Homeಮುಖಪುಟನವದೆಹಲಿ| ಕೆಂಪು ಕೋಟೆ ಬಳಿ ಕಾರು ಸ್ಫೋಟ; 8 ಸಾವು, ಹಲವರಿಗೆ ಗಾಯ

ನವದೆಹಲಿ| ಕೆಂಪು ಕೋಟೆ ಬಳಿ ಕಾರು ಸ್ಫೋಟ; 8 ಸಾವು, ಹಲವರಿಗೆ ಗಾಯ

- Advertisement -
- Advertisement -

ಸೋಮವಾರ ಸಂಜೆ ದೆಹಲಿಯ ಕೆಂಪು ಕೋಟೆ (ಲಾಲ್ ಕಿಲಾ) ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಬಳಿ ಕಾರಿನಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದು, 24 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ದೆಹಲಿ ಅಗ್ನಿಶಾಮಕ ಇಲಾಖೆಯ ಪ್ರಕಾರ, ಸಂಜೆ 6:55 ರ ಸುಮಾರಿಗೆ ಸ್ಫೋಟದ ಬಗ್ಗೆ ಕರೆ ಬಂದಿತು. ನಂತರ ಏಳು ಅಗ್ನಿಶಾಮಕ ವಾಹನಗಳು ಮತ್ತು 15 ಸಿಎಟಿ ಆಂಬ್ಯುಲೆನ್ಸ್‌ಗಳನ್ನು ಸ್ಥಳಕ್ಕೆ ರವಾನಿಸಲಾಯಿತು. ಸ್ಫೋಟದಿಂದಾಗಿ ಹತ್ತಿರದ ಮೂರರಿಂದ ನಾಲ್ಕು ವಾಹನಗಳು ಬೆಂಕಿಗೆ ಆಹುತಿಯಾದವು, ಅವೆಲ್ಲವನ್ನೂ ನಂತರ ನಂದಿಸಲಾಯಿತು.

ಹಲವಾರು ಶವಗಳನ್ನು ಎಲ್‌ಎನ್‌ಜೆಪಿ ಆಸ್ಪತ್ರೆಗೆ ತರಲಾಗಿದ್ದು, ಗಾಯಗೊಂಡವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಸ್ಫೋಟವು ಅತ್ಯಂತ ಶಕ್ತಿಶಾಲಿಯಾಗಿದ್ದು, ಹತ್ತಿರದ ಬೀದಿ ದೀಪಗಳನ್ನು ಪುಡಿಮಾಡಿ, ಸ್ಥಳದ ಬಳಿ ನಿಲ್ಲಿಸಿದ್ದ ವಾಹನಗಳಿಗೆ ಹಾನಿ ಉಂಟು ಮಾಡಿದೆ. ಹಿರಿಯ ಅಧಿಕಾರಿಗಳು ಮತ್ತು ಡಿಸಿಪಿ ಸೇರಿದಂತೆ ದೆಹಲಿ ಪೊಲೀಸ್ ವಿಶೇಷ ಕೋಶದ ತಂಡವು ತನಿಖೆಯ ಮೇಲ್ವಿಚಾರಣೆಗೆ ಸ್ಥಳಕ್ಕೆ ತಲುಪಿದೆ.

ಸ್ಫೋಟದ ಕಾರಣ ತನಿಖೆ ಹಂತದಲ್ಲಿದ್ದರೂ, ಪೊಲೀಸರು ನಿಷೇಧಿತ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಅಂತರರಾಜ್ಯ ಭಯೋತ್ಪಾದಕ ಮಾಡ್ಯೂಲ್ ಅನ್ನು ಭೇದಿಸಿ, ಸ್ಫೋಟಕಗಳನ್ನು ತಯಾರಿಸಲು ಬಳಸುವ ರಾಸಾಯನಿಕವಾದ 2,900 ಕಿಲೋಗ್ರಾಂಗಳಿಗೂ ಹೆಚ್ಚು ಶಂಕಿತ ಅಮೋನಿಯಂ ನೈಟ್ರೇಟ್ ಅನ್ನು ವಶಪಡಿಸಿಕೊಂಡ ಕೆಲವೇ ಗಂಟೆಗಳ ನಂತರ ಈ ಘಟನೆ ನಡೆದಿದೆ. ವಶಪಡಿಸಿಕೊಂಡ ವಸ್ತುಗಳಿಂದ ತಯಾರಿಸಿದ ನೂರಾರು ಶಕ್ತಿಶಾಲಿ ಐಇಡಿಗಳನ್ನು ಬಳಸಿಕೊಂಡು ದೆಹಲಿಯನ್ನು ಭಯಭೀತಗೊಳಿಸಲು ಮಾಡ್ಯೂಲ್ ಯೋಜಿಸಿದೆ ಎಂದು ಅಧಿಕಾರಿಗಳು ಹೇಳಿದ್ದರು.

ಪ್ರತ್ಯಕ್ಷದರ್ಶಿಗಳು ಸ್ಫೋಟವನ್ನು ‘ಭಯಾನಕ’ ಎಂದು ಆಘಾತ ವ್ಯಕ್ತಪಡಿಸಿದ್ದಾರೆ. “ನಾನು ನನ್ನ ಮನೆಯಿಂದಲೇ ಬೆಂಕಿ ಜ್ವಾಲೆ ನೋಡಿದೆ. ನಂತರ ಏನಾಯಿತು ಎಂದು ನೋಡಲು ಕೆಳಗೆ ಬಂದೆ. ಜೋರಾದ ಸ್ಫೋಟ ಸಂಭವಿಸಿದೆ. ನಾನು ಹತ್ತಿರದಲ್ಲಿ ವಾಸಿಸುತ್ತಿದ್ದೇನೆ” ಎಂದು ಸ್ಥಳೀಯ ನಿವಾಸಿ ರಾಜಧರ್ ಪಾಂಡೆ ಹೇಳಿದರು.

“ನನ್ನ ಜೀವನದಲ್ಲಿ ನಾನು ಎಂದಿಗೂ ಇಷ್ಟು ದೊಡ್ಡ ಸ್ಫೋಟವನ್ನು ಕೇಳಿಲ್ಲ. ಸ್ಫೋಟದಿಂದಾಗಿ ನಾನು ಮೂರು ಬಾರಿ ಬಿದ್ದೆ. ನಾವೆಲ್ಲರೂ ಸಾಯುತ್ತೇವೆ ಎಂದು ಭಾಸವಾಯಿತು” ಎಂದು ಸ್ಥಳೀಯ ಅಂಗಡಿಯೊಬ್ಬ ನೆನಪಿಸಿಕೊಂಡರು.

ವಿಧಿವಿಜ್ಞಾನ ತಜ್ಞರು ಸ್ಥಳವನ್ನು ಪರಿಶೀಲಿಸುತ್ತಿದ್ದಾರೆ. ಕೆಂಪು ಕೋಟೆಯ ಸುತ್ತಲಿನ ಇಡೀ ಪ್ರದೇಶವನ್ನು ಸಂಪೂರ್ಣವಾಗಿ ಸುತ್ತುವರೆದಿದ್ದಾರೆ.

ದೆಹಲಿಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದ್ದು, ಹೆಚ್ಚಿನ ಭದ್ರತಾ ನಿಯೋಜನೆ ಮಾಡಲಾಗಿದೆ. ಮುಂಬೈ ಪೊಲೀಸರನ್ನು ಸಹ ಹೈ ಅಲರ್ಟ್‌ನಲ್ಲಿ ಇರಿಸಲಾಗಿದ್ದು, ಎಲ್ಲಾ ಠಾಣೆಗಳು ಗಸ್ತು ತಿರುಗುವಿಕೆಯನ್ನು ತೀವ್ರಗೊಳಿಸಲ. ನಾಕಬಂದಿ ನಡೆಸುವ ಜೊತೆಗೆ ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ತೀವ್ರ ತಪಾಸಣೆ ನಡೆಸಲು ನಿರ್ದೇಶಿಸಲಾಗಿದೆ.

ತಿರುಪತಿ ಪ್ರವೇಶ ಮಾರ್ಗದಲ್ಲಿ ಮಾಂಸಾಹಾರ ಸೇವನೆ; ಇಬ್ಬರು ನೌಕರರನ್ನು ವಜಾಗೊಳಿಸಿದ ಟಿಟಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...