Homeಮುಖಪುಟಬಿಲಿಯನೇರ್ ಬೂಮ್: ಶ್ರೀಮಂತರ ಜೇಬುಗಳನ್ನು ಸೇರಿದ ಕೋವಿಡ್ ಕ್ಯಾಷ್!

ಬಿಲಿಯನೇರ್ ಬೂಮ್: ಶ್ರೀಮಂತರ ಜೇಬುಗಳನ್ನು ಸೇರಿದ ಕೋವಿಡ್ ಕ್ಯಾಷ್!

ಕಳೆದ ವರ್ಷ ವೈರಸ್ ಹರಡುತ್ತಿದ್ದಂತೆ, ಕೇಂದ್ರ ಬ್ಯಾಂಕುಗಳು ವಿಶ್ವಾದ್ಯಂತ ಆರ್ಥಿಕತೆಗಳಿಗೆ 9 ಟ್ರಿಲಿಯನ್ ಡಾಲರ್ ಹಣವನ್ನು ಸುರಿದವು. ಇದರ ಬಹುಪಾಲು ಅತಿ ಶ್ರೀಮಂತರ ಜೇಬುಗಳನ್ನು ಸೇರಿತು!

- Advertisement -
- Advertisement -

ಇತ್ತೀಚಿನ ದಶಕಗಳಲ್ಲಿ, ಬಿಲಿಯನೇರ್‌ಗಳ (ಶತಕೋಟ್ಯಾಧಿಪತಿಗಳ) ಜಾಗತಿಕ ಜನಸಂಖ್ಯೆಯು ಐದು ಪಟ್ಟು ಹೆಚ್ಚಾಗಿದೆ ಮತ್ತು ಅವರ ಒಟ್ಟು ಮೊತ್ತವು 100 ಶತಕೋಟಿ ಡಾಲರ್‌ನಷ್ಟಾಗಿದೆ. ಹೆಚ್ಚುತ್ತಿರುವ ಅಸಮಾನತೆಯು ಬಂಡವಾಳಶಾಹಿಯ ವಿರುದ್ಧ ಜನರಲ್ಲಿ ಆಕ್ರೋಶ ಮೂಡಿಸುತ್ತಿದೆ.

ಸಾಂಕ್ರಾಮಿಕವು ಬಂಡವಾಳಶಾಹಿಗಳ ಸಂಪತನ್ನು ಬಲಪಡಿಸಿದೆ. ವೈರಸ್ ಹರಡುತ್ತಿದ್ದಂತೆ, ಕೇಂದ್ರ ಬ್ಯಾಂಕುಗಳು ವಿಶ್ವಾದ್ಯಂತ ಆರ್ಥಿಕತೆಗಳಿಗೆ 9 ಟ್ರಿಲಿಯನ್ ಡಾಲರ್ ಹಣವನ್ನು ಸುರಿದವು. ಇದರ ಬಹುಪಾಲು ಹಣಕಾಸು ಮಾರುಕಟ್ಟೆಗಳಿಗೆ ಮತ್ತು ಅಲ್ಲಿಂದ ಅತಿ ಶ್ರೀಮಂತರ ನಿವ್ವಳ ಮೌಲ್ಯಕ್ಕೆ ಸೇರಿ ಹೋಯಿತು. ವಿಶ್ವಾದ್ಯಂತದ ಒಟ್ಟು ಶತಕೋಟ್ಯಾಧಿಪತಿಗಳ ಸಂಪತ್ತು 12 ತಿಂಗಳಲ್ಲಿ 5 ಟ್ರಿಲಿಯನ್ ಡಾಲರ್‌ಗೆ ಏರಿಕೆಯಾಗಿ 13 ಟ್ರಿಲಿಯನ್ ಡಾಲರ್ ತಲುಪಿದೆ, ಇದು ಫೋರ್ಬ್ಸ್ ನಿಯತಕಾಲಿಕವು ಸಂಗ್ರಹಿಸಿದ ವಾರ್ಷಿಕ ಪಟ್ಟಿಯಲ್ಲಿ ದಾಖಲಾದ ಅತ್ಯಂತ ನಾಟಕೀಯ ಉಲ್ಬಣವಾಗಿದೆ.

ಬಿಲಿಯನೇರ್‌ಗಳ ಜನಸಂಖ್ಯೆಯೂ ಹೆಚ್ಚಾಯಿತು. ಏಪ್ರಿಲ್ 6 ರವರೆಗೆ ನಡೆಯುವ 2021 ಫೋರ್ಬ್ಸ್ ಪಟ್ಟಿಯಲ್ಲಿ, ಅವರ ಸಂಖ್ಯೆ ಸುಮಾರು 700 ರಷ್ಟು ಏರಿಕೆಯಾಗಿ 2,700ಕ್ಕಿಂತ ಹೆಚ್ಚಾಗಿದೆ. ಚೀನಾದಲ್ಲಿ ಅತಿದೊಡ್ಡ ಉಲ್ಬಣವು ಸಂಭವಿಸಿದೆ, ಅದು ಒಟ್ಟು 626 ಬಿಲಿಯನೇರ್‌ಗಳಲ್ಲಿ ಈ 12 ತಿಂಗಳಲ್ಲಿ ಹೊಸ 238 ಬಿಲಿಯನೇರ್‌ಗಳು ಸೃಷ್ಟಿಯಾಗಿದ್ದಾರೆ. ಮುಂದಿನದು ಯುಎಸ್, ಒಟ್ಟು 724ರಲ್ಲಿ ಹೊಸದಾಗಿ 110 ಜನ ಈ ಪಟ್ಟಿ ಸೇರಿದ್ದಾರೆ. ಭಾರತದಲ್ಲಿ ಹೊಸದಾಗಿ 38 ಬಿಲಿಯನೇರ್‌ಗಳು ಕಂಡುಬಂದಿದ್ದು, ಒಟ್ಟು 140 ಬಿಲಿಯನೇರ್‌ಗಳಿದ್ದಾರೆ.

ಹೊಸ ಸಂಪತ್ತಿನ ಗಣ್ಯರ ವಿರುದ್ಧ ಕೋಪ ಬೆಳೆಯುತ್ತಿರುವಾಗ 2010ರಲ್ಲಿ ಭಾರತದಲ್ಲಿ ಶತಕೋಟ್ಯಾಧಿಪತಿಗಳ ಸಂಖ್ಯೆನ್ನು ಗುರುತಿಸಲು ಆರಂಭಿಸಿದೆ. ಭಾರತವು ಬಿಲಿಯನೇರ್‌ಗಳ ಸಂಖ್ಯೆಯಲ್ಲಿ ಸಾಪೇಕ್ಷವಾಗಿ ಕಡಿಮೆ ಇದ್ದರೂ, ಬಿಲಿಯನೇರ್ ಸಂಪತ್ತು ಒಟ್ಟು ದೇಶೀಯ ಉತ್ಪನ್ನದ 17%ಕ್ಕಿಂತ ಹೆಚ್ಚಿದೆ! ಉದ್ಯಮಿ ಕುಟುಂಬಗಳು ಈ ಅಗಾಧ ಸಂಪತ್ತನ್ನು ಪಡೆಯುತ್ತಿದ್ದು, ಕ್ರೋನಿ ಕ್ಯಾಪಿಟಲಿಸಂ ಸಂಭವಿಸಲು ಕಾರಣವಾಗಿದೆ.

ಭಾರತಕ್ಕೆ ವ್ಯತಿರಿಕ್ತವಾಗಿ, ಅಮೆರಿಕದ ಬಿಲಿಯನೇರ್ ವರ್ಗವು 2010 ರ ದಶಕದ ಆರಂಭದಲ್ಲಿ ಆಶ್ಚರ್ಯಕರವಾಗಿ ಸಮತೋಲಿತವಾಗಿದೆ. ಆ ಸಮಯದಲ್ಲಿ ಬಿಲಿಯನೇರ್ ಸಂಪತ್ತು ಒಟ್ಟು ಜಿಡಿಪಿಯ ಸುಮಾರು 10% ರಷ್ಟಿತ್ತು, 2015 ರ ಹೊತ್ತಿಗೆ, ಬಿಲಿಯನೇರ್ ಸಂಪತ್ತು ಹಲವು ಪಟ್ಟುಗಳಲ್ಲಿ ಏರುತ್ತ ಹೋಗಿದೆ.

ಭಾರತದಲ್ಲಿ ಕ್ರೋನಿ-ಕ್ಯಾಪಟಲಿಸಂ

ಭಾರತ ಕೂಡ ಅಪಾಯದಲ್ಲಿರುವ ಸಮಾಜ. ಅದರ ಬಿಲಿಯನೇರ್ ವರ್ಗದ ಒಟ್ಟು ಸಂಪತ್ತು ಜಿಡಿಪಿಯ ಸುಮಾರು 20% ಗೆ ಸಮನಾಗಿರುತ್ತದೆ, ಇದು ರಷ್ಯಾದ ನಂತರ ಉದಯೋನ್ಮುಖ ರಾಷ್ಟ್ರಗಳಲ್ಲಿ ಎರಡನೆಯದು. ಬಿಲಿಯನೇರ್ ಸಂಪತ್ತಿನ 55% ಕ್ಕಿಂತ ಹೆಚ್ಚು ಉದ್ಯಮ ಕುಟುಂಬಗಳಲ್ಲಿ ಕೇಂದ್ರಕೃತವಾಗಿದೆ. ಒಳ್ಳೆಯ ಸುದ್ದಿ ಏನೆಂದರೆ, ಕಳೆದ ವರ್ಷ ಬಿಲಿಯನೇರ್ ಸಂಪತ್ತು ಒಂದು ಪಾಲಾಗಿ ಕುಸಿಯಿತು, ಏಕೆಂದರೆ ಹೊಸ ಸಂಪತ್ತು ತಂತ್ರಜ್ಞಾನ, ಉತ್ಪಾದನೆ ಮತ್ತು ವಿಶೇಷವಾಗಿ ವೈವಿಧ್ಯಮಯ ಉದ್ಯಮಗಳಲ್ಲಿ ಬಂದಿತು.

ಇದನ್ನೂ ಓದಿ: ತಲಾ ಆದಾಯದಲ್ಲಿ ಬಾಂಗ್ಲಾ ಭಾರತಕ್ಕಿಂತ ಮುಂದೆ, ಅದಾನಿ ಏಷ್ಯಾದ 2ನೆ ಶ್ರೀಮಂತ: ಇದು ಮೋದಿ ಮಾಡೆಲ್!

ಸಾಂಕ್ರಾಮಿಕವು ಈಗಾಗಲೇ ಚಲನೆಯಲ್ಲಿರುವ ಅನೇಕ ಆರ್ಥಿಕ ಮತ್ತು ಸಾಮಾಜಿಕ ಪ್ರವೃತ್ತಿಗಳನ್ನು ವೇಗಗೊಳಿಸಿತು, ಇದರಲ್ಲಿ ಬಿಲಿಯನೇರ್ ಉತ್ಕರ್ಷ ಸೇರಿದೆ. ಬಿಲಿಯನೇರ್‌ಗಳ ಏರಿಕೆಯ ಹಿಂದೆ ಕೇಂದ್ರ ಬ್ಯಾಂಕುಗಳಿಂದ ಸುಲಭವಾಗಿ ಹಣ ಸುರಿಯುವ ಪ್ರವೃತ್ತಿಯಲ್ಲಿದೆ.
ಸಂಪತ್ತಿನ ಸೃಷ್ಟಿಯ ಬಗ್ಗೆ ಸಾರ್ವಜನಿಕರ ಮನೋಭಾವದ ದೃಷ್ಟಿಯಿಂದ ಮುಂದೆ ಏನಾಗುತ್ತದೆ ಎಂಬುದು ಇಲ್ಲಿಂದ ಉತ್ಕರ್ಷ ಹೇಗೆ ವಿಕಸನಗೊಳ್ಳುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಇಲ್ಲಿಯವರೆಗೆ, ಟೆಕ್ ಮತ್ತು ಉತ್ಪಾದನೆಯಂತಹ ಉತ್ಪಾದಕ ಕೈಗಾರಿಕೆಗಳಲ್ಲಿ ಸ್ವಯಂ ನಿರ್ಮಿತ ಉದ್ಯಮಿಗಳಿಗೆ ಅತಿದೊಡ್ಡ ಲಾಭಗಳು ಬಂದಿವೆ.

ಸಾಂಕ್ರಾಮಿಕವು ಅತಿ ಶ್ರೀಮಂತರ ಪಾಲಿಗೆ ವರವಾಗಿದೆ. ಕೋವಿಡ್ ಮೊದಲ ಮತ್ತು ಎರಡನೆ ಅಲೆ ಸಂದರ್ಭದಲ್ಲಿ ಮುಖೇಶ್ ಅಂಬಾನಿ, ಅದಾನಿ ಮತ್ತು ಇಂತಹವರ ಸಂಪತ್ತು ಏರಿದ್ದನ್ನು ಗಮನಿಸಬೇಕು.

-ರುಚಿರ್ ಶರ್ಮಾ

(ಕೃಪೆ: ಟೈಮ್ಸ್ ಆಫ್ ಇಂಡಿಯಾ, ಎಕನಾಮಿಕ್ ಟೈಮ್ಸ್)


ಇದನ್ನೂ ಓದಿ: ರಾಷ್ಟ್ರೀಯ ದುರಂತಕ್ಕೆ ನಾಂದಿ ಹಾಡಿದ ಗುಜರಾತ್ ಮಾದರಿಯ ಅನುಷ್ಠಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...