 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಕಾರವಾರದಲ್ಲಿರುವ ಕಾಮಧೇನು ಕಾಲೇಜಿನಲ್ಲಿ ಬಿಸಿಎ (ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್ಸ್) ಓದುತ್ತಿರುವ ಪವಿತ್ರಾ ಹೇಳುವಂತೆ, ’ಕಾಲೇಜು ಆಡಳಿತ ಮಂಡಳಿ ಆನ್‌ಲೈನ್ ತರಗತಿಗಳಿಗೆ ಹಾಜರಾಗುವಂತೆ ಹೇಳಿದಾಗ ನಾವು ಗೊಂದಲಕ್ಕೆ ಒಳಗಾದೆವು. ಏಕೆಂದರೆ ನಮ್ಮ ಊರಿನಲ್ಲಿ ಯಾವುದೇ ಮೋಬೈಲ್ ‌ನೆಟ್‌ವರ್ಕ್ ಇಲ್ಲ. ನಂತರ ನಾವು ದೇವಳಮಕ್ಕಿ ಬಸ್ ನಿಲ್ದಾಣದಲ್ಲಿ ಕುಳಿತು ಆನ್‌ಲೈನ್ ತರಗತಿಗಳಿಗೆ ಹಾಜರಾಗುತ್ತೇವೆ. ಅಲ್ಲಿ ಬೇರೆ ಸ್ಥಳಗಳಿಗಿಂತ ನೆಟ್‌ವರ್ಕ್ ಉತ್ತಮವಾಗಿದೆ ಮತ್ತು ನಮಗೆ ಕುಳಿತುಕೊಳ್ಳಲು ಸ್ಥಳವಿದೆ’ ಎನ್ನುತ್ತಾರೆ.

“ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 3 ರವರೆಗೆ ಅಧ್ಯಯನ ಮಾಡುತ್ತೇವೆ ಮತ್ತು ಉಪನ್ಯಾಸಕರು ಟಿಪ್ಪಣಿಗಳನ್ನು ಕಳುಹಿಸಿದ್ದರೆ, ಅದನ್ನು ಅಲ್ಲಿ ಡೌನ್‌ಲೋಡ್ ಮಾಡಿಕೊಂಡು ನಂತರ ಮನೆಗೆ ಹಿಂತಿರುಗುತ್ತೆವೆ” ಎಂದು ವಿದ್ಯಾರ್ಥಿನಿ ಪವಿತ್ರಾ ಹೇಳಿದ್ದಾರೆ.

In Uttara Kannada, students travel miles for cell signal to take online classes | The News Minute
PC: The News Minute

ಈ ಮೂರು ಗ್ರಾಮಗಳಲ್ಲಿ 1,500 ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಇಲ್ಲಿ ಪ್ರಸ್ತುತ ಆನ್‌ಲೈನ್ ತರಗತಿಗಳಿಗೆ ಹಾಜರಾಗುತ್ತಿರುವ 15 ವಿದ್ಯಾರ್ಥಿಗಳಿದ್ದಾರೆ.

ದೇವಳಮಕ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಂಟು ಗ್ರಾಮಗಳಿದ್ದು, ಅವುಗಳಲ್ಲಿ ಐದು ಗ್ರಾಮಗಳಿಗೆ ನೆಟ್‌ವರ್ಕ್ ಸಂಪರ್ಕವಿದೆ. ಆದರೆ, ದೇವಳಮಕ್ಕಿ ಸಮೀಪವೇ ಇರುವ ನಗೆ, ಶಿರ್ವೆ, ಕೋವೆ ಗ್ರಾಮಗಳಿಗೆ ಈವರೆಗೆ ನೆಟ್‌ವರ್ಕ್ ಸಂಪರ್ಕ ಏರ್ಪಟ್ಟಿಲ್ಲ. ದೇವಳಮಕ್ಕಿಯಲ್ಲಿ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್‌ಎನ್‌ಎಲ್) ನ ಒಂದೇ ಒಂದು ಮೊಬೈಲ್ ಟವರ್ ಇದೆ.

ಇದನ್ನೂ ಓದಿ: LKG ಯಿಂದ 7 ನೇ ತರಗತಿಯವರೆಗೆ ಆನ್‌ಲೈನ್‌ ಕ್ಲಾಸ್‌ ರದ್ದು: ಸಚಿವ ಸಂಪುಟ ತೀರ್ಮಾನ

ಕಠಿಣ ತುರ್ತು ಪರಿಸ್ಥಿತಿಯಲ್ಲಿಯೂ ಸಹ, ನಾವು ಮೊಬೈಲ್ ಸಿಗ್ನಲ್‌ಗಾಗಿ ಕಿಲೋಮೀಟರ್‌ಗಟ್ಟಲೆ  ಪ್ರಯಾಣಿಸಬೇಕಾಗಿದೆ. ಇಲ್ಲೂ ಬಿಎಸ್ಎನ್ಎಲ್ ನೆಟ್ವರ್ಕ್ ಮಾತ್ರ ಲಭ್ಯವಿದೆ. ಪವರ್ ಕಟ್ ಇದ್ದಾಗ ಯಾವುದೇ ನೆಟ್ವರ್ಕ್ ದೊರೆಯುವುದಿಲ್ಲ ಎಂದು ಗ್ರಾಮಸ್ಥರು ಹೇಳುತ್ತಾರೆ.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಅಭ್ಯಸಿಸುತ್ತಿರುವ ದೇವಳಮಕ್ಕಿ ಗ್ರಾಮದ ವಿದ್ಯಾರ್ಥಿ ಪ್ರಜ್ವಲ್ ಹೇಳುವಂತೆ ’ ನನಗೆ ಆನ್‌ಲೈನ್ ತರಗತಿಗಳಿಲ್ಲ. ಆದರೆ ನೆಟ್ವರ್ಕ್ ಸಿಗದೆ ಸಮಸ್ಯೆ ಅನುಭವಿಸುತ್ತಯಿರುವ ವಿದ್ಯಾರ್ಥಿಗಳನ್ನು ನೋಡುತ್ತಿದ್ದೇನೆ. ಆನ್‌ಲೈನ್ ತರಗತಿಗಳು ನಡೆಯಲೇಬೇಕೆಂಬ ನಿಯಮಗಳಿದ್ದರೇ, ನಮ್ಮ ಹಳ್ಳಿಗಳಲ್ಲಿ ಸಂಪರ್ಕವು ಸುಧಾರಿಸಬೇಕು’ ಎಂದಿದ್ದಾರೆ ಎಂದು ಟಿಎನ್‌ಎಂ ವರದಿ ಮಾಡಿದೆ.

PC: The News Minute

ಶಿಕ್ಷಣದ 2017-18ರ ರಾಷ್ಟ್ರೀಯ ಮಾದರಿ ಸಮೀಕ್ಷೆಯ ವರದಿಯ ಪ್ರಕಾರ, ಕೇವಲ 24% ಭಾರತೀಯ ಕುಟುಂಬಗಳು ಮಾತ್ರ ಇಂಟರ್ನೆಟ್ ಸೌಲಭ್ಯವನ್ನು ಹೊಂದಿದ್ದರೆ, ಕೇವಲ 15% ರಷ್ಟು ಗ್ರಾಮೀಣ ಕುಟುಂಬಗಳು ಮಾತ್ರ ಇಂಟರ್ನೆಟ್ ಸೇವೆಗಳನ್ನು ಹೊಂದಿದ್ದಾರೆ. ಖಾಸಗಿ ನೆಟ್‌ವರ್ಕ್ ಪೂರೈಕೆದಾರರು ಚಂದಾದಾರರಿಗೆ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸಂಪರ್ಕವನ್ನು ಖಾತರಿಪಡಿಸಿಲ್ಲ ಎಂದು ಶಿಕ್ಷಣ ಸಂಸ್ಥೆಗಳಿಗೆ ಜಾಗತಿಕ ಶ್ರೇಯಾಂಕವನ್ನು ಪ್ರಕಟಿಸುವ ಕ್ಯೂಎಸ್(Quacquarelli Symonds) ವರದಿ ಮಾಡಿದೆ.

ರಾಜ್ಯದ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ಕರ್ನಾಟಕ ಸರ್ಕಾರ ಇನ್ನೂ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ. ಶಾಲೆ ತೆರೆಯುವ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.


ಇದನ್ನೂ ಓದಿ: ಮಕ್ಕಳಿರುವಲ್ಲೇ ಶಾಲೆ!: ಛತ್ತಿಸ್‌ಘಡ ಶಿಕ್ಷಕನ ಮನಮೆಚ್ಚುವ ಕಾರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...