Homeಮುಖಪುಟಜುಲೈ 1ರಿಂದ ಹೊಸ ಕ್ರಿಮಿನಲ್ ಕಾನೂನುಗಳು ಜಾರಿ?

ಜುಲೈ 1ರಿಂದ ಹೊಸ ಕ್ರಿಮಿನಲ್ ಕಾನೂನುಗಳು ಜಾರಿ?

- Advertisement -
- Advertisement -

ಇತ್ತೀಚೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆ ಜುಲೈ 1ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ಪ್ರಕಟಣೆಯನ್ನು ಹೊರಡಿಸಿದೆ.

ನೂತನ ಕಾನೂನು ವಸಾಹತುಶಾಹಿ ಯುಗದ ಭಾರತೀಯ ದಂಡ ಸಂಹಿತೆ (IPC), ಕ್ರಿಮಿನಲ್ ಪ್ರೊಸೀಜರ್ ಕೋಡ್ ಮತ್ತು 1872ರ ಭಾರತೀಯ ಸಾಕ್ಷ್ಯ ಕಾಯಿದೆಯನ್ನು ಬದಲಿಸುತ್ತದೆ. ನೂತನ ಕಾಯ್ದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದು, ಈ ಕಾಯ್ದೆಯು ಜುಲೈ 1ರಿಂದ ಕಾನೂನಾಗಿ ಜಾರಿಗೆ ಬರಲಿದೆ.

ಹೊಸ ಕಾನೂನುಗಳ ಪ್ರಕಾರ, ಶೂನ್ಯ-ಎಫ್‌ಐಆರ್, ಇ-ಎಫ್‌ಐಆರ್, ಚಾರ್ಜ್‌ಶೀಟ್‌ನಂತಹ ಪ್ರಕ್ರಿಯೆಗಳು ಎಲೆಕ್ಟ್ರಾನಿಕ್ ರೂಪದಲ್ಲಿರುತ್ತದೆ ಮತ್ತು ಸಂತ್ರಸ್ತರಿಗೆ ಡಿಜಿಟಲ್ ರೂಪದಲ್ಲಿ ಮಾಹಿತಿಯನ್ನು ಒದಗಿಸಲಾಗುತ್ತದೆ.
ಸಂಸತ್ತಿನಲ್ಲಿ ಮೂರು ವಿಧೇಯಕಗಳ ಮೇಲಿನ ಚರ್ಚೆಯ ಸಂದರ್ಭದಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶಿಕ್ಷೆಯನ್ನು ನೀಡುವ ಬದಲು ನ್ಯಾಯವನ್ನು ತಲುಪಿಸುವತ್ತ ಗಮನಹರಿಸುವುದಾಗಿ ಹೇಳಿದ್ದರು.

ಹೊಸ ಕಾನೂನುಗಳು ಜಾರಿಗೆ ಬರುವ ಮೊದಲು, ಭಾರತೀಯ ದಂಡ ಸಂಹಿತೆಯಿಂದ ಭಾರತೀಯ ನ್ಯಾಯ ಸಂಹಿತೆಗೆ ಕೆಲ ಬದಲಾವಣೆಗಳನ್ನು ಮಾಡಲಾಗಿದೆ. ಹೊಸ ಕಾನೂನಿನಲ್ಲಿ ಐಪಿಸಿ ಅಡಿಯಲ್ಲಿ ಕೆಲವು ಸೆಕ್ಷನ್‌ಗಳ ಸಂಖ್ಯೆಗಳನ್ನು ಬದಲಾಯಿಸಲಾಗಿದೆ.

IPC ಅಡಿಯಲ್ಲಿ ಸೆಕ್ಷನ್ 302 ಕೊಲೆಯ ಶಿಕ್ಷೆಗೆ ಸಂಬಂಧಿಸಿದೆ. ಈಗ ಕೊಲೆಯು ಸೆಕ್ಷನ್ 101ರ ಅಡಿಯಲ್ಲಿ ಬರುತ್ತದೆ. ಇದಲ್ಲದೆ ಹೊಸ ಕಾನೂನಿನ ಅಡಿಯಲ್ಲಿ ಸೆಕ್ಷನ್ 302 ದರೋಡೆಗೆ ಸಂಬಂಧಿಸಿದೆ.
ಐಪಿಸಿಯ ಸೆಕ್ಷನ್ 420 ವಂಚನೆಯ ಅಪರಾಧವಾಗಿದೆ, ಆದರೆ ಹೊಸ ಕಾನೂನಿನಲ್ಲಿ ವಂಚನೆಯು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 316ರ ಅಡಿಯಲ್ಲಿ ಬರುತ್ತದೆ.

ಅಕ್ರಮ ಸಭೆಗೆ ಸಂಬಂಧಿಸಿದ ಐಪಿಸಿಯ ಸೆಕ್ಷನ್ 144ನ್ನು ಈಗ ಸೆಕ್ಷನ್ 187 ಎಂದು ಕರೆಯಲಾಗುವುದು.
ಅಂತೆಯೇ IPCಯ ಸೆಕ್ಷನ್ 121, ಯುದ್ಧ, ಅಥವಾ ಯುದ್ಧಕ್ಕೆ ಸಂಚು ಅಥವಾ ಭಾರತ ಸರ್ಕಾರದ ವಿರುದ್ಧ ಯುದ್ಧವನ್ನು ನಡೆಸಲು ಪ್ರೇರೇಪಿಸುವುದನ್ನು ಈಗ ಅದನ್ನು ಸೆಕ್ಷನ್ 146ರಡಿಯಲ್ಲಿ ಸೇರಿಸಲಾಗಿದೆ. ಮಾನನಷ್ಟಕ್ಕೆ ಸಂಬಂಧಿಸಿದ ಐಪಿಸಿಯ ಸೆಕ್ಷನ್ 499 ಈಗ ಹೊಸ ಕಾನೂನಿನ ಸೆಕ್ಷನ್ 354ರಡಿಯಲ್ಲಿ ಒಳಗೊಂಡಿದೆ.

IPC ಅಡಿಯಲ್ಲಿ ಅತ್ಯಾಚಾರದ ಶಿಕ್ಷೆಗೆ ಸಂಬಂಧಿಸಿದ ಸೆಕ್ಷನ್ 376, ಈಗ ಸೆಕ್ಷನ್ 63 ಆಗಿದೆ. ಹೊಸ ಕಾನೂನಿನ ಅಡಿಯಲ್ಲಿ ಸೆಕ್ಷನ್ 64 ಈ ಕುರಿತ ಶಿಕ್ಷೆಯ ಬಗ್ಗೆ ಹೇಳುತ್ತದೆ, ಆದರೆ ಸೆಕ್ಷನ್ 70 ಸಾಮೂಹಿಕ ಅತ್ಯಾಚಾರದ ಅಪರಾಧಕ್ಕೆ ಸಂಬಂಧಿಸಿದೆ. ಆರೋಪಿಗಳು ದಂಡ ಸಂಹಿತೆಯ ಉದಾರ ನಿಬಂಧನೆಗಳ ಲಾಭವನ್ನು ಪಡೆದುಕೊಳ್ಳುವುದನ್ನು ತಡೆಯಲು 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಗಳ ಕುರಿತು ನಿಬಂಧನೆಗಳನ್ನು ಪೋಕ್ಸೊ ಕಾಯ್ದೆಯೊಂದಿಗೆ ಸೇರಿಸಲಾಗಿದೆ. ಅಪ್ರಾಪ್ತ ವಯಸ್ಕರ ಮೇಲಿನ ಅತ್ಯಾಚಾರಕ್ಕೆ ಜೀವಾವಧಿ ಶಿಕ್ಷೆ ಅಥವಾ ಮರಣ ದಂಡನೆಯನ್ನು ಕಡ್ಡಾಯಗೊಳಿಸಲಾಗಿದೆ. ಸಾಮೂಹಿಕ ಅತ್ಯಾಚಾರ ಪ್ರಕರಣಗಳಲ್ಲಿ 20 ವರ್ಷಗಳ ಜೈಲು ಶಿಕ್ಷೆ ಅಥವಾ ಜೀವಾವಧಿ ಶಿಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ದೇಶದ್ರೋಹದ ಬಗ್ಗೆ ವ್ಯವಹರಿಸುವ ಐಪಿಸಿಯ ಸೆಕ್ಷನ್ 124-ಎಯನ್ನು ಈಗ ಹೊಸ ಕಾನೂನಿನ ಅಡಿಯಲ್ಲಿ ಸೆಕ್ಷನ್ 150 ಎಂದು ಕರೆಯಲಾಗುತ್ತದೆ.

ಭಾರತದ ಹೊರಗೆ ತಲೆಮರೆಸಿಕೊಂಡಿರುವ ಆರೋಪಿ ಇಲ್ಲಿರಬೇಕಿಲ್ಲ. ವ್ಯಕ್ತಿಯು 90 ದಿನಗಳಲ್ಲಿ ನ್ಯಾಯಾಲಯದ ಎದುರು ಹಾಜರಾಗದಿದ್ದರೆ ಆತನ ಅನುಪಸ್ಥಿತಿಯ ಹೊರತಾಗಿಯೂ ವಿಚಾರಣೆಯು ಮುಂದುವರಿಯುತ್ತದೆ. ಕಾನೂನು ಕ್ರಮವನ್ನು ಜರುಗಿಸಲು ಪಬ್ಲಿಕ್ ಪ್ರಾಸಿಕ್ಯೂಟರನ್ನು ನೇಮಿಸಲಾಗುತ್ತಿದೆ.

ಮೂರು ಕಾನೂನುಗಳು ಕಳೆದ ವರ್ಷ ಡಿಸೆಂಬರ್ 21ರಂದು ಸಂಸತ್ತಿನ ಅನುಮೋದನೆಯನ್ನು ಪಡೆದಿದೆ.  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 25ರಂದು ನೂತನ ಕಾನೂನಿಗೆ ಒಪ್ಪಿಗೆಯನ್ನು ನೀಡಿದ್ದರು.  ಜುಲೈ 1ರಿಂದ ಇದು ಜಾರಿಗೆ ಬರಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ಇದೀಗ ಪ್ರಕಟನೆಯನ್ನು ಹೊರಡಿಸಿದೆ.

ಇದನ್ನು ಓದಿ: ಗಾಝಾದಲ್ಲಿ ಮಾನವೀಯ ನೆರವು ಕಾರ್ಯಚರಣೆ: ಸಂಕಷ್ಟದಲ್ಲಿರುವ UN ಏಜೆನ್ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...