Homeಚಳವಳಿನಾಲ್ಕು ವರ್ಷಗಳ ಪದವಿ ಕೋರ್ಸ್‌ನಲ್ಲಿ ಕನ್ನಡಕ್ಕೆ ಕುತ್ತು: ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿ ಹಲವರ ವಿರೋಧ

ನಾಲ್ಕು ವರ್ಷಗಳ ಪದವಿ ಕೋರ್ಸ್‌ನಲ್ಲಿ ಕನ್ನಡಕ್ಕೆ ಕುತ್ತು: ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿ ಹಲವರ ವಿರೋಧ

ಕನ್ನಡ ಪಠ್ಯ ವಿಷಯವನ್ನು ನಾಲ್ಕು ವರ್ಷಗಳ ಪದವಿಯಲ್ಲಿ ಮೂರು ವರ್ಷ ಬೋಧಿಸುವ ತೀರ್ಮಾನ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಸಂಘಟಿತ ಪ್ರತಿರೋಧ ಅನಿವಾರ್ಯ..

- Advertisement -
- Advertisement -

ಹಲವಾರು ರಾಜ್ಯಗಳ ವಿರೋಧ, ಶಿಕ್ಷಣ ತಜ್ಞರ ಅಸಮಾಧಾನದ ನಡುವೆಯೂ ಕೇಂದ್ರ ಸರ್ಕಾರ ತನ್ನ ಮಹತ್ವಕಾಂಕ್ಷೆಯ 2020ರ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲು ಹೊರಟಿದೆ. ಸರ್ಕಾರದ ಈ ನಡೆಯಿಂದ ಕನ್ನಡ ಭಾಷೆಗೆ ಕುತ್ತು ಬಂದೊದಗಲಿದೆ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿದಂತೆ ಹಲವಾರು ಸಾಹಿತಿಗಳು, ಪ್ರಾಧ್ಯಾಪಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಸ ಶಿಕ್ಷಣ ನೀತಿ ಅನುಷ್ಠಾನದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಭಿನ್ನ ಬಗೆಯ ಬಹುಶಿಸ್ತೀಯ 4 ವರ್ಷಗಳ ಸಾಮಾನ್ಯ ಪದವಿ ಮತ್ತು ಶಿಕ್ಷಕ ಪದವಿ ಕೋರ್ಸುಗಳನ್ನು ರೂಪಿಸಿದ್ದು, ಅದಕ್ಕಾಗಿ ಅನುಷ್ಠಾನ ಕಾರ್ಯಪಡೆಯನ್ನು ರಚಿಸಲಾಗಿದೆ. ಉನ್ನತ ಶಿಕ್ಷಣ ಪಠ್ಯಕ್ರಮ ರಚನೆಗೆ ನೇಮಿಸಲಾಗಿದ್ದ ಕಾರ್ಯಪಡೆ ಉಪ ಸಮಿತಿಯು ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ಕನ್ನಡವನ್ನೂ ಒಳಗೊಂಡಂತೆ ಎಲ್ಲಾ ಭಾಷಾ ಪಠ್ಯ ವಿಷಯವನ್ನು ಕೇವಲ ಎರಡು ಸೆಮಿಸ್ಟಾರ್‌ಗಳಿಗೆ ಅಂದರೆ ಒಂದೇ ವರ್ಷಕ್ಕೆ ಮಿತಿಗೊಳಿಸಲಾಗಿದೆ. ಇದರ ವಿರುದ್ದ ಹಲವಾರು ಸಾಹಿತಿಗಳು ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ.

ಮೂರು ವರ್ಷಗಳ ಪದವಿಯಲ್ಲಿ ಮೊದಲ ಎರಡು ವರ್ಷ ಅಂದರೆ ನಾಲ್ಕು ಸೆಮಿಸ್ಟರ್‌ಗಳಲ್ಲಿ ಕನ್ನಡಾದಿಯಾಗಿ ಭಾಷಾ ವಿಷಯ ಬೋಧನೆಗೆ ಅವಕಾಶವಿತ್ತು. ಈಗ ನಾಲ್ಕು ವರ್ಷಗಳ ಪದವಿಯಲ್ಲಿ ಎರಡು ವರ್ಷಗಳ ಭಾಷಾ ಬೋಧನೆಯನ್ನು ಮೂರು ವರ್ಷಗಳಿಗೆ ವಿಸ್ತರಿಸಬೇಕಾಗಿತ್ತು. ಕಡೇ ಪಕ್ಷ ಹಿಂದೆ ಇದ್ದಂತೆ ಎರಡು ವರ್ಷಗಳ ಅವಧಿಯನ್ನಾದರೂ ಉಳಿಸಿಕೊಳ್ಳಬೇಕಿತ್ತು. ಅದರ ಬದಲು ಒಂದು ವರ್ಷಕ್ಕೆ ಮಿತಿಗೊಳಿಸಿರುವುದು ಇದು ಭಾಷಾ ವಿಷಯಗಳಿಗೆ ಅದರಲ್ಲೂ ವಿಶೇಷವಾಗಿ ಕನ್ನಡಕ್ಕೆ ಆಗಿರುವ ಅನ್ಯಾಯ. ಇದು ಖಂಡನೀಯ ಎಂದು ಬರಗೂರು ರಾಮಚಂದ್ರಪ್ಪ ಪತ್ರದಲ್ಲಿ ತಿಳಿಸಿದ್ದಾರೆ.

ಯಾವುದೇ ವಿಶೇಷ ವಿಷಯದಲ್ಲಿ ಪದವಿ ವ್ಯಾಸಂಗ ಮಾಡುವವರಿಗೆ ಕನ್ನಡ ಭಾಷೆ, ಸಾಹಿತ್ಯದ ಸಾಮಾನ್ಯ ಪರಿಚಯ ಕಡ್ಡಾಯವಾಗಬೇಕು. ಇದು ಕೇವಲ ಕನ್ನಡಾಭಿಮಾನದ ಪ್ರಶ್ನೆಯಲ್ಲಿ, ಯಾವುದೇ ವ್ಯಾಸಂಗಗಳಲ್ಲಿ ಸಾಂಸ್ಕೃತಿಕ ಅರಿವು ಮೂಡಿಸಿ ಮಾನವೀಯ ಮೌಲ್ಯಗಳನ್ನು ನೆಲೆಗೊಳಿಸಲು ಕನ್ನಡ ಭಾಷೆ, ಸಾಹಿತ್ಯಗಳ ಸಂಕ್ಷಿಪ್ತ ಸಾಮಾನ್ಯ ಪರಿಚಯವು ಪೂರಕವಾಗುತ್ತದೆ. ಶಿಕ್ಷಣವನ್ನು ಸಾಂಸ್ಕೃತಿಕ ಜನಪರ ಪ್ರಜೆಯ ನೆಲೆಯಲ್ಲೂ ಪರಿಭಾವಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಕನ್ನಡ ಪಠ್ಯ ವಿಷಯವನ್ನು ನಾಲ್ಕು ವರ್ಷಗಳ ಪದವಿಯಲ್ಲಿ ಮೂರು ವರ್ಷ ಬೋಧಿಸುವ ತೀರ್ಮಾನ ಕೈಗೊಳ್ಳಬೇಕು. ಒಂದೇ ವರ್ಷಕ್ಕೆ ಮಿತಿಗೊಳಿಸಿದರೆ ಖಂಡಿತ ಸಂಘಟಿತ ಪ್ರತಿರೋಧವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಒಂದು ವರ್ಷ ಮಾತ್ರ ಭಾಷಾ ಕೌಶಲ್ಯ, ಭಾಷಾ ಸಾಮರ್ಥ್ಯಗಳನ್ನು ಕಲಿತು ಆನಂತರ ಅವರು ಬೇರೆ ಏನನ್ನಾದರೂ ಭಾಷೆಯ ಸಹಾಯವಿಲ್ಲದೆ ಕಲಿಯಬಹುದು ಎಂಬ ಕಲ್ಪನೆಯೇ ಅವೈಜ್ಞಾನಿಕವಾದುದು. ಮೌಲ್ಯಾಧಾರಿತ, ಕೌಶಲ್ಯಾಧಾರಿತ, ವೃತ್ತಿಪರ ಶಿಕ್ಷಣವನ್ನು ರೂಪಿಸುವ ನೆಲೆಯಲ್ಲಿ ಭಾಷೆಯನ್ನು ಕಡೆಗಣಿಸಲು ಆದೀತೆ ಎಂದು ಹಲವು ಪ್ರಾಧ್ಯಾಪಕರು, ಸಾಹಿತಿಗಳು ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವಥ್‌ನಾರಾಯಣ್‌ರವರನ್ನು ಪ್ರಶ್ನಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯ ಶಿಕ್ಷಣ ನೀತಿಯನ್ನಾಗಿ ಪರಿವರ್ತಿಸಿಕೊಂಡು ನಮ್ಮ ಅಸ್ತಿತ್ವಕ್ಕೆ ಮತ್ತು ಅನನ್ಯತೆಗೆ ಧಕ್ಕೆ ಬಾರದ ಹಾಗೆ ಶಿಕ್ಷಣವನ್ನು ನಾವಿಲ್ಲಿ ರೂಪಿಸಿಕೊಳ್ಳಬೇಕಲ್ಲವೆ? ಎಂದು ಡಾ.ರಾಮಲಿಂಗಪ್ಪ ಟಿ.ಬೇಗೂರು, ಡಾ.ನಟರಾಜ ಬೂದಾಳು, ಡಾ. ಮೀನಾಕ್ಷಿ ಬಾಳಿ, ಡಾ.ಡಿ.ಎಸ್.ಚೌಗಲೆ, ಡಾ. ಜಯಪ್ರಕಾಶ್ ಶೆಟ್ಟಿ, ಡಾ. ವಿನಯಾ ವಕ್ಕುಂದ, ಡಾ.ಅಮೃತಾ ಕಟಕೆ, ಡಾ.ಚಂದ್ರಶೇಕರ ನಂಗಲಿ, ಡಾ. ಬೈರಮಂಗಲ ರಾಮೇಗೌಡ, ಡಾ. ತಿಮ್ಮೇಗೌಡ, ಡಾ. ದಾದಾಪೀರ್ ನವಿಲೆಹಾಳ್, ಡಾ. ತಿಮ್ಮಯ್ಯ ಕೆ., ಡಾ.ಜಾಜಿ ದೇವೇಂದ್ರಪ್ಪ, ಡಾ. ಬಿ. ಕರಿಯಣ್ಣ, ಡಾ. ಗೀತಾ ವಸಂತ, ಡಾ. ಶಿವನಂಜಯ್ಯ ಮುಂತಾದವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಚರ್ಚೆ ಇಲ್ಲದೇ NEP 2020 ಜಾರಿಗೆ ಮುಂದಾದ ಕೇಂದ್ರ: ಶಿಕ್ಷಣ ತಜ್ಞರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕನ್ನಡವನ್ನು ಮೂಲೆಗುಂಪು ಮಾಡಿರುವ ಹೊಸ ಶಿಕ್ಷಣ ನೀತಿಯನ್ನು ಕನ್ನಡಿಗರೆಲ್ಲರೂ ಒಕ್ಕೋರಲಿನಿಂದ ವಿರೋಧಿಸಬೇಕು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...