Homeಮುಖಪುಟದೆಹಲಿ ನೂತನ ಮುಖ್ಯಮಂತ್ರಿಯ 'ಗೂಂಡಾಗಿರಿ' ವಿಡಿಯೊ ವೈರಲ್!

ದೆಹಲಿ ನೂತನ ಮುಖ್ಯಮಂತ್ರಿಯ ‘ಗೂಂಡಾಗಿರಿ’ ವಿಡಿಯೊ ವೈರಲ್!

- Advertisement -
- Advertisement -

ಬಿಜೆಪಿ ನಾಯಕಿ, ಶಾಲಿಮಾರ್ ಬಾಗ್ ಕ್ಷೇತ್ರದ ಶಾಸಕಿ ರೇಖಾ ಗುಪ್ತಾ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನೆ ಸ್ವೀಕರಿಸಿದ್ದಾರೆ. ಈ ನಡುವೆ, ಪಕ್ಷವೂ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡುತ್ತಿದ್ದಂತೆ ಅವರು ಈ ಹಿಂದೆ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಗೂಂಡಾಗಿರಿ ಮಾಡುತ್ತಿರುವ ವಿಡಿಯೊ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮಗಳ ಬಳಕೆದಾರರು ದೆಹಲಿಯ ಜನತೆಗೆ ವ್ಯಂಗ್ಯವಾಗಿ ಶುಭಾಶಯ ಕೋರಿದ್ದಾರೆ. ದೆಹಲಿ ನೂತನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವೈರಲ್ ವಿಡಿಯೊ 2023ರದ್ದಾಗಿದ್ದು, ದೆಹಲಿ ಪಾಲಿಕೆಯಲ್ಲಿ ಅವರು ವೇದಿಕೆ ಬಳಿ ತೆರಳಿ ಅದನ್ನು ತಳ್ಳಿ, ಅದರಲ್ಲಿನ ಮೈಕ್‌ ಅನ್ನು ಕಿತ್ತು ಮುಂದೆ ಇರುವ ಟೇಬಲ್‌ಗೆ ಬಡಿಯುತ್ತಾ ಗೂಂಡಾಗಿರಿ ಮಾಡುವುದು ವಿಡಿಯೊದಲ್ಲಿ ದಾಖಲಾಗಿದೆ. ಈ ವಿಡಿಯೊ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ವೈರಲ್ ವಿಡಿಯೋ ಬಗ್ಗೆಗಿನ ವಿವರ

2023ರಲ್ಲಿ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಸ್ಥಾಯಿ ಸಮಿತಿ ಸದಸ್ಯರ ಚುನಾವಣೆಯ ಸಂದರ್ಭದಲ್ಲಿ ರೇಖಾ ಗುಪ್ತಾ ವೇದಿಕೆ ಮತ್ತು ಮೈಕ್ ಅನ್ನು ಧ್ವಂಸಗೊಳಿಸಿದ್ದರು. ರಹಸ್ಯ ಮತದಾನದ ಸಮಯದಲ್ಲಿ ಕೌನ್ಸಿಲರ್‌ಗಳು ತಮ್ಮ ಮೊಬೈಲ್‌ಗಳ ಮೂಲಕ ಮತಪತ್ರಗಳ ಛಾಯಾಚಿತ್ರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು. ಈ ವೇಳೆ ರೇಖಾ ಅವರು ಗೂಂಡಾಗಿರಿ ಮಾಡಿದ್ದರು.ದೆಹಲಿ ನೂತನ

ಎಎನ್‌ಐ ವರದಿಗಳ ಪ್ರಕಾರ, ಈ ಘಟನೆಯ ಸಂದರ್ಭದಲ್ಲಿ ಎರಡೂ ಪಕ್ಷಗಳ ಕೌನ್ಸಿಲರ್‌ಗಳು ಸಹ ಜಗಳವಾಡಿದ್ದರು. ಸ್ಥಾಯಿ ಸಮಿತಿ ಸದಸ್ಯರ ಆಯ್ಕೆಗಾಗಿ ಎಎಪಿ ಮತ್ತು ಬಿಜೆಪಿ ಕೌನ್ಸಿಲರ್‌ಗಳ ಗದ್ದಲದಿಂದಾಗಿ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಸದನವನ್ನು ಬೆಳಿಗ್ಗೆ 13 ನೇ ಬಾರಿಗೆ ನಾಳೆ ಬೆಳಿಗ್ಗೆ 10 ಗಂಟೆಯವರೆಗೆ ಮುಂದೂಡಲಾಗಿತ್ತು.

ಈ ವೇಳೆ ಸದನದಲ್ಲಿ ವಿಧ್ವಂಸಕ ಕೃತ್ಯ ನಡೆದಿತ್ತು. ಆಗ ಬಿಜೆಪಿ ಮೇಯರ್ ಅಭ್ಯರ್ಥಿಯಾಗಿದ್ದ ರೇಖಾ ಗುಪ್ತಾ ಅವರು ವೇದಿಕೆಯನ್ನು ಮುರಿದಿದ್ದಾರೆ ಎಂದು ಆರೋಪಿಸಲಾಗಿತ್ತು ಮತ್ತು ಅಮಿತ್ ನಾಗ್ಪಾಲ್ ಎಂಬವರು ಮತಪತ್ರವನ್ನು ಹರಿದು ಮತಪೆಟ್ಟಿಗೆಯನ್ನು ಎಸೆದಿದ್ದಾರೆ ಎಂದು ವರದಿಯಾಗಿತ್ತು.

ಎಎಪಿಯ ಆರೋಪ

ಅದಾಗ್ಯೂ, 2023 ರಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದ ಎಎಪಿ ತಮ್ಮ ಸೋಲಿನ ಹತಾಶೆಯಿಂದ ರೇಖಾ ಗುಪ್ತಾ ಪಾಲಿಕೆಯೊಳಗೆ ಗೂಂಡಾಗಿರಿ ನಡೆಸಿದ್ದಾರೆ ಎಂದು ಆರೋಪಿಸಿತ್ತು.

“ಬಿಜೆಪಿ ಮೇಯರ್ ಅಭ್ಯರ್ಥಿ ರೇಖಾ ಗುಪ್ತ ಅವರ ಸೋಲಿನ ನಂತರ ಅವರ ಹತಾಶೆಯನ್ನು ನೋಡಿ. ಸುಪ್ರೀಂ ಕೋರ್ಟ್‌ನ ತೀರ್ಪಿನ ಹೊರತಾಗಿಯೂ, ರಾತ್ರಿಯಿಡೀ ಸದನದಲ್ಲಿ ಗದ್ದಲ ನಡೆಯಿತು. ಧ್ವಂಸಗೊಳಿಸಲಾಯಿತು. ಹಲ್ಲೆ ಮತ್ತು ಗೂಂಡಾಗಿರಿ ಮತ್ತು ಸ್ಥಾಯಿ ಸಮಿತಿಯ ಚುನಾವಣೆ ನಡೆಯಲು ಅವಕಾಶ ನೀಡಲಾಗಿಲ್ಲ.” ಎಂದು ಎಎಪಿ 2023ರಲ್ಲಿ ಟ್ವೀಟ್ ಮಾಡಿತ್ತು.

ಇದನ್ನೂಓದಿ:  ನನ್ನ ಜಮೀನಿನ ಸರ್ವೆ ಹಿಂದೆ ಕಾಂಗ್ರೆಸ್ ರಾಜಕೀಯ ದ್ವೇಷವಿದೆ: ಎಚ್‌ಡಿ ಕುಮಾರಸ್ವಾಮಿ ಆರೋಪ

ನನ್ನ ಜಮೀನಿನ ಸರ್ವೆ ಹಿಂದೆ ಕಾಂಗ್ರೆಸ್ ರಾಜಕೀಯ ದ್ವೇಷವಿದೆ: ಎಚ್‌ಡಿ ಕುಮಾರಸ್ವಾಮಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...