Homeಚಳವಳಿನಾಲ್ಕು ವರ್ಷಗಳ ಪದವಿ ಕೋರ್ಸ್‌ನಲ್ಲಿ ಕನ್ನಡಕ್ಕೆ ಕುತ್ತು: ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿ ಹಲವರ ವಿರೋಧ

ನಾಲ್ಕು ವರ್ಷಗಳ ಪದವಿ ಕೋರ್ಸ್‌ನಲ್ಲಿ ಕನ್ನಡಕ್ಕೆ ಕುತ್ತು: ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿ ಹಲವರ ವಿರೋಧ

ಕನ್ನಡ ಪಠ್ಯ ವಿಷಯವನ್ನು ನಾಲ್ಕು ವರ್ಷಗಳ ಪದವಿಯಲ್ಲಿ ಮೂರು ವರ್ಷ ಬೋಧಿಸುವ ತೀರ್ಮಾನ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಸಂಘಟಿತ ಪ್ರತಿರೋಧ ಅನಿವಾರ್ಯ..

- Advertisement -
- Advertisement -

ಹಲವಾರು ರಾಜ್ಯಗಳ ವಿರೋಧ, ಶಿಕ್ಷಣ ತಜ್ಞರ ಅಸಮಾಧಾನದ ನಡುವೆಯೂ ಕೇಂದ್ರ ಸರ್ಕಾರ ತನ್ನ ಮಹತ್ವಕಾಂಕ್ಷೆಯ 2020ರ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲು ಹೊರಟಿದೆ. ಸರ್ಕಾರದ ಈ ನಡೆಯಿಂದ ಕನ್ನಡ ಭಾಷೆಗೆ ಕುತ್ತು ಬಂದೊದಗಲಿದೆ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿದಂತೆ ಹಲವಾರು ಸಾಹಿತಿಗಳು, ಪ್ರಾಧ್ಯಾಪಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಸ ಶಿಕ್ಷಣ ನೀತಿ ಅನುಷ್ಠಾನದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಭಿನ್ನ ಬಗೆಯ ಬಹುಶಿಸ್ತೀಯ 4 ವರ್ಷಗಳ ಸಾಮಾನ್ಯ ಪದವಿ ಮತ್ತು ಶಿಕ್ಷಕ ಪದವಿ ಕೋರ್ಸುಗಳನ್ನು ರೂಪಿಸಿದ್ದು, ಅದಕ್ಕಾಗಿ ಅನುಷ್ಠಾನ ಕಾರ್ಯಪಡೆಯನ್ನು ರಚಿಸಲಾಗಿದೆ. ಉನ್ನತ ಶಿಕ್ಷಣ ಪಠ್ಯಕ್ರಮ ರಚನೆಗೆ ನೇಮಿಸಲಾಗಿದ್ದ ಕಾರ್ಯಪಡೆ ಉಪ ಸಮಿತಿಯು ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ಕನ್ನಡವನ್ನೂ ಒಳಗೊಂಡಂತೆ ಎಲ್ಲಾ ಭಾಷಾ ಪಠ್ಯ ವಿಷಯವನ್ನು ಕೇವಲ ಎರಡು ಸೆಮಿಸ್ಟಾರ್‌ಗಳಿಗೆ ಅಂದರೆ ಒಂದೇ ವರ್ಷಕ್ಕೆ ಮಿತಿಗೊಳಿಸಲಾಗಿದೆ. ಇದರ ವಿರುದ್ದ ಹಲವಾರು ಸಾಹಿತಿಗಳು ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ.

ಮೂರು ವರ್ಷಗಳ ಪದವಿಯಲ್ಲಿ ಮೊದಲ ಎರಡು ವರ್ಷ ಅಂದರೆ ನಾಲ್ಕು ಸೆಮಿಸ್ಟರ್‌ಗಳಲ್ಲಿ ಕನ್ನಡಾದಿಯಾಗಿ ಭಾಷಾ ವಿಷಯ ಬೋಧನೆಗೆ ಅವಕಾಶವಿತ್ತು. ಈಗ ನಾಲ್ಕು ವರ್ಷಗಳ ಪದವಿಯಲ್ಲಿ ಎರಡು ವರ್ಷಗಳ ಭಾಷಾ ಬೋಧನೆಯನ್ನು ಮೂರು ವರ್ಷಗಳಿಗೆ ವಿಸ್ತರಿಸಬೇಕಾಗಿತ್ತು. ಕಡೇ ಪಕ್ಷ ಹಿಂದೆ ಇದ್ದಂತೆ ಎರಡು ವರ್ಷಗಳ ಅವಧಿಯನ್ನಾದರೂ ಉಳಿಸಿಕೊಳ್ಳಬೇಕಿತ್ತು. ಅದರ ಬದಲು ಒಂದು ವರ್ಷಕ್ಕೆ ಮಿತಿಗೊಳಿಸಿರುವುದು ಇದು ಭಾಷಾ ವಿಷಯಗಳಿಗೆ ಅದರಲ್ಲೂ ವಿಶೇಷವಾಗಿ ಕನ್ನಡಕ್ಕೆ ಆಗಿರುವ ಅನ್ಯಾಯ. ಇದು ಖಂಡನೀಯ ಎಂದು ಬರಗೂರು ರಾಮಚಂದ್ರಪ್ಪ ಪತ್ರದಲ್ಲಿ ತಿಳಿಸಿದ್ದಾರೆ.

ಯಾವುದೇ ವಿಶೇಷ ವಿಷಯದಲ್ಲಿ ಪದವಿ ವ್ಯಾಸಂಗ ಮಾಡುವವರಿಗೆ ಕನ್ನಡ ಭಾಷೆ, ಸಾಹಿತ್ಯದ ಸಾಮಾನ್ಯ ಪರಿಚಯ ಕಡ್ಡಾಯವಾಗಬೇಕು. ಇದು ಕೇವಲ ಕನ್ನಡಾಭಿಮಾನದ ಪ್ರಶ್ನೆಯಲ್ಲಿ, ಯಾವುದೇ ವ್ಯಾಸಂಗಗಳಲ್ಲಿ ಸಾಂಸ್ಕೃತಿಕ ಅರಿವು ಮೂಡಿಸಿ ಮಾನವೀಯ ಮೌಲ್ಯಗಳನ್ನು ನೆಲೆಗೊಳಿಸಲು ಕನ್ನಡ ಭಾಷೆ, ಸಾಹಿತ್ಯಗಳ ಸಂಕ್ಷಿಪ್ತ ಸಾಮಾನ್ಯ ಪರಿಚಯವು ಪೂರಕವಾಗುತ್ತದೆ. ಶಿಕ್ಷಣವನ್ನು ಸಾಂಸ್ಕೃತಿಕ ಜನಪರ ಪ್ರಜೆಯ ನೆಲೆಯಲ್ಲೂ ಪರಿಭಾವಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಕನ್ನಡ ಪಠ್ಯ ವಿಷಯವನ್ನು ನಾಲ್ಕು ವರ್ಷಗಳ ಪದವಿಯಲ್ಲಿ ಮೂರು ವರ್ಷ ಬೋಧಿಸುವ ತೀರ್ಮಾನ ಕೈಗೊಳ್ಳಬೇಕು. ಒಂದೇ ವರ್ಷಕ್ಕೆ ಮಿತಿಗೊಳಿಸಿದರೆ ಖಂಡಿತ ಸಂಘಟಿತ ಪ್ರತಿರೋಧವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಒಂದು ವರ್ಷ ಮಾತ್ರ ಭಾಷಾ ಕೌಶಲ್ಯ, ಭಾಷಾ ಸಾಮರ್ಥ್ಯಗಳನ್ನು ಕಲಿತು ಆನಂತರ ಅವರು ಬೇರೆ ಏನನ್ನಾದರೂ ಭಾಷೆಯ ಸಹಾಯವಿಲ್ಲದೆ ಕಲಿಯಬಹುದು ಎಂಬ ಕಲ್ಪನೆಯೇ ಅವೈಜ್ಞಾನಿಕವಾದುದು. ಮೌಲ್ಯಾಧಾರಿತ, ಕೌಶಲ್ಯಾಧಾರಿತ, ವೃತ್ತಿಪರ ಶಿಕ್ಷಣವನ್ನು ರೂಪಿಸುವ ನೆಲೆಯಲ್ಲಿ ಭಾಷೆಯನ್ನು ಕಡೆಗಣಿಸಲು ಆದೀತೆ ಎಂದು ಹಲವು ಪ್ರಾಧ್ಯಾಪಕರು, ಸಾಹಿತಿಗಳು ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವಥ್‌ನಾರಾಯಣ್‌ರವರನ್ನು ಪ್ರಶ್ನಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯ ಶಿಕ್ಷಣ ನೀತಿಯನ್ನಾಗಿ ಪರಿವರ್ತಿಸಿಕೊಂಡು ನಮ್ಮ ಅಸ್ತಿತ್ವಕ್ಕೆ ಮತ್ತು ಅನನ್ಯತೆಗೆ ಧಕ್ಕೆ ಬಾರದ ಹಾಗೆ ಶಿಕ್ಷಣವನ್ನು ನಾವಿಲ್ಲಿ ರೂಪಿಸಿಕೊಳ್ಳಬೇಕಲ್ಲವೆ? ಎಂದು ಡಾ.ರಾಮಲಿಂಗಪ್ಪ ಟಿ.ಬೇಗೂರು, ಡಾ.ನಟರಾಜ ಬೂದಾಳು, ಡಾ. ಮೀನಾಕ್ಷಿ ಬಾಳಿ, ಡಾ.ಡಿ.ಎಸ್.ಚೌಗಲೆ, ಡಾ. ಜಯಪ್ರಕಾಶ್ ಶೆಟ್ಟಿ, ಡಾ. ವಿನಯಾ ವಕ್ಕುಂದ, ಡಾ.ಅಮೃತಾ ಕಟಕೆ, ಡಾ.ಚಂದ್ರಶೇಕರ ನಂಗಲಿ, ಡಾ. ಬೈರಮಂಗಲ ರಾಮೇಗೌಡ, ಡಾ. ತಿಮ್ಮೇಗೌಡ, ಡಾ. ದಾದಾಪೀರ್ ನವಿಲೆಹಾಳ್, ಡಾ. ತಿಮ್ಮಯ್ಯ ಕೆ., ಡಾ.ಜಾಜಿ ದೇವೇಂದ್ರಪ್ಪ, ಡಾ. ಬಿ. ಕರಿಯಣ್ಣ, ಡಾ. ಗೀತಾ ವಸಂತ, ಡಾ. ಶಿವನಂಜಯ್ಯ ಮುಂತಾದವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಚರ್ಚೆ ಇಲ್ಲದೇ NEP 2020 ಜಾರಿಗೆ ಮುಂದಾದ ಕೇಂದ್ರ: ಶಿಕ್ಷಣ ತಜ್ಞರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕನ್ನಡವನ್ನು ಮೂಲೆಗುಂಪು ಮಾಡಿರುವ ಹೊಸ ಶಿಕ್ಷಣ ನೀತಿಯನ್ನು ಕನ್ನಡಿಗರೆಲ್ಲರೂ ಒಕ್ಕೋರಲಿನಿಂದ ವಿರೋಧಿಸಬೇಕು.

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...