Homeಮುಖಪುಟಮುಖ್ಯಮಂತ್ರಿಯಾಗಲು ಎಂದಿಗೂ ಬಯಸಲಿಲ್ಲ: ಹೊಸ ಪಕ್ಷ ಘೋಷಿಸಿದ ರಜನಿಕಾಂತ್

ಮುಖ್ಯಮಂತ್ರಿಯಾಗಲು ಎಂದಿಗೂ ಬಯಸಲಿಲ್ಲ: ಹೊಸ ಪಕ್ಷ ಘೋಷಿಸಿದ ರಜನಿಕಾಂತ್

- Advertisement -
- Advertisement -

“ನಾನು ಮುಖ್ಯಮಂತ್ರಿಯಾಗಲು ಎಂದಿಗೂ ಬಯಸಲಿಲ್ಲ, ಬದಲಾವಣೆಯನ್ನಷ್ಟೇ ಬಯಸುತ್ತೇನೆ” ಎಂದು ನಟ ಹಾಗೂ ರಾಜಕಾರಣಿ ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ. ತಮ್ಮ ಪ್ರಸ್ತಾವನೆಯಲ್ಲಿ ವಿದ್ಯಾವಂತ ಮತ್ತು ಸಹಾನುಭೂತಿಯ ಯುವಕರನ್ನು ಮುಖ್ಯಮಂತ್ರಿಯಾಗಿ ನೇಮಿಸುವುದು ಕೂಡಾ ಸೇರಿದೆ ಎಂದು ಹೇಳಿದ್ದಾರೆ.

ಚನ್ನೈನಲ್ಲಿ ’ರಜಿನಿ ಮಕ್ಕಳ ಮಂದ್ರಂ’ ಎಂಬ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿ ಮಾತನಾಡಿದ ಅವರು, ಈಗ ನಾವು ರಾಜಕೀಯ ಮತ್ತು ಸರ್ಕಾರವನ್ನು ಬದಲಾಯಿಸದಿದ್ದರೆ ಇನ್ಯಾವಾಗಲೂ ಬದಲಾಯಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ನಮ್ಮ ರಾಜಕೀಯದಲ್ಲಿ ಇಬ್ಬರು ಪ್ರಮುಖರು ಇದ್ದರು, ಒಬ್ಬರು ಜಯಲಲಿತಾ ಮತ್ತೊಬ್ಬರು ಕರುಣಾನಿಧಿ. ಜನರು ಅವರಿಗೆ ಮತ ಹಾಕಿದರು. ಆದರೆ ಈಗ ನಿರ್ವಾತವಿದೆ. ಈಗ, ಬದಲಾವಣೆಯನ್ನು ತರಲು ನಾವು ಹೊಸ ಆಂದೋಲನವನ್ನು ರಚಿಸಬೇಕಾಗಿದೆ ಎಂದು ರಜಿನಿ ಹೇಳಿದ್ದಾರೆ.

ಕಳೆದ ವಾರ, ಅವರು ತಮ್ಮ ’ರಜಿನಿ ಮಕ್ಕಳ ಮಂದ್ರಂ’ನ ಜಿಲ್ಲಾ ಕಾರ್ಯದರ್ಶಿಯನ್ನು ಭೇಟಿಯಾದ ನಂತರ “ನಾವು ಅನೇಕ ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ. ವೈಯಕ್ತಿಕವಾಗಿ ಒಂದು ವಿಷಯದ ಬಗ್ಗೆ ನಿರಾಶೆಗೊಂಡಿದ್ದೇನೆ. ಸಮಯ ಬಂದಾಗ ಅದರ ಬಗ್ಗೆ ಹೇಳುತ್ತೇನೆ” ಎಂದು ಹೇಳಿದ್ದರು. 2021 ರ ರಾಜ್ಯ ಚುನಾವಣೆಗೆ ಮುನ್ನ ತಮ್ಮ ಪಕ್ಷವನ್ನು ಪ್ರಾರಂಭಿಸುವುದಾಗಿ ರಜನಿಕಾಂತ್ ಹೇಳಿದ್ದರು.

ರಜನಿಕಾಂತ್ ಮತ್ತು ನಟ-ರಾಜಕಾರಣಿ ಕಮಲ್ ಹಾಸನ್ ಇಬ್ಬರೂ ಒಟ್ಟಾಗಿ ಕೆಲಸ ಮಾಡವ ಇಚ್ಚೆ ವ್ಯಕ್ತಪಡಿಸಿದ್ದಾರೆ. 1996 ರಲ್ಲಿ “ಜಯಲಲಿತಾ ಚುನಾವಣೆಯಲ್ಲಿ ಗೆದ್ದರೆ ದೇವರಿಗೆ ಸಹ ತಮಿಳುನಾಡನ್ನು ಉಳಿಸಲು ಸಾಧ್ಯವಿಲ್ಲ” ಎಂಬ ರಜನಿಕಾಂತ್ ಅವರ ಮಾತು ಡಿಎಂಕೆ ಮೈತ್ರಿಕೂಟವನ್ನು ವಿಧಾನಸಭಾ ಚುನಾವಣೆಯಲ್ಲಿ ಮುನ್ನಡೆ ಸಾಧಿಸಲು ಅನುವು ಮಾಡಿಕೊಟ್ಟಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...