Homeಮುಖಪುಟದೇಶದಲ್ಲಿ ೨೦೨೦ಕ್ಕೆ ಹೊಸ ರಾಷ್ಟ್ರೀಯ ಸೈಬರ್‌ ಭದ್ರತಾ ನೀತಿ ಜಾರಿಗೆ ತರಲು ಚಿಂತನೆ..!

ದೇಶದಲ್ಲಿ ೨೦೨೦ಕ್ಕೆ ಹೊಸ ರಾಷ್ಟ್ರೀಯ ಸೈಬರ್‌ ಭದ್ರತಾ ನೀತಿ ಜಾರಿಗೆ ತರಲು ಚಿಂತನೆ..!

- Advertisement -
- Advertisement -

ದೇಶದಲ್ಲಿ ೨೦೨೦ಕ್ಕೆ ಹೊಸ ರಾಷ್ಟ್ರೀಯ ಸೈಬರ್ ಭದ್ರತಾ ನೀತಿ ಜಾರಿಗೆ ತರಲು ಚಿಂತನೆ ನಡೆದಿದೆ. ಸೈಬರ್ ಸುರಕ್ಷತೆ, ಜಾಗೃತಿ ಮತ್ತು ನೈರ್ಮಲ್ಯಕ್ಕೆ ಒತ್ತು ನೀಡಲು, ಶಾಲಾ-ಕಾಲೇಜುಗಳ ಪಠ್ಯದಲ್ಲಿ ಸೈಬರ್‌ ಭದ್ರತೆ ಕುರಿತು ಮಾಹಿತಿ ನೀಡಲು ಹೊಸ ರಾಷ್ಟ್ರೀಯ ಸೈಬರ್ ಭದ್ರತಾ ನೀತಿ ಸಹಕಾರಿಯಾಗಲಿದೆ ಎಂದು ಭದ್ರತಾ ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ದೇಶದಲ್ಲಿ ರಕ್ಷಣಾತ್ಮಕ ಸೈಬರ್ ಕಾರ್ಯಾಚರಣೆಗಳ ಸಂಪೂರ್ಣ ಸ್ಪೆಕ್ಟ್ರಂಗೆ ಶೀಘ್ರದಲ್ಲಿ ಒಂದೇ ಪ್ರಾಧಿಕಾರ ಅಥವಾ ಏಜೆನ್ಸಿ ಹೊಂದಲಾಗುವುದು. ದೇಶ ಸೈಬರ್‌ ದಾಳಿ, ಸೈಬರ್‌ ಭಯೋತ್ಪಾದನೆಯಂಥ ಬೆದರಿಕೆಗಳನ್ನು ಎದುರಿಸುತ್ತಿದೆ. ಇದಕ್ಕೆ ಉದಾಹರಣೆಯೆಂದರೆ ದೇಶದ ಅತಿದೊಡ್ಡ ನಾಗರಿಕ ಪರಮಾಣು ವಿದ್ಯುತ್‌ ಸ್ಥಾವರ (ಕೆಎನ್‌ಪಿಪಿ).

ಭಾರತದ ಸೈಬರ್‌ ಮೂಲಸೌಕರ್ಯಗಳನ್ನು ಸಂರಕ್ಷಿಸಲು ಡಜನ್‌ಗಟ್ಟಲೇ ಇರುವ ಏಜೆನ್ಸಿಗಳನ್ನು ಮರುಜೋಡಣೆ ಮಾಡುವುದು ಮತ್ತು ಸಂಘಟಿಸುವುದು ಸರ್ಕಾರದ ಯೋಜನೆಯಾಗಿದೆ. ಪ್ರಸ್ತುತ ಏಜೆನ್ಸಿಗಳು ಸ್ವತಂತ್ರವಾಗಿ ವರದಿ ಮಾಡುವ ಹಾಗೂ ವೈಯಕ್ತಿಕ ನಿಯಂತ್ರಣ ಹೊಂದಿವೆ. ಅಲ್ಲದೇ ಸಮನ್ವಯುತ ಕಾರ್ಯ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಇವುಗಳನ್ನು ಪುನರ್‌ ರಚಿಸುವ ಆಲೋಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ, ಗೃಹ ವ್ಯವಹಾರ ಸಚಿವಾಲಯ, ರಕ್ಷಣಾ ಸಚಿವಾಲಯ, ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ, ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ ಸೇರಿದಂತೆ ಇತರೆ ಇಲಾಖೆಗಳು ಮತ್ತು ಏಜೆನ್ಸಿಗಳು ತಮ್ಮದೇ ಸೈಬರ್‌‌ ಘಟಕಗಳನ್ನು ಹೊಂದಿವೆ. ಇವುಗಳಲ್ಲಿ ಕಂಪ್ಯುಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್, ನ್ಯಾಷನಲ್ ಕ್ರಿಟಿಕಲ್ ಇನ್ಫಾರ್ಮೇಷನ್ ಇನ್ಫ್ರಾಸ್ಟ್ರಕ್ಚರ್‌ ಮತ್ತು ನ್ಯಾಷನಲ್‌ ಸೈಬರ್ ಕೋಆರ್ಡಿನೇಟರ್‌ ಸೆಂಟರ್‌ ಎಂಬ ವಿಶೇಷ ಘಟಕಗಳಿವೆ.

ರಾಷ್ಟ್ರೀಯ ಸೈಬರ್ ಭದ್ರತಾ ಸಂಯೋಜಕ, ಲೆಫ್ಟಿನೆಂಟ್ ಜನರಲ್‌ ರಾಜೇಶ್‌ ಪಂಥ್‌ ಅವರಿಗೆ ಎಲ್ಲಾ ಘಟಕಗಳು ಮತ್ತು ಏಜೆನ್ಸಿಗಳನ್ನು ಒಟ್ಟುಗೂಡಿಸಿ, ರಚಿಸುವ ಕೆಲಸ ನೀಡಲಾಗಿದೆ. ರಾಷ್ಟ್ರೀಯ ಸೈಬರ್‌ ಭದ್ರತಾ ನೀತಿ-೨೦೨೦ರ ಕಾರ್ಯವೆಂದರೆ ಒಗ್ಗಟ್ಟು ತರುವುದು ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...