Homeಚಳವಳಿದೆಹಲಿ: ರೈತ ಪ್ರತಿಭಟನಾಕಾರರನ್ನು ಭೇಟಿಯಾದ ಸಂಸದ ಡಿ.ಕೆ. ಸುರೇಶ್

ದೆಹಲಿ: ರೈತ ಪ್ರತಿಭಟನಾಕಾರರನ್ನು ಭೇಟಿಯಾದ ಸಂಸದ ಡಿ.ಕೆ. ಸುರೇಶ್

- Advertisement -
- Advertisement -

ಒಕ್ಕೂಟ ಸರಕಾರದ ರೈತ ವಿರೋಧಿ ನೀತಿ, ಕರಾಳ ಕಾಯ್ದೆಗಳನ್ನು ವಿರೋಧಿಸಿ ಕಳೆದ 8 ತಿಂಗಳಿನಿಂದ ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸಿರುವ, ಸಂಸದ ಡಿ.ಕೆ. ಸುರೇಶ್ ಶುಕ್ರವಾರ ರೈತರನ್ನು ಭೇಟಿಯಾಗಿದ್ದಾರೆ.

ಹರಿಯಾಣ – ದೆಹಲಿ ಗಡಿಭಾಗ ಕುಂಡಲಿ ಪ್ರತಿಭಟನಾ ಸ್ಥಳದಲ್ಲಿ ಸುದೀರ್ಘ ಪ್ರತಿಭಟನೆ ನಡೆಸುತ್ತಿರುವ ರೈತರು ಹಾಗೂ ರೈತ ಮುಖಂಡರನ್ನು ಭೇಟಿಯಾದ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಪ್ರತಿಭಟನಾ ನಿರತರ ಯೋಗಕ್ಷೇಮ ವಿಚಾರಿಸಿದ್ದಾರೆ.

ಪ್ರತಿಭಟನಾನಿರತ ರೈತರು ತಮ್ಮ ಸಮಸ್ಯೆ, ಕಷ್ಟ-ಸುಖಗಳನ್ನು ಸಂಸದರಾದ ಸುರೇಶ್ ಬಳಿ ತೋಡಿಕೊಂಡಿದ್ದು, ರೈತರೊಬ್ಬರು, ಕೇಂದ್ರ ಸರ್ಕಾರ ಹೇಗೆ ಎಪಿಎಂಸಿ ಮಾರುಕಟ್ಟೆ ವ್ಯವಸ್ಥೆಯನ್ನು ದಮನ ಮಾಡಿ, ಕಾರ್ಪೊರೇಟ್ ಕಂಪನಿಗಳಿಗೆ ನೆರವಾಗಲು ಷಡ್ಯಂತ್ರ ರೂಪಿಸುತ್ತಿದೆ ಎಂಬುದನ್ನು ವಿವರಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ಮಳೆ ನೀರಿನಿಂದ ತುಂಬಿಕೊಂಡ ಸಿಂಘು ಪ್ರತಿಭಟನಾ ಸ್ಥಳ

‘ಪಂಜಾಬ್ ಹಾಗೂ ಹರಿಯಾಣ ರಾಜ್ಯಗಳಲ್ಲಿ ಅತ್ಯುತ್ತಮ ಮಂಡಿ ಮಾರುಕಟ್ಟೆ ವ್ಯವಸ್ಥೆ ಇದೆ. ನೀವು ಯಾವುದೇ ಹಳ್ಳಿಗೆ ಹೋದರೂ, ಅಲ್ಲಿನ ರೈತರು ತಮ್ಮ ಉತ್ಪನ್ನಗಳನ್ನು ಮಾರಲು ಮೂರುವರೆ ಕಿ.ಮೀ.ಗಿಂತ ಹೆಚ್ಚು ದೂರ ಕ್ರಮಿಸುವ ಅಗತ್ಯವಿಲ್ಲ. ಇನ್ನು ಈ ಎಪಿಎಂಸಿ ಮಾರುಕಟ್ಟೆಯಲ್ಲಿ ಸಂಗ್ರಹಿಸುವ ಕಮಿಷನ್ ಹಣವನ್ನು ಮಾರುಕಟ್ಟೆ ವ್ಯವಸ್ಥೆ ನಿರ್ವಹಣೆ ಜತೆಗೆ ಮಕ್ಕಳ ಶಿಕ್ಷಣಕ್ಕೂ ಬಳಸಲಾಗುತ್ತದೆ. ಈ ಮಾರುಕಟ್ಟೆ ವ್ಯವಸ್ಥೆ ಅಧ್ಯಯನ ಮಾಡಲು ಕೇವಲ ನಮ್ಮ ದೇಶದವರು ಮಾತ್ರವಲ್ಲ, ಅನ್ಯ ದೇಶಗಳಿಂದಲೂ ಆಗಮಿಸುತ್ತಾರೆ” ಎಂದು ರೈತರು ವಿವರಿಸಿದ್ದಾರೆ.

ಈ ಮಾರುಕಟ್ಟೆ ವ್ಯವಸ್ಥೆಯನ್ನು ಸರ್ವನಾಶ ಮಾಡಲು ಷಡ್ಯಂತ್ರ ನಡೆಯುತ್ತಿದೆ. ಖಾಸಗಿಯವರು ಕೃಷಿ ಉತ್ಪನ್ನಗಳನ್ನು ಖರೀದಿಸಿ ದಾಸ್ತಾನು ಮಾಡಿಕೊಂಡು, ಕಾಳಸಂತೆಯಲ್ಲಿ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಇದರಿಂದ ಒಳದಂಧೆಗೆ ರಹದಾರಿ ಮಾಡಿಕೊಟ್ಟಂತಾಗಲಿದೆ’ ಎಂದು ಸಂಸದ ಡಿ.ಕೆ. ಸುರೇಶ್‌ಗೆ ರೈತರು ವಿವರಿಸಿದ್ದಾರೆ.

ಇತ್ತ, ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ನೀಡಲು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು 14 ವಿರೋಧ ಪಕ್ಷಗಳ ನಾಯಕರು ಶುಕ್ರವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಜಂಟಿ ಪ್ರತಿಭಟನೆ ನಡೆಸಿದ್ದಾರೆ.


ಇದನ್ನೂ ಓದಿ: ಕಿಸಾನ್ ಸಂಸತ್: ರೈತರಿಗೆ ಬೆಂಬಲ ನೀಡಿ ವಿಪಕ್ಷ ನಾಯಕರ ಜಂಟಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...