Homeಮುಖಪುಟದೆಹಲಿಯ ನೂತನ ಬಿಜೆಪಿ ಶಾಸಕನಿಂದ ಮುಸ್ಲಿಂ ವ್ಯಕ್ತಿಗೆ ಬುಲ್ಡೋಜರ್ ಬೆದರಿಕೆ: ವೀಡಿಯೋ ವೈರಲ್

ದೆಹಲಿಯ ನೂತನ ಬಿಜೆಪಿ ಶಾಸಕನಿಂದ ಮುಸ್ಲಿಂ ವ್ಯಕ್ತಿಗೆ ಬುಲ್ಡೋಜರ್ ಬೆದರಿಕೆ: ವೀಡಿಯೋ ವೈರಲ್

- Advertisement -
- Advertisement -

ನವದೆಹಲಿ: ದೆಹಲಿಯ ಪ್ರತಾಪ್‌ಗಂಜ್‌ನಲ್ಲಿ ಹೊಸದಾಗಿ ಆಯ್ಕೆಯಾದ ಬಿಜೆಪಿಯ ಶಾಸಕ ರವೀಂದರ್ ಸಿಂಗ್ ನೇಗಿ ಅವರು ಮುಸ್ಲಿಂ ವ್ಯಕ್ತಿಯೊಬ್ಬರ ಆಸ್ತಿಯ ಮೇಲೆ ಬುಲ್ಡೋಜರ್ ಚಲಾಯಿಸುವುದಾಗಿ ಬೆದರಿಕೆ ಹಾಕಿದ್ದಾರೆ ಮತ್ತು ಈ ವೀಡಿಯೊವನ್ನು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಮುಸ್ಲಿಮರು ಮತ್ತು ಅವರ ವ್ಯವಹಾರಗಳನ್ನು ಗುರಿಯಾಗಿಸಿಕೊಳ್ಳುವುದರಲ್ಲಿ ಕುಖ್ಯಾತರಾಗಿರುವ ಕೌನ್ಸಿಲರ್ ನೇಗಿ, ದೆಹಲಿಯ ಪ್ರತಾಪ್‌ಗಂಜ್‌ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಗುರುವಾರದಂದು ಅವರು ಅಬ್ದುಲ್ ರಹೀಮ್ ಎಂಬ ವ್ಯಕ್ತಿಯ ಆಸ್ತಿಯ ಮೇಲೆ ಜೆಸಿಬಿ ಹರಿಸುವುದಾಗಿ ಬೆದರಿಕೆ ಹಾಕುತ್ತಿರುವ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಹರ್ಷ ಮಲ್ಹೋತ್ರಾ ಮತ್ತು ಬಿಜೆಪಿ ಮುಖ್ಯಸ್ಥ ಜೆ.ಪಿ. ನಡ್ಡಾ ಅವರಿಗೆ ಟ್ಯಾಗ್ ಮಾಡಿದ್ದಾರೆ.

ಪೊಲೀಸರು ಸೇರಿದಂತೆ ಜನಸಮೂಹದಿಂದ ಸುತ್ತುವರೆದಿರುವ ನೇಗಿ, “ನೀವು ಭೂಮಿಯನ್ನು ಖಾಲಿ ಮಾಡಬೇಕು ಇಲ್ಲದಿದ್ದರೆ ದೊಡ್ಡ ಕ್ರಮ ಕೈಗೊಳ್ಳಲಾಗುವುದು. ನಿಮ್ಮ ಜೀವನದುದ್ದಕ್ಕೂ ನೀವು ಒದ್ದಾಟ ನಡೆಸಬೇಕಾಗುತ್ತದೆ. ಮತ್ತು ಸ್ಥಳೀಯ ಜನರನ್ನು ವ್ಯಸನಕಾರಿಯಾಗಿಸುವ ಚಾಳಿ ನಿಲ್ಲಿಸಬೇಕು” ಎಂದಿದ್ದಾರೆ.

ಆ ಪ್ರದೇಶದಲ್ಲಿ ಮಾದಕ ವಸ್ತುಗಳ ಮಾರಾಟದ ಆರೋಪವನ್ನು ಮುಸ್ಲಿಂ ವ್ಯಕ್ತಿ ನಿರಾಕರಿಸುತ್ತಿರುವುದು ಈ ವೀಡಿಯೊದಲ್ಲಿ ಕಂಡುಬರುತ್ತದೆ. ಆದಾಗ್ಯೂ, ನೇಗಿ ಆ ವ್ಯಕ್ತಿಯನ್ನು ನಿರ್ಲಕ್ಷಿಸಿ ದ್ವೇಷವನ್ನು ಹೊರಹಾಕುತ್ತಲೇ ಇದ್ದರು ಮತ್ತು ಅವರ ಆಸ್ತಿಯನ್ನು ಬುಲ್ಡೋಜರ್ ಮೂಲಕ ನಾಶಪಡಿಸುವುದಾಗಿ ಬೆದರಿಕೆ ಹಾಕುತ್ತಲೇ ಇದ್ದರು.

ಆ ಭೂಮಿ ಸರ್ಕಾರಕ್ಕೆ ಸೇರಿದ್ದು ಎಂದು ನೇಗಿ ಆರೋಪಿಸಿದರು ಮತ್ತು ಅವರ ಆಸ್ತಿಗಳ ಮೇಲೆ ಜೆಸಿಬಿ ಚಲಾಯಿಸುವುದಾಗಿ ಬೆದರಿಕೆ ಹಾಕಿದರು. ಆ ಮುಸ್ಲಿಂ ವ್ಯಕ್ತಿಯ ಹೆಸರು ಕೇಳಿದ ಬಿಜೆಪಿ ನಾಯಕನು “ಅಬ್ದುಲ್ ಭಾಯ್, ನಾನು ಇಲ್ಲಿ ಜೆಸಿಬಿ ಓಡಿಸುತ್ತೇನೆ, ಇಲ್ಲಿರುವ ಎಲ್ಲವೂ ಒಂದು ನಿಮಿಷದಲ್ಲಿ ನಾಶವಾಗುತ್ತದೆ” ಎಂದು ನೇಗಿ ಬೆದರಿಕೆ ಹಾಕಿದರು.

ಹೊಸದಾಗಿ ಆಯ್ಕೆಯಾದ ಶಾಸಕರು ಆ ಭೂಮಿ ದೆಹಲಿ ಅಭಿವೃದ್ಧಿ ಪ್ರಾಧಿಕಾರಕ್ಕೆ (ಡಿಡಿಎ) ಸೇರಿದೆ ಎಂದು ಹೇಳಿಕೊಂಡಿದ್ದಾರೆ. ಶಾಸಕರಾಗಿ ಆಯ್ಕೆಯಾದ ಕೂಡಲೇ ಬಡವರನ್ನು ಗುರಿಯಾಗಿಸಿಕೊಂಡಿದ್ದಕ್ಕಾಗಿ ನೇಗಿ ಅವರ ಈ ಕ್ರಮವು ಭಾರೀ ಟೀಕೆಗೆ ಗುರಿಯಾಗಿದೆ.

ಬಿಜೆಪಿ ಶಾಸಕರು ತಮ್ಮನ್ನು ಕಾನೂನಿಗಿಂತ ಶ್ರೇಷ್ಠರೆಂದು ಪರಿಗಣಿಸುತ್ತಾರೆ. ಅವರು ಶಾಸಕರಾಗಿ ಒಂದು ವಾರವೂ ಆಗಿಲ್ಲ, ಇನ್ನೂ ದೆಹಲಿಯ ಮುಖ್ಯಮಂತ್ರಿಯ ಆಯ್ಕೆಯೂ ಆಗಿಲ್ಲ. ಆದರೆ ಬಿಜೆಪಿಯ ಗೂಂಡಾಗಿರಿ ಆರಂಭವಾಗಿದೆ. ಶಾಸಕರೇ ಈ ಕಾರ್ಮಿಕನ ಹೆಸರು ಅಬ್ದುಲ್ ಆಗಿದ್ದಕ್ಕಾಗಿ ಸಂತೋಷಪಡಬೇಡಿ. ಬಿಜೆಪಿ ಸರ್ಕಾರ ರಚನೆಯಾದರೆ, ಅವರು ಪ್ರತಿಯೊಬ್ಬ ಬಡ ಕಾರ್ಮಿಕರ ಗುಡಿಸಲಿನ ಮೇಲೆ ಬುಲ್ಡೋಜರ್ ಓಡಿಸುತ್ತಾರೆ” ಎಂದು ಸಂಸದ ಸಂಜಯ್ ಹೇಳಿದ್ದಾರೆ.

ಅದು ಹಾಗೆಯೇ ಆಗುತ್ತದೆ, ಅವರು ಅಮಿತ್, ಸುಮಿತ್, ಗುರುದೀಪ್ ಮತ್ತು ಅಬ್ದುಲ್ ಇನ್ನೂ ಯಾರೇ ಆಗಲಿ ಅವರನ್ನು ಬಿಡುವುದಿಲ್ಲ, ಅವರು ಬಡವರ ಮೇಲೆ ತಮ್ಮ ಗೂಂಡಾಗಿರಿಯನ್ನು ತೋರಿಸುತ್ತಾರೆ ಮತ್ತು ಪ್ರತಿಯೊಬ್ಬ ಬಡವರನ್ನು ಬುಲ್ಡೋಜರ್ ನಿಂದ ನಾಶಮಾಡುತ್ತಾರೆ!” ಎಂದು ಪತ್ರಕರ್ತ ಜಾಕಿರ್ ತಿಯಾಗಿ ಹೇಳಿದರು.

ಹೊಸದಾಗಿ ಆಯ್ಕೆಯಾದ ಶಾಸಕರೇ, ಭೂಮಿ ಸರ್ಕಾರಿ ಆಗಿದ್ದರೆ ಮೂಲಭೂತ ಅಂಶಗಳನ್ನು ಗ್ರಹಿಸಲು ಸ್ವಲ್ಪ ಸಮಯ ತೆಗೆದುಕೊಳ್ಳಿ – ಮಿಸ್ಟರ್. ಸರ್ಕಾರ ನಿಮ್ಮ ವೈಯಕ್ತಿಕ ಆಸ್ತಿಯಲ್ಲ; ಅದು ಜನರಿಂದ, ಜನರಿಗಾಗಿ, ಜನರಿಗೇ ಇರುವಂತಹದ್ದು. ಆದರೆ ಖಂಡಿತವಾಗಿಯೂ ನಿಮ್ಮಂತಹ ರಾಜಕಾರಣಿಗಳು ದುರ್ಬಲರ ಮುಂದೆ ತಮ್ಮ ಅಧಿಕಾರದ ದರ್ಪ ತೋರಿಸಬಾರದು. ನಿಮಗೆ ನಿಜವಾಗಿಯೂ ಧೈರ್ಯವಿದ್ದರೆ, ನಿಜವಾದ ಶಕ್ತಿ ಹೇಗಿರುತ್ತದೆ ಎಂಬುದನ್ನು ಜನರು ನಿಮಗೆ ತೋರಿಸಲು ನಿರ್ಧರಿಸಿದಾಗ ಅವರನ್ನು ಎದುರಿಸಲು ಪ್ರಯತ್ನಿಸಬೇಕು ಎಂದು NSUI ನಾಯಕ ಅನೀಶ್ ಕನ್ಸಾಲ್ ಹೇಳಿದ್ದಾರೆ.

ಇಂತಹ ಕಿಡಿಗೇಡಿಗಳು ನಾಯಕರು ಮತ್ತು ಶಾಸಕರಾದಾಗ ಅವರು ಬಡವರ ಜೀವನವನ್ನು ಕಷ್ಟಕರವಾಗಿಸುತ್ತಾರೆ. ನಾಯಕ ಇಸ್ಲಾಮೋಫೋಬಿಕ್ ಆಗಿದ್ದರೆ ಮತ್ತು ಬಡ ವ್ಯಕ್ತಿ ಮುಸ್ಲಿಂ ಆಗಿದ್ದರೆ ಅದು ಕೇಕ್ ಮೇಲೆ ಐಸಿಂಗ್ ಆಗುತ್ತದೆ. ಗೂಂಡಾಗಳು ರಾಜಕೀಯ ಮಾಡಿದಾಗ ದೇಶದಲ್ಲಿ ದ್ವೇಷ ಹೆಚ್ಚಾಗುತ್ತದೆ ಎಂದು ಸಾಮಾಜಿಕ ಮಾಧ್ಯಮ ಬಳಕೆದಾರ ಶಮಿ ತಿಳಿಸಿದ್ದಾರೆ.

ಏತನ್ಮಧ್ಯೆ, ಮನೆಯ ಮುಂದೆ ಕುಳಿತಿದ್ದಕ್ಕಾಗಿ ನೇಗಿ ಹದಿಹರೆಯದವನನ್ನು ಜೈಲಿಗೆ ಹಾಕುವುದಾಗಿ ಬೆದರಿಕೆ ಹಾಕುತ್ತಿರುವ ಮತ್ತೊಂದು ವೀಡಿಯೊ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಬಿಜೆಪಿ ನಾಯಕರು ಇದ್ದಕ್ಕಿದ್ದಂತೆ ಒಬ್ಬ ಹದಿಹರೆಯದವರನ್ನು ಹಿಡಿದು ನಿಮ್ಮ ಮನೆ ಎಲ್ಲಿದೆ ಎಂದು ಕೇಳಿದರು. ಆ ಹದಿಹರೆಯದವನು ತನ್ನ ಮನೆ ಮುಂದಿನ ಬೀದಿಯಲ್ಲಿದೆ ಎಂದು ಹೇಳಿದಾಗ, ನೇಗಿ ಅವನು ಇಲ್ಲಿ ಏಕೆ ಇದ್ದಾನೆ ಎಂದು ಕೇಳಿದನು? ನಂತರ, ಬಿಜೆಪಿ ನಾಯಕರು ಅವನನ್ನು ಕಂಬಿಗಳ ಹಿಂದೆ ಹಾಕುವುದಾಗಿ ಬೆದರಿಕೆ ಹಾಕುತ್ತಾರೆ.

ಈ ಹಿಂದೆ ನೇಗಿಯು ಮುಸ್ಲಿಂ ನಿವಾಸಿಗಳು, ಮಾರಾಟಗಾರರು ಮತ್ತು ಅಂಗಡಿಯವರಿಗೆ ಕಿರುಕುಳ ನೀಡುತ್ತಿರುವ ಇಂತಹ ಅನೇಕ ವೀಡಿಯೊಗಳು ವೈರಲ್ ಆಗಿವೆ. ಆ ವೀಡಿಯೊಗಳಲ್ಲಿ ಅವನು ತಮ್ಮ ಅಂಗಡಿಗಳ ಹೆಸರನ್ನು ಬದಲಾಯಿಸಲು ಅಥವಾ ಅಂಗಡಿಯನ್ನು ನಿರ್ದಿಷ್ಟ ಸ್ಥಳದಿಂದ ತೆಗೆದುಹಾಕುವಂತೆ ಒತ್ತಾಯಿಸುವುದನ್ನು ಕಾಣಬಹುದು.

3 ಒತ್ತೆಯಾಳುಗಳನ್ನು ರೆಡ್ ಕ್ರಾಸ್‌ಗೆ ಹಸ್ತಾಂತರಿಸಿದ ಹಮಾಸ್: ಇಸ್ರೇಲ್ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...