HomeUncategorizedವಿ4 ಸ್ಟ್ರೀಮ್ ನಿಂದ ಹೊಸ ಪ್ರಯೋಗ: ನಾಳೆ ‘ನಸೀಬ್ ಏರೆಗುಂಡು ಏರೆಗಿಜ್ಜಿ’ ಸಿನಿಮಾ ಬಿಡುಗಡೆ

ವಿ4 ಸ್ಟ್ರೀಮ್ ನಿಂದ ಹೊಸ ಪ್ರಯೋಗ: ನಾಳೆ ‘ನಸೀಬ್ ಏರೆಗುಂಡು ಏರೆಗಿಜ್ಜಿ’ ಸಿನಿಮಾ ಬಿಡುಗಡೆ

- Advertisement -
- Advertisement -

ವಿ4 ಸ್ಟ್ರೀಮ್‌ ಓಟಿಟಿಯು ಕನ್ನಡ ಚಲನಚಿತ್ರವನ್ನು ತುಳು ಭಾಷೆಗೆ ಡಬ್ಬಿಂಗ್ ಮಾಡುವ ಮೂಲಕ ಸಿನಿ ಪ್ರೇಕ್ಷರನ್ನು ಮನರಂಜಿಸಿದೆ. ಇದೀಗ ಮೊಟ್ಟ ಮೊದಲ ಬಾರಿಗೆ ಕೊಂಕಣಿ ಭಾಷೆಯ ‘ನಶೀಬಾಚೊ ಖೆಳ್’ ಎನ್ನುವ ಸಿನಿಮಾವನ್ನು ‘ನಸೀಬ್ ಏರೆಗುಂಡು ಏರೆಗಿಜ್ಜಿ’ ಹೆಸರಲ್ಲಿ ಡಬ್‌ ಮಾಡಲಾಗಿದ್ದು, ಮೋಂತಿ ಫೆಸ್ಟ್‌ನ ದಿನದಂದು (ಸೆ.8ರಂದು) ವಿ4 ಸ್ಟ್ರೀಮ್‌ನಲ್ಲಿ ತೆರೆ ಕಾಣಲಿದೆ. ಕರ್ನಾಟಕದ ಮೊಟ್ಟ ಮೊದಲ ಓಟಿಟಿ ಪ್ಲಾಟ್ ಫಾಮ್ ವಿ4ಸ್ಟ್ರೀಮ್ ಪ್ರಯೋಗ ಕುತೂಹಲ ಮೂಡಿಸಿದೆ.

ಸುಮಾರು 35 ವರ್ಷಗಳ ಹಿಂದೆ ಹೆನ್ರಿ ಡಿ ಸಿಲ್ವರವರು ರಚಿಸಿದ ಕಾಜಾರಾಚೆ ಉತಾರ್ ಎಂಬ ನಾಟಕದ ಮೂಲ ಕಥೆಯನ್ನಾಧರಿಸಿ ಮತ್ತು ಇದನ್ನು ಆಧುನಿಕತೆಗುಣವಾಗಿ ಚಲನಚಿತ್ರವಾಗಿ ತೆರೆಗೆ ತರಲಾಗಿದೆ. ಕ್ಯಾಮ್ ಫಿಲ್ಮ್ ಅರ್ಪಿಸುವ, ಪ್ರೆಸ್ಟಸ್ ಎಂಟರ್ ಪ್ರೈಸಸ್ ಲಾಂಭನದಲ್ಲಿ ತಯಾರಾಗಿರುವ ಈ ಸಿನಿಮಾವನ್ನು ಹೆನ್ರಿ ಡಿಸಿಲ್ವ ನಿರ್ಮಿಸಿದ್ದಾರೆ. ಹ್ಯಾರಿ ಫರ್ನಾಂಡೀಸ್ ನಿರ್ದೇಶಿಸಿದ ನಶೀಬಾಚೊ ಖೆಳ್ ಕೊಂಕಣಿ ಚಲನಚಿತ್ರವು ನಸೀಬ್ ಏರೆಗುಂಡು ಏರೆಗಿಜ್ಜಿ ತುಳುವಿಗೆ ಡಬ್ಬಿಂಗ್ ಮಾಡಲಾಗಿದ್ದು ಬುಧವಾರ ತೆರೆಕಾಣಲಿದೆ.

ವಿ4 ಸ್ಟುಡಿಯೋದಲ್ಲಿ ಈ ಚಿತ್ರದ ಡಬ್ಬಿಂಗ್ ಮಾಡಲಾಗಿದೆ. ನಟ ಸ್ವರಾಜ್ ಶೆಟ್ಟಿ, ನಿರೀಕ್ಷಾ ಶೆಟ್ಟಿ, ಶೈಲಶ್ರೀ ಅವರು ಕಂಠದಾನ ಮಾಡಿದ್ದಾರೆ. ಹಾಸ್ಯದಲ್ಲಿ ಜಗದೀಶ್ ಆಡ್ಯಾರ್ ಸಾಥ್ ನೀಡಿದ್ದಾರೆ. ಹಿನ್ನೆಲೆ ಗಾಯನದಲ್ಲಿ ವಿದ್ಯಾ ಸುವರ್ಣ, ವೈಷ್ಣವಿ ಕಿಣಿ, ಪ್ರಶಾಂತ್ ಕಂಕನಾಡಿ, ವಿನೋದ್ ಕೋಕಿಲಾ ಅವರು ಕಂಠ ಸಿರಿಯಲ್ಲಿ ಅದ್ಭುತವಾಗಿ ಹಾಡುಗಳು ಮೂಡಿ ಬಂದಿದೆ. ವಿನೋದ್ ರಾಜ್ ಕೋಕಿಲ ಅವರು ಸಂಗೀತ ನೀಡಿದ್ದಾರೆ. ರಂಜಿತ್ ಕದ್ರಿ, ಆಶ್ವಿನ್ ಬಂಟ್ವಾಳ್ ಅವರು ಸಾಹಿತ್ಯ ಒದಗಿಸಿದ್ದಾರೆ. ವಿನೋದ್ ರಾಜ್ ಕೋಕಿಲ್ ಅವರು ಆ ದೃಶ್ಯಕ್ಕೆ ತಕ್ಕಂತೆ ಹೊಸ ಹಾಡುಗಳನ್ನು ಸಂಯೋಜಿಸಿ ತುಳು ಸಿನಿಮಾಕ್ಕೆ ಹೊಸ ನಾಂದಿ ಹಾಡಿದ್ದಾರೆ. ಗೂಗಲ್ ಫ್ಲೇಸ್ಟೋರ್‌ನಿಂದ ವಿ4 ಆಪ್ ಡೌನ್ ಲೋಡ್ ಮಾಡಿಕೊಂಡು ಸಿನಿಮಾ ನೋಡಬಹುದು ಎಂದು ವಿ4 ಸ್ಟುಡಿಯೋ ತಿಳಿಸಿದೆ.

***

ಈ ಸಿನಿಮಾ 2006ರಲ್ಲಿ ನಶೀಬಾಚೋ ಖೆಳ್ ಎಂಬುದಾಗಿ ಕೊಂಕಣಿಯಲ್ಲಿ ತೆರೆ ಕಂಡಿದೆ. ಕೊಂಕಣಿಯಲ್ಲಿ 2 ಲಕ್ಷ ಕೊಂಕಣಿಗರು ಈ ಸಿನಿಮಾವನ್ನು ವೀಕ್ಷಿಸಿದ್ದಾರೆ. ಕೆನಡಾ, ಅಮೆರಿಕಾ, ಆಸ್ಟ್ರೇಲಿಯಾ, ಲಂಡನ್, ಇಸ್ರೇಲ್ ಮೊದಲಾದ ದೇಶಗಳಲ್ಲಿ ಸಿನಿಮಾ ತೆರೆ ಕಂಡಿದೆ. ಈಗ ತುಳುವಿಗೆ ಈ ಸಿನಿಮಾ ಡಬ್ ಆಗಿ ನಸೀಬ್ ಏರೆಗುಂಡು ಏರೆಗಿಜ್ಜಿ ಹೆಸರಿನಲ್ಲಿ ತೆರೆಕಾಣುತ್ತಿದೆ. ಹಾರಿ ಫೆರ್ನಾಂಡಿಸ್ ನಿರ್ದೇಶಿಸಿದ ಈ ಚಲನಚಿತ್ರವನ್ನು ಶಕ್ತಿನಗರದ ಕಲಾಂಗಣ, ಬಲ್ಮಠ, ಬೊಂದೇಲ್. ಉಡುಪಿ ಜಿಲ್ಲೆಯ ಬಾರ್ಕೂರ್, ಸಾಸ್ತಾನದಲ್ಲಿ ಚಿತ್ರೀಕರಿಸಲಾಗಿದೆ. ಉತ್ತಮ ಹಾಸ್ಯ ಮತ್ತು ಉತ್ತಮ ಕಥಾಹಂದರವನ್ನು ಒಳಗೊಂಡಿರುವ ಈ ಸಿನಿಮಾದಲ್ಲಿ ಎಲ್ಬೆನ್ ಮಸ್ಕರೇಸನ್, ಎಸ್ತೇರ್ ನೊರೊನ್ಹಾ, ರಂಜಿತ ಊವಿಸ್ ಸಾಸ್ತಾನ, ಪ್ರಿನ್ಸ್ ಜಾಕೋಬ್ ಗೋವಾ, ಸ್ಟೇನಿ ಅಲ್ಬಾಂಸ್, ಸುಜಾತ ಅಂದ್ರಾದೆ, ಗ್ಯಾಲ್ವಿನ್ ಫೆರ್ನಾಂಡಿಸ್ ಮೊದಲಾದರು ಈ ಚಿತ್ರದಲ್ಲಿ ನಟಿಸಿದ್ದಾರೆ.
– ಹೆನ್ರಿ ಡಿ’ಸಿಲ್ವ, ನಿರ್ಮಾಪಕರು

***

ವಿ4 ಸ್ಟೀಮ್‌ನ ಓಟಿಟಿ ಆರಂಭಗೊಂಡ ಬಳಿಕ ಈಗಾಗಲೇ 8 ಕನ್ನಡ ಸಿನಿಮಾಗಳನ್ನು ತುಳು ಭಾಷೆಗೆ ಡಬ್ಬಿಂಗ್ ಮಾಡಲಾಗಿದೆ. ಪಂಚತಂತ್ರ, ಪೆನ್ಸಿಲ್‌ಬಾಕ್ಸ್, ರುದ್ರಾಕ್ಷಿಪುರ, ಅಭಿಸಾರಿಕೆ, ರಂಗೋಲು, ನಮ್ ಗಣಿ ಬಿ.ಕಾಂ ಪಾಸ್, ಬೀರ್‌ಬಲ್. ಈ ಎಲ್ಲ ಚಿತ್ರಗಳು ಒಟಿಟಿಯಲ್ಲಿ ಹೆಸರು ಮಾಡಿದ ಚಿತ್ರಗಳು. ಇದನ್ನು ತುಳುವಿಗೆ ಡಬ್ ಮಾಡಲಾಗಿದೆ. ಅದಲ್ಲದೆ ಎಲ್.ಎಸ್. ಮೀಡಿಯಾ ಪ್ರೊಡಕ್ಷನ್‌ನಲ್ಲಿ ಮೂಡಿಬರಲಿರುವ ಐದು ಚಿತ್ರಗಳಲ್ಲಿ ಎರಡು ಕನ್ನಡ ಮತ್ತು ಎರಡು ತುಳು ಚಲನಚಿತ್ರ ನಿರ್ಮಾಣ ಹಂತದಲ್ಲಿವೆ. ಈಗಾಗಲೇ ಟು&ಮಿ ಚಿತ್ರ ವಿ4ಸ್ಟೀಮ್‌ನ ಓಟಿಟಿ ತೆರೆ ಕಂಡು ಯಶಸ್ಸನ್ನು ಕಂಡಿದೆ. ಈ ವರ್ಷದಲ್ಲಿ ಹನ್ನೆರಡಕ್ಕೂ ಅಧಿಕ ಚಿತ್ರಗಳು ಬಿಡುಗಡೆಯಾಗಲಿವೆ.

-ಲಕ್ಷ್ಮಣ್ ಕುಂದರ್, ವಿ4 ನ್ಯೂಸ್ ಆಡಳಿತ ನಿರ್ದೇಶಕರು

***

ಮೊಟ್ಟ ಮೊದಲ ಬಾರಿಗೆ ತುಳುವಿನಲ್ಲಿ ಕೊಂಕಣಿ ಚಿತ್ರವನ್ನು ಡಬ್ಬಿಂಗ್ ಮಾಡಲಾಗಿದೆ. ಚಿತ್ರದಲ್ಲಿ ಕಾಮಿಡಿ ಇರುವುದರಿಂದ ಸಿನಿ ಪ್ರೇಕ್ಷಕರು ಪ್ರೋತ್ಸಾಹಿಸುವುದು ಗ್ಯಾರಂಟಿ. ಉತ್ತಮ ಹ್ಯಾಸ ಹಾಗೂ ಉತ್ತಮ ಕಥಾ ಹಂದರವನ್ನು ಒಳಗೊಂಡಿರುವ ಈ ಸಿನಿಮಾ ಅತ್ಯುತ್ತಮವಾಗಿ ಮೂಡಿ ಬಂದಿದೆ.

-ವಿನೋದ್ ರಾಜ್ ಕೋಕಿಲ, ಸಂಗೀತ ನಿರ್ದೇಶಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...