Homeಚಳವಳಿನಾಲ್ಕು ವರ್ಷಗಳ ಪದವಿ ಕೋರ್ಸ್‌ನಲ್ಲಿ ಕನ್ನಡಕ್ಕೆ ಕುತ್ತು: ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿ ಹಲವರ ವಿರೋಧ

ನಾಲ್ಕು ವರ್ಷಗಳ ಪದವಿ ಕೋರ್ಸ್‌ನಲ್ಲಿ ಕನ್ನಡಕ್ಕೆ ಕುತ್ತು: ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿ ಹಲವರ ವಿರೋಧ

ಕನ್ನಡ ಪಠ್ಯ ವಿಷಯವನ್ನು ನಾಲ್ಕು ವರ್ಷಗಳ ಪದವಿಯಲ್ಲಿ ಮೂರು ವರ್ಷ ಬೋಧಿಸುವ ತೀರ್ಮಾನ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಸಂಘಟಿತ ಪ್ರತಿರೋಧ ಅನಿವಾರ್ಯ..

- Advertisement -
- Advertisement -

ಹಲವಾರು ರಾಜ್ಯಗಳ ವಿರೋಧ, ಶಿಕ್ಷಣ ತಜ್ಞರ ಅಸಮಾಧಾನದ ನಡುವೆಯೂ ಕೇಂದ್ರ ಸರ್ಕಾರ ತನ್ನ ಮಹತ್ವಕಾಂಕ್ಷೆಯ 2020ರ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲು ಹೊರಟಿದೆ. ಸರ್ಕಾರದ ಈ ನಡೆಯಿಂದ ಕನ್ನಡ ಭಾಷೆಗೆ ಕುತ್ತು ಬಂದೊದಗಲಿದೆ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿದಂತೆ ಹಲವಾರು ಸಾಹಿತಿಗಳು, ಪ್ರಾಧ್ಯಾಪಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಸ ಶಿಕ್ಷಣ ನೀತಿ ಅನುಷ್ಠಾನದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಭಿನ್ನ ಬಗೆಯ ಬಹುಶಿಸ್ತೀಯ 4 ವರ್ಷಗಳ ಸಾಮಾನ್ಯ ಪದವಿ ಮತ್ತು ಶಿಕ್ಷಕ ಪದವಿ ಕೋರ್ಸುಗಳನ್ನು ರೂಪಿಸಿದ್ದು, ಅದಕ್ಕಾಗಿ ಅನುಷ್ಠಾನ ಕಾರ್ಯಪಡೆಯನ್ನು ರಚಿಸಲಾಗಿದೆ. ಉನ್ನತ ಶಿಕ್ಷಣ ಪಠ್ಯಕ್ರಮ ರಚನೆಗೆ ನೇಮಿಸಲಾಗಿದ್ದ ಕಾರ್ಯಪಡೆ ಉಪ ಸಮಿತಿಯು ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ಕನ್ನಡವನ್ನೂ ಒಳಗೊಂಡಂತೆ ಎಲ್ಲಾ ಭಾಷಾ ಪಠ್ಯ ವಿಷಯವನ್ನು ಕೇವಲ ಎರಡು ಸೆಮಿಸ್ಟಾರ್‌ಗಳಿಗೆ ಅಂದರೆ ಒಂದೇ ವರ್ಷಕ್ಕೆ ಮಿತಿಗೊಳಿಸಲಾಗಿದೆ. ಇದರ ವಿರುದ್ದ ಹಲವಾರು ಸಾಹಿತಿಗಳು ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ.

ಮೂರು ವರ್ಷಗಳ ಪದವಿಯಲ್ಲಿ ಮೊದಲ ಎರಡು ವರ್ಷ ಅಂದರೆ ನಾಲ್ಕು ಸೆಮಿಸ್ಟರ್‌ಗಳಲ್ಲಿ ಕನ್ನಡಾದಿಯಾಗಿ ಭಾಷಾ ವಿಷಯ ಬೋಧನೆಗೆ ಅವಕಾಶವಿತ್ತು. ಈಗ ನಾಲ್ಕು ವರ್ಷಗಳ ಪದವಿಯಲ್ಲಿ ಎರಡು ವರ್ಷಗಳ ಭಾಷಾ ಬೋಧನೆಯನ್ನು ಮೂರು ವರ್ಷಗಳಿಗೆ ವಿಸ್ತರಿಸಬೇಕಾಗಿತ್ತು. ಕಡೇ ಪಕ್ಷ ಹಿಂದೆ ಇದ್ದಂತೆ ಎರಡು ವರ್ಷಗಳ ಅವಧಿಯನ್ನಾದರೂ ಉಳಿಸಿಕೊಳ್ಳಬೇಕಿತ್ತು. ಅದರ ಬದಲು ಒಂದು ವರ್ಷಕ್ಕೆ ಮಿತಿಗೊಳಿಸಿರುವುದು ಇದು ಭಾಷಾ ವಿಷಯಗಳಿಗೆ ಅದರಲ್ಲೂ ವಿಶೇಷವಾಗಿ ಕನ್ನಡಕ್ಕೆ ಆಗಿರುವ ಅನ್ಯಾಯ. ಇದು ಖಂಡನೀಯ ಎಂದು ಬರಗೂರು ರಾಮಚಂದ್ರಪ್ಪ ಪತ್ರದಲ್ಲಿ ತಿಳಿಸಿದ್ದಾರೆ.

ಯಾವುದೇ ವಿಶೇಷ ವಿಷಯದಲ್ಲಿ ಪದವಿ ವ್ಯಾಸಂಗ ಮಾಡುವವರಿಗೆ ಕನ್ನಡ ಭಾಷೆ, ಸಾಹಿತ್ಯದ ಸಾಮಾನ್ಯ ಪರಿಚಯ ಕಡ್ಡಾಯವಾಗಬೇಕು. ಇದು ಕೇವಲ ಕನ್ನಡಾಭಿಮಾನದ ಪ್ರಶ್ನೆಯಲ್ಲಿ, ಯಾವುದೇ ವ್ಯಾಸಂಗಗಳಲ್ಲಿ ಸಾಂಸ್ಕೃತಿಕ ಅರಿವು ಮೂಡಿಸಿ ಮಾನವೀಯ ಮೌಲ್ಯಗಳನ್ನು ನೆಲೆಗೊಳಿಸಲು ಕನ್ನಡ ಭಾಷೆ, ಸಾಹಿತ್ಯಗಳ ಸಂಕ್ಷಿಪ್ತ ಸಾಮಾನ್ಯ ಪರಿಚಯವು ಪೂರಕವಾಗುತ್ತದೆ. ಶಿಕ್ಷಣವನ್ನು ಸಾಂಸ್ಕೃತಿಕ ಜನಪರ ಪ್ರಜೆಯ ನೆಲೆಯಲ್ಲೂ ಪರಿಭಾವಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಕನ್ನಡ ಪಠ್ಯ ವಿಷಯವನ್ನು ನಾಲ್ಕು ವರ್ಷಗಳ ಪದವಿಯಲ್ಲಿ ಮೂರು ವರ್ಷ ಬೋಧಿಸುವ ತೀರ್ಮಾನ ಕೈಗೊಳ್ಳಬೇಕು. ಒಂದೇ ವರ್ಷಕ್ಕೆ ಮಿತಿಗೊಳಿಸಿದರೆ ಖಂಡಿತ ಸಂಘಟಿತ ಪ್ರತಿರೋಧವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಒಂದು ವರ್ಷ ಮಾತ್ರ ಭಾಷಾ ಕೌಶಲ್ಯ, ಭಾಷಾ ಸಾಮರ್ಥ್ಯಗಳನ್ನು ಕಲಿತು ಆನಂತರ ಅವರು ಬೇರೆ ಏನನ್ನಾದರೂ ಭಾಷೆಯ ಸಹಾಯವಿಲ್ಲದೆ ಕಲಿಯಬಹುದು ಎಂಬ ಕಲ್ಪನೆಯೇ ಅವೈಜ್ಞಾನಿಕವಾದುದು. ಮೌಲ್ಯಾಧಾರಿತ, ಕೌಶಲ್ಯಾಧಾರಿತ, ವೃತ್ತಿಪರ ಶಿಕ್ಷಣವನ್ನು ರೂಪಿಸುವ ನೆಲೆಯಲ್ಲಿ ಭಾಷೆಯನ್ನು ಕಡೆಗಣಿಸಲು ಆದೀತೆ ಎಂದು ಹಲವು ಪ್ರಾಧ್ಯಾಪಕರು, ಸಾಹಿತಿಗಳು ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವಥ್‌ನಾರಾಯಣ್‌ರವರನ್ನು ಪ್ರಶ್ನಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯ ಶಿಕ್ಷಣ ನೀತಿಯನ್ನಾಗಿ ಪರಿವರ್ತಿಸಿಕೊಂಡು ನಮ್ಮ ಅಸ್ತಿತ್ವಕ್ಕೆ ಮತ್ತು ಅನನ್ಯತೆಗೆ ಧಕ್ಕೆ ಬಾರದ ಹಾಗೆ ಶಿಕ್ಷಣವನ್ನು ನಾವಿಲ್ಲಿ ರೂಪಿಸಿಕೊಳ್ಳಬೇಕಲ್ಲವೆ? ಎಂದು ಡಾ.ರಾಮಲಿಂಗಪ್ಪ ಟಿ.ಬೇಗೂರು, ಡಾ.ನಟರಾಜ ಬೂದಾಳು, ಡಾ. ಮೀನಾಕ್ಷಿ ಬಾಳಿ, ಡಾ.ಡಿ.ಎಸ್.ಚೌಗಲೆ, ಡಾ. ಜಯಪ್ರಕಾಶ್ ಶೆಟ್ಟಿ, ಡಾ. ವಿನಯಾ ವಕ್ಕುಂದ, ಡಾ.ಅಮೃತಾ ಕಟಕೆ, ಡಾ.ಚಂದ್ರಶೇಕರ ನಂಗಲಿ, ಡಾ. ಬೈರಮಂಗಲ ರಾಮೇಗೌಡ, ಡಾ. ತಿಮ್ಮೇಗೌಡ, ಡಾ. ದಾದಾಪೀರ್ ನವಿಲೆಹಾಳ್, ಡಾ. ತಿಮ್ಮಯ್ಯ ಕೆ., ಡಾ.ಜಾಜಿ ದೇವೇಂದ್ರಪ್ಪ, ಡಾ. ಬಿ. ಕರಿಯಣ್ಣ, ಡಾ. ಗೀತಾ ವಸಂತ, ಡಾ. ಶಿವನಂಜಯ್ಯ ಮುಂತಾದವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಚರ್ಚೆ ಇಲ್ಲದೇ NEP 2020 ಜಾರಿಗೆ ಮುಂದಾದ ಕೇಂದ್ರ: ಶಿಕ್ಷಣ ತಜ್ಞರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕನ್ನಡವನ್ನು ಮೂಲೆಗುಂಪು ಮಾಡಿರುವ ಹೊಸ ಶಿಕ್ಷಣ ನೀತಿಯನ್ನು ಕನ್ನಡಿಗರೆಲ್ಲರೂ ಒಕ್ಕೋರಲಿನಿಂದ ವಿರೋಧಿಸಬೇಕು.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...