HomeUncategorizedವಿ4 ಸ್ಟ್ರೀಮ್ ನಿಂದ ಹೊಸ ಪ್ರಯೋಗ: ನಾಳೆ ‘ನಸೀಬ್ ಏರೆಗುಂಡು ಏರೆಗಿಜ್ಜಿ’ ಸಿನಿಮಾ ಬಿಡುಗಡೆ

ವಿ4 ಸ್ಟ್ರೀಮ್ ನಿಂದ ಹೊಸ ಪ್ರಯೋಗ: ನಾಳೆ ‘ನಸೀಬ್ ಏರೆಗುಂಡು ಏರೆಗಿಜ್ಜಿ’ ಸಿನಿಮಾ ಬಿಡುಗಡೆ

- Advertisement -
- Advertisement -

ವಿ4 ಸ್ಟ್ರೀಮ್‌ ಓಟಿಟಿಯು ಕನ್ನಡ ಚಲನಚಿತ್ರವನ್ನು ತುಳು ಭಾಷೆಗೆ ಡಬ್ಬಿಂಗ್ ಮಾಡುವ ಮೂಲಕ ಸಿನಿ ಪ್ರೇಕ್ಷರನ್ನು ಮನರಂಜಿಸಿದೆ. ಇದೀಗ ಮೊಟ್ಟ ಮೊದಲ ಬಾರಿಗೆ ಕೊಂಕಣಿ ಭಾಷೆಯ ‘ನಶೀಬಾಚೊ ಖೆಳ್’ ಎನ್ನುವ ಸಿನಿಮಾವನ್ನು ‘ನಸೀಬ್ ಏರೆಗುಂಡು ಏರೆಗಿಜ್ಜಿ’ ಹೆಸರಲ್ಲಿ ಡಬ್‌ ಮಾಡಲಾಗಿದ್ದು, ಮೋಂತಿ ಫೆಸ್ಟ್‌ನ ದಿನದಂದು (ಸೆ.8ರಂದು) ವಿ4 ಸ್ಟ್ರೀಮ್‌ನಲ್ಲಿ ತೆರೆ ಕಾಣಲಿದೆ. ಕರ್ನಾಟಕದ ಮೊಟ್ಟ ಮೊದಲ ಓಟಿಟಿ ಪ್ಲಾಟ್ ಫಾಮ್ ವಿ4ಸ್ಟ್ರೀಮ್ ಪ್ರಯೋಗ ಕುತೂಹಲ ಮೂಡಿಸಿದೆ.

ಸುಮಾರು 35 ವರ್ಷಗಳ ಹಿಂದೆ ಹೆನ್ರಿ ಡಿ ಸಿಲ್ವರವರು ರಚಿಸಿದ ಕಾಜಾರಾಚೆ ಉತಾರ್ ಎಂಬ ನಾಟಕದ ಮೂಲ ಕಥೆಯನ್ನಾಧರಿಸಿ ಮತ್ತು ಇದನ್ನು ಆಧುನಿಕತೆಗುಣವಾಗಿ ಚಲನಚಿತ್ರವಾಗಿ ತೆರೆಗೆ ತರಲಾಗಿದೆ. ಕ್ಯಾಮ್ ಫಿಲ್ಮ್ ಅರ್ಪಿಸುವ, ಪ್ರೆಸ್ಟಸ್ ಎಂಟರ್ ಪ್ರೈಸಸ್ ಲಾಂಭನದಲ್ಲಿ ತಯಾರಾಗಿರುವ ಈ ಸಿನಿಮಾವನ್ನು ಹೆನ್ರಿ ಡಿಸಿಲ್ವ ನಿರ್ಮಿಸಿದ್ದಾರೆ. ಹ್ಯಾರಿ ಫರ್ನಾಂಡೀಸ್ ನಿರ್ದೇಶಿಸಿದ ನಶೀಬಾಚೊ ಖೆಳ್ ಕೊಂಕಣಿ ಚಲನಚಿತ್ರವು ನಸೀಬ್ ಏರೆಗುಂಡು ಏರೆಗಿಜ್ಜಿ ತುಳುವಿಗೆ ಡಬ್ಬಿಂಗ್ ಮಾಡಲಾಗಿದ್ದು ಬುಧವಾರ ತೆರೆಕಾಣಲಿದೆ.

ವಿ4 ಸ್ಟುಡಿಯೋದಲ್ಲಿ ಈ ಚಿತ್ರದ ಡಬ್ಬಿಂಗ್ ಮಾಡಲಾಗಿದೆ. ನಟ ಸ್ವರಾಜ್ ಶೆಟ್ಟಿ, ನಿರೀಕ್ಷಾ ಶೆಟ್ಟಿ, ಶೈಲಶ್ರೀ ಅವರು ಕಂಠದಾನ ಮಾಡಿದ್ದಾರೆ. ಹಾಸ್ಯದಲ್ಲಿ ಜಗದೀಶ್ ಆಡ್ಯಾರ್ ಸಾಥ್ ನೀಡಿದ್ದಾರೆ. ಹಿನ್ನೆಲೆ ಗಾಯನದಲ್ಲಿ ವಿದ್ಯಾ ಸುವರ್ಣ, ವೈಷ್ಣವಿ ಕಿಣಿ, ಪ್ರಶಾಂತ್ ಕಂಕನಾಡಿ, ವಿನೋದ್ ಕೋಕಿಲಾ ಅವರು ಕಂಠ ಸಿರಿಯಲ್ಲಿ ಅದ್ಭುತವಾಗಿ ಹಾಡುಗಳು ಮೂಡಿ ಬಂದಿದೆ. ವಿನೋದ್ ರಾಜ್ ಕೋಕಿಲ ಅವರು ಸಂಗೀತ ನೀಡಿದ್ದಾರೆ. ರಂಜಿತ್ ಕದ್ರಿ, ಆಶ್ವಿನ್ ಬಂಟ್ವಾಳ್ ಅವರು ಸಾಹಿತ್ಯ ಒದಗಿಸಿದ್ದಾರೆ. ವಿನೋದ್ ರಾಜ್ ಕೋಕಿಲ್ ಅವರು ಆ ದೃಶ್ಯಕ್ಕೆ ತಕ್ಕಂತೆ ಹೊಸ ಹಾಡುಗಳನ್ನು ಸಂಯೋಜಿಸಿ ತುಳು ಸಿನಿಮಾಕ್ಕೆ ಹೊಸ ನಾಂದಿ ಹಾಡಿದ್ದಾರೆ. ಗೂಗಲ್ ಫ್ಲೇಸ್ಟೋರ್‌ನಿಂದ ವಿ4 ಆಪ್ ಡೌನ್ ಲೋಡ್ ಮಾಡಿಕೊಂಡು ಸಿನಿಮಾ ನೋಡಬಹುದು ಎಂದು ವಿ4 ಸ್ಟುಡಿಯೋ ತಿಳಿಸಿದೆ.

***

ಈ ಸಿನಿಮಾ 2006ರಲ್ಲಿ ನಶೀಬಾಚೋ ಖೆಳ್ ಎಂಬುದಾಗಿ ಕೊಂಕಣಿಯಲ್ಲಿ ತೆರೆ ಕಂಡಿದೆ. ಕೊಂಕಣಿಯಲ್ಲಿ 2 ಲಕ್ಷ ಕೊಂಕಣಿಗರು ಈ ಸಿನಿಮಾವನ್ನು ವೀಕ್ಷಿಸಿದ್ದಾರೆ. ಕೆನಡಾ, ಅಮೆರಿಕಾ, ಆಸ್ಟ್ರೇಲಿಯಾ, ಲಂಡನ್, ಇಸ್ರೇಲ್ ಮೊದಲಾದ ದೇಶಗಳಲ್ಲಿ ಸಿನಿಮಾ ತೆರೆ ಕಂಡಿದೆ. ಈಗ ತುಳುವಿಗೆ ಈ ಸಿನಿಮಾ ಡಬ್ ಆಗಿ ನಸೀಬ್ ಏರೆಗುಂಡು ಏರೆಗಿಜ್ಜಿ ಹೆಸರಿನಲ್ಲಿ ತೆರೆಕಾಣುತ್ತಿದೆ. ಹಾರಿ ಫೆರ್ನಾಂಡಿಸ್ ನಿರ್ದೇಶಿಸಿದ ಈ ಚಲನಚಿತ್ರವನ್ನು ಶಕ್ತಿನಗರದ ಕಲಾಂಗಣ, ಬಲ್ಮಠ, ಬೊಂದೇಲ್. ಉಡುಪಿ ಜಿಲ್ಲೆಯ ಬಾರ್ಕೂರ್, ಸಾಸ್ತಾನದಲ್ಲಿ ಚಿತ್ರೀಕರಿಸಲಾಗಿದೆ. ಉತ್ತಮ ಹಾಸ್ಯ ಮತ್ತು ಉತ್ತಮ ಕಥಾಹಂದರವನ್ನು ಒಳಗೊಂಡಿರುವ ಈ ಸಿನಿಮಾದಲ್ಲಿ ಎಲ್ಬೆನ್ ಮಸ್ಕರೇಸನ್, ಎಸ್ತೇರ್ ನೊರೊನ್ಹಾ, ರಂಜಿತ ಊವಿಸ್ ಸಾಸ್ತಾನ, ಪ್ರಿನ್ಸ್ ಜಾಕೋಬ್ ಗೋವಾ, ಸ್ಟೇನಿ ಅಲ್ಬಾಂಸ್, ಸುಜಾತ ಅಂದ್ರಾದೆ, ಗ್ಯಾಲ್ವಿನ್ ಫೆರ್ನಾಂಡಿಸ್ ಮೊದಲಾದರು ಈ ಚಿತ್ರದಲ್ಲಿ ನಟಿಸಿದ್ದಾರೆ.
– ಹೆನ್ರಿ ಡಿ’ಸಿಲ್ವ, ನಿರ್ಮಾಪಕರು

***

ವಿ4 ಸ್ಟೀಮ್‌ನ ಓಟಿಟಿ ಆರಂಭಗೊಂಡ ಬಳಿಕ ಈಗಾಗಲೇ 8 ಕನ್ನಡ ಸಿನಿಮಾಗಳನ್ನು ತುಳು ಭಾಷೆಗೆ ಡಬ್ಬಿಂಗ್ ಮಾಡಲಾಗಿದೆ. ಪಂಚತಂತ್ರ, ಪೆನ್ಸಿಲ್‌ಬಾಕ್ಸ್, ರುದ್ರಾಕ್ಷಿಪುರ, ಅಭಿಸಾರಿಕೆ, ರಂಗೋಲು, ನಮ್ ಗಣಿ ಬಿ.ಕಾಂ ಪಾಸ್, ಬೀರ್‌ಬಲ್. ಈ ಎಲ್ಲ ಚಿತ್ರಗಳು ಒಟಿಟಿಯಲ್ಲಿ ಹೆಸರು ಮಾಡಿದ ಚಿತ್ರಗಳು. ಇದನ್ನು ತುಳುವಿಗೆ ಡಬ್ ಮಾಡಲಾಗಿದೆ. ಅದಲ್ಲದೆ ಎಲ್.ಎಸ್. ಮೀಡಿಯಾ ಪ್ರೊಡಕ್ಷನ್‌ನಲ್ಲಿ ಮೂಡಿಬರಲಿರುವ ಐದು ಚಿತ್ರಗಳಲ್ಲಿ ಎರಡು ಕನ್ನಡ ಮತ್ತು ಎರಡು ತುಳು ಚಲನಚಿತ್ರ ನಿರ್ಮಾಣ ಹಂತದಲ್ಲಿವೆ. ಈಗಾಗಲೇ ಟು&ಮಿ ಚಿತ್ರ ವಿ4ಸ್ಟೀಮ್‌ನ ಓಟಿಟಿ ತೆರೆ ಕಂಡು ಯಶಸ್ಸನ್ನು ಕಂಡಿದೆ. ಈ ವರ್ಷದಲ್ಲಿ ಹನ್ನೆರಡಕ್ಕೂ ಅಧಿಕ ಚಿತ್ರಗಳು ಬಿಡುಗಡೆಯಾಗಲಿವೆ.

-ಲಕ್ಷ್ಮಣ್ ಕುಂದರ್, ವಿ4 ನ್ಯೂಸ್ ಆಡಳಿತ ನಿರ್ದೇಶಕರು

***

ಮೊಟ್ಟ ಮೊದಲ ಬಾರಿಗೆ ತುಳುವಿನಲ್ಲಿ ಕೊಂಕಣಿ ಚಿತ್ರವನ್ನು ಡಬ್ಬಿಂಗ್ ಮಾಡಲಾಗಿದೆ. ಚಿತ್ರದಲ್ಲಿ ಕಾಮಿಡಿ ಇರುವುದರಿಂದ ಸಿನಿ ಪ್ರೇಕ್ಷಕರು ಪ್ರೋತ್ಸಾಹಿಸುವುದು ಗ್ಯಾರಂಟಿ. ಉತ್ತಮ ಹ್ಯಾಸ ಹಾಗೂ ಉತ್ತಮ ಕಥಾ ಹಂದರವನ್ನು ಒಳಗೊಂಡಿರುವ ಈ ಸಿನಿಮಾ ಅತ್ಯುತ್ತಮವಾಗಿ ಮೂಡಿ ಬಂದಿದೆ.

-ವಿನೋದ್ ರಾಜ್ ಕೋಕಿಲ, ಸಂಗೀತ ನಿರ್ದೇಶಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...