Homeಚಳವಳಿನಾಲ್ಕು ವರ್ಷಗಳ ಪದವಿ ಕೋರ್ಸ್‌ನಲ್ಲಿ ಕನ್ನಡಕ್ಕೆ ಕುತ್ತು: ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿ ಹಲವರ ವಿರೋಧ

ನಾಲ್ಕು ವರ್ಷಗಳ ಪದವಿ ಕೋರ್ಸ್‌ನಲ್ಲಿ ಕನ್ನಡಕ್ಕೆ ಕುತ್ತು: ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿ ಹಲವರ ವಿರೋಧ

ಕನ್ನಡ ಪಠ್ಯ ವಿಷಯವನ್ನು ನಾಲ್ಕು ವರ್ಷಗಳ ಪದವಿಯಲ್ಲಿ ಮೂರು ವರ್ಷ ಬೋಧಿಸುವ ತೀರ್ಮಾನ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಸಂಘಟಿತ ಪ್ರತಿರೋಧ ಅನಿವಾರ್ಯ..

- Advertisement -
- Advertisement -

ಹಲವಾರು ರಾಜ್ಯಗಳ ವಿರೋಧ, ಶಿಕ್ಷಣ ತಜ್ಞರ ಅಸಮಾಧಾನದ ನಡುವೆಯೂ ಕೇಂದ್ರ ಸರ್ಕಾರ ತನ್ನ ಮಹತ್ವಕಾಂಕ್ಷೆಯ 2020ರ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲು ಹೊರಟಿದೆ. ಸರ್ಕಾರದ ಈ ನಡೆಯಿಂದ ಕನ್ನಡ ಭಾಷೆಗೆ ಕುತ್ತು ಬಂದೊದಗಲಿದೆ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿದಂತೆ ಹಲವಾರು ಸಾಹಿತಿಗಳು, ಪ್ರಾಧ್ಯಾಪಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಸ ಶಿಕ್ಷಣ ನೀತಿ ಅನುಷ್ಠಾನದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಭಿನ್ನ ಬಗೆಯ ಬಹುಶಿಸ್ತೀಯ 4 ವರ್ಷಗಳ ಸಾಮಾನ್ಯ ಪದವಿ ಮತ್ತು ಶಿಕ್ಷಕ ಪದವಿ ಕೋರ್ಸುಗಳನ್ನು ರೂಪಿಸಿದ್ದು, ಅದಕ್ಕಾಗಿ ಅನುಷ್ಠಾನ ಕಾರ್ಯಪಡೆಯನ್ನು ರಚಿಸಲಾಗಿದೆ. ಉನ್ನತ ಶಿಕ್ಷಣ ಪಠ್ಯಕ್ರಮ ರಚನೆಗೆ ನೇಮಿಸಲಾಗಿದ್ದ ಕಾರ್ಯಪಡೆ ಉಪ ಸಮಿತಿಯು ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ಕನ್ನಡವನ್ನೂ ಒಳಗೊಂಡಂತೆ ಎಲ್ಲಾ ಭಾಷಾ ಪಠ್ಯ ವಿಷಯವನ್ನು ಕೇವಲ ಎರಡು ಸೆಮಿಸ್ಟಾರ್‌ಗಳಿಗೆ ಅಂದರೆ ಒಂದೇ ವರ್ಷಕ್ಕೆ ಮಿತಿಗೊಳಿಸಲಾಗಿದೆ. ಇದರ ವಿರುದ್ದ ಹಲವಾರು ಸಾಹಿತಿಗಳು ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ.

ಮೂರು ವರ್ಷಗಳ ಪದವಿಯಲ್ಲಿ ಮೊದಲ ಎರಡು ವರ್ಷ ಅಂದರೆ ನಾಲ್ಕು ಸೆಮಿಸ್ಟರ್‌ಗಳಲ್ಲಿ ಕನ್ನಡಾದಿಯಾಗಿ ಭಾಷಾ ವಿಷಯ ಬೋಧನೆಗೆ ಅವಕಾಶವಿತ್ತು. ಈಗ ನಾಲ್ಕು ವರ್ಷಗಳ ಪದವಿಯಲ್ಲಿ ಎರಡು ವರ್ಷಗಳ ಭಾಷಾ ಬೋಧನೆಯನ್ನು ಮೂರು ವರ್ಷಗಳಿಗೆ ವಿಸ್ತರಿಸಬೇಕಾಗಿತ್ತು. ಕಡೇ ಪಕ್ಷ ಹಿಂದೆ ಇದ್ದಂತೆ ಎರಡು ವರ್ಷಗಳ ಅವಧಿಯನ್ನಾದರೂ ಉಳಿಸಿಕೊಳ್ಳಬೇಕಿತ್ತು. ಅದರ ಬದಲು ಒಂದು ವರ್ಷಕ್ಕೆ ಮಿತಿಗೊಳಿಸಿರುವುದು ಇದು ಭಾಷಾ ವಿಷಯಗಳಿಗೆ ಅದರಲ್ಲೂ ವಿಶೇಷವಾಗಿ ಕನ್ನಡಕ್ಕೆ ಆಗಿರುವ ಅನ್ಯಾಯ. ಇದು ಖಂಡನೀಯ ಎಂದು ಬರಗೂರು ರಾಮಚಂದ್ರಪ್ಪ ಪತ್ರದಲ್ಲಿ ತಿಳಿಸಿದ್ದಾರೆ.

ಯಾವುದೇ ವಿಶೇಷ ವಿಷಯದಲ್ಲಿ ಪದವಿ ವ್ಯಾಸಂಗ ಮಾಡುವವರಿಗೆ ಕನ್ನಡ ಭಾಷೆ, ಸಾಹಿತ್ಯದ ಸಾಮಾನ್ಯ ಪರಿಚಯ ಕಡ್ಡಾಯವಾಗಬೇಕು. ಇದು ಕೇವಲ ಕನ್ನಡಾಭಿಮಾನದ ಪ್ರಶ್ನೆಯಲ್ಲಿ, ಯಾವುದೇ ವ್ಯಾಸಂಗಗಳಲ್ಲಿ ಸಾಂಸ್ಕೃತಿಕ ಅರಿವು ಮೂಡಿಸಿ ಮಾನವೀಯ ಮೌಲ್ಯಗಳನ್ನು ನೆಲೆಗೊಳಿಸಲು ಕನ್ನಡ ಭಾಷೆ, ಸಾಹಿತ್ಯಗಳ ಸಂಕ್ಷಿಪ್ತ ಸಾಮಾನ್ಯ ಪರಿಚಯವು ಪೂರಕವಾಗುತ್ತದೆ. ಶಿಕ್ಷಣವನ್ನು ಸಾಂಸ್ಕೃತಿಕ ಜನಪರ ಪ್ರಜೆಯ ನೆಲೆಯಲ್ಲೂ ಪರಿಭಾವಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಕನ್ನಡ ಪಠ್ಯ ವಿಷಯವನ್ನು ನಾಲ್ಕು ವರ್ಷಗಳ ಪದವಿಯಲ್ಲಿ ಮೂರು ವರ್ಷ ಬೋಧಿಸುವ ತೀರ್ಮಾನ ಕೈಗೊಳ್ಳಬೇಕು. ಒಂದೇ ವರ್ಷಕ್ಕೆ ಮಿತಿಗೊಳಿಸಿದರೆ ಖಂಡಿತ ಸಂಘಟಿತ ಪ್ರತಿರೋಧವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಒಂದು ವರ್ಷ ಮಾತ್ರ ಭಾಷಾ ಕೌಶಲ್ಯ, ಭಾಷಾ ಸಾಮರ್ಥ್ಯಗಳನ್ನು ಕಲಿತು ಆನಂತರ ಅವರು ಬೇರೆ ಏನನ್ನಾದರೂ ಭಾಷೆಯ ಸಹಾಯವಿಲ್ಲದೆ ಕಲಿಯಬಹುದು ಎಂಬ ಕಲ್ಪನೆಯೇ ಅವೈಜ್ಞಾನಿಕವಾದುದು. ಮೌಲ್ಯಾಧಾರಿತ, ಕೌಶಲ್ಯಾಧಾರಿತ, ವೃತ್ತಿಪರ ಶಿಕ್ಷಣವನ್ನು ರೂಪಿಸುವ ನೆಲೆಯಲ್ಲಿ ಭಾಷೆಯನ್ನು ಕಡೆಗಣಿಸಲು ಆದೀತೆ ಎಂದು ಹಲವು ಪ್ರಾಧ್ಯಾಪಕರು, ಸಾಹಿತಿಗಳು ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವಥ್‌ನಾರಾಯಣ್‌ರವರನ್ನು ಪ್ರಶ್ನಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯ ಶಿಕ್ಷಣ ನೀತಿಯನ್ನಾಗಿ ಪರಿವರ್ತಿಸಿಕೊಂಡು ನಮ್ಮ ಅಸ್ತಿತ್ವಕ್ಕೆ ಮತ್ತು ಅನನ್ಯತೆಗೆ ಧಕ್ಕೆ ಬಾರದ ಹಾಗೆ ಶಿಕ್ಷಣವನ್ನು ನಾವಿಲ್ಲಿ ರೂಪಿಸಿಕೊಳ್ಳಬೇಕಲ್ಲವೆ? ಎಂದು ಡಾ.ರಾಮಲಿಂಗಪ್ಪ ಟಿ.ಬೇಗೂರು, ಡಾ.ನಟರಾಜ ಬೂದಾಳು, ಡಾ. ಮೀನಾಕ್ಷಿ ಬಾಳಿ, ಡಾ.ಡಿ.ಎಸ್.ಚೌಗಲೆ, ಡಾ. ಜಯಪ್ರಕಾಶ್ ಶೆಟ್ಟಿ, ಡಾ. ವಿನಯಾ ವಕ್ಕುಂದ, ಡಾ.ಅಮೃತಾ ಕಟಕೆ, ಡಾ.ಚಂದ್ರಶೇಕರ ನಂಗಲಿ, ಡಾ. ಬೈರಮಂಗಲ ರಾಮೇಗೌಡ, ಡಾ. ತಿಮ್ಮೇಗೌಡ, ಡಾ. ದಾದಾಪೀರ್ ನವಿಲೆಹಾಳ್, ಡಾ. ತಿಮ್ಮಯ್ಯ ಕೆ., ಡಾ.ಜಾಜಿ ದೇವೇಂದ್ರಪ್ಪ, ಡಾ. ಬಿ. ಕರಿಯಣ್ಣ, ಡಾ. ಗೀತಾ ವಸಂತ, ಡಾ. ಶಿವನಂಜಯ್ಯ ಮುಂತಾದವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಚರ್ಚೆ ಇಲ್ಲದೇ NEP 2020 ಜಾರಿಗೆ ಮುಂದಾದ ಕೇಂದ್ರ: ಶಿಕ್ಷಣ ತಜ್ಞರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕನ್ನಡವನ್ನು ಮೂಲೆಗುಂಪು ಮಾಡಿರುವ ಹೊಸ ಶಿಕ್ಷಣ ನೀತಿಯನ್ನು ಕನ್ನಡಿಗರೆಲ್ಲರೂ ಒಕ್ಕೋರಲಿನಿಂದ ವಿರೋಧಿಸಬೇಕು.

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...