Homeಚಳವಳಿನಾಲ್ಕು ವರ್ಷಗಳ ಪದವಿ ಕೋರ್ಸ್‌ನಲ್ಲಿ ಕನ್ನಡಕ್ಕೆ ಕುತ್ತು: ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿ ಹಲವರ ವಿರೋಧ

ನಾಲ್ಕು ವರ್ಷಗಳ ಪದವಿ ಕೋರ್ಸ್‌ನಲ್ಲಿ ಕನ್ನಡಕ್ಕೆ ಕುತ್ತು: ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿ ಹಲವರ ವಿರೋಧ

ಕನ್ನಡ ಪಠ್ಯ ವಿಷಯವನ್ನು ನಾಲ್ಕು ವರ್ಷಗಳ ಪದವಿಯಲ್ಲಿ ಮೂರು ವರ್ಷ ಬೋಧಿಸುವ ತೀರ್ಮಾನ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಸಂಘಟಿತ ಪ್ರತಿರೋಧ ಅನಿವಾರ್ಯ..

- Advertisement -
- Advertisement -

ಹಲವಾರು ರಾಜ್ಯಗಳ ವಿರೋಧ, ಶಿಕ್ಷಣ ತಜ್ಞರ ಅಸಮಾಧಾನದ ನಡುವೆಯೂ ಕೇಂದ್ರ ಸರ್ಕಾರ ತನ್ನ ಮಹತ್ವಕಾಂಕ್ಷೆಯ 2020ರ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲು ಹೊರಟಿದೆ. ಸರ್ಕಾರದ ಈ ನಡೆಯಿಂದ ಕನ್ನಡ ಭಾಷೆಗೆ ಕುತ್ತು ಬಂದೊದಗಲಿದೆ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿದಂತೆ ಹಲವಾರು ಸಾಹಿತಿಗಳು, ಪ್ರಾಧ್ಯಾಪಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಸ ಶಿಕ್ಷಣ ನೀತಿ ಅನುಷ್ಠಾನದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಭಿನ್ನ ಬಗೆಯ ಬಹುಶಿಸ್ತೀಯ 4 ವರ್ಷಗಳ ಸಾಮಾನ್ಯ ಪದವಿ ಮತ್ತು ಶಿಕ್ಷಕ ಪದವಿ ಕೋರ್ಸುಗಳನ್ನು ರೂಪಿಸಿದ್ದು, ಅದಕ್ಕಾಗಿ ಅನುಷ್ಠಾನ ಕಾರ್ಯಪಡೆಯನ್ನು ರಚಿಸಲಾಗಿದೆ. ಉನ್ನತ ಶಿಕ್ಷಣ ಪಠ್ಯಕ್ರಮ ರಚನೆಗೆ ನೇಮಿಸಲಾಗಿದ್ದ ಕಾರ್ಯಪಡೆ ಉಪ ಸಮಿತಿಯು ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ಕನ್ನಡವನ್ನೂ ಒಳಗೊಂಡಂತೆ ಎಲ್ಲಾ ಭಾಷಾ ಪಠ್ಯ ವಿಷಯವನ್ನು ಕೇವಲ ಎರಡು ಸೆಮಿಸ್ಟಾರ್‌ಗಳಿಗೆ ಅಂದರೆ ಒಂದೇ ವರ್ಷಕ್ಕೆ ಮಿತಿಗೊಳಿಸಲಾಗಿದೆ. ಇದರ ವಿರುದ್ದ ಹಲವಾರು ಸಾಹಿತಿಗಳು ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ.

ಮೂರು ವರ್ಷಗಳ ಪದವಿಯಲ್ಲಿ ಮೊದಲ ಎರಡು ವರ್ಷ ಅಂದರೆ ನಾಲ್ಕು ಸೆಮಿಸ್ಟರ್‌ಗಳಲ್ಲಿ ಕನ್ನಡಾದಿಯಾಗಿ ಭಾಷಾ ವಿಷಯ ಬೋಧನೆಗೆ ಅವಕಾಶವಿತ್ತು. ಈಗ ನಾಲ್ಕು ವರ್ಷಗಳ ಪದವಿಯಲ್ಲಿ ಎರಡು ವರ್ಷಗಳ ಭಾಷಾ ಬೋಧನೆಯನ್ನು ಮೂರು ವರ್ಷಗಳಿಗೆ ವಿಸ್ತರಿಸಬೇಕಾಗಿತ್ತು. ಕಡೇ ಪಕ್ಷ ಹಿಂದೆ ಇದ್ದಂತೆ ಎರಡು ವರ್ಷಗಳ ಅವಧಿಯನ್ನಾದರೂ ಉಳಿಸಿಕೊಳ್ಳಬೇಕಿತ್ತು. ಅದರ ಬದಲು ಒಂದು ವರ್ಷಕ್ಕೆ ಮಿತಿಗೊಳಿಸಿರುವುದು ಇದು ಭಾಷಾ ವಿಷಯಗಳಿಗೆ ಅದರಲ್ಲೂ ವಿಶೇಷವಾಗಿ ಕನ್ನಡಕ್ಕೆ ಆಗಿರುವ ಅನ್ಯಾಯ. ಇದು ಖಂಡನೀಯ ಎಂದು ಬರಗೂರು ರಾಮಚಂದ್ರಪ್ಪ ಪತ್ರದಲ್ಲಿ ತಿಳಿಸಿದ್ದಾರೆ.

ಯಾವುದೇ ವಿಶೇಷ ವಿಷಯದಲ್ಲಿ ಪದವಿ ವ್ಯಾಸಂಗ ಮಾಡುವವರಿಗೆ ಕನ್ನಡ ಭಾಷೆ, ಸಾಹಿತ್ಯದ ಸಾಮಾನ್ಯ ಪರಿಚಯ ಕಡ್ಡಾಯವಾಗಬೇಕು. ಇದು ಕೇವಲ ಕನ್ನಡಾಭಿಮಾನದ ಪ್ರಶ್ನೆಯಲ್ಲಿ, ಯಾವುದೇ ವ್ಯಾಸಂಗಗಳಲ್ಲಿ ಸಾಂಸ್ಕೃತಿಕ ಅರಿವು ಮೂಡಿಸಿ ಮಾನವೀಯ ಮೌಲ್ಯಗಳನ್ನು ನೆಲೆಗೊಳಿಸಲು ಕನ್ನಡ ಭಾಷೆ, ಸಾಹಿತ್ಯಗಳ ಸಂಕ್ಷಿಪ್ತ ಸಾಮಾನ್ಯ ಪರಿಚಯವು ಪೂರಕವಾಗುತ್ತದೆ. ಶಿಕ್ಷಣವನ್ನು ಸಾಂಸ್ಕೃತಿಕ ಜನಪರ ಪ್ರಜೆಯ ನೆಲೆಯಲ್ಲೂ ಪರಿಭಾವಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಕನ್ನಡ ಪಠ್ಯ ವಿಷಯವನ್ನು ನಾಲ್ಕು ವರ್ಷಗಳ ಪದವಿಯಲ್ಲಿ ಮೂರು ವರ್ಷ ಬೋಧಿಸುವ ತೀರ್ಮಾನ ಕೈಗೊಳ್ಳಬೇಕು. ಒಂದೇ ವರ್ಷಕ್ಕೆ ಮಿತಿಗೊಳಿಸಿದರೆ ಖಂಡಿತ ಸಂಘಟಿತ ಪ್ರತಿರೋಧವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಒಂದು ವರ್ಷ ಮಾತ್ರ ಭಾಷಾ ಕೌಶಲ್ಯ, ಭಾಷಾ ಸಾಮರ್ಥ್ಯಗಳನ್ನು ಕಲಿತು ಆನಂತರ ಅವರು ಬೇರೆ ಏನನ್ನಾದರೂ ಭಾಷೆಯ ಸಹಾಯವಿಲ್ಲದೆ ಕಲಿಯಬಹುದು ಎಂಬ ಕಲ್ಪನೆಯೇ ಅವೈಜ್ಞಾನಿಕವಾದುದು. ಮೌಲ್ಯಾಧಾರಿತ, ಕೌಶಲ್ಯಾಧಾರಿತ, ವೃತ್ತಿಪರ ಶಿಕ್ಷಣವನ್ನು ರೂಪಿಸುವ ನೆಲೆಯಲ್ಲಿ ಭಾಷೆಯನ್ನು ಕಡೆಗಣಿಸಲು ಆದೀತೆ ಎಂದು ಹಲವು ಪ್ರಾಧ್ಯಾಪಕರು, ಸಾಹಿತಿಗಳು ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವಥ್‌ನಾರಾಯಣ್‌ರವರನ್ನು ಪ್ರಶ್ನಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯ ಶಿಕ್ಷಣ ನೀತಿಯನ್ನಾಗಿ ಪರಿವರ್ತಿಸಿಕೊಂಡು ನಮ್ಮ ಅಸ್ತಿತ್ವಕ್ಕೆ ಮತ್ತು ಅನನ್ಯತೆಗೆ ಧಕ್ಕೆ ಬಾರದ ಹಾಗೆ ಶಿಕ್ಷಣವನ್ನು ನಾವಿಲ್ಲಿ ರೂಪಿಸಿಕೊಳ್ಳಬೇಕಲ್ಲವೆ? ಎಂದು ಡಾ.ರಾಮಲಿಂಗಪ್ಪ ಟಿ.ಬೇಗೂರು, ಡಾ.ನಟರಾಜ ಬೂದಾಳು, ಡಾ. ಮೀನಾಕ್ಷಿ ಬಾಳಿ, ಡಾ.ಡಿ.ಎಸ್.ಚೌಗಲೆ, ಡಾ. ಜಯಪ್ರಕಾಶ್ ಶೆಟ್ಟಿ, ಡಾ. ವಿನಯಾ ವಕ್ಕುಂದ, ಡಾ.ಅಮೃತಾ ಕಟಕೆ, ಡಾ.ಚಂದ್ರಶೇಕರ ನಂಗಲಿ, ಡಾ. ಬೈರಮಂಗಲ ರಾಮೇಗೌಡ, ಡಾ. ತಿಮ್ಮೇಗೌಡ, ಡಾ. ದಾದಾಪೀರ್ ನವಿಲೆಹಾಳ್, ಡಾ. ತಿಮ್ಮಯ್ಯ ಕೆ., ಡಾ.ಜಾಜಿ ದೇವೇಂದ್ರಪ್ಪ, ಡಾ. ಬಿ. ಕರಿಯಣ್ಣ, ಡಾ. ಗೀತಾ ವಸಂತ, ಡಾ. ಶಿವನಂಜಯ್ಯ ಮುಂತಾದವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಚರ್ಚೆ ಇಲ್ಲದೇ NEP 2020 ಜಾರಿಗೆ ಮುಂದಾದ ಕೇಂದ್ರ: ಶಿಕ್ಷಣ ತಜ್ಞರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕನ್ನಡವನ್ನು ಮೂಲೆಗುಂಪು ಮಾಡಿರುವ ಹೊಸ ಶಿಕ್ಷಣ ನೀತಿಯನ್ನು ಕನ್ನಡಿಗರೆಲ್ಲರೂ ಒಕ್ಕೋರಲಿನಿಂದ ವಿರೋಧಿಸಬೇಕು.

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...