Homeಮುಖಪುಟಜುಲೈ 1ರಿಂದ ಹೊಸ ಕ್ರಿಮಿನಲ್ ಕಾನೂನುಗಳು ಜಾರಿ?

ಜುಲೈ 1ರಿಂದ ಹೊಸ ಕ್ರಿಮಿನಲ್ ಕಾನೂನುಗಳು ಜಾರಿ?

- Advertisement -
- Advertisement -

ಇತ್ತೀಚೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆ ಜುಲೈ 1ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ಪ್ರಕಟಣೆಯನ್ನು ಹೊರಡಿಸಿದೆ.

ನೂತನ ಕಾನೂನು ವಸಾಹತುಶಾಹಿ ಯುಗದ ಭಾರತೀಯ ದಂಡ ಸಂಹಿತೆ (IPC), ಕ್ರಿಮಿನಲ್ ಪ್ರೊಸೀಜರ್ ಕೋಡ್ ಮತ್ತು 1872ರ ಭಾರತೀಯ ಸಾಕ್ಷ್ಯ ಕಾಯಿದೆಯನ್ನು ಬದಲಿಸುತ್ತದೆ. ನೂತನ ಕಾಯ್ದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದು, ಈ ಕಾಯ್ದೆಯು ಜುಲೈ 1ರಿಂದ ಕಾನೂನಾಗಿ ಜಾರಿಗೆ ಬರಲಿದೆ.

ಹೊಸ ಕಾನೂನುಗಳ ಪ್ರಕಾರ, ಶೂನ್ಯ-ಎಫ್‌ಐಆರ್, ಇ-ಎಫ್‌ಐಆರ್, ಚಾರ್ಜ್‌ಶೀಟ್‌ನಂತಹ ಪ್ರಕ್ರಿಯೆಗಳು ಎಲೆಕ್ಟ್ರಾನಿಕ್ ರೂಪದಲ್ಲಿರುತ್ತದೆ ಮತ್ತು ಸಂತ್ರಸ್ತರಿಗೆ ಡಿಜಿಟಲ್ ರೂಪದಲ್ಲಿ ಮಾಹಿತಿಯನ್ನು ಒದಗಿಸಲಾಗುತ್ತದೆ.
ಸಂಸತ್ತಿನಲ್ಲಿ ಮೂರು ವಿಧೇಯಕಗಳ ಮೇಲಿನ ಚರ್ಚೆಯ ಸಂದರ್ಭದಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶಿಕ್ಷೆಯನ್ನು ನೀಡುವ ಬದಲು ನ್ಯಾಯವನ್ನು ತಲುಪಿಸುವತ್ತ ಗಮನಹರಿಸುವುದಾಗಿ ಹೇಳಿದ್ದರು.

ಹೊಸ ಕಾನೂನುಗಳು ಜಾರಿಗೆ ಬರುವ ಮೊದಲು, ಭಾರತೀಯ ದಂಡ ಸಂಹಿತೆಯಿಂದ ಭಾರತೀಯ ನ್ಯಾಯ ಸಂಹಿತೆಗೆ ಕೆಲ ಬದಲಾವಣೆಗಳನ್ನು ಮಾಡಲಾಗಿದೆ. ಹೊಸ ಕಾನೂನಿನಲ್ಲಿ ಐಪಿಸಿ ಅಡಿಯಲ್ಲಿ ಕೆಲವು ಸೆಕ್ಷನ್‌ಗಳ ಸಂಖ್ಯೆಗಳನ್ನು ಬದಲಾಯಿಸಲಾಗಿದೆ.

IPC ಅಡಿಯಲ್ಲಿ ಸೆಕ್ಷನ್ 302 ಕೊಲೆಯ ಶಿಕ್ಷೆಗೆ ಸಂಬಂಧಿಸಿದೆ. ಈಗ ಕೊಲೆಯು ಸೆಕ್ಷನ್ 101ರ ಅಡಿಯಲ್ಲಿ ಬರುತ್ತದೆ. ಇದಲ್ಲದೆ ಹೊಸ ಕಾನೂನಿನ ಅಡಿಯಲ್ಲಿ ಸೆಕ್ಷನ್ 302 ದರೋಡೆಗೆ ಸಂಬಂಧಿಸಿದೆ.
ಐಪಿಸಿಯ ಸೆಕ್ಷನ್ 420 ವಂಚನೆಯ ಅಪರಾಧವಾಗಿದೆ, ಆದರೆ ಹೊಸ ಕಾನೂನಿನಲ್ಲಿ ವಂಚನೆಯು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 316ರ ಅಡಿಯಲ್ಲಿ ಬರುತ್ತದೆ.

ಅಕ್ರಮ ಸಭೆಗೆ ಸಂಬಂಧಿಸಿದ ಐಪಿಸಿಯ ಸೆಕ್ಷನ್ 144ನ್ನು ಈಗ ಸೆಕ್ಷನ್ 187 ಎಂದು ಕರೆಯಲಾಗುವುದು.
ಅಂತೆಯೇ IPCಯ ಸೆಕ್ಷನ್ 121, ಯುದ್ಧ, ಅಥವಾ ಯುದ್ಧಕ್ಕೆ ಸಂಚು ಅಥವಾ ಭಾರತ ಸರ್ಕಾರದ ವಿರುದ್ಧ ಯುದ್ಧವನ್ನು ನಡೆಸಲು ಪ್ರೇರೇಪಿಸುವುದನ್ನು ಈಗ ಅದನ್ನು ಸೆಕ್ಷನ್ 146ರಡಿಯಲ್ಲಿ ಸೇರಿಸಲಾಗಿದೆ. ಮಾನನಷ್ಟಕ್ಕೆ ಸಂಬಂಧಿಸಿದ ಐಪಿಸಿಯ ಸೆಕ್ಷನ್ 499 ಈಗ ಹೊಸ ಕಾನೂನಿನ ಸೆಕ್ಷನ್ 354ರಡಿಯಲ್ಲಿ ಒಳಗೊಂಡಿದೆ.

IPC ಅಡಿಯಲ್ಲಿ ಅತ್ಯಾಚಾರದ ಶಿಕ್ಷೆಗೆ ಸಂಬಂಧಿಸಿದ ಸೆಕ್ಷನ್ 376, ಈಗ ಸೆಕ್ಷನ್ 63 ಆಗಿದೆ. ಹೊಸ ಕಾನೂನಿನ ಅಡಿಯಲ್ಲಿ ಸೆಕ್ಷನ್ 64 ಈ ಕುರಿತ ಶಿಕ್ಷೆಯ ಬಗ್ಗೆ ಹೇಳುತ್ತದೆ, ಆದರೆ ಸೆಕ್ಷನ್ 70 ಸಾಮೂಹಿಕ ಅತ್ಯಾಚಾರದ ಅಪರಾಧಕ್ಕೆ ಸಂಬಂಧಿಸಿದೆ. ಆರೋಪಿಗಳು ದಂಡ ಸಂಹಿತೆಯ ಉದಾರ ನಿಬಂಧನೆಗಳ ಲಾಭವನ್ನು ಪಡೆದುಕೊಳ್ಳುವುದನ್ನು ತಡೆಯಲು 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಗಳ ಕುರಿತು ನಿಬಂಧನೆಗಳನ್ನು ಪೋಕ್ಸೊ ಕಾಯ್ದೆಯೊಂದಿಗೆ ಸೇರಿಸಲಾಗಿದೆ. ಅಪ್ರಾಪ್ತ ವಯಸ್ಕರ ಮೇಲಿನ ಅತ್ಯಾಚಾರಕ್ಕೆ ಜೀವಾವಧಿ ಶಿಕ್ಷೆ ಅಥವಾ ಮರಣ ದಂಡನೆಯನ್ನು ಕಡ್ಡಾಯಗೊಳಿಸಲಾಗಿದೆ. ಸಾಮೂಹಿಕ ಅತ್ಯಾಚಾರ ಪ್ರಕರಣಗಳಲ್ಲಿ 20 ವರ್ಷಗಳ ಜೈಲು ಶಿಕ್ಷೆ ಅಥವಾ ಜೀವಾವಧಿ ಶಿಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ದೇಶದ್ರೋಹದ ಬಗ್ಗೆ ವ್ಯವಹರಿಸುವ ಐಪಿಸಿಯ ಸೆಕ್ಷನ್ 124-ಎಯನ್ನು ಈಗ ಹೊಸ ಕಾನೂನಿನ ಅಡಿಯಲ್ಲಿ ಸೆಕ್ಷನ್ 150 ಎಂದು ಕರೆಯಲಾಗುತ್ತದೆ.

ಭಾರತದ ಹೊರಗೆ ತಲೆಮರೆಸಿಕೊಂಡಿರುವ ಆರೋಪಿ ಇಲ್ಲಿರಬೇಕಿಲ್ಲ. ವ್ಯಕ್ತಿಯು 90 ದಿನಗಳಲ್ಲಿ ನ್ಯಾಯಾಲಯದ ಎದುರು ಹಾಜರಾಗದಿದ್ದರೆ ಆತನ ಅನುಪಸ್ಥಿತಿಯ ಹೊರತಾಗಿಯೂ ವಿಚಾರಣೆಯು ಮುಂದುವರಿಯುತ್ತದೆ. ಕಾನೂನು ಕ್ರಮವನ್ನು ಜರುಗಿಸಲು ಪಬ್ಲಿಕ್ ಪ್ರಾಸಿಕ್ಯೂಟರನ್ನು ನೇಮಿಸಲಾಗುತ್ತಿದೆ.

ಮೂರು ಕಾನೂನುಗಳು ಕಳೆದ ವರ್ಷ ಡಿಸೆಂಬರ್ 21ರಂದು ಸಂಸತ್ತಿನ ಅನುಮೋದನೆಯನ್ನು ಪಡೆದಿದೆ.  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 25ರಂದು ನೂತನ ಕಾನೂನಿಗೆ ಒಪ್ಪಿಗೆಯನ್ನು ನೀಡಿದ್ದರು.  ಜುಲೈ 1ರಿಂದ ಇದು ಜಾರಿಗೆ ಬರಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ಇದೀಗ ಪ್ರಕಟನೆಯನ್ನು ಹೊರಡಿಸಿದೆ.

ಇದನ್ನು ಓದಿ: ಗಾಝಾದಲ್ಲಿ ಮಾನವೀಯ ನೆರವು ಕಾರ್ಯಚರಣೆ: ಸಂಕಷ್ಟದಲ್ಲಿರುವ UN ಏಜೆನ್ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...