Homeಮುಖಪುಟಮದ್ರಸಾಗಳನ್ನು ಮುಚ್ಚುವಂತೆ ನಾನು ಯಾವತ್ತೂ ಹೇಳಿಲ್ಲ : ಎನ್‌ಸಿಪಿಸಿಆರ್ ಅಧ್ಯಕ್ಷ

ಮದ್ರಸಾಗಳನ್ನು ಮುಚ್ಚುವಂತೆ ನಾನು ಯಾವತ್ತೂ ಹೇಳಿಲ್ಲ : ಎನ್‌ಸಿಪಿಸಿಆರ್ ಅಧ್ಯಕ್ಷ

- Advertisement -
- Advertisement -

“ಮದ್ರಸಾಗಳನ್ನು ಮುಚ್ಚುವಂತೆ ನಾನು ಯಾವತ್ತೂ ಹೇಳಿಲ್ಲ, ಬಡ ಮುಸ್ಲಿಂ ಮಕ್ಕಳನ್ನು ಶಿಕ್ಷಣದಿಂದ ವಂಚಿತಗೊಳಿಸುತ್ತಿರುವ ಕಾರಣ ಮದ್ರಸಾಗಳಿಗೆ ಸರ್ಕಾರ ಧನಸಹಾಯ ನಿಲ್ಲಿಸುವಂತೆ ಶಿಫಾರಸು ಮಾಡಿದ್ದೇನೆ” ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗದ (ಎನ್‌ಸಿಪಿಸಿಆರ್‌) ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಹೇಳಿದ್ದಾರೆ.

“ಬಡತನದ ಹಿನ್ನೆಲೆಯಿಂದ ಬರುವ ಮುಸ್ಲಿಂ ಮಕ್ಕಳನ್ನು ಲೌಕಿಕ ಶಿಕ್ಷಣಕ್ಕಿಂತ ಹೆಚ್ಚಾಗಿ ಧಾರ್ಮಿಕ ಶಿಕ್ಷಣಕ್ಕೆ ಒತ್ತಾಯಿಸಲಾಗುತ್ತಿದೆ. ನಾವು ಎಲ್ಲಾ ಮಕ್ಕಳಿಗೂ ಸಮಾನವಾದ ಶೈಕ್ಷಣಿಕ ಅವಕಾಶಗಳನ್ನು ಪ್ರತಿಪಾದಿಸುತ್ತೇವೆ” ಎಂದಿದ್ದಾರೆ.

“ದೇಶದಲ್ಲಿ ಕೆಲವೊಂದು ಗುಂಪುಗಳಿಗೆ ಬಡ ಮುಸ್ಲಿಂ ಸಮುದಾಯ ಶಿಕ್ಷಣ ಪಡೆದು ಸಬಲೀಕರಣಗೊಳ್ಳುವ ಬಗ್ಗೆ ಭಯವಿದೆ. ಅವರು ಮುಸ್ಲಿಂ ಮಕ್ಕಳು ಶಿಕ್ಷಣ ಪಡೆದು ಮುಂದೆ ಬರುವುದನ್ನು ಸಹಿಸುತ್ತಿಲ್ಲ” ಎಂದು ಹೇಳಿದ್ದಾರೆ.

ಮದ್ರಸಾಗಳು ಮತ್ತು ಮದ್ರಸಾ ಮಂಡಳಿಗಳಿಗೆ ಧನಸಹಾಯ ನೀಡುವುದನ್ನು ನಿಲ್ಲಿಸುವಂತೆ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪ್ರಿಯಾಂಕ್ ಕಾನೂಂಗೊ ಇತ್ತೀಚೆಗೆ ಪತ್ರ ಬರೆದಿದ್ದರು. ಇದು ಭಾರೀ ವಿರೋಧಕ್ಕೆ ಕಾರಣವಾಗಿದೆ.

ದೇಶದ ವಿವಿಧ ಪ್ರಮುಖ ಮುಸ್ಲಿಂ ಸಂಘಟನೆಗಳು ಕಾನೂಂಗೊ ಪತ್ರವನ್ನು ಕಟುವಾಗಿ ವಿರೋಧಿಸಿವೆ. ವಿಶೇಷವಾಗಿ ಕೇರಳದ ಪ್ರಭಾವಿ ಮುಸ್ಲಿಂ ಸಂಘಟನೆಗಳಾದ ಸಮಸ್ತ ಎಪಿ ಮತ್ತು ಇಕೆ ವಿಭಾಗ ವಿರೋಧ ವ್ಯಕ್ತಪಡಿಸಿವೆ.

ಕೇರಳದ ಇಸ್ಲಾಮಿಕ್ ವಿದ್ವಾಂಸರ ಅತಿದೊಡ್ಡ ಸಂಘಟನೆಯಾದ ಸಮಸ್ತ ಕೇರಳ ಜಂ-ಇಯತುಲ್ ಉಲಮಾ (ಸಮಸ್ತ) ಸದಸ್ಯರು ಎನ್‌ಸಿಪಿಸಿಆರ್ ಶಿಫಾರಸು ಸಂಘ ಪರಿವಾರದ ಸೈದ್ಧಾಂತಿಕ ಯೋಜನೆಗಳನ್ನು ಕಾರ್ಯಗತಗೊಳಿಸುವ ಕಾರ್ಯಸೂಚಿಯ ಭಾಗವಾಗಿದೆ ಎಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಆಡಳಿತಾರೂಢ ಬಿಜೆಪಿ ಅಲ್ಪಸಂಖ್ಯಾತ ಸಂಸ್ಥೆಗಳನ್ನು ಆಯ್ದು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.

ಕೇರಳದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) “ಇದು ಕೇಂದ್ರ ಸರ್ಕಾರ ಮತ್ತು ಅದರ ಏಜೆನ್ಸಿಗಳ ಕೋಮುವಾದಿ ಕಾರ್ಯಸೂಚಿಯ ಇತ್ತೀಚಿನ ನಡೆ” ಎಂದು ಹೇಳಿದೆ.

ಇದನ್ನೂ ಓದಿ : ಮದ್ರಸಾಗಳಿಗೆ ಧನ ಸಹಾಯ ನಿಲ್ಲಿಸುವಂತೆ ಮಕ್ಕಳ ಹಕ್ಕುಗಳ ಆಯೋಗ ಪತ್ರ : ವಿರೋಧ ವ್ಯಕ್ತಪಡಿಸಿದ ಮುಸ್ಲಿಂ ಸಂಘಟನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...