Homeರಾಷ್ಟ್ರೀಯದೆಹಲಿ: ಹನುಮ ಜಯಂತಿ ಮೆರವಣಿಗೆ ವೇಳೆ ಹಿಂಸಾಚಾರ, 9 ಮಂದಿಯ ಬಂಧನ

ದೆಹಲಿ: ಹನುಮ ಜಯಂತಿ ಮೆರವಣಿಗೆ ವೇಳೆ ಹಿಂಸಾಚಾರ, 9 ಮಂದಿಯ ಬಂಧನ

ಕೇಸರಿ ಧ್ವಜ ಹಿಡಿದುಕೊಂಡು ಕೆಲವರು ಮಸೀದಿಗೆ ನುಗ್ಗಲು ಯತ್ನಿಸಿದ್ದಾರೆ, ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಉಪಸ್ಥಿತಿ ಇಲ್ಲದ ಕಾರಣ ಹಿಂಸಾಚಾರ ಉಲ್ಬಣಗೊಂಡಿದೆ ಎಂದು ಸ್ಥಳೀಯರೊಬ್ಬರು ಆರೋಪಿಸಿದ್ದಾರೆ.

- Advertisement -
- Advertisement -

ಶನಿವಾರ ದೆಹಲಿಯ ಜಹಾಂಗೀರ್‌‌ಪುರಿಯಲ್ಲಿ ಹನುಮ ಜಯಂತಿ ಮೆರವಣಿಗೆಯಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿದ್ದು ಹಿಂಸಾಚಾರ ನಡೆದಿದೆ. ಇದರ ನಂತರ ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ANI ವರದಿ ಮಾಡಿದೆ. ಕೆಲವು ಕಡೆ ಬೆಂಕಿ ಹಚ್ಚಿದ ಘಟನೆಗಳೂ ವರದಿಯಾಗಿವೆ ಎಂದು ದೆಹಲಿ ಪೊಲೀಸ್ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನ್ಯೇಶ್  ಹೇಳಿದ್ದಾರೆ.

ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ (ಈಶಾನ್ಯ) ಉಷಾ ರಂಗ್ನಾನಿ ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ದೃಢಪಡಿಸಿದ್ದಾರೆ. ಘಟನೆಯಲ್ಲಿ ಎಂಟು ಪೊಲೀಸ್ ಅಧಿಕಾರಿಗಳು ಮತ್ತು ಒಬ್ಬ ನಾಗರಿಕ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. “ಒಬ್ಬ ಸಬ್ ಇನ್ಸ್‌ಪೆಕ್ಟರ್‌ಗೆ ಬುಲೆಟ್ ಗಾಯವಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ” ಎಂದು ರಂಗ್ನಾನಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪೊಲೀಸರು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಜಹಾಂಗೀರ್‌ಪುರಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಕ್ಷಿಪ್ರ ಕಾರ್ಯಾಚರಣೆ ಎರಡು ತುಕಡಿ ಪಡೆಯನ್ನು ನಿಯೋಜಿಸಲಾಗಿದೆ” ಎಂದು ಪೊಲೀಸ್ ಕಮಿಷನರ್ ರಾಕೇಶ್ ಅಸ್ತಾನಾ ಎನ್‌ಡಿಟಿವಿಗೆ ತಿಳಿಸಿದ್ದಾರೆ. ಹಿರಿಯ ಅಧಿಕಾರಿಗಳು ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದಾರೆ ಎಂದು ಪೊಲೀಸ್ ಕಮಿಷನರ್ ಹೇಳಿದ್ದಾರೆ.

ಇದನ್ನೂ ಓದಿ: ಎಎಪಿ ದಿಗ್ವಿಜಯಕ್ಕೆ ಹೆದರಿ, ದೆಹಲಿ ಮುನ್ಸಿಪಾಲ್‌ ಚುನಾವಣೆ ಮುಂದೂಡಲು ಬಯಸುತ್ತಿದೆಯೇ ಬಿಜೆಪಿ?

ಗಲಭೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಟ್ವೀಟ್ ಮಾಡಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿಗಳು ಮತ್ತು ಸುಳ್ಳು ಸುದ್ದಿಗಳಿಗೆ ಗಮನ ಕೊಡಬೇಡಿ ಎಂದು ನಾಗರಿಕರಿಗೆ ವಿನಂತಿಸಿದ್ದಾರೆ.

ಎರಡು ಸಮುದಾಯಗಳ ನಡುವೆ ವಾಗ್ವಾದ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಪರಿಸ್ಥಿತಿ ಉಲ್ಬಣಗೊಂಡು ಎರಡೂ ಕಡೆಯವರು ಪರಸ್ಪರ ಕಲ್ಲು ತೂರಾಟ ಆರಂಭಿಸಿದರು” ಎಂದು ಪೊಲೀಸ್ ಅಧಿಕಾರಿಯೊಬ್ಬರು ಪತ್ರಿಕೆಗೆ ತಿಳಿಸಿದ್ದಾರೆ.

ಮೆರವಣಿಗೆಯಲ್ಲಿ ಭಾಗವಹಿಸಿದವರು “ಭಾರತ್ ಮೇ ರೆಹನಾ ಹೋಗಾ ತೋ ಜೈ ಶ್ರೀ ರಾಮ್ ಕೆಹನಾ ಹೋಗಾ” [ಭಾರತದಲ್ಲಿ ವಾಸಿಸಲು ಬಯಸಿದರೆ, ಜೈಶ್ರೀರಾಂ ಹೇಳಬೇಕು] ಎಂದು ಘೋಷಣೆಗಳನ್ನು ಕೂಗಿದ್ದಾರೆ ಎಂದು ಸ್ಥಳೀಯ ನಿವಾಸಿ ಮಸ್ತಾನ್‌  ಹೇಳಿದ್ದಾರೆ.

ಕೇಸರಿ ಧ್ವಜ ಹಿಡಿದುಕೊಂಡು ಕೆಲವರು ಮಸೀದಿಗೆ ನುಗ್ಗಲು ಯತ್ನಿಸಿದರು. ಈ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಉಪಸ್ಥಿತಿ ಇಲ್ಲದ ಕಾರಣ ಹಿಂಸಾಚಾರ ಉಲ್ಬಣಗೊಂಡಿದೆ ಎಂದು ಮಸ್ತಾನ್ ಆರೋಪಿಸಿದ್ದಾರೆ.

ಈ ಮಧ್ಯೆ, ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರು ಅಸ್ಥಾನಾ ಮತ್ತು ದೆಹಲಿ ಪೊಲೀಸ್‌ನ ವಿಶೇಷ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ದೇವೇಂದ್ರ ಪಾಠಕ್ ಅವರಿಗೆ ಅಗತ್ಯ ಕ್ರಮ ಕೈಗೊಳ್ಳಲು ಮತ್ತು ವಿಷಯವನ್ನು ಸೂಕ್ಷ್ಮವಾಗಿ ನಿಭಾಯಿಸಲು ಸೂಚಿಸಿದ್ದಾರೆ.

ಇದನ್ನೂ ಓದಿ: ಕಡ್ಡಾಯ ಮಾಸ್ಕ್‌ ನಿಯಮ ರದ್ದು ಪಡಿಸಿದ ದೆಹಲಿ ಮತ್ತು ಮಹಾರಾಷ್ಟ್ರ!

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಿಂಸಾಚಾರವನ್ನು ಖಂಡಿಸಿ, ಹಿಂಸಾಚಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದು, ಜನರೊಂದಿಗೆ ಶಾಂತಿಯನ್ನು ಕಾಪಾಡಿಕೊಳ್ಳಲು ಮನವಿ ಮಾಡಿ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರೊಂದಿಗೆ ಮಾತನಾಡಿದ್ದೇನೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. “ಶಾಂತಿಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಮತ್ತು ತಪ್ಪಿತಸ್ಥರನ್ನು ಬಿಡಲಾಗುವುದಿಲ್ಲ ಎಂದು ಬೈಜಾಲ್‌ ಭರವಸೆ ನೀಡಿದರು” ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಏಪ್ರಿಲ್ 10 ರಂದು ರಾಮನವಮಿ ಮೆರವಣಿಗೆಯ ಸಮಯದಲ್ಲಿ ದೇಶಾದ್ಯಂತ ಇದೇ ರೀತಿಯ ಘರ್ಷಣೆ ನಡೆದಿತ್ತು. ಗುಜರಾತ್, ಮಧ್ಯಪ್ರದೇಶ, ಜಾರ್ಖಂಡ್, ಪಶ್ಚಿಮ ಬಂಗಾಳ, ಕರ್ನಾಟಕ ಮತ್ತು ಗೋವಾದಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಕೇಜ್ರಿವಾಲ್‌ ಅವರ ನಕಲಿ ವಿಡಿಯೋ ಪ್ರಸಾರ: ದೆಹಲಿ ಬಿಜೆಪಿ ನಾಯಕನ ಮನೆಯಲ್ಲಿ ಪಂಜಾಬ್ ಪೊಲೀಸರು!

ಅದೇ ದಿನ, ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ರಾಮನವಮಿಯಂದು ಹಾಸ್ಟೆಲ್ ಮೆಸ್‌ನಲ್ಲಿ ಮಾಂಸವನ್ನು ನೀಡಲಾಗುತ್ತದೆ ಎಂದು ಆರೋಪಿಸಿ ಘರ್ಷಣೆಗಳು ನಡೆದವು.

ಏಪ್ರಿಲ್ 2 ರಂದು, ಹಿಂದೂ ಹೊಸ ವರ್ಷದ ಮೊದಲ ದಿನವಾದ ನವ ಸಂವತ್ಸರದಂದು ಬೈಕ್‌‌ ರ್‍ಯಾಲಿಯಲ್ಲಿ ಕೋಮು ದ್ವೇಷದ ಹಾಡುಗಳನ್ನು ನುಡಿಸುವ ಮೂಲಕ ನಗರದ ಮುಸ್ಲಿಂ ಪ್ರಾಬಲ್ಯದ ಪ್ರದೇಶದಲ್ಲಿ ಕೋಮು ಘರ್ಷಣೆಗಳು ಸಂಭವಿಸಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...