Homeಕರೋನಾ ತಲ್ಲಣದೆಹಲಿ: ಕೊರೊನಾ ಸೌಲಭ್ಯವಿರುವ ಆಸ್ಪತ್ರೆಯ ಹಿರಿಯ ವೈದ್ಯ ಸೋಂಕಿನಿಂದ ನಿಧನ

ದೆಹಲಿ: ಕೊರೊನಾ ಸೌಲಭ್ಯವಿರುವ ಆಸ್ಪತ್ರೆಯ ಹಿರಿಯ ವೈದ್ಯ ಸೋಂಕಿನಿಂದ ನಿಧನ

- Advertisement -
- Advertisement -

ನವದೆಹಲಿಯ ಲೋಕ ನಾಯಕ ಜೈ ಪ್ರಕಾಶ್ (ಎಲ್‌ಎನ್‌ಜೆಪಿ) ಆಸ್ಪತ್ರೆಯ ಅರಿವಳಿಕೆ ವಿಭಾಗದ ಹಿರಿಯ ಸಲಹೆಗಾರ ಡಾ.ಅಶೀಮ್ ಗುಪ್ತಾ(55) ಅವರು ಕೊರೊನಾ ಸೋಂಕಿನಿಂದಾಗಿ ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಮಾರ್ಚ್ 17 ರಂದು ಎಲ್ಎನ್‌ಜೆಪಿಯನ್ನು ಕೊರೊನಾ ಸೌಲಭ್ಯವಿರುವ ಆಸ್ಪತ್ರೆಯೆಂದು ಘೋಷಿಸಿದ ನಂತರ ಡಾ.ಅಶೀಮ್ ಆಸ್ಪತ್ರೆಯ ತೀವ್ರ ನಿಗಾ ಘಟಕಗಳಲ್ಲಿ ಸೇವೆ ಸಲ್ಲಿಸುತ್ತಿದ್ದರು. ಗಾಜಿಯಾಬಾದ್‌ನಲ್ಲಿ ಕೆಲಸ ಮಾಡುತ್ತಿರುವ ವಿಕಿರಣಶಾಸ್ತ್ರಜ್ಞೆ ಅವರ ಪತ್ನಿ ಡಾ.ನಿರುಪಮಾ ಗುಪ್ತಾ ಕೂಡ ವೈರಸ್‌ಗೆ ತುತ್ತಾಗಿದ್ದರು. ಆದರೆ ಕೆಲವು ದಿನಗಳ ಹಿಂದೆ ಚೇತರಿಸಿಕೊಂಡಿದ್ದಾರೆ.

ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದು, ಅವರಲ್ಲಿ ಒಬ್ಬರು ಆಸ್ಟ್ರೇಲಿಯಾದಲ್ಲಿದ್ದು, ಭಾನುವಾರ ಮಧ್ಯಾಹ್ನ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ.

“ಅವರು ಉಸಿರಾಟದಿಂದ ಬಳಲುತ್ತಿದ್ದರಿಂದ ಪರೀಕ್ಷೆಯನ್ನು ಮಾಡಿಸಿದ್ದರು. ಜೂನ್ 8 ರಂದು ಅವರ ಪರೀಕ್ಷಾ ಫಲಿತಾಂಶವೂ ಕೊರೊನಾ ಪಾಸಿಟಿವ್ ವರದಿ ನೀಡಿತ್ತು. ಸಾಕೆತ್‌ನ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸ್ಥಳಾಂತರಿಸುವ ಮೊದಲು ಅವರನ್ನು ಎಲ್‌ಎನ್‌ಜೆಪಿಯ ಐಸಿಯುಗೆ ದಾಖಲಿಸಲಾಯಿತು” ಎಂದು ಎಲ್‌ಎನ್‌ಜೆಪಿಯ ವೈದ್ಯಕೀಯ ಅಧೀಕ್ಷಕ ಡಾ.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಎಲ್‌ಎನ್‌ಜೆಪಿ ಆಸ್ಪತ್ರೆಯ ಅಧಿಕೃತ ಹೇಳಿಕೆಯ ಪ್ರಕಾರ, “ಅವರು 3.6.2020 ರಂದು ಸೌಮ್ಯವಾಗಿ ರೋಗಲಕ್ಷಣಗಳನ್ನು ಹೊಂದಿದ್ದಾಗ ಕೊರೊನಾ ಪಾಸಿಟಿವ್ ಆಗಿದ್ದರು. ಅದಕ್ಕಾಗಿ ಅವರನ್ನು ಸಂಪರ್ಕತಡೆ ಸೌಲಭ್ಯಕ್ಕೆ ವರ್ಗಾಯಿಸಲಾಯಿತು. 7.6.2020 ರಂದು ಅವರ ರೋಗಲಕ್ಷಣಗಳು ಉಲ್ಬಣಗೊಂಡವು ಮತ್ತು ಅವರನ್ನು ಲೋಕ ನಾಯಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಯಿತು. ನಂತರ ಅವರ ಕೋರಿಕೆಯ ಮೇರೆಗೆ ಅವರನ್ನು 8.6.2020 ರಂದು ಸಾಕೇಟ್‌ನ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದಕ್ಕಿಂತಲೂ ಮುಂಚೆ ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ, ಇಬ್ಬರು ಆರೋಗ್ಯ ಕಾರ್ಯಕರ್ತರು, ಒಬ್ಬ ಲ್ಯಾಬ್ ತಂತ್ರಜ್ಞ ಮತ್ತು ಒಬ್ಬ ಸಿಬ್ಬಂದಿ ಸೇರಿದಂತೆ ಒಟ್ಟು ನಾಲ್ಕು ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದರು. ಆಸ್ಪತ್ರೆಯು ಈವರೆಗೆ ತನ್ನ 72 ಸದಸ್ಯರನ್ನು ಕೊರೊನಾ ಪಾಸಿಟಿವ್ ಎಂದು ವರದಿ ಮಾಡಿದೆ ಎಂದು ಜೂನ್ 16 ರಂದು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಿಳಿಸಿದೆ.

ವರದಿಗಳ ಪ್ರಕಾರ, ಮಾರ್ಚ್‌ನಿಂದ ದೆಹಲಿಯಾದ್ಯಂತ 1,200 ಕ್ಕೂ ಹೆಚ್ಚು ವೈದ್ಯಕೀಯ ಸಿಬ್ಬಂದಿಗಳು ಕೊರೊನಾ ಪಾಸಿಟಿವ್ ಆಗಿದ್ದಾರೆ.


ಓದಿ: ಹೈದರಾಬಾದ್‌ನಲ್ಲಿ ಕೊರೊನಾ ರೋಗಿಗಳು ಹಾಸಿಗೆ ಸಿಗದೆ ರಸ್ತೆಯಲ್ಲಿದ್ದಾರೆಯೆ?;ಫ್ಯಾಕ್ಟ್‌ಚೆಕ್.‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...