Homeರಾಷ್ಟ್ರೀಯದೆಹಲಿ: ಹನುಮ ಜಯಂತಿ ಮೆರವಣಿಗೆ ವೇಳೆ ಹಿಂಸಾಚಾರ, 9 ಮಂದಿಯ ಬಂಧನ

ದೆಹಲಿ: ಹನುಮ ಜಯಂತಿ ಮೆರವಣಿಗೆ ವೇಳೆ ಹಿಂಸಾಚಾರ, 9 ಮಂದಿಯ ಬಂಧನ

ಕೇಸರಿ ಧ್ವಜ ಹಿಡಿದುಕೊಂಡು ಕೆಲವರು ಮಸೀದಿಗೆ ನುಗ್ಗಲು ಯತ್ನಿಸಿದ್ದಾರೆ, ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಉಪಸ್ಥಿತಿ ಇಲ್ಲದ ಕಾರಣ ಹಿಂಸಾಚಾರ ಉಲ್ಬಣಗೊಂಡಿದೆ ಎಂದು ಸ್ಥಳೀಯರೊಬ್ಬರು ಆರೋಪಿಸಿದ್ದಾರೆ.

- Advertisement -
- Advertisement -

ಶನಿವಾರ ದೆಹಲಿಯ ಜಹಾಂಗೀರ್‌‌ಪುರಿಯಲ್ಲಿ ಹನುಮ ಜಯಂತಿ ಮೆರವಣಿಗೆಯಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿದ್ದು ಹಿಂಸಾಚಾರ ನಡೆದಿದೆ. ಇದರ ನಂತರ ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ANI ವರದಿ ಮಾಡಿದೆ. ಕೆಲವು ಕಡೆ ಬೆಂಕಿ ಹಚ್ಚಿದ ಘಟನೆಗಳೂ ವರದಿಯಾಗಿವೆ ಎಂದು ದೆಹಲಿ ಪೊಲೀಸ್ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನ್ಯೇಶ್  ಹೇಳಿದ್ದಾರೆ.

ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ (ಈಶಾನ್ಯ) ಉಷಾ ರಂಗ್ನಾನಿ ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ದೃಢಪಡಿಸಿದ್ದಾರೆ. ಘಟನೆಯಲ್ಲಿ ಎಂಟು ಪೊಲೀಸ್ ಅಧಿಕಾರಿಗಳು ಮತ್ತು ಒಬ್ಬ ನಾಗರಿಕ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. “ಒಬ್ಬ ಸಬ್ ಇನ್ಸ್‌ಪೆಕ್ಟರ್‌ಗೆ ಬುಲೆಟ್ ಗಾಯವಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ” ಎಂದು ರಂಗ್ನಾನಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪೊಲೀಸರು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಜಹಾಂಗೀರ್‌ಪುರಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಕ್ಷಿಪ್ರ ಕಾರ್ಯಾಚರಣೆ ಎರಡು ತುಕಡಿ ಪಡೆಯನ್ನು ನಿಯೋಜಿಸಲಾಗಿದೆ” ಎಂದು ಪೊಲೀಸ್ ಕಮಿಷನರ್ ರಾಕೇಶ್ ಅಸ್ತಾನಾ ಎನ್‌ಡಿಟಿವಿಗೆ ತಿಳಿಸಿದ್ದಾರೆ. ಹಿರಿಯ ಅಧಿಕಾರಿಗಳು ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದಾರೆ ಎಂದು ಪೊಲೀಸ್ ಕಮಿಷನರ್ ಹೇಳಿದ್ದಾರೆ.

ಇದನ್ನೂ ಓದಿ: ಎಎಪಿ ದಿಗ್ವಿಜಯಕ್ಕೆ ಹೆದರಿ, ದೆಹಲಿ ಮುನ್ಸಿಪಾಲ್‌ ಚುನಾವಣೆ ಮುಂದೂಡಲು ಬಯಸುತ್ತಿದೆಯೇ ಬಿಜೆಪಿ?

ಗಲಭೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಟ್ವೀಟ್ ಮಾಡಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿಗಳು ಮತ್ತು ಸುಳ್ಳು ಸುದ್ದಿಗಳಿಗೆ ಗಮನ ಕೊಡಬೇಡಿ ಎಂದು ನಾಗರಿಕರಿಗೆ ವಿನಂತಿಸಿದ್ದಾರೆ.

ಎರಡು ಸಮುದಾಯಗಳ ನಡುವೆ ವಾಗ್ವಾದ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಪರಿಸ್ಥಿತಿ ಉಲ್ಬಣಗೊಂಡು ಎರಡೂ ಕಡೆಯವರು ಪರಸ್ಪರ ಕಲ್ಲು ತೂರಾಟ ಆರಂಭಿಸಿದರು” ಎಂದು ಪೊಲೀಸ್ ಅಧಿಕಾರಿಯೊಬ್ಬರು ಪತ್ರಿಕೆಗೆ ತಿಳಿಸಿದ್ದಾರೆ.

ಮೆರವಣಿಗೆಯಲ್ಲಿ ಭಾಗವಹಿಸಿದವರು “ಭಾರತ್ ಮೇ ರೆಹನಾ ಹೋಗಾ ತೋ ಜೈ ಶ್ರೀ ರಾಮ್ ಕೆಹನಾ ಹೋಗಾ” [ಭಾರತದಲ್ಲಿ ವಾಸಿಸಲು ಬಯಸಿದರೆ, ಜೈಶ್ರೀರಾಂ ಹೇಳಬೇಕು] ಎಂದು ಘೋಷಣೆಗಳನ್ನು ಕೂಗಿದ್ದಾರೆ ಎಂದು ಸ್ಥಳೀಯ ನಿವಾಸಿ ಮಸ್ತಾನ್‌  ಹೇಳಿದ್ದಾರೆ.

ಕೇಸರಿ ಧ್ವಜ ಹಿಡಿದುಕೊಂಡು ಕೆಲವರು ಮಸೀದಿಗೆ ನುಗ್ಗಲು ಯತ್ನಿಸಿದರು. ಈ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಉಪಸ್ಥಿತಿ ಇಲ್ಲದ ಕಾರಣ ಹಿಂಸಾಚಾರ ಉಲ್ಬಣಗೊಂಡಿದೆ ಎಂದು ಮಸ್ತಾನ್ ಆರೋಪಿಸಿದ್ದಾರೆ.

ಈ ಮಧ್ಯೆ, ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರು ಅಸ್ಥಾನಾ ಮತ್ತು ದೆಹಲಿ ಪೊಲೀಸ್‌ನ ವಿಶೇಷ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ದೇವೇಂದ್ರ ಪಾಠಕ್ ಅವರಿಗೆ ಅಗತ್ಯ ಕ್ರಮ ಕೈಗೊಳ್ಳಲು ಮತ್ತು ವಿಷಯವನ್ನು ಸೂಕ್ಷ್ಮವಾಗಿ ನಿಭಾಯಿಸಲು ಸೂಚಿಸಿದ್ದಾರೆ.

ಇದನ್ನೂ ಓದಿ: ಕಡ್ಡಾಯ ಮಾಸ್ಕ್‌ ನಿಯಮ ರದ್ದು ಪಡಿಸಿದ ದೆಹಲಿ ಮತ್ತು ಮಹಾರಾಷ್ಟ್ರ!

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಿಂಸಾಚಾರವನ್ನು ಖಂಡಿಸಿ, ಹಿಂಸಾಚಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದು, ಜನರೊಂದಿಗೆ ಶಾಂತಿಯನ್ನು ಕಾಪಾಡಿಕೊಳ್ಳಲು ಮನವಿ ಮಾಡಿ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರೊಂದಿಗೆ ಮಾತನಾಡಿದ್ದೇನೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. “ಶಾಂತಿಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಮತ್ತು ತಪ್ಪಿತಸ್ಥರನ್ನು ಬಿಡಲಾಗುವುದಿಲ್ಲ ಎಂದು ಬೈಜಾಲ್‌ ಭರವಸೆ ನೀಡಿದರು” ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಏಪ್ರಿಲ್ 10 ರಂದು ರಾಮನವಮಿ ಮೆರವಣಿಗೆಯ ಸಮಯದಲ್ಲಿ ದೇಶಾದ್ಯಂತ ಇದೇ ರೀತಿಯ ಘರ್ಷಣೆ ನಡೆದಿತ್ತು. ಗುಜರಾತ್, ಮಧ್ಯಪ್ರದೇಶ, ಜಾರ್ಖಂಡ್, ಪಶ್ಚಿಮ ಬಂಗಾಳ, ಕರ್ನಾಟಕ ಮತ್ತು ಗೋವಾದಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಕೇಜ್ರಿವಾಲ್‌ ಅವರ ನಕಲಿ ವಿಡಿಯೋ ಪ್ರಸಾರ: ದೆಹಲಿ ಬಿಜೆಪಿ ನಾಯಕನ ಮನೆಯಲ್ಲಿ ಪಂಜಾಬ್ ಪೊಲೀಸರು!

ಅದೇ ದಿನ, ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ರಾಮನವಮಿಯಂದು ಹಾಸ್ಟೆಲ್ ಮೆಸ್‌ನಲ್ಲಿ ಮಾಂಸವನ್ನು ನೀಡಲಾಗುತ್ತದೆ ಎಂದು ಆರೋಪಿಸಿ ಘರ್ಷಣೆಗಳು ನಡೆದವು.

ಏಪ್ರಿಲ್ 2 ರಂದು, ಹಿಂದೂ ಹೊಸ ವರ್ಷದ ಮೊದಲ ದಿನವಾದ ನವ ಸಂವತ್ಸರದಂದು ಬೈಕ್‌‌ ರ್‍ಯಾಲಿಯಲ್ಲಿ ಕೋಮು ದ್ವೇಷದ ಹಾಡುಗಳನ್ನು ನುಡಿಸುವ ಮೂಲಕ ನಗರದ ಮುಸ್ಲಿಂ ಪ್ರಾಬಲ್ಯದ ಪ್ರದೇಶದಲ್ಲಿ ಕೋಮು ಘರ್ಷಣೆಗಳು ಸಂಭವಿಸಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...