Homeಮುಖಪುಟದೆಹಲಿ ನೂತನ ಮುಖ್ಯಮಂತ್ರಿಯ 'ಗೂಂಡಾಗಿರಿ' ವಿಡಿಯೊ ವೈರಲ್!

ದೆಹಲಿ ನೂತನ ಮುಖ್ಯಮಂತ್ರಿಯ ‘ಗೂಂಡಾಗಿರಿ’ ವಿಡಿಯೊ ವೈರಲ್!

- Advertisement -
- Advertisement -

ಬಿಜೆಪಿ ನಾಯಕಿ, ಶಾಲಿಮಾರ್ ಬಾಗ್ ಕ್ಷೇತ್ರದ ಶಾಸಕಿ ರೇಖಾ ಗುಪ್ತಾ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನೆ ಸ್ವೀಕರಿಸಿದ್ದಾರೆ. ಈ ನಡುವೆ, ಪಕ್ಷವೂ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡುತ್ತಿದ್ದಂತೆ ಅವರು ಈ ಹಿಂದೆ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಗೂಂಡಾಗಿರಿ ಮಾಡುತ್ತಿರುವ ವಿಡಿಯೊ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮಗಳ ಬಳಕೆದಾರರು ದೆಹಲಿಯ ಜನತೆಗೆ ವ್ಯಂಗ್ಯವಾಗಿ ಶುಭಾಶಯ ಕೋರಿದ್ದಾರೆ. ದೆಹಲಿ ನೂತನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವೈರಲ್ ವಿಡಿಯೊ 2023ರದ್ದಾಗಿದ್ದು, ದೆಹಲಿ ಪಾಲಿಕೆಯಲ್ಲಿ ಅವರು ವೇದಿಕೆ ಬಳಿ ತೆರಳಿ ಅದನ್ನು ತಳ್ಳಿ, ಅದರಲ್ಲಿನ ಮೈಕ್‌ ಅನ್ನು ಕಿತ್ತು ಮುಂದೆ ಇರುವ ಟೇಬಲ್‌ಗೆ ಬಡಿಯುತ್ತಾ ಗೂಂಡಾಗಿರಿ ಮಾಡುವುದು ವಿಡಿಯೊದಲ್ಲಿ ದಾಖಲಾಗಿದೆ. ಈ ವಿಡಿಯೊ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ವೈರಲ್ ವಿಡಿಯೋ ಬಗ್ಗೆಗಿನ ವಿವರ

2023ರಲ್ಲಿ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಸ್ಥಾಯಿ ಸಮಿತಿ ಸದಸ್ಯರ ಚುನಾವಣೆಯ ಸಂದರ್ಭದಲ್ಲಿ ರೇಖಾ ಗುಪ್ತಾ ವೇದಿಕೆ ಮತ್ತು ಮೈಕ್ ಅನ್ನು ಧ್ವಂಸಗೊಳಿಸಿದ್ದರು. ರಹಸ್ಯ ಮತದಾನದ ಸಮಯದಲ್ಲಿ ಕೌನ್ಸಿಲರ್‌ಗಳು ತಮ್ಮ ಮೊಬೈಲ್‌ಗಳ ಮೂಲಕ ಮತಪತ್ರಗಳ ಛಾಯಾಚಿತ್ರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು. ಈ ವೇಳೆ ರೇಖಾ ಅವರು ಗೂಂಡಾಗಿರಿ ಮಾಡಿದ್ದರು.ದೆಹಲಿ ನೂತನ

ಎಎನ್‌ಐ ವರದಿಗಳ ಪ್ರಕಾರ, ಈ ಘಟನೆಯ ಸಂದರ್ಭದಲ್ಲಿ ಎರಡೂ ಪಕ್ಷಗಳ ಕೌನ್ಸಿಲರ್‌ಗಳು ಸಹ ಜಗಳವಾಡಿದ್ದರು. ಸ್ಥಾಯಿ ಸಮಿತಿ ಸದಸ್ಯರ ಆಯ್ಕೆಗಾಗಿ ಎಎಪಿ ಮತ್ತು ಬಿಜೆಪಿ ಕೌನ್ಸಿಲರ್‌ಗಳ ಗದ್ದಲದಿಂದಾಗಿ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಸದನವನ್ನು ಬೆಳಿಗ್ಗೆ 13 ನೇ ಬಾರಿಗೆ ನಾಳೆ ಬೆಳಿಗ್ಗೆ 10 ಗಂಟೆಯವರೆಗೆ ಮುಂದೂಡಲಾಗಿತ್ತು.

ಈ ವೇಳೆ ಸದನದಲ್ಲಿ ವಿಧ್ವಂಸಕ ಕೃತ್ಯ ನಡೆದಿತ್ತು. ಆಗ ಬಿಜೆಪಿ ಮೇಯರ್ ಅಭ್ಯರ್ಥಿಯಾಗಿದ್ದ ರೇಖಾ ಗುಪ್ತಾ ಅವರು ವೇದಿಕೆಯನ್ನು ಮುರಿದಿದ್ದಾರೆ ಎಂದು ಆರೋಪಿಸಲಾಗಿತ್ತು ಮತ್ತು ಅಮಿತ್ ನಾಗ್ಪಾಲ್ ಎಂಬವರು ಮತಪತ್ರವನ್ನು ಹರಿದು ಮತಪೆಟ್ಟಿಗೆಯನ್ನು ಎಸೆದಿದ್ದಾರೆ ಎಂದು ವರದಿಯಾಗಿತ್ತು.

ಎಎಪಿಯ ಆರೋಪ

ಅದಾಗ್ಯೂ, 2023 ರಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದ ಎಎಪಿ ತಮ್ಮ ಸೋಲಿನ ಹತಾಶೆಯಿಂದ ರೇಖಾ ಗುಪ್ತಾ ಪಾಲಿಕೆಯೊಳಗೆ ಗೂಂಡಾಗಿರಿ ನಡೆಸಿದ್ದಾರೆ ಎಂದು ಆರೋಪಿಸಿತ್ತು.

“ಬಿಜೆಪಿ ಮೇಯರ್ ಅಭ್ಯರ್ಥಿ ರೇಖಾ ಗುಪ್ತ ಅವರ ಸೋಲಿನ ನಂತರ ಅವರ ಹತಾಶೆಯನ್ನು ನೋಡಿ. ಸುಪ್ರೀಂ ಕೋರ್ಟ್‌ನ ತೀರ್ಪಿನ ಹೊರತಾಗಿಯೂ, ರಾತ್ರಿಯಿಡೀ ಸದನದಲ್ಲಿ ಗದ್ದಲ ನಡೆಯಿತು. ಧ್ವಂಸಗೊಳಿಸಲಾಯಿತು. ಹಲ್ಲೆ ಮತ್ತು ಗೂಂಡಾಗಿರಿ ಮತ್ತು ಸ್ಥಾಯಿ ಸಮಿತಿಯ ಚುನಾವಣೆ ನಡೆಯಲು ಅವಕಾಶ ನೀಡಲಾಗಿಲ್ಲ.” ಎಂದು ಎಎಪಿ 2023ರಲ್ಲಿ ಟ್ವೀಟ್ ಮಾಡಿತ್ತು.

ಇದನ್ನೂಓದಿ:  ನನ್ನ ಜಮೀನಿನ ಸರ್ವೆ ಹಿಂದೆ ಕಾಂಗ್ರೆಸ್ ರಾಜಕೀಯ ದ್ವೇಷವಿದೆ: ಎಚ್‌ಡಿ ಕುಮಾರಸ್ವಾಮಿ ಆರೋಪ

ನನ್ನ ಜಮೀನಿನ ಸರ್ವೆ ಹಿಂದೆ ಕಾಂಗ್ರೆಸ್ ರಾಜಕೀಯ ದ್ವೇಷವಿದೆ: ಎಚ್‌ಡಿ ಕುಮಾರಸ್ವಾಮಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...