Homeಚಳವಳಿನಾಲ್ಕು ವರ್ಷಗಳ ಪದವಿ ಕೋರ್ಸ್‌ನಲ್ಲಿ ಕನ್ನಡಕ್ಕೆ ಕುತ್ತು: ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿ ಹಲವರ ವಿರೋಧ

ನಾಲ್ಕು ವರ್ಷಗಳ ಪದವಿ ಕೋರ್ಸ್‌ನಲ್ಲಿ ಕನ್ನಡಕ್ಕೆ ಕುತ್ತು: ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿ ಹಲವರ ವಿರೋಧ

ಕನ್ನಡ ಪಠ್ಯ ವಿಷಯವನ್ನು ನಾಲ್ಕು ವರ್ಷಗಳ ಪದವಿಯಲ್ಲಿ ಮೂರು ವರ್ಷ ಬೋಧಿಸುವ ತೀರ್ಮಾನ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಸಂಘಟಿತ ಪ್ರತಿರೋಧ ಅನಿವಾರ್ಯ..

- Advertisement -
- Advertisement -

ಹಲವಾರು ರಾಜ್ಯಗಳ ವಿರೋಧ, ಶಿಕ್ಷಣ ತಜ್ಞರ ಅಸಮಾಧಾನದ ನಡುವೆಯೂ ಕೇಂದ್ರ ಸರ್ಕಾರ ತನ್ನ ಮಹತ್ವಕಾಂಕ್ಷೆಯ 2020ರ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲು ಹೊರಟಿದೆ. ಸರ್ಕಾರದ ಈ ನಡೆಯಿಂದ ಕನ್ನಡ ಭಾಷೆಗೆ ಕುತ್ತು ಬಂದೊದಗಲಿದೆ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿದಂತೆ ಹಲವಾರು ಸಾಹಿತಿಗಳು, ಪ್ರಾಧ್ಯಾಪಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಸ ಶಿಕ್ಷಣ ನೀತಿ ಅನುಷ್ಠಾನದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಭಿನ್ನ ಬಗೆಯ ಬಹುಶಿಸ್ತೀಯ 4 ವರ್ಷಗಳ ಸಾಮಾನ್ಯ ಪದವಿ ಮತ್ತು ಶಿಕ್ಷಕ ಪದವಿ ಕೋರ್ಸುಗಳನ್ನು ರೂಪಿಸಿದ್ದು, ಅದಕ್ಕಾಗಿ ಅನುಷ್ಠಾನ ಕಾರ್ಯಪಡೆಯನ್ನು ರಚಿಸಲಾಗಿದೆ. ಉನ್ನತ ಶಿಕ್ಷಣ ಪಠ್ಯಕ್ರಮ ರಚನೆಗೆ ನೇಮಿಸಲಾಗಿದ್ದ ಕಾರ್ಯಪಡೆ ಉಪ ಸಮಿತಿಯು ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ಕನ್ನಡವನ್ನೂ ಒಳಗೊಂಡಂತೆ ಎಲ್ಲಾ ಭಾಷಾ ಪಠ್ಯ ವಿಷಯವನ್ನು ಕೇವಲ ಎರಡು ಸೆಮಿಸ್ಟಾರ್‌ಗಳಿಗೆ ಅಂದರೆ ಒಂದೇ ವರ್ಷಕ್ಕೆ ಮಿತಿಗೊಳಿಸಲಾಗಿದೆ. ಇದರ ವಿರುದ್ದ ಹಲವಾರು ಸಾಹಿತಿಗಳು ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ.

ಮೂರು ವರ್ಷಗಳ ಪದವಿಯಲ್ಲಿ ಮೊದಲ ಎರಡು ವರ್ಷ ಅಂದರೆ ನಾಲ್ಕು ಸೆಮಿಸ್ಟರ್‌ಗಳಲ್ಲಿ ಕನ್ನಡಾದಿಯಾಗಿ ಭಾಷಾ ವಿಷಯ ಬೋಧನೆಗೆ ಅವಕಾಶವಿತ್ತು. ಈಗ ನಾಲ್ಕು ವರ್ಷಗಳ ಪದವಿಯಲ್ಲಿ ಎರಡು ವರ್ಷಗಳ ಭಾಷಾ ಬೋಧನೆಯನ್ನು ಮೂರು ವರ್ಷಗಳಿಗೆ ವಿಸ್ತರಿಸಬೇಕಾಗಿತ್ತು. ಕಡೇ ಪಕ್ಷ ಹಿಂದೆ ಇದ್ದಂತೆ ಎರಡು ವರ್ಷಗಳ ಅವಧಿಯನ್ನಾದರೂ ಉಳಿಸಿಕೊಳ್ಳಬೇಕಿತ್ತು. ಅದರ ಬದಲು ಒಂದು ವರ್ಷಕ್ಕೆ ಮಿತಿಗೊಳಿಸಿರುವುದು ಇದು ಭಾಷಾ ವಿಷಯಗಳಿಗೆ ಅದರಲ್ಲೂ ವಿಶೇಷವಾಗಿ ಕನ್ನಡಕ್ಕೆ ಆಗಿರುವ ಅನ್ಯಾಯ. ಇದು ಖಂಡನೀಯ ಎಂದು ಬರಗೂರು ರಾಮಚಂದ್ರಪ್ಪ ಪತ್ರದಲ್ಲಿ ತಿಳಿಸಿದ್ದಾರೆ.

ಯಾವುದೇ ವಿಶೇಷ ವಿಷಯದಲ್ಲಿ ಪದವಿ ವ್ಯಾಸಂಗ ಮಾಡುವವರಿಗೆ ಕನ್ನಡ ಭಾಷೆ, ಸಾಹಿತ್ಯದ ಸಾಮಾನ್ಯ ಪರಿಚಯ ಕಡ್ಡಾಯವಾಗಬೇಕು. ಇದು ಕೇವಲ ಕನ್ನಡಾಭಿಮಾನದ ಪ್ರಶ್ನೆಯಲ್ಲಿ, ಯಾವುದೇ ವ್ಯಾಸಂಗಗಳಲ್ಲಿ ಸಾಂಸ್ಕೃತಿಕ ಅರಿವು ಮೂಡಿಸಿ ಮಾನವೀಯ ಮೌಲ್ಯಗಳನ್ನು ನೆಲೆಗೊಳಿಸಲು ಕನ್ನಡ ಭಾಷೆ, ಸಾಹಿತ್ಯಗಳ ಸಂಕ್ಷಿಪ್ತ ಸಾಮಾನ್ಯ ಪರಿಚಯವು ಪೂರಕವಾಗುತ್ತದೆ. ಶಿಕ್ಷಣವನ್ನು ಸಾಂಸ್ಕೃತಿಕ ಜನಪರ ಪ್ರಜೆಯ ನೆಲೆಯಲ್ಲೂ ಪರಿಭಾವಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಕನ್ನಡ ಪಠ್ಯ ವಿಷಯವನ್ನು ನಾಲ್ಕು ವರ್ಷಗಳ ಪದವಿಯಲ್ಲಿ ಮೂರು ವರ್ಷ ಬೋಧಿಸುವ ತೀರ್ಮಾನ ಕೈಗೊಳ್ಳಬೇಕು. ಒಂದೇ ವರ್ಷಕ್ಕೆ ಮಿತಿಗೊಳಿಸಿದರೆ ಖಂಡಿತ ಸಂಘಟಿತ ಪ್ರತಿರೋಧವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಒಂದು ವರ್ಷ ಮಾತ್ರ ಭಾಷಾ ಕೌಶಲ್ಯ, ಭಾಷಾ ಸಾಮರ್ಥ್ಯಗಳನ್ನು ಕಲಿತು ಆನಂತರ ಅವರು ಬೇರೆ ಏನನ್ನಾದರೂ ಭಾಷೆಯ ಸಹಾಯವಿಲ್ಲದೆ ಕಲಿಯಬಹುದು ಎಂಬ ಕಲ್ಪನೆಯೇ ಅವೈಜ್ಞಾನಿಕವಾದುದು. ಮೌಲ್ಯಾಧಾರಿತ, ಕೌಶಲ್ಯಾಧಾರಿತ, ವೃತ್ತಿಪರ ಶಿಕ್ಷಣವನ್ನು ರೂಪಿಸುವ ನೆಲೆಯಲ್ಲಿ ಭಾಷೆಯನ್ನು ಕಡೆಗಣಿಸಲು ಆದೀತೆ ಎಂದು ಹಲವು ಪ್ರಾಧ್ಯಾಪಕರು, ಸಾಹಿತಿಗಳು ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವಥ್‌ನಾರಾಯಣ್‌ರವರನ್ನು ಪ್ರಶ್ನಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯ ಶಿಕ್ಷಣ ನೀತಿಯನ್ನಾಗಿ ಪರಿವರ್ತಿಸಿಕೊಂಡು ನಮ್ಮ ಅಸ್ತಿತ್ವಕ್ಕೆ ಮತ್ತು ಅನನ್ಯತೆಗೆ ಧಕ್ಕೆ ಬಾರದ ಹಾಗೆ ಶಿಕ್ಷಣವನ್ನು ನಾವಿಲ್ಲಿ ರೂಪಿಸಿಕೊಳ್ಳಬೇಕಲ್ಲವೆ? ಎಂದು ಡಾ.ರಾಮಲಿಂಗಪ್ಪ ಟಿ.ಬೇಗೂರು, ಡಾ.ನಟರಾಜ ಬೂದಾಳು, ಡಾ. ಮೀನಾಕ್ಷಿ ಬಾಳಿ, ಡಾ.ಡಿ.ಎಸ್.ಚೌಗಲೆ, ಡಾ. ಜಯಪ್ರಕಾಶ್ ಶೆಟ್ಟಿ, ಡಾ. ವಿನಯಾ ವಕ್ಕುಂದ, ಡಾ.ಅಮೃತಾ ಕಟಕೆ, ಡಾ.ಚಂದ್ರಶೇಕರ ನಂಗಲಿ, ಡಾ. ಬೈರಮಂಗಲ ರಾಮೇಗೌಡ, ಡಾ. ತಿಮ್ಮೇಗೌಡ, ಡಾ. ದಾದಾಪೀರ್ ನವಿಲೆಹಾಳ್, ಡಾ. ತಿಮ್ಮಯ್ಯ ಕೆ., ಡಾ.ಜಾಜಿ ದೇವೇಂದ್ರಪ್ಪ, ಡಾ. ಬಿ. ಕರಿಯಣ್ಣ, ಡಾ. ಗೀತಾ ವಸಂತ, ಡಾ. ಶಿವನಂಜಯ್ಯ ಮುಂತಾದವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಚರ್ಚೆ ಇಲ್ಲದೇ NEP 2020 ಜಾರಿಗೆ ಮುಂದಾದ ಕೇಂದ್ರ: ಶಿಕ್ಷಣ ತಜ್ಞರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕನ್ನಡವನ್ನು ಮೂಲೆಗುಂಪು ಮಾಡಿರುವ ಹೊಸ ಶಿಕ್ಷಣ ನೀತಿಯನ್ನು ಕನ್ನಡಿಗರೆಲ್ಲರೂ ಒಕ್ಕೋರಲಿನಿಂದ ವಿರೋಧಿಸಬೇಕು.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....