Homeಕರ್ನಾಟಕ‌ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

‌ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

ನೆಟ್‌ವರ್ಕ್ ಸಿಗುವ ದೇವಳಮಕ್ಕಿ ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣದ ತಂಗುದಾಣ, ಅಂಗಡಿಗಳು, ತಮ್ಮ ಸ್ನೇಹಿತರ ಮನೆಯಲ್ಲಿ ಕುಳಿತು ವಿದ್ಯಾರ್ಥಿಗಳು ಪಾಠ ಕೇಳಿಸಿಕೊಳ್ಳುತ್ತಾರೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದಿಂದಾಗಿ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳಿಗೆ ಹೋಗಲು ನಿರ್ಬಂಧವಿರುವ ಕಾರಣ ಆನ್‌ಲೈನ್ ತರಗತಿಗಳನ್ನು ಜಾರಿ ಮಾಡಲಾಗಿದೆ. ನಗರ ಪ್ರದೇಶಗಳಿಂದ ಅನತಿ ದೂರದಲ್ಲಿರುವ ವಿದ್ಯಾರ್ಥಿಗಳಿಗೆ ಇದು ಉಪಯೋಗವಾದರೂ, ಹಳ್ಳಿಗಳಲ್ಲಿ ವಾಸಿಸುವವರಿಗೆ, ಆರ್ಥಿಕ ಪರಿಸ್ಥಿತಿ ಸರಿಯಿಲ್ಲದಿರುವವರಿಗೆ, ‌ನೆಟ್‌ವರ್ಕ್‌ ಸಿಗದ ಪ್ರದೇಶಗಳಲ್ಲಿ ವಾಸಿಸುವವರಿಗೆ ಶಾಪವಾಗಿ ಪರಿಣಮಿಸಿದೆ.

ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿನ ದೇವಳಮಕ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಗೆ, ಶಿರ್ವೆ, ಹಾಗೂ ಕೋವೆ ಗ್ರಾಮಗಳ ವಿದ್ಯಾರ್ಥಿಗಳು ನಿತ್ಯವೂ ಆನ್‌ಲೈನ್ ತರಗತಿಗಳಿ ಹಾಜರಾಗಲು 5 ಕಿಲೋಮೀಟರ್‌ ನಡೆಯಬೇಕಾಗಿದೆ.

ಈ ಹಳ್ಳಿಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಿಗದ ಕಾರಣ ಇಲ್ಲಿನ ವಿದ್ಯಾರ್ಥಿಗಳು ತಮ್ಮ ಊರಿನಿಂದ ಐದಾರು ಕಿ.ಮೀ ನಡೆದುಕೊಂಡು ಬರುತ್ತಾರೆ. ಕೆಲವರು ಸೈಕಲ್‌ನಲ್ಲಿ ಬರುತ್ತಾರೆ. ‌ನೆಟ್‌ವರ್ಕ್ ಸಿಗುವ ದೇವಳಮಕ್ಕಿ ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣದ ತಂಗುದಾಣ, ಅಂಗಡಿ, ತಮ್ಮ ಸ್ನೇಹಿತರ ಮನೆಯಲ್ಲಿ ಕುಳಿತು ಪಾಠ ಕೇಳಿಸಿಕೊಳ್ಳುತ್ತಾರೆ.

ಇದನ್ನೂ ಓದಿ: ಆನ್‌ಲೈನ್‌ ತರಗತಿಗೆ ಹಾಜರಾಗಲು ಅಸಾಧ್ಯ: 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಕಾರವಾರದಲ್ಲಿರುವ ಕಾಮಧೇನು ಕಾಲೇಜಿನಲ್ಲಿ ಬಿಸಿಎ (ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್ಸ್) ಓದುತ್ತಿರುವ ಪವಿತ್ರಾ ಹೇಳುವಂತೆ, ’ಕಾಲೇಜು ಆಡಳಿತ ಮಂಡಳಿ ಆನ್‌ಲೈನ್ ತರಗತಿಗಳಿಗೆ ಹಾಜರಾಗುವಂತೆ ಹೇಳಿದಾಗ ನಾವು ಗೊಂದಲಕ್ಕೆ ಒಳಗಾದೆವು. ಏಕೆಂದರೆ ನಮ್ಮ ಊರಿನಲ್ಲಿ ಯಾವುದೇ ಮೋಬೈಲ್ ‌ನೆಟ್‌ವರ್ಕ್ ಇಲ್ಲ. ನಂತರ ನಾವು ದೇವಳಮಕ್ಕಿ ಬಸ್ ನಿಲ್ದಾಣದಲ್ಲಿ ಕುಳಿತು ಆನ್‌ಲೈನ್ ತರಗತಿಗಳಿಗೆ ಹಾಜರಾಗುತ್ತೇವೆ. ಅಲ್ಲಿ ಬೇರೆ ಸ್ಥಳಗಳಿಗಿಂತ ನೆಟ್‌ವರ್ಕ್ ಉತ್ತಮವಾಗಿದೆ ಮತ್ತು ನಮಗೆ ಕುಳಿತುಕೊಳ್ಳಲು ಸ್ಥಳವಿದೆ’ ಎನ್ನುತ್ತಾರೆ.

“ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 3 ರವರೆಗೆ ಅಧ್ಯಯನ ಮಾಡುತ್ತೇವೆ ಮತ್ತು ಉಪನ್ಯಾಸಕರು ಟಿಪ್ಪಣಿಗಳನ್ನು ಕಳುಹಿಸಿದ್ದರೆ, ಅದನ್ನು ಅಲ್ಲಿ ಡೌನ್‌ಲೋಡ್ ಮಾಡಿಕೊಂಡು ನಂತರ ಮನೆಗೆ ಹಿಂತಿರುಗುತ್ತೆವೆ” ಎಂದು ವಿದ್ಯಾರ್ಥಿನಿ ಪವಿತ್ರಾ ಹೇಳಿದ್ದಾರೆ.

In Uttara Kannada, students travel miles for cell signal to take online classes | The News Minute
PC: The News Minute

ಈ ಮೂರು ಗ್ರಾಮಗಳಲ್ಲಿ 1,500 ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಇಲ್ಲಿ ಪ್ರಸ್ತುತ ಆನ್‌ಲೈನ್ ತರಗತಿಗಳಿಗೆ ಹಾಜರಾಗುತ್ತಿರುವ 15 ವಿದ್ಯಾರ್ಥಿಗಳಿದ್ದಾರೆ.

ದೇವಳಮಕ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಂಟು ಗ್ರಾಮಗಳಿದ್ದು, ಅವುಗಳಲ್ಲಿ ಐದು ಗ್ರಾಮಗಳಿಗೆ ನೆಟ್‌ವರ್ಕ್ ಸಂಪರ್ಕವಿದೆ. ಆದರೆ, ದೇವಳಮಕ್ಕಿ ಸಮೀಪವೇ ಇರುವ ನಗೆ, ಶಿರ್ವೆ, ಕೋವೆ ಗ್ರಾಮಗಳಿಗೆ ಈವರೆಗೆ ನೆಟ್‌ವರ್ಕ್ ಸಂಪರ್ಕ ಏರ್ಪಟ್ಟಿಲ್ಲ. ದೇವಳಮಕ್ಕಿಯಲ್ಲಿ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್‌ಎನ್‌ಎಲ್) ನ ಒಂದೇ ಒಂದು ಮೊಬೈಲ್ ಟವರ್ ಇದೆ.

ಇದನ್ನೂ ಓದಿ: LKG ಯಿಂದ 7 ನೇ ತರಗತಿಯವರೆಗೆ ಆನ್‌ಲೈನ್‌ ಕ್ಲಾಸ್‌ ರದ್ದು: ಸಚಿವ ಸಂಪುಟ ತೀರ್ಮಾನ

ಕಠಿಣ ತುರ್ತು ಪರಿಸ್ಥಿತಿಯಲ್ಲಿಯೂ ಸಹ, ನಾವು ಮೊಬೈಲ್ ಸಿಗ್ನಲ್‌ಗಾಗಿ ಕಿಲೋಮೀಟರ್‌ಗಟ್ಟಲೆ  ಪ್ರಯಾಣಿಸಬೇಕಾಗಿದೆ. ಇಲ್ಲೂ ಬಿಎಸ್ಎನ್ಎಲ್ ನೆಟ್ವರ್ಕ್ ಮಾತ್ರ ಲಭ್ಯವಿದೆ. ಪವರ್ ಕಟ್ ಇದ್ದಾಗ ಯಾವುದೇ ನೆಟ್ವರ್ಕ್ ದೊರೆಯುವುದಿಲ್ಲ ಎಂದು ಗ್ರಾಮಸ್ಥರು ಹೇಳುತ್ತಾರೆ.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಅಭ್ಯಸಿಸುತ್ತಿರುವ ದೇವಳಮಕ್ಕಿ ಗ್ರಾಮದ ವಿದ್ಯಾರ್ಥಿ ಪ್ರಜ್ವಲ್ ಹೇಳುವಂತೆ ’ ನನಗೆ ಆನ್‌ಲೈನ್ ತರಗತಿಗಳಿಲ್ಲ. ಆದರೆ ನೆಟ್ವರ್ಕ್ ಸಿಗದೆ ಸಮಸ್ಯೆ ಅನುಭವಿಸುತ್ತಯಿರುವ ವಿದ್ಯಾರ್ಥಿಗಳನ್ನು ನೋಡುತ್ತಿದ್ದೇನೆ. ಆನ್‌ಲೈನ್ ತರಗತಿಗಳು ನಡೆಯಲೇಬೇಕೆಂಬ ನಿಯಮಗಳಿದ್ದರೇ, ನಮ್ಮ ಹಳ್ಳಿಗಳಲ್ಲಿ ಸಂಪರ್ಕವು ಸುಧಾರಿಸಬೇಕು’ ಎಂದಿದ್ದಾರೆ ಎಂದು ಟಿಎನ್‌ಎಂ ವರದಿ ಮಾಡಿದೆ.

PC: The News Minute

ಶಿಕ್ಷಣದ 2017-18ರ ರಾಷ್ಟ್ರೀಯ ಮಾದರಿ ಸಮೀಕ್ಷೆಯ ವರದಿಯ ಪ್ರಕಾರ, ಕೇವಲ 24% ಭಾರತೀಯ ಕುಟುಂಬಗಳು ಮಾತ್ರ ಇಂಟರ್ನೆಟ್ ಸೌಲಭ್ಯವನ್ನು ಹೊಂದಿದ್ದರೆ, ಕೇವಲ 15% ರಷ್ಟು ಗ್ರಾಮೀಣ ಕುಟುಂಬಗಳು ಮಾತ್ರ ಇಂಟರ್ನೆಟ್ ಸೇವೆಗಳನ್ನು ಹೊಂದಿದ್ದಾರೆ. ಖಾಸಗಿ ನೆಟ್‌ವರ್ಕ್ ಪೂರೈಕೆದಾರರು ಚಂದಾದಾರರಿಗೆ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸಂಪರ್ಕವನ್ನು ಖಾತರಿಪಡಿಸಿಲ್ಲ ಎಂದು ಶಿಕ್ಷಣ ಸಂಸ್ಥೆಗಳಿಗೆ ಜಾಗತಿಕ ಶ್ರೇಯಾಂಕವನ್ನು ಪ್ರಕಟಿಸುವ ಕ್ಯೂಎಸ್(Quacquarelli Symonds) ವರದಿ ಮಾಡಿದೆ.

ರಾಜ್ಯದ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ಕರ್ನಾಟಕ ಸರ್ಕಾರ ಇನ್ನೂ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ. ಶಾಲೆ ತೆರೆಯುವ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.


ಇದನ್ನೂ ಓದಿ: ಮಕ್ಕಳಿರುವಲ್ಲೇ ಶಾಲೆ!: ಛತ್ತಿಸ್‌ಘಡ ಶಿಕ್ಷಕನ ಮನಮೆಚ್ಚುವ ಕಾರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...