Homeಮುಖಪುಟದೆಹಲಿ: ಇಂದಿನಿಂದ ನ. 30ರವರೆಗೆ ಪಟಾಕಿ ಸಂಪೂರ್ಣ ನಿಷೇಧ ಹೇರಿದ ಎನ್‌ಜಿಟಿ

ದೆಹಲಿ: ಇಂದಿನಿಂದ ನ. 30ರವರೆಗೆ ಪಟಾಕಿ ಸಂಪೂರ್ಣ ನಿಷೇಧ ಹೇರಿದ ಎನ್‌ಜಿಟಿ

ಹರಿಯಾಣ ಸರ್ಕಾರ, ದೀಪಾವಳಿ ಮತ್ತು ಗುರುಪುರಬ್‌ನಲ್ಲಿ ಪಟಾಕಿ ಸಿಡಿಸಲು ಮತ್ತು ಮಾರಾಟ ಮಾಡಲು ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ 2 ಗಂಟೆ ಅನುಮತಿ ನೀಡಿದೆ.

- Advertisement -
- Advertisement -

ದೆಹಲಿ-ಎನ್‌ಸಿಆರ್ ಪ್ರದೇಶಗಳಲ್ಲಿ ಇಂದಿನಿಂದ ನವೆಂಬರ್ 30ರ ವರೆಗೆ ಎಲ್ಲಾ ಪಟಾಕಿಗಳ ಮಾರಾಟ ಮತ್ತು ಬಳಕೆಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಸೋಮವಾರ ಸಂಪೂರ್ಣ ನಿಷೇಧ ಹೇರಿದೆ.

ಆಯಾ ರಾಜ್ಯಗಳು, ಗಾಳಿಯ ಗುಣಮಟ್ಟ ‘ಮಧ್ಯಮ’ ಅಥವಾ ಅದಕ್ಕಿಂತ ಕಡಿಮೆ ಇರುವ ನಗರಗಳಲ್ಲಿ ಅಥವಾ ಪಟ್ಟಣಗಳಲ್ಲಿ, ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬಹುದು. ದೀಪಾವಳಿ, ಹೊಸ ವ‌ರ್ಷಾಚರಣೆ, ಕ್ರಿಸ್‌ಮಸ್ ನಂತಹ ಹಬ್ಬಗಳಲ್ಲಿ ಅವುಗಳನ್ನು ಸಿಡಿಸುವ ಸಮಯವನ್ನು ಎರಡು ಗಂಟೆಗಳವರೆಗೆ ನಿರ್ಬಂಧಿಸಬಹುದು ಎಂದು ಎನ್‌ಜಿಟಿ ತಿಳಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

ಪ್ರಸ್ತುತ, ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ಅನುಮತಿಸುವ ಅಥವಾ ನಿಷೇಧಿಸುವ ಬಗ್ಗೆ ರಾಜ್ಯ ಸರ್ಕಾರಗಳು ತಮ್ಮದೇ ಆದ ಮಾರ್ಗಸೂಚಿಗಳನ್ನು ಹೊಂದಿವೆ.

ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರವು ಕಳೆದ ಗುರುವಾರ ನಡೆಸಿದ ಕೊರೊನಾ ವೈರಸ್ ಪರಿಶೀಲನಾ ಸಭೆಯಲ್ಲಿ ಪಟಾಕಿಗಳ ಬಳಕೆಯನ್ನು ನಿಷೇಧಿಸಲು ನಿರ್ಧರಿಸಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನ ಆಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಮೂರನೇ ಅಲೆ ಶುರುವಾಗಿದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದರು.

ಇದನ್ನೂ ಓದಿ: ವಾಯುಮಾಲಿನ್ಯ ತಡೆಗೆ ಸುಗ್ರೀವಾಜ್ಞೆ: 5 ವರ್ಷ ಜೈಲು; 1 ಕೋಟಿ ದಂಡ

ದೆಹಲಿಯಲ್ಲಿ ಏಕಾಏಕಿ ಕೊರೊನಾ ಮೂರನೇ ಅಲೆ ಈಗಾಗಲೇ ಆರಂಭವಾಗಿರುವ ಕಾರಣ, ರಾಜ್ಯ ಸರ್ಕಾರವು ಕೊರೊನಾ ಪರೀಕ್ಷೆಯನ್ನು ಹೆಚ್ಚಿಸಬೇಕು ಎಂದು ತಜ್ಞರು ಸೂಚಿಸಿದ್ದಾರೆ. ಮುಖ್ಯಮಂತ್ರಿ ಕೇಜ್ರಿವಾಲ್, ಆತಂಕ ಪಡುವುದು ಬೇಡ, ತಾವು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಸಭೆಯಲ್ಲಿ ತಿಳಿಸಿದ್ದರು.

ಇತ್ತ ಹರಿಯಾಣ ಸರ್ಕಾರ, ದೀಪಾವಳಿ ಮತ್ತು ಗುರುಪುರಬ್‌ನಲ್ಲಿ ಪಟಾಕಿ ಸಿಡಿಸಲು ಮತ್ತು ಮಾರಾಟ ಮಾಡಲು ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ 2 ಗಂಟೆ ಅನುಮತಿ ನೀಡಿದೆ.  ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಮುನ್ನಾ ದಿನದಂದು ರಾತ್ರಿ 11.55 ರಿಂದ ಮುಂಜಾನೆ 12.30 ರ ನಡುವೆ ಪಟಾಕಿ ಸಿಡಿಸಲು ಅನುಮತಿ ನೀಡಿದೆ.

ದೆಹಲಿಯ ವಾಯು ಗುಣಮಟ್ಟದ ಸೂಚ್ಯಂಕ (AQI) ಸತತ ಐದನೇ ದಿನವೂ ತೀವ್ರವಾಗಿ ಮುಂದುವರೆದಿದೆ. ಸೋಮವಾರ ಬೆಳಿಗ್ಗೆ 6 ಗಂಟೆಗೆ AQI 459 ಮತ್ತು ಬೆಳಿಗ್ಗೆ 8.30 ಕ್ಕೆ ದಾಖಲಾದ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ (ಸಿ) ಆಗಿತ್ತು.

ಪಟಾಕಿಗಳ ಹೊರತಾಗಿಯೂ ದೆಹಲಿ-ಎನ್‌ಸಿಆರ್‌ನಲ್ಲಿ ಹೆಚ್ಚುತ್ತಿರುವ ಅತಿಯಾದ ಮಾಲಿನ್ಯಕ್ಕೆ ಕೃಷಿತ್ಯಾಜ್ಯ ಸುಡುವಿಕೆಗೆ ಕಾರಣವಾಗಿದೆ. ವರದಿಗಳ ಪ್ರಕಾರ, ಪಂಜಾಬ್‌ನಲ್ಲಿ ಅತಿ ಹೆಚ್ಚಾಗಿ ಸುಡಲಾಗುವ ಕೃಷಿ ತ್ಯಾಜ್ಯವು  ಗಾಳಿಯ ಗುಣಮಟ್ಟ ಕುಸಿಯಲು ಪ್ರಾಥಮಿಕ ಕಾರಣವಾಗಿದೆ ಎನ್ನಲಾಗಿದೆ. ಹೀಗಾಗಿ ಈ ಪ್ರದೇಶಗಳಲ್ಲಿ ನವೆಂಬರ್ 30ರ ವರೆಗೆ ಪಟಾಕಿಯನ್ನು ಸಂಪೂರ್ಣ ನಿಷೇಧ ಮಾಡಲಾಗಿದೆ.

301, 400, 401 ರಿಂದ 500 ರ ನಡುವಿನ ವಾಯು ಗುಣಮಟ್ಟದ ಸೂಚ್ಯಂಕವನ್ನು ಕ್ರಮವಾಗಿ “ಅತ್ಯಂತ ಕಳಪೆ” ಮತ್ತು “ತೀವ್ರ” ಎಂದು ಪರಿಗಣಿಸಲಾಗುತ್ತದೆ. ಎನ್‌ಸಿಆರ್‌ಯಲ್ಲಿನ AQI, 475 ಇದ್ದು ಇನ್ನಷ್ಟು ತೀವ್ರವಾಗುವ ಸಂಭವವಿದೆ.


ಇದನ್ನೂ ಓದಿ: ಪಟಾಕಿ ನಿಷೇಧ: ಬಿಜೆಪಿ ಆಳ್ವಿಕೆಯ ಹರಿಯಾಣ, ಕರ್ನಾಟಕ ರಾಜ್ಯಗಳು ಉಲ್ಟಾ ಹೊಡೆಯುತ್ತಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...