Homeಮುಖಪುಟದೆಹಲಿಯ ನೂತನ ಬಿಜೆಪಿ ಶಾಸಕನಿಂದ ಮುಸ್ಲಿಂ ವ್ಯಕ್ತಿಗೆ ಬುಲ್ಡೋಜರ್ ಬೆದರಿಕೆ: ವೀಡಿಯೋ ವೈರಲ್

ದೆಹಲಿಯ ನೂತನ ಬಿಜೆಪಿ ಶಾಸಕನಿಂದ ಮುಸ್ಲಿಂ ವ್ಯಕ್ತಿಗೆ ಬುಲ್ಡೋಜರ್ ಬೆದರಿಕೆ: ವೀಡಿಯೋ ವೈರಲ್

- Advertisement -
- Advertisement -

ನವದೆಹಲಿ: ದೆಹಲಿಯ ಪ್ರತಾಪ್‌ಗಂಜ್‌ನಲ್ಲಿ ಹೊಸದಾಗಿ ಆಯ್ಕೆಯಾದ ಬಿಜೆಪಿಯ ಶಾಸಕ ರವೀಂದರ್ ಸಿಂಗ್ ನೇಗಿ ಅವರು ಮುಸ್ಲಿಂ ವ್ಯಕ್ತಿಯೊಬ್ಬರ ಆಸ್ತಿಯ ಮೇಲೆ ಬುಲ್ಡೋಜರ್ ಚಲಾಯಿಸುವುದಾಗಿ ಬೆದರಿಕೆ ಹಾಕಿದ್ದಾರೆ ಮತ್ತು ಈ ವೀಡಿಯೊವನ್ನು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಮುಸ್ಲಿಮರು ಮತ್ತು ಅವರ ವ್ಯವಹಾರಗಳನ್ನು ಗುರಿಯಾಗಿಸಿಕೊಳ್ಳುವುದರಲ್ಲಿ ಕುಖ್ಯಾತರಾಗಿರುವ ಕೌನ್ಸಿಲರ್ ನೇಗಿ, ದೆಹಲಿಯ ಪ್ರತಾಪ್‌ಗಂಜ್‌ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಗುರುವಾರದಂದು ಅವರು ಅಬ್ದುಲ್ ರಹೀಮ್ ಎಂಬ ವ್ಯಕ್ತಿಯ ಆಸ್ತಿಯ ಮೇಲೆ ಜೆಸಿಬಿ ಹರಿಸುವುದಾಗಿ ಬೆದರಿಕೆ ಹಾಕುತ್ತಿರುವ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಹರ್ಷ ಮಲ್ಹೋತ್ರಾ ಮತ್ತು ಬಿಜೆಪಿ ಮುಖ್ಯಸ್ಥ ಜೆ.ಪಿ. ನಡ್ಡಾ ಅವರಿಗೆ ಟ್ಯಾಗ್ ಮಾಡಿದ್ದಾರೆ.

ಪೊಲೀಸರು ಸೇರಿದಂತೆ ಜನಸಮೂಹದಿಂದ ಸುತ್ತುವರೆದಿರುವ ನೇಗಿ, “ನೀವು ಭೂಮಿಯನ್ನು ಖಾಲಿ ಮಾಡಬೇಕು ಇಲ್ಲದಿದ್ದರೆ ದೊಡ್ಡ ಕ್ರಮ ಕೈಗೊಳ್ಳಲಾಗುವುದು. ನಿಮ್ಮ ಜೀವನದುದ್ದಕ್ಕೂ ನೀವು ಒದ್ದಾಟ ನಡೆಸಬೇಕಾಗುತ್ತದೆ. ಮತ್ತು ಸ್ಥಳೀಯ ಜನರನ್ನು ವ್ಯಸನಕಾರಿಯಾಗಿಸುವ ಚಾಳಿ ನಿಲ್ಲಿಸಬೇಕು” ಎಂದಿದ್ದಾರೆ.

ಆ ಪ್ರದೇಶದಲ್ಲಿ ಮಾದಕ ವಸ್ತುಗಳ ಮಾರಾಟದ ಆರೋಪವನ್ನು ಮುಸ್ಲಿಂ ವ್ಯಕ್ತಿ ನಿರಾಕರಿಸುತ್ತಿರುವುದು ಈ ವೀಡಿಯೊದಲ್ಲಿ ಕಂಡುಬರುತ್ತದೆ. ಆದಾಗ್ಯೂ, ನೇಗಿ ಆ ವ್ಯಕ್ತಿಯನ್ನು ನಿರ್ಲಕ್ಷಿಸಿ ದ್ವೇಷವನ್ನು ಹೊರಹಾಕುತ್ತಲೇ ಇದ್ದರು ಮತ್ತು ಅವರ ಆಸ್ತಿಯನ್ನು ಬುಲ್ಡೋಜರ್ ಮೂಲಕ ನಾಶಪಡಿಸುವುದಾಗಿ ಬೆದರಿಕೆ ಹಾಕುತ್ತಲೇ ಇದ್ದರು.

ಆ ಭೂಮಿ ಸರ್ಕಾರಕ್ಕೆ ಸೇರಿದ್ದು ಎಂದು ನೇಗಿ ಆರೋಪಿಸಿದರು ಮತ್ತು ಅವರ ಆಸ್ತಿಗಳ ಮೇಲೆ ಜೆಸಿಬಿ ಚಲಾಯಿಸುವುದಾಗಿ ಬೆದರಿಕೆ ಹಾಕಿದರು. ಆ ಮುಸ್ಲಿಂ ವ್ಯಕ್ತಿಯ ಹೆಸರು ಕೇಳಿದ ಬಿಜೆಪಿ ನಾಯಕನು “ಅಬ್ದುಲ್ ಭಾಯ್, ನಾನು ಇಲ್ಲಿ ಜೆಸಿಬಿ ಓಡಿಸುತ್ತೇನೆ, ಇಲ್ಲಿರುವ ಎಲ್ಲವೂ ಒಂದು ನಿಮಿಷದಲ್ಲಿ ನಾಶವಾಗುತ್ತದೆ” ಎಂದು ನೇಗಿ ಬೆದರಿಕೆ ಹಾಕಿದರು.

ಹೊಸದಾಗಿ ಆಯ್ಕೆಯಾದ ಶಾಸಕರು ಆ ಭೂಮಿ ದೆಹಲಿ ಅಭಿವೃದ್ಧಿ ಪ್ರಾಧಿಕಾರಕ್ಕೆ (ಡಿಡಿಎ) ಸೇರಿದೆ ಎಂದು ಹೇಳಿಕೊಂಡಿದ್ದಾರೆ. ಶಾಸಕರಾಗಿ ಆಯ್ಕೆಯಾದ ಕೂಡಲೇ ಬಡವರನ್ನು ಗುರಿಯಾಗಿಸಿಕೊಂಡಿದ್ದಕ್ಕಾಗಿ ನೇಗಿ ಅವರ ಈ ಕ್ರಮವು ಭಾರೀ ಟೀಕೆಗೆ ಗುರಿಯಾಗಿದೆ.

ಬಿಜೆಪಿ ಶಾಸಕರು ತಮ್ಮನ್ನು ಕಾನೂನಿಗಿಂತ ಶ್ರೇಷ್ಠರೆಂದು ಪರಿಗಣಿಸುತ್ತಾರೆ. ಅವರು ಶಾಸಕರಾಗಿ ಒಂದು ವಾರವೂ ಆಗಿಲ್ಲ, ಇನ್ನೂ ದೆಹಲಿಯ ಮುಖ್ಯಮಂತ್ರಿಯ ಆಯ್ಕೆಯೂ ಆಗಿಲ್ಲ. ಆದರೆ ಬಿಜೆಪಿಯ ಗೂಂಡಾಗಿರಿ ಆರಂಭವಾಗಿದೆ. ಶಾಸಕರೇ ಈ ಕಾರ್ಮಿಕನ ಹೆಸರು ಅಬ್ದುಲ್ ಆಗಿದ್ದಕ್ಕಾಗಿ ಸಂತೋಷಪಡಬೇಡಿ. ಬಿಜೆಪಿ ಸರ್ಕಾರ ರಚನೆಯಾದರೆ, ಅವರು ಪ್ರತಿಯೊಬ್ಬ ಬಡ ಕಾರ್ಮಿಕರ ಗುಡಿಸಲಿನ ಮೇಲೆ ಬುಲ್ಡೋಜರ್ ಓಡಿಸುತ್ತಾರೆ” ಎಂದು ಸಂಸದ ಸಂಜಯ್ ಹೇಳಿದ್ದಾರೆ.

ಅದು ಹಾಗೆಯೇ ಆಗುತ್ತದೆ, ಅವರು ಅಮಿತ್, ಸುಮಿತ್, ಗುರುದೀಪ್ ಮತ್ತು ಅಬ್ದುಲ್ ಇನ್ನೂ ಯಾರೇ ಆಗಲಿ ಅವರನ್ನು ಬಿಡುವುದಿಲ್ಲ, ಅವರು ಬಡವರ ಮೇಲೆ ತಮ್ಮ ಗೂಂಡಾಗಿರಿಯನ್ನು ತೋರಿಸುತ್ತಾರೆ ಮತ್ತು ಪ್ರತಿಯೊಬ್ಬ ಬಡವರನ್ನು ಬುಲ್ಡೋಜರ್ ನಿಂದ ನಾಶಮಾಡುತ್ತಾರೆ!” ಎಂದು ಪತ್ರಕರ್ತ ಜಾಕಿರ್ ತಿಯಾಗಿ ಹೇಳಿದರು.

ಹೊಸದಾಗಿ ಆಯ್ಕೆಯಾದ ಶಾಸಕರೇ, ಭೂಮಿ ಸರ್ಕಾರಿ ಆಗಿದ್ದರೆ ಮೂಲಭೂತ ಅಂಶಗಳನ್ನು ಗ್ರಹಿಸಲು ಸ್ವಲ್ಪ ಸಮಯ ತೆಗೆದುಕೊಳ್ಳಿ – ಮಿಸ್ಟರ್. ಸರ್ಕಾರ ನಿಮ್ಮ ವೈಯಕ್ತಿಕ ಆಸ್ತಿಯಲ್ಲ; ಅದು ಜನರಿಂದ, ಜನರಿಗಾಗಿ, ಜನರಿಗೇ ಇರುವಂತಹದ್ದು. ಆದರೆ ಖಂಡಿತವಾಗಿಯೂ ನಿಮ್ಮಂತಹ ರಾಜಕಾರಣಿಗಳು ದುರ್ಬಲರ ಮುಂದೆ ತಮ್ಮ ಅಧಿಕಾರದ ದರ್ಪ ತೋರಿಸಬಾರದು. ನಿಮಗೆ ನಿಜವಾಗಿಯೂ ಧೈರ್ಯವಿದ್ದರೆ, ನಿಜವಾದ ಶಕ್ತಿ ಹೇಗಿರುತ್ತದೆ ಎಂಬುದನ್ನು ಜನರು ನಿಮಗೆ ತೋರಿಸಲು ನಿರ್ಧರಿಸಿದಾಗ ಅವರನ್ನು ಎದುರಿಸಲು ಪ್ರಯತ್ನಿಸಬೇಕು ಎಂದು NSUI ನಾಯಕ ಅನೀಶ್ ಕನ್ಸಾಲ್ ಹೇಳಿದ್ದಾರೆ.

ಇಂತಹ ಕಿಡಿಗೇಡಿಗಳು ನಾಯಕರು ಮತ್ತು ಶಾಸಕರಾದಾಗ ಅವರು ಬಡವರ ಜೀವನವನ್ನು ಕಷ್ಟಕರವಾಗಿಸುತ್ತಾರೆ. ನಾಯಕ ಇಸ್ಲಾಮೋಫೋಬಿಕ್ ಆಗಿದ್ದರೆ ಮತ್ತು ಬಡ ವ್ಯಕ್ತಿ ಮುಸ್ಲಿಂ ಆಗಿದ್ದರೆ ಅದು ಕೇಕ್ ಮೇಲೆ ಐಸಿಂಗ್ ಆಗುತ್ತದೆ. ಗೂಂಡಾಗಳು ರಾಜಕೀಯ ಮಾಡಿದಾಗ ದೇಶದಲ್ಲಿ ದ್ವೇಷ ಹೆಚ್ಚಾಗುತ್ತದೆ ಎಂದು ಸಾಮಾಜಿಕ ಮಾಧ್ಯಮ ಬಳಕೆದಾರ ಶಮಿ ತಿಳಿಸಿದ್ದಾರೆ.

ಏತನ್ಮಧ್ಯೆ, ಮನೆಯ ಮುಂದೆ ಕುಳಿತಿದ್ದಕ್ಕಾಗಿ ನೇಗಿ ಹದಿಹರೆಯದವನನ್ನು ಜೈಲಿಗೆ ಹಾಕುವುದಾಗಿ ಬೆದರಿಕೆ ಹಾಕುತ್ತಿರುವ ಮತ್ತೊಂದು ವೀಡಿಯೊ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಬಿಜೆಪಿ ನಾಯಕರು ಇದ್ದಕ್ಕಿದ್ದಂತೆ ಒಬ್ಬ ಹದಿಹರೆಯದವರನ್ನು ಹಿಡಿದು ನಿಮ್ಮ ಮನೆ ಎಲ್ಲಿದೆ ಎಂದು ಕೇಳಿದರು. ಆ ಹದಿಹರೆಯದವನು ತನ್ನ ಮನೆ ಮುಂದಿನ ಬೀದಿಯಲ್ಲಿದೆ ಎಂದು ಹೇಳಿದಾಗ, ನೇಗಿ ಅವನು ಇಲ್ಲಿ ಏಕೆ ಇದ್ದಾನೆ ಎಂದು ಕೇಳಿದನು? ನಂತರ, ಬಿಜೆಪಿ ನಾಯಕರು ಅವನನ್ನು ಕಂಬಿಗಳ ಹಿಂದೆ ಹಾಕುವುದಾಗಿ ಬೆದರಿಕೆ ಹಾಕುತ್ತಾರೆ.

ಈ ಹಿಂದೆ ನೇಗಿಯು ಮುಸ್ಲಿಂ ನಿವಾಸಿಗಳು, ಮಾರಾಟಗಾರರು ಮತ್ತು ಅಂಗಡಿಯವರಿಗೆ ಕಿರುಕುಳ ನೀಡುತ್ತಿರುವ ಇಂತಹ ಅನೇಕ ವೀಡಿಯೊಗಳು ವೈರಲ್ ಆಗಿವೆ. ಆ ವೀಡಿಯೊಗಳಲ್ಲಿ ಅವನು ತಮ್ಮ ಅಂಗಡಿಗಳ ಹೆಸರನ್ನು ಬದಲಾಯಿಸಲು ಅಥವಾ ಅಂಗಡಿಯನ್ನು ನಿರ್ದಿಷ್ಟ ಸ್ಥಳದಿಂದ ತೆಗೆದುಹಾಕುವಂತೆ ಒತ್ತಾಯಿಸುವುದನ್ನು ಕಾಣಬಹುದು.

3 ಒತ್ತೆಯಾಳುಗಳನ್ನು ರೆಡ್ ಕ್ರಾಸ್‌ಗೆ ಹಸ್ತಾಂತರಿಸಿದ ಹಮಾಸ್: ಇಸ್ರೇಲ್ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...