HomeUncategorizedವಿ4 ಸ್ಟ್ರೀಮ್ ನಿಂದ ಹೊಸ ಪ್ರಯೋಗ: ನಾಳೆ ‘ನಸೀಬ್ ಏರೆಗುಂಡು ಏರೆಗಿಜ್ಜಿ’ ಸಿನಿಮಾ ಬಿಡುಗಡೆ

ವಿ4 ಸ್ಟ್ರೀಮ್ ನಿಂದ ಹೊಸ ಪ್ರಯೋಗ: ನಾಳೆ ‘ನಸೀಬ್ ಏರೆಗುಂಡು ಏರೆಗಿಜ್ಜಿ’ ಸಿನಿಮಾ ಬಿಡುಗಡೆ

- Advertisement -
- Advertisement -

ವಿ4 ಸ್ಟ್ರೀಮ್‌ ಓಟಿಟಿಯು ಕನ್ನಡ ಚಲನಚಿತ್ರವನ್ನು ತುಳು ಭಾಷೆಗೆ ಡಬ್ಬಿಂಗ್ ಮಾಡುವ ಮೂಲಕ ಸಿನಿ ಪ್ರೇಕ್ಷರನ್ನು ಮನರಂಜಿಸಿದೆ. ಇದೀಗ ಮೊಟ್ಟ ಮೊದಲ ಬಾರಿಗೆ ಕೊಂಕಣಿ ಭಾಷೆಯ ‘ನಶೀಬಾಚೊ ಖೆಳ್’ ಎನ್ನುವ ಸಿನಿಮಾವನ್ನು ‘ನಸೀಬ್ ಏರೆಗುಂಡು ಏರೆಗಿಜ್ಜಿ’ ಹೆಸರಲ್ಲಿ ಡಬ್‌ ಮಾಡಲಾಗಿದ್ದು, ಮೋಂತಿ ಫೆಸ್ಟ್‌ನ ದಿನದಂದು (ಸೆ.8ರಂದು) ವಿ4 ಸ್ಟ್ರೀಮ್‌ನಲ್ಲಿ ತೆರೆ ಕಾಣಲಿದೆ. ಕರ್ನಾಟಕದ ಮೊಟ್ಟ ಮೊದಲ ಓಟಿಟಿ ಪ್ಲಾಟ್ ಫಾಮ್ ವಿ4ಸ್ಟ್ರೀಮ್ ಪ್ರಯೋಗ ಕುತೂಹಲ ಮೂಡಿಸಿದೆ.

ಸುಮಾರು 35 ವರ್ಷಗಳ ಹಿಂದೆ ಹೆನ್ರಿ ಡಿ ಸಿಲ್ವರವರು ರಚಿಸಿದ ಕಾಜಾರಾಚೆ ಉತಾರ್ ಎಂಬ ನಾಟಕದ ಮೂಲ ಕಥೆಯನ್ನಾಧರಿಸಿ ಮತ್ತು ಇದನ್ನು ಆಧುನಿಕತೆಗುಣವಾಗಿ ಚಲನಚಿತ್ರವಾಗಿ ತೆರೆಗೆ ತರಲಾಗಿದೆ. ಕ್ಯಾಮ್ ಫಿಲ್ಮ್ ಅರ್ಪಿಸುವ, ಪ್ರೆಸ್ಟಸ್ ಎಂಟರ್ ಪ್ರೈಸಸ್ ಲಾಂಭನದಲ್ಲಿ ತಯಾರಾಗಿರುವ ಈ ಸಿನಿಮಾವನ್ನು ಹೆನ್ರಿ ಡಿಸಿಲ್ವ ನಿರ್ಮಿಸಿದ್ದಾರೆ. ಹ್ಯಾರಿ ಫರ್ನಾಂಡೀಸ್ ನಿರ್ದೇಶಿಸಿದ ನಶೀಬಾಚೊ ಖೆಳ್ ಕೊಂಕಣಿ ಚಲನಚಿತ್ರವು ನಸೀಬ್ ಏರೆಗುಂಡು ಏರೆಗಿಜ್ಜಿ ತುಳುವಿಗೆ ಡಬ್ಬಿಂಗ್ ಮಾಡಲಾಗಿದ್ದು ಬುಧವಾರ ತೆರೆಕಾಣಲಿದೆ.

ವಿ4 ಸ್ಟುಡಿಯೋದಲ್ಲಿ ಈ ಚಿತ್ರದ ಡಬ್ಬಿಂಗ್ ಮಾಡಲಾಗಿದೆ. ನಟ ಸ್ವರಾಜ್ ಶೆಟ್ಟಿ, ನಿರೀಕ್ಷಾ ಶೆಟ್ಟಿ, ಶೈಲಶ್ರೀ ಅವರು ಕಂಠದಾನ ಮಾಡಿದ್ದಾರೆ. ಹಾಸ್ಯದಲ್ಲಿ ಜಗದೀಶ್ ಆಡ್ಯಾರ್ ಸಾಥ್ ನೀಡಿದ್ದಾರೆ. ಹಿನ್ನೆಲೆ ಗಾಯನದಲ್ಲಿ ವಿದ್ಯಾ ಸುವರ್ಣ, ವೈಷ್ಣವಿ ಕಿಣಿ, ಪ್ರಶಾಂತ್ ಕಂಕನಾಡಿ, ವಿನೋದ್ ಕೋಕಿಲಾ ಅವರು ಕಂಠ ಸಿರಿಯಲ್ಲಿ ಅದ್ಭುತವಾಗಿ ಹಾಡುಗಳು ಮೂಡಿ ಬಂದಿದೆ. ವಿನೋದ್ ರಾಜ್ ಕೋಕಿಲ ಅವರು ಸಂಗೀತ ನೀಡಿದ್ದಾರೆ. ರಂಜಿತ್ ಕದ್ರಿ, ಆಶ್ವಿನ್ ಬಂಟ್ವಾಳ್ ಅವರು ಸಾಹಿತ್ಯ ಒದಗಿಸಿದ್ದಾರೆ. ವಿನೋದ್ ರಾಜ್ ಕೋಕಿಲ್ ಅವರು ಆ ದೃಶ್ಯಕ್ಕೆ ತಕ್ಕಂತೆ ಹೊಸ ಹಾಡುಗಳನ್ನು ಸಂಯೋಜಿಸಿ ತುಳು ಸಿನಿಮಾಕ್ಕೆ ಹೊಸ ನಾಂದಿ ಹಾಡಿದ್ದಾರೆ. ಗೂಗಲ್ ಫ್ಲೇಸ್ಟೋರ್‌ನಿಂದ ವಿ4 ಆಪ್ ಡೌನ್ ಲೋಡ್ ಮಾಡಿಕೊಂಡು ಸಿನಿಮಾ ನೋಡಬಹುದು ಎಂದು ವಿ4 ಸ್ಟುಡಿಯೋ ತಿಳಿಸಿದೆ.

***

ಈ ಸಿನಿಮಾ 2006ರಲ್ಲಿ ನಶೀಬಾಚೋ ಖೆಳ್ ಎಂಬುದಾಗಿ ಕೊಂಕಣಿಯಲ್ಲಿ ತೆರೆ ಕಂಡಿದೆ. ಕೊಂಕಣಿಯಲ್ಲಿ 2 ಲಕ್ಷ ಕೊಂಕಣಿಗರು ಈ ಸಿನಿಮಾವನ್ನು ವೀಕ್ಷಿಸಿದ್ದಾರೆ. ಕೆನಡಾ, ಅಮೆರಿಕಾ, ಆಸ್ಟ್ರೇಲಿಯಾ, ಲಂಡನ್, ಇಸ್ರೇಲ್ ಮೊದಲಾದ ದೇಶಗಳಲ್ಲಿ ಸಿನಿಮಾ ತೆರೆ ಕಂಡಿದೆ. ಈಗ ತುಳುವಿಗೆ ಈ ಸಿನಿಮಾ ಡಬ್ ಆಗಿ ನಸೀಬ್ ಏರೆಗುಂಡು ಏರೆಗಿಜ್ಜಿ ಹೆಸರಿನಲ್ಲಿ ತೆರೆಕಾಣುತ್ತಿದೆ. ಹಾರಿ ಫೆರ್ನಾಂಡಿಸ್ ನಿರ್ದೇಶಿಸಿದ ಈ ಚಲನಚಿತ್ರವನ್ನು ಶಕ್ತಿನಗರದ ಕಲಾಂಗಣ, ಬಲ್ಮಠ, ಬೊಂದೇಲ್. ಉಡುಪಿ ಜಿಲ್ಲೆಯ ಬಾರ್ಕೂರ್, ಸಾಸ್ತಾನದಲ್ಲಿ ಚಿತ್ರೀಕರಿಸಲಾಗಿದೆ. ಉತ್ತಮ ಹಾಸ್ಯ ಮತ್ತು ಉತ್ತಮ ಕಥಾಹಂದರವನ್ನು ಒಳಗೊಂಡಿರುವ ಈ ಸಿನಿಮಾದಲ್ಲಿ ಎಲ್ಬೆನ್ ಮಸ್ಕರೇಸನ್, ಎಸ್ತೇರ್ ನೊರೊನ್ಹಾ, ರಂಜಿತ ಊವಿಸ್ ಸಾಸ್ತಾನ, ಪ್ರಿನ್ಸ್ ಜಾಕೋಬ್ ಗೋವಾ, ಸ್ಟೇನಿ ಅಲ್ಬಾಂಸ್, ಸುಜಾತ ಅಂದ್ರಾದೆ, ಗ್ಯಾಲ್ವಿನ್ ಫೆರ್ನಾಂಡಿಸ್ ಮೊದಲಾದರು ಈ ಚಿತ್ರದಲ್ಲಿ ನಟಿಸಿದ್ದಾರೆ.
– ಹೆನ್ರಿ ಡಿ’ಸಿಲ್ವ, ನಿರ್ಮಾಪಕರು

***

ವಿ4 ಸ್ಟೀಮ್‌ನ ಓಟಿಟಿ ಆರಂಭಗೊಂಡ ಬಳಿಕ ಈಗಾಗಲೇ 8 ಕನ್ನಡ ಸಿನಿಮಾಗಳನ್ನು ತುಳು ಭಾಷೆಗೆ ಡಬ್ಬಿಂಗ್ ಮಾಡಲಾಗಿದೆ. ಪಂಚತಂತ್ರ, ಪೆನ್ಸಿಲ್‌ಬಾಕ್ಸ್, ರುದ್ರಾಕ್ಷಿಪುರ, ಅಭಿಸಾರಿಕೆ, ರಂಗೋಲು, ನಮ್ ಗಣಿ ಬಿ.ಕಾಂ ಪಾಸ್, ಬೀರ್‌ಬಲ್. ಈ ಎಲ್ಲ ಚಿತ್ರಗಳು ಒಟಿಟಿಯಲ್ಲಿ ಹೆಸರು ಮಾಡಿದ ಚಿತ್ರಗಳು. ಇದನ್ನು ತುಳುವಿಗೆ ಡಬ್ ಮಾಡಲಾಗಿದೆ. ಅದಲ್ಲದೆ ಎಲ್.ಎಸ್. ಮೀಡಿಯಾ ಪ್ರೊಡಕ್ಷನ್‌ನಲ್ಲಿ ಮೂಡಿಬರಲಿರುವ ಐದು ಚಿತ್ರಗಳಲ್ಲಿ ಎರಡು ಕನ್ನಡ ಮತ್ತು ಎರಡು ತುಳು ಚಲನಚಿತ್ರ ನಿರ್ಮಾಣ ಹಂತದಲ್ಲಿವೆ. ಈಗಾಗಲೇ ಟು&ಮಿ ಚಿತ್ರ ವಿ4ಸ್ಟೀಮ್‌ನ ಓಟಿಟಿ ತೆರೆ ಕಂಡು ಯಶಸ್ಸನ್ನು ಕಂಡಿದೆ. ಈ ವರ್ಷದಲ್ಲಿ ಹನ್ನೆರಡಕ್ಕೂ ಅಧಿಕ ಚಿತ್ರಗಳು ಬಿಡುಗಡೆಯಾಗಲಿವೆ.

-ಲಕ್ಷ್ಮಣ್ ಕುಂದರ್, ವಿ4 ನ್ಯೂಸ್ ಆಡಳಿತ ನಿರ್ದೇಶಕರು

***

ಮೊಟ್ಟ ಮೊದಲ ಬಾರಿಗೆ ತುಳುವಿನಲ್ಲಿ ಕೊಂಕಣಿ ಚಿತ್ರವನ್ನು ಡಬ್ಬಿಂಗ್ ಮಾಡಲಾಗಿದೆ. ಚಿತ್ರದಲ್ಲಿ ಕಾಮಿಡಿ ಇರುವುದರಿಂದ ಸಿನಿ ಪ್ರೇಕ್ಷಕರು ಪ್ರೋತ್ಸಾಹಿಸುವುದು ಗ್ಯಾರಂಟಿ. ಉತ್ತಮ ಹ್ಯಾಸ ಹಾಗೂ ಉತ್ತಮ ಕಥಾ ಹಂದರವನ್ನು ಒಳಗೊಂಡಿರುವ ಈ ಸಿನಿಮಾ ಅತ್ಯುತ್ತಮವಾಗಿ ಮೂಡಿ ಬಂದಿದೆ.

-ವಿನೋದ್ ರಾಜ್ ಕೋಕಿಲ, ಸಂಗೀತ ನಿರ್ದೇಶಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...