Homeಮುಖಪುಟಬಿಲಿಯನೇರ್ ಬೂಮ್: ಶ್ರೀಮಂತರ ಜೇಬುಗಳನ್ನು ಸೇರಿದ ಕೋವಿಡ್ ಕ್ಯಾಷ್!

ಬಿಲಿಯನೇರ್ ಬೂಮ್: ಶ್ರೀಮಂತರ ಜೇಬುಗಳನ್ನು ಸೇರಿದ ಕೋವಿಡ್ ಕ್ಯಾಷ್!

ಕಳೆದ ವರ್ಷ ವೈರಸ್ ಹರಡುತ್ತಿದ್ದಂತೆ, ಕೇಂದ್ರ ಬ್ಯಾಂಕುಗಳು ವಿಶ್ವಾದ್ಯಂತ ಆರ್ಥಿಕತೆಗಳಿಗೆ 9 ಟ್ರಿಲಿಯನ್ ಡಾಲರ್ ಹಣವನ್ನು ಸುರಿದವು. ಇದರ ಬಹುಪಾಲು ಅತಿ ಶ್ರೀಮಂತರ ಜೇಬುಗಳನ್ನು ಸೇರಿತು!

- Advertisement -
- Advertisement -

ಇತ್ತೀಚಿನ ದಶಕಗಳಲ್ಲಿ, ಬಿಲಿಯನೇರ್‌ಗಳ (ಶತಕೋಟ್ಯಾಧಿಪತಿಗಳ) ಜಾಗತಿಕ ಜನಸಂಖ್ಯೆಯು ಐದು ಪಟ್ಟು ಹೆಚ್ಚಾಗಿದೆ ಮತ್ತು ಅವರ ಒಟ್ಟು ಮೊತ್ತವು 100 ಶತಕೋಟಿ ಡಾಲರ್‌ನಷ್ಟಾಗಿದೆ. ಹೆಚ್ಚುತ್ತಿರುವ ಅಸಮಾನತೆಯು ಬಂಡವಾಳಶಾಹಿಯ ವಿರುದ್ಧ ಜನರಲ್ಲಿ ಆಕ್ರೋಶ ಮೂಡಿಸುತ್ತಿದೆ.

ಸಾಂಕ್ರಾಮಿಕವು ಬಂಡವಾಳಶಾಹಿಗಳ ಸಂಪತನ್ನು ಬಲಪಡಿಸಿದೆ. ವೈರಸ್ ಹರಡುತ್ತಿದ್ದಂತೆ, ಕೇಂದ್ರ ಬ್ಯಾಂಕುಗಳು ವಿಶ್ವಾದ್ಯಂತ ಆರ್ಥಿಕತೆಗಳಿಗೆ 9 ಟ್ರಿಲಿಯನ್ ಡಾಲರ್ ಹಣವನ್ನು ಸುರಿದವು. ಇದರ ಬಹುಪಾಲು ಹಣಕಾಸು ಮಾರುಕಟ್ಟೆಗಳಿಗೆ ಮತ್ತು ಅಲ್ಲಿಂದ ಅತಿ ಶ್ರೀಮಂತರ ನಿವ್ವಳ ಮೌಲ್ಯಕ್ಕೆ ಸೇರಿ ಹೋಯಿತು. ವಿಶ್ವಾದ್ಯಂತದ ಒಟ್ಟು ಶತಕೋಟ್ಯಾಧಿಪತಿಗಳ ಸಂಪತ್ತು 12 ತಿಂಗಳಲ್ಲಿ 5 ಟ್ರಿಲಿಯನ್ ಡಾಲರ್‌ಗೆ ಏರಿಕೆಯಾಗಿ 13 ಟ್ರಿಲಿಯನ್ ಡಾಲರ್ ತಲುಪಿದೆ, ಇದು ಫೋರ್ಬ್ಸ್ ನಿಯತಕಾಲಿಕವು ಸಂಗ್ರಹಿಸಿದ ವಾರ್ಷಿಕ ಪಟ್ಟಿಯಲ್ಲಿ ದಾಖಲಾದ ಅತ್ಯಂತ ನಾಟಕೀಯ ಉಲ್ಬಣವಾಗಿದೆ.

ಬಿಲಿಯನೇರ್‌ಗಳ ಜನಸಂಖ್ಯೆಯೂ ಹೆಚ್ಚಾಯಿತು. ಏಪ್ರಿಲ್ 6 ರವರೆಗೆ ನಡೆಯುವ 2021 ಫೋರ್ಬ್ಸ್ ಪಟ್ಟಿಯಲ್ಲಿ, ಅವರ ಸಂಖ್ಯೆ ಸುಮಾರು 700 ರಷ್ಟು ಏರಿಕೆಯಾಗಿ 2,700ಕ್ಕಿಂತ ಹೆಚ್ಚಾಗಿದೆ. ಚೀನಾದಲ್ಲಿ ಅತಿದೊಡ್ಡ ಉಲ್ಬಣವು ಸಂಭವಿಸಿದೆ, ಅದು ಒಟ್ಟು 626 ಬಿಲಿಯನೇರ್‌ಗಳಲ್ಲಿ ಈ 12 ತಿಂಗಳಲ್ಲಿ ಹೊಸ 238 ಬಿಲಿಯನೇರ್‌ಗಳು ಸೃಷ್ಟಿಯಾಗಿದ್ದಾರೆ. ಮುಂದಿನದು ಯುಎಸ್, ಒಟ್ಟು 724ರಲ್ಲಿ ಹೊಸದಾಗಿ 110 ಜನ ಈ ಪಟ್ಟಿ ಸೇರಿದ್ದಾರೆ. ಭಾರತದಲ್ಲಿ ಹೊಸದಾಗಿ 38 ಬಿಲಿಯನೇರ್‌ಗಳು ಕಂಡುಬಂದಿದ್ದು, ಒಟ್ಟು 140 ಬಿಲಿಯನೇರ್‌ಗಳಿದ್ದಾರೆ.

ಹೊಸ ಸಂಪತ್ತಿನ ಗಣ್ಯರ ವಿರುದ್ಧ ಕೋಪ ಬೆಳೆಯುತ್ತಿರುವಾಗ 2010ರಲ್ಲಿ ಭಾರತದಲ್ಲಿ ಶತಕೋಟ್ಯಾಧಿಪತಿಗಳ ಸಂಖ್ಯೆನ್ನು ಗುರುತಿಸಲು ಆರಂಭಿಸಿದೆ. ಭಾರತವು ಬಿಲಿಯನೇರ್‌ಗಳ ಸಂಖ್ಯೆಯಲ್ಲಿ ಸಾಪೇಕ್ಷವಾಗಿ ಕಡಿಮೆ ಇದ್ದರೂ, ಬಿಲಿಯನೇರ್ ಸಂಪತ್ತು ಒಟ್ಟು ದೇಶೀಯ ಉತ್ಪನ್ನದ 17%ಕ್ಕಿಂತ ಹೆಚ್ಚಿದೆ! ಉದ್ಯಮಿ ಕುಟುಂಬಗಳು ಈ ಅಗಾಧ ಸಂಪತ್ತನ್ನು ಪಡೆಯುತ್ತಿದ್ದು, ಕ್ರೋನಿ ಕ್ಯಾಪಿಟಲಿಸಂ ಸಂಭವಿಸಲು ಕಾರಣವಾಗಿದೆ.

ಭಾರತಕ್ಕೆ ವ್ಯತಿರಿಕ್ತವಾಗಿ, ಅಮೆರಿಕದ ಬಿಲಿಯನೇರ್ ವರ್ಗವು 2010 ರ ದಶಕದ ಆರಂಭದಲ್ಲಿ ಆಶ್ಚರ್ಯಕರವಾಗಿ ಸಮತೋಲಿತವಾಗಿದೆ. ಆ ಸಮಯದಲ್ಲಿ ಬಿಲಿಯನೇರ್ ಸಂಪತ್ತು ಒಟ್ಟು ಜಿಡಿಪಿಯ ಸುಮಾರು 10% ರಷ್ಟಿತ್ತು, 2015 ರ ಹೊತ್ತಿಗೆ, ಬಿಲಿಯನೇರ್ ಸಂಪತ್ತು ಹಲವು ಪಟ್ಟುಗಳಲ್ಲಿ ಏರುತ್ತ ಹೋಗಿದೆ.

ಭಾರತದಲ್ಲಿ ಕ್ರೋನಿ-ಕ್ಯಾಪಟಲಿಸಂ

ಭಾರತ ಕೂಡ ಅಪಾಯದಲ್ಲಿರುವ ಸಮಾಜ. ಅದರ ಬಿಲಿಯನೇರ್ ವರ್ಗದ ಒಟ್ಟು ಸಂಪತ್ತು ಜಿಡಿಪಿಯ ಸುಮಾರು 20% ಗೆ ಸಮನಾಗಿರುತ್ತದೆ, ಇದು ರಷ್ಯಾದ ನಂತರ ಉದಯೋನ್ಮುಖ ರಾಷ್ಟ್ರಗಳಲ್ಲಿ ಎರಡನೆಯದು. ಬಿಲಿಯನೇರ್ ಸಂಪತ್ತಿನ 55% ಕ್ಕಿಂತ ಹೆಚ್ಚು ಉದ್ಯಮ ಕುಟುಂಬಗಳಲ್ಲಿ ಕೇಂದ್ರಕೃತವಾಗಿದೆ. ಒಳ್ಳೆಯ ಸುದ್ದಿ ಏನೆಂದರೆ, ಕಳೆದ ವರ್ಷ ಬಿಲಿಯನೇರ್ ಸಂಪತ್ತು ಒಂದು ಪಾಲಾಗಿ ಕುಸಿಯಿತು, ಏಕೆಂದರೆ ಹೊಸ ಸಂಪತ್ತು ತಂತ್ರಜ್ಞಾನ, ಉತ್ಪಾದನೆ ಮತ್ತು ವಿಶೇಷವಾಗಿ ವೈವಿಧ್ಯಮಯ ಉದ್ಯಮಗಳಲ್ಲಿ ಬಂದಿತು.

ಇದನ್ನೂ ಓದಿ: ತಲಾ ಆದಾಯದಲ್ಲಿ ಬಾಂಗ್ಲಾ ಭಾರತಕ್ಕಿಂತ ಮುಂದೆ, ಅದಾನಿ ಏಷ್ಯಾದ 2ನೆ ಶ್ರೀಮಂತ: ಇದು ಮೋದಿ ಮಾಡೆಲ್!

ಸಾಂಕ್ರಾಮಿಕವು ಈಗಾಗಲೇ ಚಲನೆಯಲ್ಲಿರುವ ಅನೇಕ ಆರ್ಥಿಕ ಮತ್ತು ಸಾಮಾಜಿಕ ಪ್ರವೃತ್ತಿಗಳನ್ನು ವೇಗಗೊಳಿಸಿತು, ಇದರಲ್ಲಿ ಬಿಲಿಯನೇರ್ ಉತ್ಕರ್ಷ ಸೇರಿದೆ. ಬಿಲಿಯನೇರ್‌ಗಳ ಏರಿಕೆಯ ಹಿಂದೆ ಕೇಂದ್ರ ಬ್ಯಾಂಕುಗಳಿಂದ ಸುಲಭವಾಗಿ ಹಣ ಸುರಿಯುವ ಪ್ರವೃತ್ತಿಯಲ್ಲಿದೆ.
ಸಂಪತ್ತಿನ ಸೃಷ್ಟಿಯ ಬಗ್ಗೆ ಸಾರ್ವಜನಿಕರ ಮನೋಭಾವದ ದೃಷ್ಟಿಯಿಂದ ಮುಂದೆ ಏನಾಗುತ್ತದೆ ಎಂಬುದು ಇಲ್ಲಿಂದ ಉತ್ಕರ್ಷ ಹೇಗೆ ವಿಕಸನಗೊಳ್ಳುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಇಲ್ಲಿಯವರೆಗೆ, ಟೆಕ್ ಮತ್ತು ಉತ್ಪಾದನೆಯಂತಹ ಉತ್ಪಾದಕ ಕೈಗಾರಿಕೆಗಳಲ್ಲಿ ಸ್ವಯಂ ನಿರ್ಮಿತ ಉದ್ಯಮಿಗಳಿಗೆ ಅತಿದೊಡ್ಡ ಲಾಭಗಳು ಬಂದಿವೆ.

ಸಾಂಕ್ರಾಮಿಕವು ಅತಿ ಶ್ರೀಮಂತರ ಪಾಲಿಗೆ ವರವಾಗಿದೆ. ಕೋವಿಡ್ ಮೊದಲ ಮತ್ತು ಎರಡನೆ ಅಲೆ ಸಂದರ್ಭದಲ್ಲಿ ಮುಖೇಶ್ ಅಂಬಾನಿ, ಅದಾನಿ ಮತ್ತು ಇಂತಹವರ ಸಂಪತ್ತು ಏರಿದ್ದನ್ನು ಗಮನಿಸಬೇಕು.

-ರುಚಿರ್ ಶರ್ಮಾ

(ಕೃಪೆ: ಟೈಮ್ಸ್ ಆಫ್ ಇಂಡಿಯಾ, ಎಕನಾಮಿಕ್ ಟೈಮ್ಸ್)


ಇದನ್ನೂ ಓದಿ: ರಾಷ್ಟ್ರೀಯ ದುರಂತಕ್ಕೆ ನಾಂದಿ ಹಾಡಿದ ಗುಜರಾತ್ ಮಾದರಿಯ ಅನುಷ್ಠಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....