Homeಮುಖಪುಟದೆಹಲಿಯ ನೂತನ ಬಿಜೆಪಿ ಶಾಸಕನಿಂದ ಮುಸ್ಲಿಂ ವ್ಯಕ್ತಿಗೆ ಬುಲ್ಡೋಜರ್ ಬೆದರಿಕೆ: ವೀಡಿಯೋ ವೈರಲ್

ದೆಹಲಿಯ ನೂತನ ಬಿಜೆಪಿ ಶಾಸಕನಿಂದ ಮುಸ್ಲಿಂ ವ್ಯಕ್ತಿಗೆ ಬುಲ್ಡೋಜರ್ ಬೆದರಿಕೆ: ವೀಡಿಯೋ ವೈರಲ್

- Advertisement -
- Advertisement -

ನವದೆಹಲಿ: ದೆಹಲಿಯ ಪ್ರತಾಪ್‌ಗಂಜ್‌ನಲ್ಲಿ ಹೊಸದಾಗಿ ಆಯ್ಕೆಯಾದ ಬಿಜೆಪಿಯ ಶಾಸಕ ರವೀಂದರ್ ಸಿಂಗ್ ನೇಗಿ ಅವರು ಮುಸ್ಲಿಂ ವ್ಯಕ್ತಿಯೊಬ್ಬರ ಆಸ್ತಿಯ ಮೇಲೆ ಬುಲ್ಡೋಜರ್ ಚಲಾಯಿಸುವುದಾಗಿ ಬೆದರಿಕೆ ಹಾಕಿದ್ದಾರೆ ಮತ್ತು ಈ ವೀಡಿಯೊವನ್ನು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಮುಸ್ಲಿಮರು ಮತ್ತು ಅವರ ವ್ಯವಹಾರಗಳನ್ನು ಗುರಿಯಾಗಿಸಿಕೊಳ್ಳುವುದರಲ್ಲಿ ಕುಖ್ಯಾತರಾಗಿರುವ ಕೌನ್ಸಿಲರ್ ನೇಗಿ, ದೆಹಲಿಯ ಪ್ರತಾಪ್‌ಗಂಜ್‌ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಗುರುವಾರದಂದು ಅವರು ಅಬ್ದುಲ್ ರಹೀಮ್ ಎಂಬ ವ್ಯಕ್ತಿಯ ಆಸ್ತಿಯ ಮೇಲೆ ಜೆಸಿಬಿ ಹರಿಸುವುದಾಗಿ ಬೆದರಿಕೆ ಹಾಕುತ್ತಿರುವ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಹರ್ಷ ಮಲ್ಹೋತ್ರಾ ಮತ್ತು ಬಿಜೆಪಿ ಮುಖ್ಯಸ್ಥ ಜೆ.ಪಿ. ನಡ್ಡಾ ಅವರಿಗೆ ಟ್ಯಾಗ್ ಮಾಡಿದ್ದಾರೆ.

ಪೊಲೀಸರು ಸೇರಿದಂತೆ ಜನಸಮೂಹದಿಂದ ಸುತ್ತುವರೆದಿರುವ ನೇಗಿ, “ನೀವು ಭೂಮಿಯನ್ನು ಖಾಲಿ ಮಾಡಬೇಕು ಇಲ್ಲದಿದ್ದರೆ ದೊಡ್ಡ ಕ್ರಮ ಕೈಗೊಳ್ಳಲಾಗುವುದು. ನಿಮ್ಮ ಜೀವನದುದ್ದಕ್ಕೂ ನೀವು ಒದ್ದಾಟ ನಡೆಸಬೇಕಾಗುತ್ತದೆ. ಮತ್ತು ಸ್ಥಳೀಯ ಜನರನ್ನು ವ್ಯಸನಕಾರಿಯಾಗಿಸುವ ಚಾಳಿ ನಿಲ್ಲಿಸಬೇಕು” ಎಂದಿದ್ದಾರೆ.

ಆ ಪ್ರದೇಶದಲ್ಲಿ ಮಾದಕ ವಸ್ತುಗಳ ಮಾರಾಟದ ಆರೋಪವನ್ನು ಮುಸ್ಲಿಂ ವ್ಯಕ್ತಿ ನಿರಾಕರಿಸುತ್ತಿರುವುದು ಈ ವೀಡಿಯೊದಲ್ಲಿ ಕಂಡುಬರುತ್ತದೆ. ಆದಾಗ್ಯೂ, ನೇಗಿ ಆ ವ್ಯಕ್ತಿಯನ್ನು ನಿರ್ಲಕ್ಷಿಸಿ ದ್ವೇಷವನ್ನು ಹೊರಹಾಕುತ್ತಲೇ ಇದ್ದರು ಮತ್ತು ಅವರ ಆಸ್ತಿಯನ್ನು ಬುಲ್ಡೋಜರ್ ಮೂಲಕ ನಾಶಪಡಿಸುವುದಾಗಿ ಬೆದರಿಕೆ ಹಾಕುತ್ತಲೇ ಇದ್ದರು.

ಆ ಭೂಮಿ ಸರ್ಕಾರಕ್ಕೆ ಸೇರಿದ್ದು ಎಂದು ನೇಗಿ ಆರೋಪಿಸಿದರು ಮತ್ತು ಅವರ ಆಸ್ತಿಗಳ ಮೇಲೆ ಜೆಸಿಬಿ ಚಲಾಯಿಸುವುದಾಗಿ ಬೆದರಿಕೆ ಹಾಕಿದರು. ಆ ಮುಸ್ಲಿಂ ವ್ಯಕ್ತಿಯ ಹೆಸರು ಕೇಳಿದ ಬಿಜೆಪಿ ನಾಯಕನು “ಅಬ್ದುಲ್ ಭಾಯ್, ನಾನು ಇಲ್ಲಿ ಜೆಸಿಬಿ ಓಡಿಸುತ್ತೇನೆ, ಇಲ್ಲಿರುವ ಎಲ್ಲವೂ ಒಂದು ನಿಮಿಷದಲ್ಲಿ ನಾಶವಾಗುತ್ತದೆ” ಎಂದು ನೇಗಿ ಬೆದರಿಕೆ ಹಾಕಿದರು.

ಹೊಸದಾಗಿ ಆಯ್ಕೆಯಾದ ಶಾಸಕರು ಆ ಭೂಮಿ ದೆಹಲಿ ಅಭಿವೃದ್ಧಿ ಪ್ರಾಧಿಕಾರಕ್ಕೆ (ಡಿಡಿಎ) ಸೇರಿದೆ ಎಂದು ಹೇಳಿಕೊಂಡಿದ್ದಾರೆ. ಶಾಸಕರಾಗಿ ಆಯ್ಕೆಯಾದ ಕೂಡಲೇ ಬಡವರನ್ನು ಗುರಿಯಾಗಿಸಿಕೊಂಡಿದ್ದಕ್ಕಾಗಿ ನೇಗಿ ಅವರ ಈ ಕ್ರಮವು ಭಾರೀ ಟೀಕೆಗೆ ಗುರಿಯಾಗಿದೆ.

ಬಿಜೆಪಿ ಶಾಸಕರು ತಮ್ಮನ್ನು ಕಾನೂನಿಗಿಂತ ಶ್ರೇಷ್ಠರೆಂದು ಪರಿಗಣಿಸುತ್ತಾರೆ. ಅವರು ಶಾಸಕರಾಗಿ ಒಂದು ವಾರವೂ ಆಗಿಲ್ಲ, ಇನ್ನೂ ದೆಹಲಿಯ ಮುಖ್ಯಮಂತ್ರಿಯ ಆಯ್ಕೆಯೂ ಆಗಿಲ್ಲ. ಆದರೆ ಬಿಜೆಪಿಯ ಗೂಂಡಾಗಿರಿ ಆರಂಭವಾಗಿದೆ. ಶಾಸಕರೇ ಈ ಕಾರ್ಮಿಕನ ಹೆಸರು ಅಬ್ದುಲ್ ಆಗಿದ್ದಕ್ಕಾಗಿ ಸಂತೋಷಪಡಬೇಡಿ. ಬಿಜೆಪಿ ಸರ್ಕಾರ ರಚನೆಯಾದರೆ, ಅವರು ಪ್ರತಿಯೊಬ್ಬ ಬಡ ಕಾರ್ಮಿಕರ ಗುಡಿಸಲಿನ ಮೇಲೆ ಬುಲ್ಡೋಜರ್ ಓಡಿಸುತ್ತಾರೆ” ಎಂದು ಸಂಸದ ಸಂಜಯ್ ಹೇಳಿದ್ದಾರೆ.

ಅದು ಹಾಗೆಯೇ ಆಗುತ್ತದೆ, ಅವರು ಅಮಿತ್, ಸುಮಿತ್, ಗುರುದೀಪ್ ಮತ್ತು ಅಬ್ದುಲ್ ಇನ್ನೂ ಯಾರೇ ಆಗಲಿ ಅವರನ್ನು ಬಿಡುವುದಿಲ್ಲ, ಅವರು ಬಡವರ ಮೇಲೆ ತಮ್ಮ ಗೂಂಡಾಗಿರಿಯನ್ನು ತೋರಿಸುತ್ತಾರೆ ಮತ್ತು ಪ್ರತಿಯೊಬ್ಬ ಬಡವರನ್ನು ಬುಲ್ಡೋಜರ್ ನಿಂದ ನಾಶಮಾಡುತ್ತಾರೆ!” ಎಂದು ಪತ್ರಕರ್ತ ಜಾಕಿರ್ ತಿಯಾಗಿ ಹೇಳಿದರು.

ಹೊಸದಾಗಿ ಆಯ್ಕೆಯಾದ ಶಾಸಕರೇ, ಭೂಮಿ ಸರ್ಕಾರಿ ಆಗಿದ್ದರೆ ಮೂಲಭೂತ ಅಂಶಗಳನ್ನು ಗ್ರಹಿಸಲು ಸ್ವಲ್ಪ ಸಮಯ ತೆಗೆದುಕೊಳ್ಳಿ – ಮಿಸ್ಟರ್. ಸರ್ಕಾರ ನಿಮ್ಮ ವೈಯಕ್ತಿಕ ಆಸ್ತಿಯಲ್ಲ; ಅದು ಜನರಿಂದ, ಜನರಿಗಾಗಿ, ಜನರಿಗೇ ಇರುವಂತಹದ್ದು. ಆದರೆ ಖಂಡಿತವಾಗಿಯೂ ನಿಮ್ಮಂತಹ ರಾಜಕಾರಣಿಗಳು ದುರ್ಬಲರ ಮುಂದೆ ತಮ್ಮ ಅಧಿಕಾರದ ದರ್ಪ ತೋರಿಸಬಾರದು. ನಿಮಗೆ ನಿಜವಾಗಿಯೂ ಧೈರ್ಯವಿದ್ದರೆ, ನಿಜವಾದ ಶಕ್ತಿ ಹೇಗಿರುತ್ತದೆ ಎಂಬುದನ್ನು ಜನರು ನಿಮಗೆ ತೋರಿಸಲು ನಿರ್ಧರಿಸಿದಾಗ ಅವರನ್ನು ಎದುರಿಸಲು ಪ್ರಯತ್ನಿಸಬೇಕು ಎಂದು NSUI ನಾಯಕ ಅನೀಶ್ ಕನ್ಸಾಲ್ ಹೇಳಿದ್ದಾರೆ.

ಇಂತಹ ಕಿಡಿಗೇಡಿಗಳು ನಾಯಕರು ಮತ್ತು ಶಾಸಕರಾದಾಗ ಅವರು ಬಡವರ ಜೀವನವನ್ನು ಕಷ್ಟಕರವಾಗಿಸುತ್ತಾರೆ. ನಾಯಕ ಇಸ್ಲಾಮೋಫೋಬಿಕ್ ಆಗಿದ್ದರೆ ಮತ್ತು ಬಡ ವ್ಯಕ್ತಿ ಮುಸ್ಲಿಂ ಆಗಿದ್ದರೆ ಅದು ಕೇಕ್ ಮೇಲೆ ಐಸಿಂಗ್ ಆಗುತ್ತದೆ. ಗೂಂಡಾಗಳು ರಾಜಕೀಯ ಮಾಡಿದಾಗ ದೇಶದಲ್ಲಿ ದ್ವೇಷ ಹೆಚ್ಚಾಗುತ್ತದೆ ಎಂದು ಸಾಮಾಜಿಕ ಮಾಧ್ಯಮ ಬಳಕೆದಾರ ಶಮಿ ತಿಳಿಸಿದ್ದಾರೆ.

ಏತನ್ಮಧ್ಯೆ, ಮನೆಯ ಮುಂದೆ ಕುಳಿತಿದ್ದಕ್ಕಾಗಿ ನೇಗಿ ಹದಿಹರೆಯದವನನ್ನು ಜೈಲಿಗೆ ಹಾಕುವುದಾಗಿ ಬೆದರಿಕೆ ಹಾಕುತ್ತಿರುವ ಮತ್ತೊಂದು ವೀಡಿಯೊ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಬಿಜೆಪಿ ನಾಯಕರು ಇದ್ದಕ್ಕಿದ್ದಂತೆ ಒಬ್ಬ ಹದಿಹರೆಯದವರನ್ನು ಹಿಡಿದು ನಿಮ್ಮ ಮನೆ ಎಲ್ಲಿದೆ ಎಂದು ಕೇಳಿದರು. ಆ ಹದಿಹರೆಯದವನು ತನ್ನ ಮನೆ ಮುಂದಿನ ಬೀದಿಯಲ್ಲಿದೆ ಎಂದು ಹೇಳಿದಾಗ, ನೇಗಿ ಅವನು ಇಲ್ಲಿ ಏಕೆ ಇದ್ದಾನೆ ಎಂದು ಕೇಳಿದನು? ನಂತರ, ಬಿಜೆಪಿ ನಾಯಕರು ಅವನನ್ನು ಕಂಬಿಗಳ ಹಿಂದೆ ಹಾಕುವುದಾಗಿ ಬೆದರಿಕೆ ಹಾಕುತ್ತಾರೆ.

ಈ ಹಿಂದೆ ನೇಗಿಯು ಮುಸ್ಲಿಂ ನಿವಾಸಿಗಳು, ಮಾರಾಟಗಾರರು ಮತ್ತು ಅಂಗಡಿಯವರಿಗೆ ಕಿರುಕುಳ ನೀಡುತ್ತಿರುವ ಇಂತಹ ಅನೇಕ ವೀಡಿಯೊಗಳು ವೈರಲ್ ಆಗಿವೆ. ಆ ವೀಡಿಯೊಗಳಲ್ಲಿ ಅವನು ತಮ್ಮ ಅಂಗಡಿಗಳ ಹೆಸರನ್ನು ಬದಲಾಯಿಸಲು ಅಥವಾ ಅಂಗಡಿಯನ್ನು ನಿರ್ದಿಷ್ಟ ಸ್ಥಳದಿಂದ ತೆಗೆದುಹಾಕುವಂತೆ ಒತ್ತಾಯಿಸುವುದನ್ನು ಕಾಣಬಹುದು.

3 ಒತ್ತೆಯಾಳುಗಳನ್ನು ರೆಡ್ ಕ್ರಾಸ್‌ಗೆ ಹಸ್ತಾಂತರಿಸಿದ ಹಮಾಸ್: ಇಸ್ರೇಲ್ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...