Homeರಾಷ್ಟ್ರೀಯದೆಹಲಿ: ಹನುಮ ಜಯಂತಿ ಮೆರವಣಿಗೆ ವೇಳೆ ಹಿಂಸಾಚಾರ, 9 ಮಂದಿಯ ಬಂಧನ

ದೆಹಲಿ: ಹನುಮ ಜಯಂತಿ ಮೆರವಣಿಗೆ ವೇಳೆ ಹಿಂಸಾಚಾರ, 9 ಮಂದಿಯ ಬಂಧನ

ಕೇಸರಿ ಧ್ವಜ ಹಿಡಿದುಕೊಂಡು ಕೆಲವರು ಮಸೀದಿಗೆ ನುಗ್ಗಲು ಯತ್ನಿಸಿದ್ದಾರೆ, ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಉಪಸ್ಥಿತಿ ಇಲ್ಲದ ಕಾರಣ ಹಿಂಸಾಚಾರ ಉಲ್ಬಣಗೊಂಡಿದೆ ಎಂದು ಸ್ಥಳೀಯರೊಬ್ಬರು ಆರೋಪಿಸಿದ್ದಾರೆ.

- Advertisement -
- Advertisement -

ಶನಿವಾರ ದೆಹಲಿಯ ಜಹಾಂಗೀರ್‌‌ಪುರಿಯಲ್ಲಿ ಹನುಮ ಜಯಂತಿ ಮೆರವಣಿಗೆಯಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿದ್ದು ಹಿಂಸಾಚಾರ ನಡೆದಿದೆ. ಇದರ ನಂತರ ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ANI ವರದಿ ಮಾಡಿದೆ. ಕೆಲವು ಕಡೆ ಬೆಂಕಿ ಹಚ್ಚಿದ ಘಟನೆಗಳೂ ವರದಿಯಾಗಿವೆ ಎಂದು ದೆಹಲಿ ಪೊಲೀಸ್ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನ್ಯೇಶ್  ಹೇಳಿದ್ದಾರೆ.

ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ (ಈಶಾನ್ಯ) ಉಷಾ ರಂಗ್ನಾನಿ ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ದೃಢಪಡಿಸಿದ್ದಾರೆ. ಘಟನೆಯಲ್ಲಿ ಎಂಟು ಪೊಲೀಸ್ ಅಧಿಕಾರಿಗಳು ಮತ್ತು ಒಬ್ಬ ನಾಗರಿಕ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. “ಒಬ್ಬ ಸಬ್ ಇನ್ಸ್‌ಪೆಕ್ಟರ್‌ಗೆ ಬುಲೆಟ್ ಗಾಯವಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ” ಎಂದು ರಂಗ್ನಾನಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪೊಲೀಸರು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಜಹಾಂಗೀರ್‌ಪುರಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಕ್ಷಿಪ್ರ ಕಾರ್ಯಾಚರಣೆ ಎರಡು ತುಕಡಿ ಪಡೆಯನ್ನು ನಿಯೋಜಿಸಲಾಗಿದೆ” ಎಂದು ಪೊಲೀಸ್ ಕಮಿಷನರ್ ರಾಕೇಶ್ ಅಸ್ತಾನಾ ಎನ್‌ಡಿಟಿವಿಗೆ ತಿಳಿಸಿದ್ದಾರೆ. ಹಿರಿಯ ಅಧಿಕಾರಿಗಳು ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದಾರೆ ಎಂದು ಪೊಲೀಸ್ ಕಮಿಷನರ್ ಹೇಳಿದ್ದಾರೆ.

ಇದನ್ನೂ ಓದಿ: ಎಎಪಿ ದಿಗ್ವಿಜಯಕ್ಕೆ ಹೆದರಿ, ದೆಹಲಿ ಮುನ್ಸಿಪಾಲ್‌ ಚುನಾವಣೆ ಮುಂದೂಡಲು ಬಯಸುತ್ತಿದೆಯೇ ಬಿಜೆಪಿ?

ಗಲಭೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಟ್ವೀಟ್ ಮಾಡಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿಗಳು ಮತ್ತು ಸುಳ್ಳು ಸುದ್ದಿಗಳಿಗೆ ಗಮನ ಕೊಡಬೇಡಿ ಎಂದು ನಾಗರಿಕರಿಗೆ ವಿನಂತಿಸಿದ್ದಾರೆ.

ಎರಡು ಸಮುದಾಯಗಳ ನಡುವೆ ವಾಗ್ವಾದ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಪರಿಸ್ಥಿತಿ ಉಲ್ಬಣಗೊಂಡು ಎರಡೂ ಕಡೆಯವರು ಪರಸ್ಪರ ಕಲ್ಲು ತೂರಾಟ ಆರಂಭಿಸಿದರು” ಎಂದು ಪೊಲೀಸ್ ಅಧಿಕಾರಿಯೊಬ್ಬರು ಪತ್ರಿಕೆಗೆ ತಿಳಿಸಿದ್ದಾರೆ.

ಮೆರವಣಿಗೆಯಲ್ಲಿ ಭಾಗವಹಿಸಿದವರು “ಭಾರತ್ ಮೇ ರೆಹನಾ ಹೋಗಾ ತೋ ಜೈ ಶ್ರೀ ರಾಮ್ ಕೆಹನಾ ಹೋಗಾ” [ಭಾರತದಲ್ಲಿ ವಾಸಿಸಲು ಬಯಸಿದರೆ, ಜೈಶ್ರೀರಾಂ ಹೇಳಬೇಕು] ಎಂದು ಘೋಷಣೆಗಳನ್ನು ಕೂಗಿದ್ದಾರೆ ಎಂದು ಸ್ಥಳೀಯ ನಿವಾಸಿ ಮಸ್ತಾನ್‌  ಹೇಳಿದ್ದಾರೆ.

ಕೇಸರಿ ಧ್ವಜ ಹಿಡಿದುಕೊಂಡು ಕೆಲವರು ಮಸೀದಿಗೆ ನುಗ್ಗಲು ಯತ್ನಿಸಿದರು. ಈ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಉಪಸ್ಥಿತಿ ಇಲ್ಲದ ಕಾರಣ ಹಿಂಸಾಚಾರ ಉಲ್ಬಣಗೊಂಡಿದೆ ಎಂದು ಮಸ್ತಾನ್ ಆರೋಪಿಸಿದ್ದಾರೆ.

ಈ ಮಧ್ಯೆ, ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರು ಅಸ್ಥಾನಾ ಮತ್ತು ದೆಹಲಿ ಪೊಲೀಸ್‌ನ ವಿಶೇಷ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ದೇವೇಂದ್ರ ಪಾಠಕ್ ಅವರಿಗೆ ಅಗತ್ಯ ಕ್ರಮ ಕೈಗೊಳ್ಳಲು ಮತ್ತು ವಿಷಯವನ್ನು ಸೂಕ್ಷ್ಮವಾಗಿ ನಿಭಾಯಿಸಲು ಸೂಚಿಸಿದ್ದಾರೆ.

ಇದನ್ನೂ ಓದಿ: ಕಡ್ಡಾಯ ಮಾಸ್ಕ್‌ ನಿಯಮ ರದ್ದು ಪಡಿಸಿದ ದೆಹಲಿ ಮತ್ತು ಮಹಾರಾಷ್ಟ್ರ!

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಿಂಸಾಚಾರವನ್ನು ಖಂಡಿಸಿ, ಹಿಂಸಾಚಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದು, ಜನರೊಂದಿಗೆ ಶಾಂತಿಯನ್ನು ಕಾಪಾಡಿಕೊಳ್ಳಲು ಮನವಿ ಮಾಡಿ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರೊಂದಿಗೆ ಮಾತನಾಡಿದ್ದೇನೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. “ಶಾಂತಿಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಮತ್ತು ತಪ್ಪಿತಸ್ಥರನ್ನು ಬಿಡಲಾಗುವುದಿಲ್ಲ ಎಂದು ಬೈಜಾಲ್‌ ಭರವಸೆ ನೀಡಿದರು” ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಏಪ್ರಿಲ್ 10 ರಂದು ರಾಮನವಮಿ ಮೆರವಣಿಗೆಯ ಸಮಯದಲ್ಲಿ ದೇಶಾದ್ಯಂತ ಇದೇ ರೀತಿಯ ಘರ್ಷಣೆ ನಡೆದಿತ್ತು. ಗುಜರಾತ್, ಮಧ್ಯಪ್ರದೇಶ, ಜಾರ್ಖಂಡ್, ಪಶ್ಚಿಮ ಬಂಗಾಳ, ಕರ್ನಾಟಕ ಮತ್ತು ಗೋವಾದಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಕೇಜ್ರಿವಾಲ್‌ ಅವರ ನಕಲಿ ವಿಡಿಯೋ ಪ್ರಸಾರ: ದೆಹಲಿ ಬಿಜೆಪಿ ನಾಯಕನ ಮನೆಯಲ್ಲಿ ಪಂಜಾಬ್ ಪೊಲೀಸರು!

ಅದೇ ದಿನ, ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ರಾಮನವಮಿಯಂದು ಹಾಸ್ಟೆಲ್ ಮೆಸ್‌ನಲ್ಲಿ ಮಾಂಸವನ್ನು ನೀಡಲಾಗುತ್ತದೆ ಎಂದು ಆರೋಪಿಸಿ ಘರ್ಷಣೆಗಳು ನಡೆದವು.

ಏಪ್ರಿಲ್ 2 ರಂದು, ಹಿಂದೂ ಹೊಸ ವರ್ಷದ ಮೊದಲ ದಿನವಾದ ನವ ಸಂವತ್ಸರದಂದು ಬೈಕ್‌‌ ರ್‍ಯಾಲಿಯಲ್ಲಿ ಕೋಮು ದ್ವೇಷದ ಹಾಡುಗಳನ್ನು ನುಡಿಸುವ ಮೂಲಕ ನಗರದ ಮುಸ್ಲಿಂ ಪ್ರಾಬಲ್ಯದ ಪ್ರದೇಶದಲ್ಲಿ ಕೋಮು ಘರ್ಷಣೆಗಳು ಸಂಭವಿಸಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...