Homeಮುಖಪುಟಬಿಲಿಯನೇರ್ ಬೂಮ್: ಶ್ರೀಮಂತರ ಜೇಬುಗಳನ್ನು ಸೇರಿದ ಕೋವಿಡ್ ಕ್ಯಾಷ್!

ಬಿಲಿಯನೇರ್ ಬೂಮ್: ಶ್ರೀಮಂತರ ಜೇಬುಗಳನ್ನು ಸೇರಿದ ಕೋವಿಡ್ ಕ್ಯಾಷ್!

ಕಳೆದ ವರ್ಷ ವೈರಸ್ ಹರಡುತ್ತಿದ್ದಂತೆ, ಕೇಂದ್ರ ಬ್ಯಾಂಕುಗಳು ವಿಶ್ವಾದ್ಯಂತ ಆರ್ಥಿಕತೆಗಳಿಗೆ 9 ಟ್ರಿಲಿಯನ್ ಡಾಲರ್ ಹಣವನ್ನು ಸುರಿದವು. ಇದರ ಬಹುಪಾಲು ಅತಿ ಶ್ರೀಮಂತರ ಜೇಬುಗಳನ್ನು ಸೇರಿತು!

- Advertisement -
- Advertisement -

ಇತ್ತೀಚಿನ ದಶಕಗಳಲ್ಲಿ, ಬಿಲಿಯನೇರ್‌ಗಳ (ಶತಕೋಟ್ಯಾಧಿಪತಿಗಳ) ಜಾಗತಿಕ ಜನಸಂಖ್ಯೆಯು ಐದು ಪಟ್ಟು ಹೆಚ್ಚಾಗಿದೆ ಮತ್ತು ಅವರ ಒಟ್ಟು ಮೊತ್ತವು 100 ಶತಕೋಟಿ ಡಾಲರ್‌ನಷ್ಟಾಗಿದೆ. ಹೆಚ್ಚುತ್ತಿರುವ ಅಸಮಾನತೆಯು ಬಂಡವಾಳಶಾಹಿಯ ವಿರುದ್ಧ ಜನರಲ್ಲಿ ಆಕ್ರೋಶ ಮೂಡಿಸುತ್ತಿದೆ.

ಸಾಂಕ್ರಾಮಿಕವು ಬಂಡವಾಳಶಾಹಿಗಳ ಸಂಪತನ್ನು ಬಲಪಡಿಸಿದೆ. ವೈರಸ್ ಹರಡುತ್ತಿದ್ದಂತೆ, ಕೇಂದ್ರ ಬ್ಯಾಂಕುಗಳು ವಿಶ್ವಾದ್ಯಂತ ಆರ್ಥಿಕತೆಗಳಿಗೆ 9 ಟ್ರಿಲಿಯನ್ ಡಾಲರ್ ಹಣವನ್ನು ಸುರಿದವು. ಇದರ ಬಹುಪಾಲು ಹಣಕಾಸು ಮಾರುಕಟ್ಟೆಗಳಿಗೆ ಮತ್ತು ಅಲ್ಲಿಂದ ಅತಿ ಶ್ರೀಮಂತರ ನಿವ್ವಳ ಮೌಲ್ಯಕ್ಕೆ ಸೇರಿ ಹೋಯಿತು. ವಿಶ್ವಾದ್ಯಂತದ ಒಟ್ಟು ಶತಕೋಟ್ಯಾಧಿಪತಿಗಳ ಸಂಪತ್ತು 12 ತಿಂಗಳಲ್ಲಿ 5 ಟ್ರಿಲಿಯನ್ ಡಾಲರ್‌ಗೆ ಏರಿಕೆಯಾಗಿ 13 ಟ್ರಿಲಿಯನ್ ಡಾಲರ್ ತಲುಪಿದೆ, ಇದು ಫೋರ್ಬ್ಸ್ ನಿಯತಕಾಲಿಕವು ಸಂಗ್ರಹಿಸಿದ ವಾರ್ಷಿಕ ಪಟ್ಟಿಯಲ್ಲಿ ದಾಖಲಾದ ಅತ್ಯಂತ ನಾಟಕೀಯ ಉಲ್ಬಣವಾಗಿದೆ.

ಬಿಲಿಯನೇರ್‌ಗಳ ಜನಸಂಖ್ಯೆಯೂ ಹೆಚ್ಚಾಯಿತು. ಏಪ್ರಿಲ್ 6 ರವರೆಗೆ ನಡೆಯುವ 2021 ಫೋರ್ಬ್ಸ್ ಪಟ್ಟಿಯಲ್ಲಿ, ಅವರ ಸಂಖ್ಯೆ ಸುಮಾರು 700 ರಷ್ಟು ಏರಿಕೆಯಾಗಿ 2,700ಕ್ಕಿಂತ ಹೆಚ್ಚಾಗಿದೆ. ಚೀನಾದಲ್ಲಿ ಅತಿದೊಡ್ಡ ಉಲ್ಬಣವು ಸಂಭವಿಸಿದೆ, ಅದು ಒಟ್ಟು 626 ಬಿಲಿಯನೇರ್‌ಗಳಲ್ಲಿ ಈ 12 ತಿಂಗಳಲ್ಲಿ ಹೊಸ 238 ಬಿಲಿಯನೇರ್‌ಗಳು ಸೃಷ್ಟಿಯಾಗಿದ್ದಾರೆ. ಮುಂದಿನದು ಯುಎಸ್, ಒಟ್ಟು 724ರಲ್ಲಿ ಹೊಸದಾಗಿ 110 ಜನ ಈ ಪಟ್ಟಿ ಸೇರಿದ್ದಾರೆ. ಭಾರತದಲ್ಲಿ ಹೊಸದಾಗಿ 38 ಬಿಲಿಯನೇರ್‌ಗಳು ಕಂಡುಬಂದಿದ್ದು, ಒಟ್ಟು 140 ಬಿಲಿಯನೇರ್‌ಗಳಿದ್ದಾರೆ.

ಹೊಸ ಸಂಪತ್ತಿನ ಗಣ್ಯರ ವಿರುದ್ಧ ಕೋಪ ಬೆಳೆಯುತ್ತಿರುವಾಗ 2010ರಲ್ಲಿ ಭಾರತದಲ್ಲಿ ಶತಕೋಟ್ಯಾಧಿಪತಿಗಳ ಸಂಖ್ಯೆನ್ನು ಗುರುತಿಸಲು ಆರಂಭಿಸಿದೆ. ಭಾರತವು ಬಿಲಿಯನೇರ್‌ಗಳ ಸಂಖ್ಯೆಯಲ್ಲಿ ಸಾಪೇಕ್ಷವಾಗಿ ಕಡಿಮೆ ಇದ್ದರೂ, ಬಿಲಿಯನೇರ್ ಸಂಪತ್ತು ಒಟ್ಟು ದೇಶೀಯ ಉತ್ಪನ್ನದ 17%ಕ್ಕಿಂತ ಹೆಚ್ಚಿದೆ! ಉದ್ಯಮಿ ಕುಟುಂಬಗಳು ಈ ಅಗಾಧ ಸಂಪತ್ತನ್ನು ಪಡೆಯುತ್ತಿದ್ದು, ಕ್ರೋನಿ ಕ್ಯಾಪಿಟಲಿಸಂ ಸಂಭವಿಸಲು ಕಾರಣವಾಗಿದೆ.

ಭಾರತಕ್ಕೆ ವ್ಯತಿರಿಕ್ತವಾಗಿ, ಅಮೆರಿಕದ ಬಿಲಿಯನೇರ್ ವರ್ಗವು 2010 ರ ದಶಕದ ಆರಂಭದಲ್ಲಿ ಆಶ್ಚರ್ಯಕರವಾಗಿ ಸಮತೋಲಿತವಾಗಿದೆ. ಆ ಸಮಯದಲ್ಲಿ ಬಿಲಿಯನೇರ್ ಸಂಪತ್ತು ಒಟ್ಟು ಜಿಡಿಪಿಯ ಸುಮಾರು 10% ರಷ್ಟಿತ್ತು, 2015 ರ ಹೊತ್ತಿಗೆ, ಬಿಲಿಯನೇರ್ ಸಂಪತ್ತು ಹಲವು ಪಟ್ಟುಗಳಲ್ಲಿ ಏರುತ್ತ ಹೋಗಿದೆ.

ಭಾರತದಲ್ಲಿ ಕ್ರೋನಿ-ಕ್ಯಾಪಟಲಿಸಂ

ಭಾರತ ಕೂಡ ಅಪಾಯದಲ್ಲಿರುವ ಸಮಾಜ. ಅದರ ಬಿಲಿಯನೇರ್ ವರ್ಗದ ಒಟ್ಟು ಸಂಪತ್ತು ಜಿಡಿಪಿಯ ಸುಮಾರು 20% ಗೆ ಸಮನಾಗಿರುತ್ತದೆ, ಇದು ರಷ್ಯಾದ ನಂತರ ಉದಯೋನ್ಮುಖ ರಾಷ್ಟ್ರಗಳಲ್ಲಿ ಎರಡನೆಯದು. ಬಿಲಿಯನೇರ್ ಸಂಪತ್ತಿನ 55% ಕ್ಕಿಂತ ಹೆಚ್ಚು ಉದ್ಯಮ ಕುಟುಂಬಗಳಲ್ಲಿ ಕೇಂದ್ರಕೃತವಾಗಿದೆ. ಒಳ್ಳೆಯ ಸುದ್ದಿ ಏನೆಂದರೆ, ಕಳೆದ ವರ್ಷ ಬಿಲಿಯನೇರ್ ಸಂಪತ್ತು ಒಂದು ಪಾಲಾಗಿ ಕುಸಿಯಿತು, ಏಕೆಂದರೆ ಹೊಸ ಸಂಪತ್ತು ತಂತ್ರಜ್ಞಾನ, ಉತ್ಪಾದನೆ ಮತ್ತು ವಿಶೇಷವಾಗಿ ವೈವಿಧ್ಯಮಯ ಉದ್ಯಮಗಳಲ್ಲಿ ಬಂದಿತು.

ಇದನ್ನೂ ಓದಿ: ತಲಾ ಆದಾಯದಲ್ಲಿ ಬಾಂಗ್ಲಾ ಭಾರತಕ್ಕಿಂತ ಮುಂದೆ, ಅದಾನಿ ಏಷ್ಯಾದ 2ನೆ ಶ್ರೀಮಂತ: ಇದು ಮೋದಿ ಮಾಡೆಲ್!

ಸಾಂಕ್ರಾಮಿಕವು ಈಗಾಗಲೇ ಚಲನೆಯಲ್ಲಿರುವ ಅನೇಕ ಆರ್ಥಿಕ ಮತ್ತು ಸಾಮಾಜಿಕ ಪ್ರವೃತ್ತಿಗಳನ್ನು ವೇಗಗೊಳಿಸಿತು, ಇದರಲ್ಲಿ ಬಿಲಿಯನೇರ್ ಉತ್ಕರ್ಷ ಸೇರಿದೆ. ಬಿಲಿಯನೇರ್‌ಗಳ ಏರಿಕೆಯ ಹಿಂದೆ ಕೇಂದ್ರ ಬ್ಯಾಂಕುಗಳಿಂದ ಸುಲಭವಾಗಿ ಹಣ ಸುರಿಯುವ ಪ್ರವೃತ್ತಿಯಲ್ಲಿದೆ.
ಸಂಪತ್ತಿನ ಸೃಷ್ಟಿಯ ಬಗ್ಗೆ ಸಾರ್ವಜನಿಕರ ಮನೋಭಾವದ ದೃಷ್ಟಿಯಿಂದ ಮುಂದೆ ಏನಾಗುತ್ತದೆ ಎಂಬುದು ಇಲ್ಲಿಂದ ಉತ್ಕರ್ಷ ಹೇಗೆ ವಿಕಸನಗೊಳ್ಳುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಇಲ್ಲಿಯವರೆಗೆ, ಟೆಕ್ ಮತ್ತು ಉತ್ಪಾದನೆಯಂತಹ ಉತ್ಪಾದಕ ಕೈಗಾರಿಕೆಗಳಲ್ಲಿ ಸ್ವಯಂ ನಿರ್ಮಿತ ಉದ್ಯಮಿಗಳಿಗೆ ಅತಿದೊಡ್ಡ ಲಾಭಗಳು ಬಂದಿವೆ.

ಸಾಂಕ್ರಾಮಿಕವು ಅತಿ ಶ್ರೀಮಂತರ ಪಾಲಿಗೆ ವರವಾಗಿದೆ. ಕೋವಿಡ್ ಮೊದಲ ಮತ್ತು ಎರಡನೆ ಅಲೆ ಸಂದರ್ಭದಲ್ಲಿ ಮುಖೇಶ್ ಅಂಬಾನಿ, ಅದಾನಿ ಮತ್ತು ಇಂತಹವರ ಸಂಪತ್ತು ಏರಿದ್ದನ್ನು ಗಮನಿಸಬೇಕು.

-ರುಚಿರ್ ಶರ್ಮಾ

(ಕೃಪೆ: ಟೈಮ್ಸ್ ಆಫ್ ಇಂಡಿಯಾ, ಎಕನಾಮಿಕ್ ಟೈಮ್ಸ್)


ಇದನ್ನೂ ಓದಿ: ರಾಷ್ಟ್ರೀಯ ದುರಂತಕ್ಕೆ ನಾಂದಿ ಹಾಡಿದ ಗುಜರಾತ್ ಮಾದರಿಯ ಅನುಷ್ಠಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...