Homeಮುಖಪುಟದೆಹಲಿಯ ನೂತನ ಬಿಜೆಪಿ ಶಾಸಕನಿಂದ ಮುಸ್ಲಿಂ ವ್ಯಕ್ತಿಗೆ ಬುಲ್ಡೋಜರ್ ಬೆದರಿಕೆ: ವೀಡಿಯೋ ವೈರಲ್

ದೆಹಲಿಯ ನೂತನ ಬಿಜೆಪಿ ಶಾಸಕನಿಂದ ಮುಸ್ಲಿಂ ವ್ಯಕ್ತಿಗೆ ಬುಲ್ಡೋಜರ್ ಬೆದರಿಕೆ: ವೀಡಿಯೋ ವೈರಲ್

- Advertisement -
- Advertisement -

ನವದೆಹಲಿ: ದೆಹಲಿಯ ಪ್ರತಾಪ್‌ಗಂಜ್‌ನಲ್ಲಿ ಹೊಸದಾಗಿ ಆಯ್ಕೆಯಾದ ಬಿಜೆಪಿಯ ಶಾಸಕ ರವೀಂದರ್ ಸಿಂಗ್ ನೇಗಿ ಅವರು ಮುಸ್ಲಿಂ ವ್ಯಕ್ತಿಯೊಬ್ಬರ ಆಸ್ತಿಯ ಮೇಲೆ ಬುಲ್ಡೋಜರ್ ಚಲಾಯಿಸುವುದಾಗಿ ಬೆದರಿಕೆ ಹಾಕಿದ್ದಾರೆ ಮತ್ತು ಈ ವೀಡಿಯೊವನ್ನು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಮುಸ್ಲಿಮರು ಮತ್ತು ಅವರ ವ್ಯವಹಾರಗಳನ್ನು ಗುರಿಯಾಗಿಸಿಕೊಳ್ಳುವುದರಲ್ಲಿ ಕುಖ್ಯಾತರಾಗಿರುವ ಕೌನ್ಸಿಲರ್ ನೇಗಿ, ದೆಹಲಿಯ ಪ್ರತಾಪ್‌ಗಂಜ್‌ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಗುರುವಾರದಂದು ಅವರು ಅಬ್ದುಲ್ ರಹೀಮ್ ಎಂಬ ವ್ಯಕ್ತಿಯ ಆಸ್ತಿಯ ಮೇಲೆ ಜೆಸಿಬಿ ಹರಿಸುವುದಾಗಿ ಬೆದರಿಕೆ ಹಾಕುತ್ತಿರುವ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಹರ್ಷ ಮಲ್ಹೋತ್ರಾ ಮತ್ತು ಬಿಜೆಪಿ ಮುಖ್ಯಸ್ಥ ಜೆ.ಪಿ. ನಡ್ಡಾ ಅವರಿಗೆ ಟ್ಯಾಗ್ ಮಾಡಿದ್ದಾರೆ.

ಪೊಲೀಸರು ಸೇರಿದಂತೆ ಜನಸಮೂಹದಿಂದ ಸುತ್ತುವರೆದಿರುವ ನೇಗಿ, “ನೀವು ಭೂಮಿಯನ್ನು ಖಾಲಿ ಮಾಡಬೇಕು ಇಲ್ಲದಿದ್ದರೆ ದೊಡ್ಡ ಕ್ರಮ ಕೈಗೊಳ್ಳಲಾಗುವುದು. ನಿಮ್ಮ ಜೀವನದುದ್ದಕ್ಕೂ ನೀವು ಒದ್ದಾಟ ನಡೆಸಬೇಕಾಗುತ್ತದೆ. ಮತ್ತು ಸ್ಥಳೀಯ ಜನರನ್ನು ವ್ಯಸನಕಾರಿಯಾಗಿಸುವ ಚಾಳಿ ನಿಲ್ಲಿಸಬೇಕು” ಎಂದಿದ್ದಾರೆ.

ಆ ಪ್ರದೇಶದಲ್ಲಿ ಮಾದಕ ವಸ್ತುಗಳ ಮಾರಾಟದ ಆರೋಪವನ್ನು ಮುಸ್ಲಿಂ ವ್ಯಕ್ತಿ ನಿರಾಕರಿಸುತ್ತಿರುವುದು ಈ ವೀಡಿಯೊದಲ್ಲಿ ಕಂಡುಬರುತ್ತದೆ. ಆದಾಗ್ಯೂ, ನೇಗಿ ಆ ವ್ಯಕ್ತಿಯನ್ನು ನಿರ್ಲಕ್ಷಿಸಿ ದ್ವೇಷವನ್ನು ಹೊರಹಾಕುತ್ತಲೇ ಇದ್ದರು ಮತ್ತು ಅವರ ಆಸ್ತಿಯನ್ನು ಬುಲ್ಡೋಜರ್ ಮೂಲಕ ನಾಶಪಡಿಸುವುದಾಗಿ ಬೆದರಿಕೆ ಹಾಕುತ್ತಲೇ ಇದ್ದರು.

ಆ ಭೂಮಿ ಸರ್ಕಾರಕ್ಕೆ ಸೇರಿದ್ದು ಎಂದು ನೇಗಿ ಆರೋಪಿಸಿದರು ಮತ್ತು ಅವರ ಆಸ್ತಿಗಳ ಮೇಲೆ ಜೆಸಿಬಿ ಚಲಾಯಿಸುವುದಾಗಿ ಬೆದರಿಕೆ ಹಾಕಿದರು. ಆ ಮುಸ್ಲಿಂ ವ್ಯಕ್ತಿಯ ಹೆಸರು ಕೇಳಿದ ಬಿಜೆಪಿ ನಾಯಕನು “ಅಬ್ದುಲ್ ಭಾಯ್, ನಾನು ಇಲ್ಲಿ ಜೆಸಿಬಿ ಓಡಿಸುತ್ತೇನೆ, ಇಲ್ಲಿರುವ ಎಲ್ಲವೂ ಒಂದು ನಿಮಿಷದಲ್ಲಿ ನಾಶವಾಗುತ್ತದೆ” ಎಂದು ನೇಗಿ ಬೆದರಿಕೆ ಹಾಕಿದರು.

ಹೊಸದಾಗಿ ಆಯ್ಕೆಯಾದ ಶಾಸಕರು ಆ ಭೂಮಿ ದೆಹಲಿ ಅಭಿವೃದ್ಧಿ ಪ್ರಾಧಿಕಾರಕ್ಕೆ (ಡಿಡಿಎ) ಸೇರಿದೆ ಎಂದು ಹೇಳಿಕೊಂಡಿದ್ದಾರೆ. ಶಾಸಕರಾಗಿ ಆಯ್ಕೆಯಾದ ಕೂಡಲೇ ಬಡವರನ್ನು ಗುರಿಯಾಗಿಸಿಕೊಂಡಿದ್ದಕ್ಕಾಗಿ ನೇಗಿ ಅವರ ಈ ಕ್ರಮವು ಭಾರೀ ಟೀಕೆಗೆ ಗುರಿಯಾಗಿದೆ.

ಬಿಜೆಪಿ ಶಾಸಕರು ತಮ್ಮನ್ನು ಕಾನೂನಿಗಿಂತ ಶ್ರೇಷ್ಠರೆಂದು ಪರಿಗಣಿಸುತ್ತಾರೆ. ಅವರು ಶಾಸಕರಾಗಿ ಒಂದು ವಾರವೂ ಆಗಿಲ್ಲ, ಇನ್ನೂ ದೆಹಲಿಯ ಮುಖ್ಯಮಂತ್ರಿಯ ಆಯ್ಕೆಯೂ ಆಗಿಲ್ಲ. ಆದರೆ ಬಿಜೆಪಿಯ ಗೂಂಡಾಗಿರಿ ಆರಂಭವಾಗಿದೆ. ಶಾಸಕರೇ ಈ ಕಾರ್ಮಿಕನ ಹೆಸರು ಅಬ್ದುಲ್ ಆಗಿದ್ದಕ್ಕಾಗಿ ಸಂತೋಷಪಡಬೇಡಿ. ಬಿಜೆಪಿ ಸರ್ಕಾರ ರಚನೆಯಾದರೆ, ಅವರು ಪ್ರತಿಯೊಬ್ಬ ಬಡ ಕಾರ್ಮಿಕರ ಗುಡಿಸಲಿನ ಮೇಲೆ ಬುಲ್ಡೋಜರ್ ಓಡಿಸುತ್ತಾರೆ” ಎಂದು ಸಂಸದ ಸಂಜಯ್ ಹೇಳಿದ್ದಾರೆ.

ಅದು ಹಾಗೆಯೇ ಆಗುತ್ತದೆ, ಅವರು ಅಮಿತ್, ಸುಮಿತ್, ಗುರುದೀಪ್ ಮತ್ತು ಅಬ್ದುಲ್ ಇನ್ನೂ ಯಾರೇ ಆಗಲಿ ಅವರನ್ನು ಬಿಡುವುದಿಲ್ಲ, ಅವರು ಬಡವರ ಮೇಲೆ ತಮ್ಮ ಗೂಂಡಾಗಿರಿಯನ್ನು ತೋರಿಸುತ್ತಾರೆ ಮತ್ತು ಪ್ರತಿಯೊಬ್ಬ ಬಡವರನ್ನು ಬುಲ್ಡೋಜರ್ ನಿಂದ ನಾಶಮಾಡುತ್ತಾರೆ!” ಎಂದು ಪತ್ರಕರ್ತ ಜಾಕಿರ್ ತಿಯಾಗಿ ಹೇಳಿದರು.

ಹೊಸದಾಗಿ ಆಯ್ಕೆಯಾದ ಶಾಸಕರೇ, ಭೂಮಿ ಸರ್ಕಾರಿ ಆಗಿದ್ದರೆ ಮೂಲಭೂತ ಅಂಶಗಳನ್ನು ಗ್ರಹಿಸಲು ಸ್ವಲ್ಪ ಸಮಯ ತೆಗೆದುಕೊಳ್ಳಿ – ಮಿಸ್ಟರ್. ಸರ್ಕಾರ ನಿಮ್ಮ ವೈಯಕ್ತಿಕ ಆಸ್ತಿಯಲ್ಲ; ಅದು ಜನರಿಂದ, ಜನರಿಗಾಗಿ, ಜನರಿಗೇ ಇರುವಂತಹದ್ದು. ಆದರೆ ಖಂಡಿತವಾಗಿಯೂ ನಿಮ್ಮಂತಹ ರಾಜಕಾರಣಿಗಳು ದುರ್ಬಲರ ಮುಂದೆ ತಮ್ಮ ಅಧಿಕಾರದ ದರ್ಪ ತೋರಿಸಬಾರದು. ನಿಮಗೆ ನಿಜವಾಗಿಯೂ ಧೈರ್ಯವಿದ್ದರೆ, ನಿಜವಾದ ಶಕ್ತಿ ಹೇಗಿರುತ್ತದೆ ಎಂಬುದನ್ನು ಜನರು ನಿಮಗೆ ತೋರಿಸಲು ನಿರ್ಧರಿಸಿದಾಗ ಅವರನ್ನು ಎದುರಿಸಲು ಪ್ರಯತ್ನಿಸಬೇಕು ಎಂದು NSUI ನಾಯಕ ಅನೀಶ್ ಕನ್ಸಾಲ್ ಹೇಳಿದ್ದಾರೆ.

ಇಂತಹ ಕಿಡಿಗೇಡಿಗಳು ನಾಯಕರು ಮತ್ತು ಶಾಸಕರಾದಾಗ ಅವರು ಬಡವರ ಜೀವನವನ್ನು ಕಷ್ಟಕರವಾಗಿಸುತ್ತಾರೆ. ನಾಯಕ ಇಸ್ಲಾಮೋಫೋಬಿಕ್ ಆಗಿದ್ದರೆ ಮತ್ತು ಬಡ ವ್ಯಕ್ತಿ ಮುಸ್ಲಿಂ ಆಗಿದ್ದರೆ ಅದು ಕೇಕ್ ಮೇಲೆ ಐಸಿಂಗ್ ಆಗುತ್ತದೆ. ಗೂಂಡಾಗಳು ರಾಜಕೀಯ ಮಾಡಿದಾಗ ದೇಶದಲ್ಲಿ ದ್ವೇಷ ಹೆಚ್ಚಾಗುತ್ತದೆ ಎಂದು ಸಾಮಾಜಿಕ ಮಾಧ್ಯಮ ಬಳಕೆದಾರ ಶಮಿ ತಿಳಿಸಿದ್ದಾರೆ.

ಏತನ್ಮಧ್ಯೆ, ಮನೆಯ ಮುಂದೆ ಕುಳಿತಿದ್ದಕ್ಕಾಗಿ ನೇಗಿ ಹದಿಹರೆಯದವನನ್ನು ಜೈಲಿಗೆ ಹಾಕುವುದಾಗಿ ಬೆದರಿಕೆ ಹಾಕುತ್ತಿರುವ ಮತ್ತೊಂದು ವೀಡಿಯೊ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಬಿಜೆಪಿ ನಾಯಕರು ಇದ್ದಕ್ಕಿದ್ದಂತೆ ಒಬ್ಬ ಹದಿಹರೆಯದವರನ್ನು ಹಿಡಿದು ನಿಮ್ಮ ಮನೆ ಎಲ್ಲಿದೆ ಎಂದು ಕೇಳಿದರು. ಆ ಹದಿಹರೆಯದವನು ತನ್ನ ಮನೆ ಮುಂದಿನ ಬೀದಿಯಲ್ಲಿದೆ ಎಂದು ಹೇಳಿದಾಗ, ನೇಗಿ ಅವನು ಇಲ್ಲಿ ಏಕೆ ಇದ್ದಾನೆ ಎಂದು ಕೇಳಿದನು? ನಂತರ, ಬಿಜೆಪಿ ನಾಯಕರು ಅವನನ್ನು ಕಂಬಿಗಳ ಹಿಂದೆ ಹಾಕುವುದಾಗಿ ಬೆದರಿಕೆ ಹಾಕುತ್ತಾರೆ.

ಈ ಹಿಂದೆ ನೇಗಿಯು ಮುಸ್ಲಿಂ ನಿವಾಸಿಗಳು, ಮಾರಾಟಗಾರರು ಮತ್ತು ಅಂಗಡಿಯವರಿಗೆ ಕಿರುಕುಳ ನೀಡುತ್ತಿರುವ ಇಂತಹ ಅನೇಕ ವೀಡಿಯೊಗಳು ವೈರಲ್ ಆಗಿವೆ. ಆ ವೀಡಿಯೊಗಳಲ್ಲಿ ಅವನು ತಮ್ಮ ಅಂಗಡಿಗಳ ಹೆಸರನ್ನು ಬದಲಾಯಿಸಲು ಅಥವಾ ಅಂಗಡಿಯನ್ನು ನಿರ್ದಿಷ್ಟ ಸ್ಥಳದಿಂದ ತೆಗೆದುಹಾಕುವಂತೆ ಒತ್ತಾಯಿಸುವುದನ್ನು ಕಾಣಬಹುದು.

3 ಒತ್ತೆಯಾಳುಗಳನ್ನು ರೆಡ್ ಕ್ರಾಸ್‌ಗೆ ಹಸ್ತಾಂತರಿಸಿದ ಹಮಾಸ್: ಇಸ್ರೇಲ್ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...