HomeUncategorizedವಿ4 ಸ್ಟ್ರೀಮ್ ನಿಂದ ಹೊಸ ಪ್ರಯೋಗ: ನಾಳೆ ‘ನಸೀಬ್ ಏರೆಗುಂಡು ಏರೆಗಿಜ್ಜಿ’ ಸಿನಿಮಾ ಬಿಡುಗಡೆ

ವಿ4 ಸ್ಟ್ರೀಮ್ ನಿಂದ ಹೊಸ ಪ್ರಯೋಗ: ನಾಳೆ ‘ನಸೀಬ್ ಏರೆಗುಂಡು ಏರೆಗಿಜ್ಜಿ’ ಸಿನಿಮಾ ಬಿಡುಗಡೆ

- Advertisement -
- Advertisement -

ವಿ4 ಸ್ಟ್ರೀಮ್‌ ಓಟಿಟಿಯು ಕನ್ನಡ ಚಲನಚಿತ್ರವನ್ನು ತುಳು ಭಾಷೆಗೆ ಡಬ್ಬಿಂಗ್ ಮಾಡುವ ಮೂಲಕ ಸಿನಿ ಪ್ರೇಕ್ಷರನ್ನು ಮನರಂಜಿಸಿದೆ. ಇದೀಗ ಮೊಟ್ಟ ಮೊದಲ ಬಾರಿಗೆ ಕೊಂಕಣಿ ಭಾಷೆಯ ‘ನಶೀಬಾಚೊ ಖೆಳ್’ ಎನ್ನುವ ಸಿನಿಮಾವನ್ನು ‘ನಸೀಬ್ ಏರೆಗುಂಡು ಏರೆಗಿಜ್ಜಿ’ ಹೆಸರಲ್ಲಿ ಡಬ್‌ ಮಾಡಲಾಗಿದ್ದು, ಮೋಂತಿ ಫೆಸ್ಟ್‌ನ ದಿನದಂದು (ಸೆ.8ರಂದು) ವಿ4 ಸ್ಟ್ರೀಮ್‌ನಲ್ಲಿ ತೆರೆ ಕಾಣಲಿದೆ. ಕರ್ನಾಟಕದ ಮೊಟ್ಟ ಮೊದಲ ಓಟಿಟಿ ಪ್ಲಾಟ್ ಫಾಮ್ ವಿ4ಸ್ಟ್ರೀಮ್ ಪ್ರಯೋಗ ಕುತೂಹಲ ಮೂಡಿಸಿದೆ.

ಸುಮಾರು 35 ವರ್ಷಗಳ ಹಿಂದೆ ಹೆನ್ರಿ ಡಿ ಸಿಲ್ವರವರು ರಚಿಸಿದ ಕಾಜಾರಾಚೆ ಉತಾರ್ ಎಂಬ ನಾಟಕದ ಮೂಲ ಕಥೆಯನ್ನಾಧರಿಸಿ ಮತ್ತು ಇದನ್ನು ಆಧುನಿಕತೆಗುಣವಾಗಿ ಚಲನಚಿತ್ರವಾಗಿ ತೆರೆಗೆ ತರಲಾಗಿದೆ. ಕ್ಯಾಮ್ ಫಿಲ್ಮ್ ಅರ್ಪಿಸುವ, ಪ್ರೆಸ್ಟಸ್ ಎಂಟರ್ ಪ್ರೈಸಸ್ ಲಾಂಭನದಲ್ಲಿ ತಯಾರಾಗಿರುವ ಈ ಸಿನಿಮಾವನ್ನು ಹೆನ್ರಿ ಡಿಸಿಲ್ವ ನಿರ್ಮಿಸಿದ್ದಾರೆ. ಹ್ಯಾರಿ ಫರ್ನಾಂಡೀಸ್ ನಿರ್ದೇಶಿಸಿದ ನಶೀಬಾಚೊ ಖೆಳ್ ಕೊಂಕಣಿ ಚಲನಚಿತ್ರವು ನಸೀಬ್ ಏರೆಗುಂಡು ಏರೆಗಿಜ್ಜಿ ತುಳುವಿಗೆ ಡಬ್ಬಿಂಗ್ ಮಾಡಲಾಗಿದ್ದು ಬುಧವಾರ ತೆರೆಕಾಣಲಿದೆ.

ವಿ4 ಸ್ಟುಡಿಯೋದಲ್ಲಿ ಈ ಚಿತ್ರದ ಡಬ್ಬಿಂಗ್ ಮಾಡಲಾಗಿದೆ. ನಟ ಸ್ವರಾಜ್ ಶೆಟ್ಟಿ, ನಿರೀಕ್ಷಾ ಶೆಟ್ಟಿ, ಶೈಲಶ್ರೀ ಅವರು ಕಂಠದಾನ ಮಾಡಿದ್ದಾರೆ. ಹಾಸ್ಯದಲ್ಲಿ ಜಗದೀಶ್ ಆಡ್ಯಾರ್ ಸಾಥ್ ನೀಡಿದ್ದಾರೆ. ಹಿನ್ನೆಲೆ ಗಾಯನದಲ್ಲಿ ವಿದ್ಯಾ ಸುವರ್ಣ, ವೈಷ್ಣವಿ ಕಿಣಿ, ಪ್ರಶಾಂತ್ ಕಂಕನಾಡಿ, ವಿನೋದ್ ಕೋಕಿಲಾ ಅವರು ಕಂಠ ಸಿರಿಯಲ್ಲಿ ಅದ್ಭುತವಾಗಿ ಹಾಡುಗಳು ಮೂಡಿ ಬಂದಿದೆ. ವಿನೋದ್ ರಾಜ್ ಕೋಕಿಲ ಅವರು ಸಂಗೀತ ನೀಡಿದ್ದಾರೆ. ರಂಜಿತ್ ಕದ್ರಿ, ಆಶ್ವಿನ್ ಬಂಟ್ವಾಳ್ ಅವರು ಸಾಹಿತ್ಯ ಒದಗಿಸಿದ್ದಾರೆ. ವಿನೋದ್ ರಾಜ್ ಕೋಕಿಲ್ ಅವರು ಆ ದೃಶ್ಯಕ್ಕೆ ತಕ್ಕಂತೆ ಹೊಸ ಹಾಡುಗಳನ್ನು ಸಂಯೋಜಿಸಿ ತುಳು ಸಿನಿಮಾಕ್ಕೆ ಹೊಸ ನಾಂದಿ ಹಾಡಿದ್ದಾರೆ. ಗೂಗಲ್ ಫ್ಲೇಸ್ಟೋರ್‌ನಿಂದ ವಿ4 ಆಪ್ ಡೌನ್ ಲೋಡ್ ಮಾಡಿಕೊಂಡು ಸಿನಿಮಾ ನೋಡಬಹುದು ಎಂದು ವಿ4 ಸ್ಟುಡಿಯೋ ತಿಳಿಸಿದೆ.

***

ಈ ಸಿನಿಮಾ 2006ರಲ್ಲಿ ನಶೀಬಾಚೋ ಖೆಳ್ ಎಂಬುದಾಗಿ ಕೊಂಕಣಿಯಲ್ಲಿ ತೆರೆ ಕಂಡಿದೆ. ಕೊಂಕಣಿಯಲ್ಲಿ 2 ಲಕ್ಷ ಕೊಂಕಣಿಗರು ಈ ಸಿನಿಮಾವನ್ನು ವೀಕ್ಷಿಸಿದ್ದಾರೆ. ಕೆನಡಾ, ಅಮೆರಿಕಾ, ಆಸ್ಟ್ರೇಲಿಯಾ, ಲಂಡನ್, ಇಸ್ರೇಲ್ ಮೊದಲಾದ ದೇಶಗಳಲ್ಲಿ ಸಿನಿಮಾ ತೆರೆ ಕಂಡಿದೆ. ಈಗ ತುಳುವಿಗೆ ಈ ಸಿನಿಮಾ ಡಬ್ ಆಗಿ ನಸೀಬ್ ಏರೆಗುಂಡು ಏರೆಗಿಜ್ಜಿ ಹೆಸರಿನಲ್ಲಿ ತೆರೆಕಾಣುತ್ತಿದೆ. ಹಾರಿ ಫೆರ್ನಾಂಡಿಸ್ ನಿರ್ದೇಶಿಸಿದ ಈ ಚಲನಚಿತ್ರವನ್ನು ಶಕ್ತಿನಗರದ ಕಲಾಂಗಣ, ಬಲ್ಮಠ, ಬೊಂದೇಲ್. ಉಡುಪಿ ಜಿಲ್ಲೆಯ ಬಾರ್ಕೂರ್, ಸಾಸ್ತಾನದಲ್ಲಿ ಚಿತ್ರೀಕರಿಸಲಾಗಿದೆ. ಉತ್ತಮ ಹಾಸ್ಯ ಮತ್ತು ಉತ್ತಮ ಕಥಾಹಂದರವನ್ನು ಒಳಗೊಂಡಿರುವ ಈ ಸಿನಿಮಾದಲ್ಲಿ ಎಲ್ಬೆನ್ ಮಸ್ಕರೇಸನ್, ಎಸ್ತೇರ್ ನೊರೊನ್ಹಾ, ರಂಜಿತ ಊವಿಸ್ ಸಾಸ್ತಾನ, ಪ್ರಿನ್ಸ್ ಜಾಕೋಬ್ ಗೋವಾ, ಸ್ಟೇನಿ ಅಲ್ಬಾಂಸ್, ಸುಜಾತ ಅಂದ್ರಾದೆ, ಗ್ಯಾಲ್ವಿನ್ ಫೆರ್ನಾಂಡಿಸ್ ಮೊದಲಾದರು ಈ ಚಿತ್ರದಲ್ಲಿ ನಟಿಸಿದ್ದಾರೆ.
– ಹೆನ್ರಿ ಡಿ’ಸಿಲ್ವ, ನಿರ್ಮಾಪಕರು

***

ವಿ4 ಸ್ಟೀಮ್‌ನ ಓಟಿಟಿ ಆರಂಭಗೊಂಡ ಬಳಿಕ ಈಗಾಗಲೇ 8 ಕನ್ನಡ ಸಿನಿಮಾಗಳನ್ನು ತುಳು ಭಾಷೆಗೆ ಡಬ್ಬಿಂಗ್ ಮಾಡಲಾಗಿದೆ. ಪಂಚತಂತ್ರ, ಪೆನ್ಸಿಲ್‌ಬಾಕ್ಸ್, ರುದ್ರಾಕ್ಷಿಪುರ, ಅಭಿಸಾರಿಕೆ, ರಂಗೋಲು, ನಮ್ ಗಣಿ ಬಿ.ಕಾಂ ಪಾಸ್, ಬೀರ್‌ಬಲ್. ಈ ಎಲ್ಲ ಚಿತ್ರಗಳು ಒಟಿಟಿಯಲ್ಲಿ ಹೆಸರು ಮಾಡಿದ ಚಿತ್ರಗಳು. ಇದನ್ನು ತುಳುವಿಗೆ ಡಬ್ ಮಾಡಲಾಗಿದೆ. ಅದಲ್ಲದೆ ಎಲ್.ಎಸ್. ಮೀಡಿಯಾ ಪ್ರೊಡಕ್ಷನ್‌ನಲ್ಲಿ ಮೂಡಿಬರಲಿರುವ ಐದು ಚಿತ್ರಗಳಲ್ಲಿ ಎರಡು ಕನ್ನಡ ಮತ್ತು ಎರಡು ತುಳು ಚಲನಚಿತ್ರ ನಿರ್ಮಾಣ ಹಂತದಲ್ಲಿವೆ. ಈಗಾಗಲೇ ಟು&ಮಿ ಚಿತ್ರ ವಿ4ಸ್ಟೀಮ್‌ನ ಓಟಿಟಿ ತೆರೆ ಕಂಡು ಯಶಸ್ಸನ್ನು ಕಂಡಿದೆ. ಈ ವರ್ಷದಲ್ಲಿ ಹನ್ನೆರಡಕ್ಕೂ ಅಧಿಕ ಚಿತ್ರಗಳು ಬಿಡುಗಡೆಯಾಗಲಿವೆ.

-ಲಕ್ಷ್ಮಣ್ ಕುಂದರ್, ವಿ4 ನ್ಯೂಸ್ ಆಡಳಿತ ನಿರ್ದೇಶಕರು

***

ಮೊಟ್ಟ ಮೊದಲ ಬಾರಿಗೆ ತುಳುವಿನಲ್ಲಿ ಕೊಂಕಣಿ ಚಿತ್ರವನ್ನು ಡಬ್ಬಿಂಗ್ ಮಾಡಲಾಗಿದೆ. ಚಿತ್ರದಲ್ಲಿ ಕಾಮಿಡಿ ಇರುವುದರಿಂದ ಸಿನಿ ಪ್ರೇಕ್ಷಕರು ಪ್ರೋತ್ಸಾಹಿಸುವುದು ಗ್ಯಾರಂಟಿ. ಉತ್ತಮ ಹ್ಯಾಸ ಹಾಗೂ ಉತ್ತಮ ಕಥಾ ಹಂದರವನ್ನು ಒಳಗೊಂಡಿರುವ ಈ ಸಿನಿಮಾ ಅತ್ಯುತ್ತಮವಾಗಿ ಮೂಡಿ ಬಂದಿದೆ.

-ವಿನೋದ್ ರಾಜ್ ಕೋಕಿಲ, ಸಂಗೀತ ನಿರ್ದೇಶಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...