Homeಕರ್ನಾಟಕ‌ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

‌ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

ನೆಟ್‌ವರ್ಕ್ ಸಿಗುವ ದೇವಳಮಕ್ಕಿ ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣದ ತಂಗುದಾಣ, ಅಂಗಡಿಗಳು, ತಮ್ಮ ಸ್ನೇಹಿತರ ಮನೆಯಲ್ಲಿ ಕುಳಿತು ವಿದ್ಯಾರ್ಥಿಗಳು ಪಾಠ ಕೇಳಿಸಿಕೊಳ್ಳುತ್ತಾರೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದಿಂದಾಗಿ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳಿಗೆ ಹೋಗಲು ನಿರ್ಬಂಧವಿರುವ ಕಾರಣ ಆನ್‌ಲೈನ್ ತರಗತಿಗಳನ್ನು ಜಾರಿ ಮಾಡಲಾಗಿದೆ. ನಗರ ಪ್ರದೇಶಗಳಿಂದ ಅನತಿ ದೂರದಲ್ಲಿರುವ ವಿದ್ಯಾರ್ಥಿಗಳಿಗೆ ಇದು ಉಪಯೋಗವಾದರೂ, ಹಳ್ಳಿಗಳಲ್ಲಿ ವಾಸಿಸುವವರಿಗೆ, ಆರ್ಥಿಕ ಪರಿಸ್ಥಿತಿ ಸರಿಯಿಲ್ಲದಿರುವವರಿಗೆ, ‌ನೆಟ್‌ವರ್ಕ್‌ ಸಿಗದ ಪ್ರದೇಶಗಳಲ್ಲಿ ವಾಸಿಸುವವರಿಗೆ ಶಾಪವಾಗಿ ಪರಿಣಮಿಸಿದೆ.

ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿನ ದೇವಳಮಕ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಗೆ, ಶಿರ್ವೆ, ಹಾಗೂ ಕೋವೆ ಗ್ರಾಮಗಳ ವಿದ್ಯಾರ್ಥಿಗಳು ನಿತ್ಯವೂ ಆನ್‌ಲೈನ್ ತರಗತಿಗಳಿ ಹಾಜರಾಗಲು 5 ಕಿಲೋಮೀಟರ್‌ ನಡೆಯಬೇಕಾಗಿದೆ.

ಈ ಹಳ್ಳಿಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಿಗದ ಕಾರಣ ಇಲ್ಲಿನ ವಿದ್ಯಾರ್ಥಿಗಳು ತಮ್ಮ ಊರಿನಿಂದ ಐದಾರು ಕಿ.ಮೀ ನಡೆದುಕೊಂಡು ಬರುತ್ತಾರೆ. ಕೆಲವರು ಸೈಕಲ್‌ನಲ್ಲಿ ಬರುತ್ತಾರೆ. ‌ನೆಟ್‌ವರ್ಕ್ ಸಿಗುವ ದೇವಳಮಕ್ಕಿ ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣದ ತಂಗುದಾಣ, ಅಂಗಡಿ, ತಮ್ಮ ಸ್ನೇಹಿತರ ಮನೆಯಲ್ಲಿ ಕುಳಿತು ಪಾಠ ಕೇಳಿಸಿಕೊಳ್ಳುತ್ತಾರೆ.

ಇದನ್ನೂ ಓದಿ: ಆನ್‌ಲೈನ್‌ ತರಗತಿಗೆ ಹಾಜರಾಗಲು ಅಸಾಧ್ಯ: 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಕಾರವಾರದಲ್ಲಿರುವ ಕಾಮಧೇನು ಕಾಲೇಜಿನಲ್ಲಿ ಬಿಸಿಎ (ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್ಸ್) ಓದುತ್ತಿರುವ ಪವಿತ್ರಾ ಹೇಳುವಂತೆ, ’ಕಾಲೇಜು ಆಡಳಿತ ಮಂಡಳಿ ಆನ್‌ಲೈನ್ ತರಗತಿಗಳಿಗೆ ಹಾಜರಾಗುವಂತೆ ಹೇಳಿದಾಗ ನಾವು ಗೊಂದಲಕ್ಕೆ ಒಳಗಾದೆವು. ಏಕೆಂದರೆ ನಮ್ಮ ಊರಿನಲ್ಲಿ ಯಾವುದೇ ಮೋಬೈಲ್ ‌ನೆಟ್‌ವರ್ಕ್ ಇಲ್ಲ. ನಂತರ ನಾವು ದೇವಳಮಕ್ಕಿ ಬಸ್ ನಿಲ್ದಾಣದಲ್ಲಿ ಕುಳಿತು ಆನ್‌ಲೈನ್ ತರಗತಿಗಳಿಗೆ ಹಾಜರಾಗುತ್ತೇವೆ. ಅಲ್ಲಿ ಬೇರೆ ಸ್ಥಳಗಳಿಗಿಂತ ನೆಟ್‌ವರ್ಕ್ ಉತ್ತಮವಾಗಿದೆ ಮತ್ತು ನಮಗೆ ಕುಳಿತುಕೊಳ್ಳಲು ಸ್ಥಳವಿದೆ’ ಎನ್ನುತ್ತಾರೆ.

“ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 3 ರವರೆಗೆ ಅಧ್ಯಯನ ಮಾಡುತ್ತೇವೆ ಮತ್ತು ಉಪನ್ಯಾಸಕರು ಟಿಪ್ಪಣಿಗಳನ್ನು ಕಳುಹಿಸಿದ್ದರೆ, ಅದನ್ನು ಅಲ್ಲಿ ಡೌನ್‌ಲೋಡ್ ಮಾಡಿಕೊಂಡು ನಂತರ ಮನೆಗೆ ಹಿಂತಿರುಗುತ್ತೆವೆ” ಎಂದು ವಿದ್ಯಾರ್ಥಿನಿ ಪವಿತ್ರಾ ಹೇಳಿದ್ದಾರೆ.

In Uttara Kannada, students travel miles for cell signal to take online classes | The News Minute
PC: The News Minute

ಈ ಮೂರು ಗ್ರಾಮಗಳಲ್ಲಿ 1,500 ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಇಲ್ಲಿ ಪ್ರಸ್ತುತ ಆನ್‌ಲೈನ್ ತರಗತಿಗಳಿಗೆ ಹಾಜರಾಗುತ್ತಿರುವ 15 ವಿದ್ಯಾರ್ಥಿಗಳಿದ್ದಾರೆ.

ದೇವಳಮಕ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಂಟು ಗ್ರಾಮಗಳಿದ್ದು, ಅವುಗಳಲ್ಲಿ ಐದು ಗ್ರಾಮಗಳಿಗೆ ನೆಟ್‌ವರ್ಕ್ ಸಂಪರ್ಕವಿದೆ. ಆದರೆ, ದೇವಳಮಕ್ಕಿ ಸಮೀಪವೇ ಇರುವ ನಗೆ, ಶಿರ್ವೆ, ಕೋವೆ ಗ್ರಾಮಗಳಿಗೆ ಈವರೆಗೆ ನೆಟ್‌ವರ್ಕ್ ಸಂಪರ್ಕ ಏರ್ಪಟ್ಟಿಲ್ಲ. ದೇವಳಮಕ್ಕಿಯಲ್ಲಿ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್‌ಎನ್‌ಎಲ್) ನ ಒಂದೇ ಒಂದು ಮೊಬೈಲ್ ಟವರ್ ಇದೆ.

ಇದನ್ನೂ ಓದಿ: LKG ಯಿಂದ 7 ನೇ ತರಗತಿಯವರೆಗೆ ಆನ್‌ಲೈನ್‌ ಕ್ಲಾಸ್‌ ರದ್ದು: ಸಚಿವ ಸಂಪುಟ ತೀರ್ಮಾನ

ಕಠಿಣ ತುರ್ತು ಪರಿಸ್ಥಿತಿಯಲ್ಲಿಯೂ ಸಹ, ನಾವು ಮೊಬೈಲ್ ಸಿಗ್ನಲ್‌ಗಾಗಿ ಕಿಲೋಮೀಟರ್‌ಗಟ್ಟಲೆ  ಪ್ರಯಾಣಿಸಬೇಕಾಗಿದೆ. ಇಲ್ಲೂ ಬಿಎಸ್ಎನ್ಎಲ್ ನೆಟ್ವರ್ಕ್ ಮಾತ್ರ ಲಭ್ಯವಿದೆ. ಪವರ್ ಕಟ್ ಇದ್ದಾಗ ಯಾವುದೇ ನೆಟ್ವರ್ಕ್ ದೊರೆಯುವುದಿಲ್ಲ ಎಂದು ಗ್ರಾಮಸ್ಥರು ಹೇಳುತ್ತಾರೆ.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಅಭ್ಯಸಿಸುತ್ತಿರುವ ದೇವಳಮಕ್ಕಿ ಗ್ರಾಮದ ವಿದ್ಯಾರ್ಥಿ ಪ್ರಜ್ವಲ್ ಹೇಳುವಂತೆ ’ ನನಗೆ ಆನ್‌ಲೈನ್ ತರಗತಿಗಳಿಲ್ಲ. ಆದರೆ ನೆಟ್ವರ್ಕ್ ಸಿಗದೆ ಸಮಸ್ಯೆ ಅನುಭವಿಸುತ್ತಯಿರುವ ವಿದ್ಯಾರ್ಥಿಗಳನ್ನು ನೋಡುತ್ತಿದ್ದೇನೆ. ಆನ್‌ಲೈನ್ ತರಗತಿಗಳು ನಡೆಯಲೇಬೇಕೆಂಬ ನಿಯಮಗಳಿದ್ದರೇ, ನಮ್ಮ ಹಳ್ಳಿಗಳಲ್ಲಿ ಸಂಪರ್ಕವು ಸುಧಾರಿಸಬೇಕು’ ಎಂದಿದ್ದಾರೆ ಎಂದು ಟಿಎನ್‌ಎಂ ವರದಿ ಮಾಡಿದೆ.

PC: The News Minute

ಶಿಕ್ಷಣದ 2017-18ರ ರಾಷ್ಟ್ರೀಯ ಮಾದರಿ ಸಮೀಕ್ಷೆಯ ವರದಿಯ ಪ್ರಕಾರ, ಕೇವಲ 24% ಭಾರತೀಯ ಕುಟುಂಬಗಳು ಮಾತ್ರ ಇಂಟರ್ನೆಟ್ ಸೌಲಭ್ಯವನ್ನು ಹೊಂದಿದ್ದರೆ, ಕೇವಲ 15% ರಷ್ಟು ಗ್ರಾಮೀಣ ಕುಟುಂಬಗಳು ಮಾತ್ರ ಇಂಟರ್ನೆಟ್ ಸೇವೆಗಳನ್ನು ಹೊಂದಿದ್ದಾರೆ. ಖಾಸಗಿ ನೆಟ್‌ವರ್ಕ್ ಪೂರೈಕೆದಾರರು ಚಂದಾದಾರರಿಗೆ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸಂಪರ್ಕವನ್ನು ಖಾತರಿಪಡಿಸಿಲ್ಲ ಎಂದು ಶಿಕ್ಷಣ ಸಂಸ್ಥೆಗಳಿಗೆ ಜಾಗತಿಕ ಶ್ರೇಯಾಂಕವನ್ನು ಪ್ರಕಟಿಸುವ ಕ್ಯೂಎಸ್(Quacquarelli Symonds) ವರದಿ ಮಾಡಿದೆ.

ರಾಜ್ಯದ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ಕರ್ನಾಟಕ ಸರ್ಕಾರ ಇನ್ನೂ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ. ಶಾಲೆ ತೆರೆಯುವ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.


ಇದನ್ನೂ ಓದಿ: ಮಕ್ಕಳಿರುವಲ್ಲೇ ಶಾಲೆ!: ಛತ್ತಿಸ್‌ಘಡ ಶಿಕ್ಷಕನ ಮನಮೆಚ್ಚುವ ಕಾರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...