Homeಮುಖಪುಟಜುಲೈ 1ರಿಂದ ಹೊಸ ಕ್ರಿಮಿನಲ್ ಕಾನೂನುಗಳು ಜಾರಿ?

ಜುಲೈ 1ರಿಂದ ಹೊಸ ಕ್ರಿಮಿನಲ್ ಕಾನೂನುಗಳು ಜಾರಿ?

- Advertisement -
- Advertisement -

ಇತ್ತೀಚೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆ ಜುಲೈ 1ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ಪ್ರಕಟಣೆಯನ್ನು ಹೊರಡಿಸಿದೆ.

ನೂತನ ಕಾನೂನು ವಸಾಹತುಶಾಹಿ ಯುಗದ ಭಾರತೀಯ ದಂಡ ಸಂಹಿತೆ (IPC), ಕ್ರಿಮಿನಲ್ ಪ್ರೊಸೀಜರ್ ಕೋಡ್ ಮತ್ತು 1872ರ ಭಾರತೀಯ ಸಾಕ್ಷ್ಯ ಕಾಯಿದೆಯನ್ನು ಬದಲಿಸುತ್ತದೆ. ನೂತನ ಕಾಯ್ದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದು, ಈ ಕಾಯ್ದೆಯು ಜುಲೈ 1ರಿಂದ ಕಾನೂನಾಗಿ ಜಾರಿಗೆ ಬರಲಿದೆ.

ಹೊಸ ಕಾನೂನುಗಳ ಪ್ರಕಾರ, ಶೂನ್ಯ-ಎಫ್‌ಐಆರ್, ಇ-ಎಫ್‌ಐಆರ್, ಚಾರ್ಜ್‌ಶೀಟ್‌ನಂತಹ ಪ್ರಕ್ರಿಯೆಗಳು ಎಲೆಕ್ಟ್ರಾನಿಕ್ ರೂಪದಲ್ಲಿರುತ್ತದೆ ಮತ್ತು ಸಂತ್ರಸ್ತರಿಗೆ ಡಿಜಿಟಲ್ ರೂಪದಲ್ಲಿ ಮಾಹಿತಿಯನ್ನು ಒದಗಿಸಲಾಗುತ್ತದೆ.
ಸಂಸತ್ತಿನಲ್ಲಿ ಮೂರು ವಿಧೇಯಕಗಳ ಮೇಲಿನ ಚರ್ಚೆಯ ಸಂದರ್ಭದಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶಿಕ್ಷೆಯನ್ನು ನೀಡುವ ಬದಲು ನ್ಯಾಯವನ್ನು ತಲುಪಿಸುವತ್ತ ಗಮನಹರಿಸುವುದಾಗಿ ಹೇಳಿದ್ದರು.

ಹೊಸ ಕಾನೂನುಗಳು ಜಾರಿಗೆ ಬರುವ ಮೊದಲು, ಭಾರತೀಯ ದಂಡ ಸಂಹಿತೆಯಿಂದ ಭಾರತೀಯ ನ್ಯಾಯ ಸಂಹಿತೆಗೆ ಕೆಲ ಬದಲಾವಣೆಗಳನ್ನು ಮಾಡಲಾಗಿದೆ. ಹೊಸ ಕಾನೂನಿನಲ್ಲಿ ಐಪಿಸಿ ಅಡಿಯಲ್ಲಿ ಕೆಲವು ಸೆಕ್ಷನ್‌ಗಳ ಸಂಖ್ಯೆಗಳನ್ನು ಬದಲಾಯಿಸಲಾಗಿದೆ.

IPC ಅಡಿಯಲ್ಲಿ ಸೆಕ್ಷನ್ 302 ಕೊಲೆಯ ಶಿಕ್ಷೆಗೆ ಸಂಬಂಧಿಸಿದೆ. ಈಗ ಕೊಲೆಯು ಸೆಕ್ಷನ್ 101ರ ಅಡಿಯಲ್ಲಿ ಬರುತ್ತದೆ. ಇದಲ್ಲದೆ ಹೊಸ ಕಾನೂನಿನ ಅಡಿಯಲ್ಲಿ ಸೆಕ್ಷನ್ 302 ದರೋಡೆಗೆ ಸಂಬಂಧಿಸಿದೆ.
ಐಪಿಸಿಯ ಸೆಕ್ಷನ್ 420 ವಂಚನೆಯ ಅಪರಾಧವಾಗಿದೆ, ಆದರೆ ಹೊಸ ಕಾನೂನಿನಲ್ಲಿ ವಂಚನೆಯು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 316ರ ಅಡಿಯಲ್ಲಿ ಬರುತ್ತದೆ.

ಅಕ್ರಮ ಸಭೆಗೆ ಸಂಬಂಧಿಸಿದ ಐಪಿಸಿಯ ಸೆಕ್ಷನ್ 144ನ್ನು ಈಗ ಸೆಕ್ಷನ್ 187 ಎಂದು ಕರೆಯಲಾಗುವುದು.
ಅಂತೆಯೇ IPCಯ ಸೆಕ್ಷನ್ 121, ಯುದ್ಧ, ಅಥವಾ ಯುದ್ಧಕ್ಕೆ ಸಂಚು ಅಥವಾ ಭಾರತ ಸರ್ಕಾರದ ವಿರುದ್ಧ ಯುದ್ಧವನ್ನು ನಡೆಸಲು ಪ್ರೇರೇಪಿಸುವುದನ್ನು ಈಗ ಅದನ್ನು ಸೆಕ್ಷನ್ 146ರಡಿಯಲ್ಲಿ ಸೇರಿಸಲಾಗಿದೆ. ಮಾನನಷ್ಟಕ್ಕೆ ಸಂಬಂಧಿಸಿದ ಐಪಿಸಿಯ ಸೆಕ್ಷನ್ 499 ಈಗ ಹೊಸ ಕಾನೂನಿನ ಸೆಕ್ಷನ್ 354ರಡಿಯಲ್ಲಿ ಒಳಗೊಂಡಿದೆ.

IPC ಅಡಿಯಲ್ಲಿ ಅತ್ಯಾಚಾರದ ಶಿಕ್ಷೆಗೆ ಸಂಬಂಧಿಸಿದ ಸೆಕ್ಷನ್ 376, ಈಗ ಸೆಕ್ಷನ್ 63 ಆಗಿದೆ. ಹೊಸ ಕಾನೂನಿನ ಅಡಿಯಲ್ಲಿ ಸೆಕ್ಷನ್ 64 ಈ ಕುರಿತ ಶಿಕ್ಷೆಯ ಬಗ್ಗೆ ಹೇಳುತ್ತದೆ, ಆದರೆ ಸೆಕ್ಷನ್ 70 ಸಾಮೂಹಿಕ ಅತ್ಯಾಚಾರದ ಅಪರಾಧಕ್ಕೆ ಸಂಬಂಧಿಸಿದೆ. ಆರೋಪಿಗಳು ದಂಡ ಸಂಹಿತೆಯ ಉದಾರ ನಿಬಂಧನೆಗಳ ಲಾಭವನ್ನು ಪಡೆದುಕೊಳ್ಳುವುದನ್ನು ತಡೆಯಲು 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಗಳ ಕುರಿತು ನಿಬಂಧನೆಗಳನ್ನು ಪೋಕ್ಸೊ ಕಾಯ್ದೆಯೊಂದಿಗೆ ಸೇರಿಸಲಾಗಿದೆ. ಅಪ್ರಾಪ್ತ ವಯಸ್ಕರ ಮೇಲಿನ ಅತ್ಯಾಚಾರಕ್ಕೆ ಜೀವಾವಧಿ ಶಿಕ್ಷೆ ಅಥವಾ ಮರಣ ದಂಡನೆಯನ್ನು ಕಡ್ಡಾಯಗೊಳಿಸಲಾಗಿದೆ. ಸಾಮೂಹಿಕ ಅತ್ಯಾಚಾರ ಪ್ರಕರಣಗಳಲ್ಲಿ 20 ವರ್ಷಗಳ ಜೈಲು ಶಿಕ್ಷೆ ಅಥವಾ ಜೀವಾವಧಿ ಶಿಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ದೇಶದ್ರೋಹದ ಬಗ್ಗೆ ವ್ಯವಹರಿಸುವ ಐಪಿಸಿಯ ಸೆಕ್ಷನ್ 124-ಎಯನ್ನು ಈಗ ಹೊಸ ಕಾನೂನಿನ ಅಡಿಯಲ್ಲಿ ಸೆಕ್ಷನ್ 150 ಎಂದು ಕರೆಯಲಾಗುತ್ತದೆ.

ಭಾರತದ ಹೊರಗೆ ತಲೆಮರೆಸಿಕೊಂಡಿರುವ ಆರೋಪಿ ಇಲ್ಲಿರಬೇಕಿಲ್ಲ. ವ್ಯಕ್ತಿಯು 90 ದಿನಗಳಲ್ಲಿ ನ್ಯಾಯಾಲಯದ ಎದುರು ಹಾಜರಾಗದಿದ್ದರೆ ಆತನ ಅನುಪಸ್ಥಿತಿಯ ಹೊರತಾಗಿಯೂ ವಿಚಾರಣೆಯು ಮುಂದುವರಿಯುತ್ತದೆ. ಕಾನೂನು ಕ್ರಮವನ್ನು ಜರುಗಿಸಲು ಪಬ್ಲಿಕ್ ಪ್ರಾಸಿಕ್ಯೂಟರನ್ನು ನೇಮಿಸಲಾಗುತ್ತಿದೆ.

ಮೂರು ಕಾನೂನುಗಳು ಕಳೆದ ವರ್ಷ ಡಿಸೆಂಬರ್ 21ರಂದು ಸಂಸತ್ತಿನ ಅನುಮೋದನೆಯನ್ನು ಪಡೆದಿದೆ.  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 25ರಂದು ನೂತನ ಕಾನೂನಿಗೆ ಒಪ್ಪಿಗೆಯನ್ನು ನೀಡಿದ್ದರು.  ಜುಲೈ 1ರಿಂದ ಇದು ಜಾರಿಗೆ ಬರಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ಇದೀಗ ಪ್ರಕಟನೆಯನ್ನು ಹೊರಡಿಸಿದೆ.

ಇದನ್ನು ಓದಿ: ಗಾಝಾದಲ್ಲಿ ಮಾನವೀಯ ನೆರವು ಕಾರ್ಯಚರಣೆ: ಸಂಕಷ್ಟದಲ್ಲಿರುವ UN ಏಜೆನ್ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...