Homeಮುಖಪುಟದೇಶದಲ್ಲಿ ೨೦೨೦ಕ್ಕೆ ಹೊಸ ರಾಷ್ಟ್ರೀಯ ಸೈಬರ್‌ ಭದ್ರತಾ ನೀತಿ ಜಾರಿಗೆ ತರಲು ಚಿಂತನೆ..!

ದೇಶದಲ್ಲಿ ೨೦೨೦ಕ್ಕೆ ಹೊಸ ರಾಷ್ಟ್ರೀಯ ಸೈಬರ್‌ ಭದ್ರತಾ ನೀತಿ ಜಾರಿಗೆ ತರಲು ಚಿಂತನೆ..!

- Advertisement -
- Advertisement -

ದೇಶದಲ್ಲಿ ೨೦೨೦ಕ್ಕೆ ಹೊಸ ರಾಷ್ಟ್ರೀಯ ಸೈಬರ್ ಭದ್ರತಾ ನೀತಿ ಜಾರಿಗೆ ತರಲು ಚಿಂತನೆ ನಡೆದಿದೆ. ಸೈಬರ್ ಸುರಕ್ಷತೆ, ಜಾಗೃತಿ ಮತ್ತು ನೈರ್ಮಲ್ಯಕ್ಕೆ ಒತ್ತು ನೀಡಲು, ಶಾಲಾ-ಕಾಲೇಜುಗಳ ಪಠ್ಯದಲ್ಲಿ ಸೈಬರ್‌ ಭದ್ರತೆ ಕುರಿತು ಮಾಹಿತಿ ನೀಡಲು ಹೊಸ ರಾಷ್ಟ್ರೀಯ ಸೈಬರ್ ಭದ್ರತಾ ನೀತಿ ಸಹಕಾರಿಯಾಗಲಿದೆ ಎಂದು ಭದ್ರತಾ ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ದೇಶದಲ್ಲಿ ರಕ್ಷಣಾತ್ಮಕ ಸೈಬರ್ ಕಾರ್ಯಾಚರಣೆಗಳ ಸಂಪೂರ್ಣ ಸ್ಪೆಕ್ಟ್ರಂಗೆ ಶೀಘ್ರದಲ್ಲಿ ಒಂದೇ ಪ್ರಾಧಿಕಾರ ಅಥವಾ ಏಜೆನ್ಸಿ ಹೊಂದಲಾಗುವುದು. ದೇಶ ಸೈಬರ್‌ ದಾಳಿ, ಸೈಬರ್‌ ಭಯೋತ್ಪಾದನೆಯಂಥ ಬೆದರಿಕೆಗಳನ್ನು ಎದುರಿಸುತ್ತಿದೆ. ಇದಕ್ಕೆ ಉದಾಹರಣೆಯೆಂದರೆ ದೇಶದ ಅತಿದೊಡ್ಡ ನಾಗರಿಕ ಪರಮಾಣು ವಿದ್ಯುತ್‌ ಸ್ಥಾವರ (ಕೆಎನ್‌ಪಿಪಿ).

ಭಾರತದ ಸೈಬರ್‌ ಮೂಲಸೌಕರ್ಯಗಳನ್ನು ಸಂರಕ್ಷಿಸಲು ಡಜನ್‌ಗಟ್ಟಲೇ ಇರುವ ಏಜೆನ್ಸಿಗಳನ್ನು ಮರುಜೋಡಣೆ ಮಾಡುವುದು ಮತ್ತು ಸಂಘಟಿಸುವುದು ಸರ್ಕಾರದ ಯೋಜನೆಯಾಗಿದೆ. ಪ್ರಸ್ತುತ ಏಜೆನ್ಸಿಗಳು ಸ್ವತಂತ್ರವಾಗಿ ವರದಿ ಮಾಡುವ ಹಾಗೂ ವೈಯಕ್ತಿಕ ನಿಯಂತ್ರಣ ಹೊಂದಿವೆ. ಅಲ್ಲದೇ ಸಮನ್ವಯುತ ಕಾರ್ಯ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಇವುಗಳನ್ನು ಪುನರ್‌ ರಚಿಸುವ ಆಲೋಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ, ಗೃಹ ವ್ಯವಹಾರ ಸಚಿವಾಲಯ, ರಕ್ಷಣಾ ಸಚಿವಾಲಯ, ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ, ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ ಸೇರಿದಂತೆ ಇತರೆ ಇಲಾಖೆಗಳು ಮತ್ತು ಏಜೆನ್ಸಿಗಳು ತಮ್ಮದೇ ಸೈಬರ್‌‌ ಘಟಕಗಳನ್ನು ಹೊಂದಿವೆ. ಇವುಗಳಲ್ಲಿ ಕಂಪ್ಯುಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್, ನ್ಯಾಷನಲ್ ಕ್ರಿಟಿಕಲ್ ಇನ್ಫಾರ್ಮೇಷನ್ ಇನ್ಫ್ರಾಸ್ಟ್ರಕ್ಚರ್‌ ಮತ್ತು ನ್ಯಾಷನಲ್‌ ಸೈಬರ್ ಕೋಆರ್ಡಿನೇಟರ್‌ ಸೆಂಟರ್‌ ಎಂಬ ವಿಶೇಷ ಘಟಕಗಳಿವೆ.

ರಾಷ್ಟ್ರೀಯ ಸೈಬರ್ ಭದ್ರತಾ ಸಂಯೋಜಕ, ಲೆಫ್ಟಿನೆಂಟ್ ಜನರಲ್‌ ರಾಜೇಶ್‌ ಪಂಥ್‌ ಅವರಿಗೆ ಎಲ್ಲಾ ಘಟಕಗಳು ಮತ್ತು ಏಜೆನ್ಸಿಗಳನ್ನು ಒಟ್ಟುಗೂಡಿಸಿ, ರಚಿಸುವ ಕೆಲಸ ನೀಡಲಾಗಿದೆ. ರಾಷ್ಟ್ರೀಯ ಸೈಬರ್‌ ಭದ್ರತಾ ನೀತಿ-೨೦೨೦ರ ಕಾರ್ಯವೆಂದರೆ ಒಗ್ಗಟ್ಟು ತರುವುದು ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್‌ನ...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...