HomeUncategorizedವಿ4 ಸ್ಟ್ರೀಮ್ ನಿಂದ ಹೊಸ ಪ್ರಯೋಗ: ನಾಳೆ ‘ನಸೀಬ್ ಏರೆಗುಂಡು ಏರೆಗಿಜ್ಜಿ’ ಸಿನಿಮಾ ಬಿಡುಗಡೆ

ವಿ4 ಸ್ಟ್ರೀಮ್ ನಿಂದ ಹೊಸ ಪ್ರಯೋಗ: ನಾಳೆ ‘ನಸೀಬ್ ಏರೆಗುಂಡು ಏರೆಗಿಜ್ಜಿ’ ಸಿನಿಮಾ ಬಿಡುಗಡೆ

- Advertisement -
- Advertisement -

ವಿ4 ಸ್ಟ್ರೀಮ್‌ ಓಟಿಟಿಯು ಕನ್ನಡ ಚಲನಚಿತ್ರವನ್ನು ತುಳು ಭಾಷೆಗೆ ಡಬ್ಬಿಂಗ್ ಮಾಡುವ ಮೂಲಕ ಸಿನಿ ಪ್ರೇಕ್ಷರನ್ನು ಮನರಂಜಿಸಿದೆ. ಇದೀಗ ಮೊಟ್ಟ ಮೊದಲ ಬಾರಿಗೆ ಕೊಂಕಣಿ ಭಾಷೆಯ ‘ನಶೀಬಾಚೊ ಖೆಳ್’ ಎನ್ನುವ ಸಿನಿಮಾವನ್ನು ‘ನಸೀಬ್ ಏರೆಗುಂಡು ಏರೆಗಿಜ್ಜಿ’ ಹೆಸರಲ್ಲಿ ಡಬ್‌ ಮಾಡಲಾಗಿದ್ದು, ಮೋಂತಿ ಫೆಸ್ಟ್‌ನ ದಿನದಂದು (ಸೆ.8ರಂದು) ವಿ4 ಸ್ಟ್ರೀಮ್‌ನಲ್ಲಿ ತೆರೆ ಕಾಣಲಿದೆ. ಕರ್ನಾಟಕದ ಮೊಟ್ಟ ಮೊದಲ ಓಟಿಟಿ ಪ್ಲಾಟ್ ಫಾಮ್ ವಿ4ಸ್ಟ್ರೀಮ್ ಪ್ರಯೋಗ ಕುತೂಹಲ ಮೂಡಿಸಿದೆ.

ಸುಮಾರು 35 ವರ್ಷಗಳ ಹಿಂದೆ ಹೆನ್ರಿ ಡಿ ಸಿಲ್ವರವರು ರಚಿಸಿದ ಕಾಜಾರಾಚೆ ಉತಾರ್ ಎಂಬ ನಾಟಕದ ಮೂಲ ಕಥೆಯನ್ನಾಧರಿಸಿ ಮತ್ತು ಇದನ್ನು ಆಧುನಿಕತೆಗುಣವಾಗಿ ಚಲನಚಿತ್ರವಾಗಿ ತೆರೆಗೆ ತರಲಾಗಿದೆ. ಕ್ಯಾಮ್ ಫಿಲ್ಮ್ ಅರ್ಪಿಸುವ, ಪ್ರೆಸ್ಟಸ್ ಎಂಟರ್ ಪ್ರೈಸಸ್ ಲಾಂಭನದಲ್ಲಿ ತಯಾರಾಗಿರುವ ಈ ಸಿನಿಮಾವನ್ನು ಹೆನ್ರಿ ಡಿಸಿಲ್ವ ನಿರ್ಮಿಸಿದ್ದಾರೆ. ಹ್ಯಾರಿ ಫರ್ನಾಂಡೀಸ್ ನಿರ್ದೇಶಿಸಿದ ನಶೀಬಾಚೊ ಖೆಳ್ ಕೊಂಕಣಿ ಚಲನಚಿತ್ರವು ನಸೀಬ್ ಏರೆಗುಂಡು ಏರೆಗಿಜ್ಜಿ ತುಳುವಿಗೆ ಡಬ್ಬಿಂಗ್ ಮಾಡಲಾಗಿದ್ದು ಬುಧವಾರ ತೆರೆಕಾಣಲಿದೆ.

ವಿ4 ಸ್ಟುಡಿಯೋದಲ್ಲಿ ಈ ಚಿತ್ರದ ಡಬ್ಬಿಂಗ್ ಮಾಡಲಾಗಿದೆ. ನಟ ಸ್ವರಾಜ್ ಶೆಟ್ಟಿ, ನಿರೀಕ್ಷಾ ಶೆಟ್ಟಿ, ಶೈಲಶ್ರೀ ಅವರು ಕಂಠದಾನ ಮಾಡಿದ್ದಾರೆ. ಹಾಸ್ಯದಲ್ಲಿ ಜಗದೀಶ್ ಆಡ್ಯಾರ್ ಸಾಥ್ ನೀಡಿದ್ದಾರೆ. ಹಿನ್ನೆಲೆ ಗಾಯನದಲ್ಲಿ ವಿದ್ಯಾ ಸುವರ್ಣ, ವೈಷ್ಣವಿ ಕಿಣಿ, ಪ್ರಶಾಂತ್ ಕಂಕನಾಡಿ, ವಿನೋದ್ ಕೋಕಿಲಾ ಅವರು ಕಂಠ ಸಿರಿಯಲ್ಲಿ ಅದ್ಭುತವಾಗಿ ಹಾಡುಗಳು ಮೂಡಿ ಬಂದಿದೆ. ವಿನೋದ್ ರಾಜ್ ಕೋಕಿಲ ಅವರು ಸಂಗೀತ ನೀಡಿದ್ದಾರೆ. ರಂಜಿತ್ ಕದ್ರಿ, ಆಶ್ವಿನ್ ಬಂಟ್ವಾಳ್ ಅವರು ಸಾಹಿತ್ಯ ಒದಗಿಸಿದ್ದಾರೆ. ವಿನೋದ್ ರಾಜ್ ಕೋಕಿಲ್ ಅವರು ಆ ದೃಶ್ಯಕ್ಕೆ ತಕ್ಕಂತೆ ಹೊಸ ಹಾಡುಗಳನ್ನು ಸಂಯೋಜಿಸಿ ತುಳು ಸಿನಿಮಾಕ್ಕೆ ಹೊಸ ನಾಂದಿ ಹಾಡಿದ್ದಾರೆ. ಗೂಗಲ್ ಫ್ಲೇಸ್ಟೋರ್‌ನಿಂದ ವಿ4 ಆಪ್ ಡೌನ್ ಲೋಡ್ ಮಾಡಿಕೊಂಡು ಸಿನಿಮಾ ನೋಡಬಹುದು ಎಂದು ವಿ4 ಸ್ಟುಡಿಯೋ ತಿಳಿಸಿದೆ.

***

ಈ ಸಿನಿಮಾ 2006ರಲ್ಲಿ ನಶೀಬಾಚೋ ಖೆಳ್ ಎಂಬುದಾಗಿ ಕೊಂಕಣಿಯಲ್ಲಿ ತೆರೆ ಕಂಡಿದೆ. ಕೊಂಕಣಿಯಲ್ಲಿ 2 ಲಕ್ಷ ಕೊಂಕಣಿಗರು ಈ ಸಿನಿಮಾವನ್ನು ವೀಕ್ಷಿಸಿದ್ದಾರೆ. ಕೆನಡಾ, ಅಮೆರಿಕಾ, ಆಸ್ಟ್ರೇಲಿಯಾ, ಲಂಡನ್, ಇಸ್ರೇಲ್ ಮೊದಲಾದ ದೇಶಗಳಲ್ಲಿ ಸಿನಿಮಾ ತೆರೆ ಕಂಡಿದೆ. ಈಗ ತುಳುವಿಗೆ ಈ ಸಿನಿಮಾ ಡಬ್ ಆಗಿ ನಸೀಬ್ ಏರೆಗುಂಡು ಏರೆಗಿಜ್ಜಿ ಹೆಸರಿನಲ್ಲಿ ತೆರೆಕಾಣುತ್ತಿದೆ. ಹಾರಿ ಫೆರ್ನಾಂಡಿಸ್ ನಿರ್ದೇಶಿಸಿದ ಈ ಚಲನಚಿತ್ರವನ್ನು ಶಕ್ತಿನಗರದ ಕಲಾಂಗಣ, ಬಲ್ಮಠ, ಬೊಂದೇಲ್. ಉಡುಪಿ ಜಿಲ್ಲೆಯ ಬಾರ್ಕೂರ್, ಸಾಸ್ತಾನದಲ್ಲಿ ಚಿತ್ರೀಕರಿಸಲಾಗಿದೆ. ಉತ್ತಮ ಹಾಸ್ಯ ಮತ್ತು ಉತ್ತಮ ಕಥಾಹಂದರವನ್ನು ಒಳಗೊಂಡಿರುವ ಈ ಸಿನಿಮಾದಲ್ಲಿ ಎಲ್ಬೆನ್ ಮಸ್ಕರೇಸನ್, ಎಸ್ತೇರ್ ನೊರೊನ್ಹಾ, ರಂಜಿತ ಊವಿಸ್ ಸಾಸ್ತಾನ, ಪ್ರಿನ್ಸ್ ಜಾಕೋಬ್ ಗೋವಾ, ಸ್ಟೇನಿ ಅಲ್ಬಾಂಸ್, ಸುಜಾತ ಅಂದ್ರಾದೆ, ಗ್ಯಾಲ್ವಿನ್ ಫೆರ್ನಾಂಡಿಸ್ ಮೊದಲಾದರು ಈ ಚಿತ್ರದಲ್ಲಿ ನಟಿಸಿದ್ದಾರೆ.
– ಹೆನ್ರಿ ಡಿ’ಸಿಲ್ವ, ನಿರ್ಮಾಪಕರು

***

ವಿ4 ಸ್ಟೀಮ್‌ನ ಓಟಿಟಿ ಆರಂಭಗೊಂಡ ಬಳಿಕ ಈಗಾಗಲೇ 8 ಕನ್ನಡ ಸಿನಿಮಾಗಳನ್ನು ತುಳು ಭಾಷೆಗೆ ಡಬ್ಬಿಂಗ್ ಮಾಡಲಾಗಿದೆ. ಪಂಚತಂತ್ರ, ಪೆನ್ಸಿಲ್‌ಬಾಕ್ಸ್, ರುದ್ರಾಕ್ಷಿಪುರ, ಅಭಿಸಾರಿಕೆ, ರಂಗೋಲು, ನಮ್ ಗಣಿ ಬಿ.ಕಾಂ ಪಾಸ್, ಬೀರ್‌ಬಲ್. ಈ ಎಲ್ಲ ಚಿತ್ರಗಳು ಒಟಿಟಿಯಲ್ಲಿ ಹೆಸರು ಮಾಡಿದ ಚಿತ್ರಗಳು. ಇದನ್ನು ತುಳುವಿಗೆ ಡಬ್ ಮಾಡಲಾಗಿದೆ. ಅದಲ್ಲದೆ ಎಲ್.ಎಸ್. ಮೀಡಿಯಾ ಪ್ರೊಡಕ್ಷನ್‌ನಲ್ಲಿ ಮೂಡಿಬರಲಿರುವ ಐದು ಚಿತ್ರಗಳಲ್ಲಿ ಎರಡು ಕನ್ನಡ ಮತ್ತು ಎರಡು ತುಳು ಚಲನಚಿತ್ರ ನಿರ್ಮಾಣ ಹಂತದಲ್ಲಿವೆ. ಈಗಾಗಲೇ ಟು&ಮಿ ಚಿತ್ರ ವಿ4ಸ್ಟೀಮ್‌ನ ಓಟಿಟಿ ತೆರೆ ಕಂಡು ಯಶಸ್ಸನ್ನು ಕಂಡಿದೆ. ಈ ವರ್ಷದಲ್ಲಿ ಹನ್ನೆರಡಕ್ಕೂ ಅಧಿಕ ಚಿತ್ರಗಳು ಬಿಡುಗಡೆಯಾಗಲಿವೆ.

-ಲಕ್ಷ್ಮಣ್ ಕುಂದರ್, ವಿ4 ನ್ಯೂಸ್ ಆಡಳಿತ ನಿರ್ದೇಶಕರು

***

ಮೊಟ್ಟ ಮೊದಲ ಬಾರಿಗೆ ತುಳುವಿನಲ್ಲಿ ಕೊಂಕಣಿ ಚಿತ್ರವನ್ನು ಡಬ್ಬಿಂಗ್ ಮಾಡಲಾಗಿದೆ. ಚಿತ್ರದಲ್ಲಿ ಕಾಮಿಡಿ ಇರುವುದರಿಂದ ಸಿನಿ ಪ್ರೇಕ್ಷಕರು ಪ್ರೋತ್ಸಾಹಿಸುವುದು ಗ್ಯಾರಂಟಿ. ಉತ್ತಮ ಹ್ಯಾಸ ಹಾಗೂ ಉತ್ತಮ ಕಥಾ ಹಂದರವನ್ನು ಒಳಗೊಂಡಿರುವ ಈ ಸಿನಿಮಾ ಅತ್ಯುತ್ತಮವಾಗಿ ಮೂಡಿ ಬಂದಿದೆ.

-ವಿನೋದ್ ರಾಜ್ ಕೋಕಿಲ, ಸಂಗೀತ ನಿರ್ದೇಶಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...