Homeಮುಖಪುಟನವದೆಹಲಿ| ಕೆಂಪು ಕೋಟೆ ಬಳಿ ಕಾರು ಸ್ಫೋಟ; 8 ಸಾವು, ಹಲವರಿಗೆ ಗಾಯ

ನವದೆಹಲಿ| ಕೆಂಪು ಕೋಟೆ ಬಳಿ ಕಾರು ಸ್ಫೋಟ; 8 ಸಾವು, ಹಲವರಿಗೆ ಗಾಯ

- Advertisement -
- Advertisement -

ಸೋಮವಾರ ಸಂಜೆ ದೆಹಲಿಯ ಕೆಂಪು ಕೋಟೆ (ಲಾಲ್ ಕಿಲಾ) ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಬಳಿ ಕಾರಿನಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದು, 24 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ದೆಹಲಿ ಅಗ್ನಿಶಾಮಕ ಇಲಾಖೆಯ ಪ್ರಕಾರ, ಸಂಜೆ 6:55 ರ ಸುಮಾರಿಗೆ ಸ್ಫೋಟದ ಬಗ್ಗೆ ಕರೆ ಬಂದಿತು. ನಂತರ ಏಳು ಅಗ್ನಿಶಾಮಕ ವಾಹನಗಳು ಮತ್ತು 15 ಸಿಎಟಿ ಆಂಬ್ಯುಲೆನ್ಸ್‌ಗಳನ್ನು ಸ್ಥಳಕ್ಕೆ ರವಾನಿಸಲಾಯಿತು. ಸ್ಫೋಟದಿಂದಾಗಿ ಹತ್ತಿರದ ಮೂರರಿಂದ ನಾಲ್ಕು ವಾಹನಗಳು ಬೆಂಕಿಗೆ ಆಹುತಿಯಾದವು, ಅವೆಲ್ಲವನ್ನೂ ನಂತರ ನಂದಿಸಲಾಯಿತು.

ಹಲವಾರು ಶವಗಳನ್ನು ಎಲ್‌ಎನ್‌ಜೆಪಿ ಆಸ್ಪತ್ರೆಗೆ ತರಲಾಗಿದ್ದು, ಗಾಯಗೊಂಡವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಸ್ಫೋಟವು ಅತ್ಯಂತ ಶಕ್ತಿಶಾಲಿಯಾಗಿದ್ದು, ಹತ್ತಿರದ ಬೀದಿ ದೀಪಗಳನ್ನು ಪುಡಿಮಾಡಿ, ಸ್ಥಳದ ಬಳಿ ನಿಲ್ಲಿಸಿದ್ದ ವಾಹನಗಳಿಗೆ ಹಾನಿ ಉಂಟು ಮಾಡಿದೆ. ಹಿರಿಯ ಅಧಿಕಾರಿಗಳು ಮತ್ತು ಡಿಸಿಪಿ ಸೇರಿದಂತೆ ದೆಹಲಿ ಪೊಲೀಸ್ ವಿಶೇಷ ಕೋಶದ ತಂಡವು ತನಿಖೆಯ ಮೇಲ್ವಿಚಾರಣೆಗೆ ಸ್ಥಳಕ್ಕೆ ತಲುಪಿದೆ.

ಸ್ಫೋಟದ ಕಾರಣ ತನಿಖೆ ಹಂತದಲ್ಲಿದ್ದರೂ, ಪೊಲೀಸರು ನಿಷೇಧಿತ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಅಂತರರಾಜ್ಯ ಭಯೋತ್ಪಾದಕ ಮಾಡ್ಯೂಲ್ ಅನ್ನು ಭೇದಿಸಿ, ಸ್ಫೋಟಕಗಳನ್ನು ತಯಾರಿಸಲು ಬಳಸುವ ರಾಸಾಯನಿಕವಾದ 2,900 ಕಿಲೋಗ್ರಾಂಗಳಿಗೂ ಹೆಚ್ಚು ಶಂಕಿತ ಅಮೋನಿಯಂ ನೈಟ್ರೇಟ್ ಅನ್ನು ವಶಪಡಿಸಿಕೊಂಡ ಕೆಲವೇ ಗಂಟೆಗಳ ನಂತರ ಈ ಘಟನೆ ನಡೆದಿದೆ. ವಶಪಡಿಸಿಕೊಂಡ ವಸ್ತುಗಳಿಂದ ತಯಾರಿಸಿದ ನೂರಾರು ಶಕ್ತಿಶಾಲಿ ಐಇಡಿಗಳನ್ನು ಬಳಸಿಕೊಂಡು ದೆಹಲಿಯನ್ನು ಭಯಭೀತಗೊಳಿಸಲು ಮಾಡ್ಯೂಲ್ ಯೋಜಿಸಿದೆ ಎಂದು ಅಧಿಕಾರಿಗಳು ಹೇಳಿದ್ದರು.

ಪ್ರತ್ಯಕ್ಷದರ್ಶಿಗಳು ಸ್ಫೋಟವನ್ನು ‘ಭಯಾನಕ’ ಎಂದು ಆಘಾತ ವ್ಯಕ್ತಪಡಿಸಿದ್ದಾರೆ. “ನಾನು ನನ್ನ ಮನೆಯಿಂದಲೇ ಬೆಂಕಿ ಜ್ವಾಲೆ ನೋಡಿದೆ. ನಂತರ ಏನಾಯಿತು ಎಂದು ನೋಡಲು ಕೆಳಗೆ ಬಂದೆ. ಜೋರಾದ ಸ್ಫೋಟ ಸಂಭವಿಸಿದೆ. ನಾನು ಹತ್ತಿರದಲ್ಲಿ ವಾಸಿಸುತ್ತಿದ್ದೇನೆ” ಎಂದು ಸ್ಥಳೀಯ ನಿವಾಸಿ ರಾಜಧರ್ ಪಾಂಡೆ ಹೇಳಿದರು.

“ನನ್ನ ಜೀವನದಲ್ಲಿ ನಾನು ಎಂದಿಗೂ ಇಷ್ಟು ದೊಡ್ಡ ಸ್ಫೋಟವನ್ನು ಕೇಳಿಲ್ಲ. ಸ್ಫೋಟದಿಂದಾಗಿ ನಾನು ಮೂರು ಬಾರಿ ಬಿದ್ದೆ. ನಾವೆಲ್ಲರೂ ಸಾಯುತ್ತೇವೆ ಎಂದು ಭಾಸವಾಯಿತು” ಎಂದು ಸ್ಥಳೀಯ ಅಂಗಡಿಯೊಬ್ಬ ನೆನಪಿಸಿಕೊಂಡರು.

ವಿಧಿವಿಜ್ಞಾನ ತಜ್ಞರು ಸ್ಥಳವನ್ನು ಪರಿಶೀಲಿಸುತ್ತಿದ್ದಾರೆ. ಕೆಂಪು ಕೋಟೆಯ ಸುತ್ತಲಿನ ಇಡೀ ಪ್ರದೇಶವನ್ನು ಸಂಪೂರ್ಣವಾಗಿ ಸುತ್ತುವರೆದಿದ್ದಾರೆ.

ದೆಹಲಿಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದ್ದು, ಹೆಚ್ಚಿನ ಭದ್ರತಾ ನಿಯೋಜನೆ ಮಾಡಲಾಗಿದೆ. ಮುಂಬೈ ಪೊಲೀಸರನ್ನು ಸಹ ಹೈ ಅಲರ್ಟ್‌ನಲ್ಲಿ ಇರಿಸಲಾಗಿದ್ದು, ಎಲ್ಲಾ ಠಾಣೆಗಳು ಗಸ್ತು ತಿರುಗುವಿಕೆಯನ್ನು ತೀವ್ರಗೊಳಿಸಲ. ನಾಕಬಂದಿ ನಡೆಸುವ ಜೊತೆಗೆ ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ತೀವ್ರ ತಪಾಸಣೆ ನಡೆಸಲು ನಿರ್ದೇಶಿಸಲಾಗಿದೆ.

ತಿರುಪತಿ ಪ್ರವೇಶ ಮಾರ್ಗದಲ್ಲಿ ಮಾಂಸಾಹಾರ ಸೇವನೆ; ಇಬ್ಬರು ನೌಕರರನ್ನು ವಜಾಗೊಳಿಸಿದ ಟಿಟಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...