Homeಮುಖಪುಟದೆಹಲಿಯ ನೂತನ ಬಿಜೆಪಿ ಶಾಸಕನಿಂದ ಮುಸ್ಲಿಂ ವ್ಯಕ್ತಿಗೆ ಬುಲ್ಡೋಜರ್ ಬೆದರಿಕೆ: ವೀಡಿಯೋ ವೈರಲ್

ದೆಹಲಿಯ ನೂತನ ಬಿಜೆಪಿ ಶಾಸಕನಿಂದ ಮುಸ್ಲಿಂ ವ್ಯಕ್ತಿಗೆ ಬುಲ್ಡೋಜರ್ ಬೆದರಿಕೆ: ವೀಡಿಯೋ ವೈರಲ್

- Advertisement -
- Advertisement -

ನವದೆಹಲಿ: ದೆಹಲಿಯ ಪ್ರತಾಪ್‌ಗಂಜ್‌ನಲ್ಲಿ ಹೊಸದಾಗಿ ಆಯ್ಕೆಯಾದ ಬಿಜೆಪಿಯ ಶಾಸಕ ರವೀಂದರ್ ಸಿಂಗ್ ನೇಗಿ ಅವರು ಮುಸ್ಲಿಂ ವ್ಯಕ್ತಿಯೊಬ್ಬರ ಆಸ್ತಿಯ ಮೇಲೆ ಬುಲ್ಡೋಜರ್ ಚಲಾಯಿಸುವುದಾಗಿ ಬೆದರಿಕೆ ಹಾಕಿದ್ದಾರೆ ಮತ್ತು ಈ ವೀಡಿಯೊವನ್ನು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಮುಸ್ಲಿಮರು ಮತ್ತು ಅವರ ವ್ಯವಹಾರಗಳನ್ನು ಗುರಿಯಾಗಿಸಿಕೊಳ್ಳುವುದರಲ್ಲಿ ಕುಖ್ಯಾತರಾಗಿರುವ ಕೌನ್ಸಿಲರ್ ನೇಗಿ, ದೆಹಲಿಯ ಪ್ರತಾಪ್‌ಗಂಜ್‌ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಗುರುವಾರದಂದು ಅವರು ಅಬ್ದುಲ್ ರಹೀಮ್ ಎಂಬ ವ್ಯಕ್ತಿಯ ಆಸ್ತಿಯ ಮೇಲೆ ಜೆಸಿಬಿ ಹರಿಸುವುದಾಗಿ ಬೆದರಿಕೆ ಹಾಕುತ್ತಿರುವ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಹರ್ಷ ಮಲ್ಹೋತ್ರಾ ಮತ್ತು ಬಿಜೆಪಿ ಮುಖ್ಯಸ್ಥ ಜೆ.ಪಿ. ನಡ್ಡಾ ಅವರಿಗೆ ಟ್ಯಾಗ್ ಮಾಡಿದ್ದಾರೆ.

ಪೊಲೀಸರು ಸೇರಿದಂತೆ ಜನಸಮೂಹದಿಂದ ಸುತ್ತುವರೆದಿರುವ ನೇಗಿ, “ನೀವು ಭೂಮಿಯನ್ನು ಖಾಲಿ ಮಾಡಬೇಕು ಇಲ್ಲದಿದ್ದರೆ ದೊಡ್ಡ ಕ್ರಮ ಕೈಗೊಳ್ಳಲಾಗುವುದು. ನಿಮ್ಮ ಜೀವನದುದ್ದಕ್ಕೂ ನೀವು ಒದ್ದಾಟ ನಡೆಸಬೇಕಾಗುತ್ತದೆ. ಮತ್ತು ಸ್ಥಳೀಯ ಜನರನ್ನು ವ್ಯಸನಕಾರಿಯಾಗಿಸುವ ಚಾಳಿ ನಿಲ್ಲಿಸಬೇಕು” ಎಂದಿದ್ದಾರೆ.

ಆ ಪ್ರದೇಶದಲ್ಲಿ ಮಾದಕ ವಸ್ತುಗಳ ಮಾರಾಟದ ಆರೋಪವನ್ನು ಮುಸ್ಲಿಂ ವ್ಯಕ್ತಿ ನಿರಾಕರಿಸುತ್ತಿರುವುದು ಈ ವೀಡಿಯೊದಲ್ಲಿ ಕಂಡುಬರುತ್ತದೆ. ಆದಾಗ್ಯೂ, ನೇಗಿ ಆ ವ್ಯಕ್ತಿಯನ್ನು ನಿರ್ಲಕ್ಷಿಸಿ ದ್ವೇಷವನ್ನು ಹೊರಹಾಕುತ್ತಲೇ ಇದ್ದರು ಮತ್ತು ಅವರ ಆಸ್ತಿಯನ್ನು ಬುಲ್ಡೋಜರ್ ಮೂಲಕ ನಾಶಪಡಿಸುವುದಾಗಿ ಬೆದರಿಕೆ ಹಾಕುತ್ತಲೇ ಇದ್ದರು.

ಆ ಭೂಮಿ ಸರ್ಕಾರಕ್ಕೆ ಸೇರಿದ್ದು ಎಂದು ನೇಗಿ ಆರೋಪಿಸಿದರು ಮತ್ತು ಅವರ ಆಸ್ತಿಗಳ ಮೇಲೆ ಜೆಸಿಬಿ ಚಲಾಯಿಸುವುದಾಗಿ ಬೆದರಿಕೆ ಹಾಕಿದರು. ಆ ಮುಸ್ಲಿಂ ವ್ಯಕ್ತಿಯ ಹೆಸರು ಕೇಳಿದ ಬಿಜೆಪಿ ನಾಯಕನು “ಅಬ್ದುಲ್ ಭಾಯ್, ನಾನು ಇಲ್ಲಿ ಜೆಸಿಬಿ ಓಡಿಸುತ್ತೇನೆ, ಇಲ್ಲಿರುವ ಎಲ್ಲವೂ ಒಂದು ನಿಮಿಷದಲ್ಲಿ ನಾಶವಾಗುತ್ತದೆ” ಎಂದು ನೇಗಿ ಬೆದರಿಕೆ ಹಾಕಿದರು.

ಹೊಸದಾಗಿ ಆಯ್ಕೆಯಾದ ಶಾಸಕರು ಆ ಭೂಮಿ ದೆಹಲಿ ಅಭಿವೃದ್ಧಿ ಪ್ರಾಧಿಕಾರಕ್ಕೆ (ಡಿಡಿಎ) ಸೇರಿದೆ ಎಂದು ಹೇಳಿಕೊಂಡಿದ್ದಾರೆ. ಶಾಸಕರಾಗಿ ಆಯ್ಕೆಯಾದ ಕೂಡಲೇ ಬಡವರನ್ನು ಗುರಿಯಾಗಿಸಿಕೊಂಡಿದ್ದಕ್ಕಾಗಿ ನೇಗಿ ಅವರ ಈ ಕ್ರಮವು ಭಾರೀ ಟೀಕೆಗೆ ಗುರಿಯಾಗಿದೆ.

ಬಿಜೆಪಿ ಶಾಸಕರು ತಮ್ಮನ್ನು ಕಾನೂನಿಗಿಂತ ಶ್ರೇಷ್ಠರೆಂದು ಪರಿಗಣಿಸುತ್ತಾರೆ. ಅವರು ಶಾಸಕರಾಗಿ ಒಂದು ವಾರವೂ ಆಗಿಲ್ಲ, ಇನ್ನೂ ದೆಹಲಿಯ ಮುಖ್ಯಮಂತ್ರಿಯ ಆಯ್ಕೆಯೂ ಆಗಿಲ್ಲ. ಆದರೆ ಬಿಜೆಪಿಯ ಗೂಂಡಾಗಿರಿ ಆರಂಭವಾಗಿದೆ. ಶಾಸಕರೇ ಈ ಕಾರ್ಮಿಕನ ಹೆಸರು ಅಬ್ದುಲ್ ಆಗಿದ್ದಕ್ಕಾಗಿ ಸಂತೋಷಪಡಬೇಡಿ. ಬಿಜೆಪಿ ಸರ್ಕಾರ ರಚನೆಯಾದರೆ, ಅವರು ಪ್ರತಿಯೊಬ್ಬ ಬಡ ಕಾರ್ಮಿಕರ ಗುಡಿಸಲಿನ ಮೇಲೆ ಬುಲ್ಡೋಜರ್ ಓಡಿಸುತ್ತಾರೆ” ಎಂದು ಸಂಸದ ಸಂಜಯ್ ಹೇಳಿದ್ದಾರೆ.

ಅದು ಹಾಗೆಯೇ ಆಗುತ್ತದೆ, ಅವರು ಅಮಿತ್, ಸುಮಿತ್, ಗುರುದೀಪ್ ಮತ್ತು ಅಬ್ದುಲ್ ಇನ್ನೂ ಯಾರೇ ಆಗಲಿ ಅವರನ್ನು ಬಿಡುವುದಿಲ್ಲ, ಅವರು ಬಡವರ ಮೇಲೆ ತಮ್ಮ ಗೂಂಡಾಗಿರಿಯನ್ನು ತೋರಿಸುತ್ತಾರೆ ಮತ್ತು ಪ್ರತಿಯೊಬ್ಬ ಬಡವರನ್ನು ಬುಲ್ಡೋಜರ್ ನಿಂದ ನಾಶಮಾಡುತ್ತಾರೆ!” ಎಂದು ಪತ್ರಕರ್ತ ಜಾಕಿರ್ ತಿಯಾಗಿ ಹೇಳಿದರು.

ಹೊಸದಾಗಿ ಆಯ್ಕೆಯಾದ ಶಾಸಕರೇ, ಭೂಮಿ ಸರ್ಕಾರಿ ಆಗಿದ್ದರೆ ಮೂಲಭೂತ ಅಂಶಗಳನ್ನು ಗ್ರಹಿಸಲು ಸ್ವಲ್ಪ ಸಮಯ ತೆಗೆದುಕೊಳ್ಳಿ – ಮಿಸ್ಟರ್. ಸರ್ಕಾರ ನಿಮ್ಮ ವೈಯಕ್ತಿಕ ಆಸ್ತಿಯಲ್ಲ; ಅದು ಜನರಿಂದ, ಜನರಿಗಾಗಿ, ಜನರಿಗೇ ಇರುವಂತಹದ್ದು. ಆದರೆ ಖಂಡಿತವಾಗಿಯೂ ನಿಮ್ಮಂತಹ ರಾಜಕಾರಣಿಗಳು ದುರ್ಬಲರ ಮುಂದೆ ತಮ್ಮ ಅಧಿಕಾರದ ದರ್ಪ ತೋರಿಸಬಾರದು. ನಿಮಗೆ ನಿಜವಾಗಿಯೂ ಧೈರ್ಯವಿದ್ದರೆ, ನಿಜವಾದ ಶಕ್ತಿ ಹೇಗಿರುತ್ತದೆ ಎಂಬುದನ್ನು ಜನರು ನಿಮಗೆ ತೋರಿಸಲು ನಿರ್ಧರಿಸಿದಾಗ ಅವರನ್ನು ಎದುರಿಸಲು ಪ್ರಯತ್ನಿಸಬೇಕು ಎಂದು NSUI ನಾಯಕ ಅನೀಶ್ ಕನ್ಸಾಲ್ ಹೇಳಿದ್ದಾರೆ.

ಇಂತಹ ಕಿಡಿಗೇಡಿಗಳು ನಾಯಕರು ಮತ್ತು ಶಾಸಕರಾದಾಗ ಅವರು ಬಡವರ ಜೀವನವನ್ನು ಕಷ್ಟಕರವಾಗಿಸುತ್ತಾರೆ. ನಾಯಕ ಇಸ್ಲಾಮೋಫೋಬಿಕ್ ಆಗಿದ್ದರೆ ಮತ್ತು ಬಡ ವ್ಯಕ್ತಿ ಮುಸ್ಲಿಂ ಆಗಿದ್ದರೆ ಅದು ಕೇಕ್ ಮೇಲೆ ಐಸಿಂಗ್ ಆಗುತ್ತದೆ. ಗೂಂಡಾಗಳು ರಾಜಕೀಯ ಮಾಡಿದಾಗ ದೇಶದಲ್ಲಿ ದ್ವೇಷ ಹೆಚ್ಚಾಗುತ್ತದೆ ಎಂದು ಸಾಮಾಜಿಕ ಮಾಧ್ಯಮ ಬಳಕೆದಾರ ಶಮಿ ತಿಳಿಸಿದ್ದಾರೆ.

ಏತನ್ಮಧ್ಯೆ, ಮನೆಯ ಮುಂದೆ ಕುಳಿತಿದ್ದಕ್ಕಾಗಿ ನೇಗಿ ಹದಿಹರೆಯದವನನ್ನು ಜೈಲಿಗೆ ಹಾಕುವುದಾಗಿ ಬೆದರಿಕೆ ಹಾಕುತ್ತಿರುವ ಮತ್ತೊಂದು ವೀಡಿಯೊ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಬಿಜೆಪಿ ನಾಯಕರು ಇದ್ದಕ್ಕಿದ್ದಂತೆ ಒಬ್ಬ ಹದಿಹರೆಯದವರನ್ನು ಹಿಡಿದು ನಿಮ್ಮ ಮನೆ ಎಲ್ಲಿದೆ ಎಂದು ಕೇಳಿದರು. ಆ ಹದಿಹರೆಯದವನು ತನ್ನ ಮನೆ ಮುಂದಿನ ಬೀದಿಯಲ್ಲಿದೆ ಎಂದು ಹೇಳಿದಾಗ, ನೇಗಿ ಅವನು ಇಲ್ಲಿ ಏಕೆ ಇದ್ದಾನೆ ಎಂದು ಕೇಳಿದನು? ನಂತರ, ಬಿಜೆಪಿ ನಾಯಕರು ಅವನನ್ನು ಕಂಬಿಗಳ ಹಿಂದೆ ಹಾಕುವುದಾಗಿ ಬೆದರಿಕೆ ಹಾಕುತ್ತಾರೆ.

ಈ ಹಿಂದೆ ನೇಗಿಯು ಮುಸ್ಲಿಂ ನಿವಾಸಿಗಳು, ಮಾರಾಟಗಾರರು ಮತ್ತು ಅಂಗಡಿಯವರಿಗೆ ಕಿರುಕುಳ ನೀಡುತ್ತಿರುವ ಇಂತಹ ಅನೇಕ ವೀಡಿಯೊಗಳು ವೈರಲ್ ಆಗಿವೆ. ಆ ವೀಡಿಯೊಗಳಲ್ಲಿ ಅವನು ತಮ್ಮ ಅಂಗಡಿಗಳ ಹೆಸರನ್ನು ಬದಲಾಯಿಸಲು ಅಥವಾ ಅಂಗಡಿಯನ್ನು ನಿರ್ದಿಷ್ಟ ಸ್ಥಳದಿಂದ ತೆಗೆದುಹಾಕುವಂತೆ ಒತ್ತಾಯಿಸುವುದನ್ನು ಕಾಣಬಹುದು.

3 ಒತ್ತೆಯಾಳುಗಳನ್ನು ರೆಡ್ ಕ್ರಾಸ್‌ಗೆ ಹಸ್ತಾಂತರಿಸಿದ ಹಮಾಸ್: ಇಸ್ರೇಲ್ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...