HomeUncategorizedವಿ4 ಸ್ಟ್ರೀಮ್ ನಿಂದ ಹೊಸ ಪ್ರಯೋಗ: ನಾಳೆ ‘ನಸೀಬ್ ಏರೆಗುಂಡು ಏರೆಗಿಜ್ಜಿ’ ಸಿನಿಮಾ ಬಿಡುಗಡೆ

ವಿ4 ಸ್ಟ್ರೀಮ್ ನಿಂದ ಹೊಸ ಪ್ರಯೋಗ: ನಾಳೆ ‘ನಸೀಬ್ ಏರೆಗುಂಡು ಏರೆಗಿಜ್ಜಿ’ ಸಿನಿಮಾ ಬಿಡುಗಡೆ

- Advertisement -
- Advertisement -

ವಿ4 ಸ್ಟ್ರೀಮ್‌ ಓಟಿಟಿಯು ಕನ್ನಡ ಚಲನಚಿತ್ರವನ್ನು ತುಳು ಭಾಷೆಗೆ ಡಬ್ಬಿಂಗ್ ಮಾಡುವ ಮೂಲಕ ಸಿನಿ ಪ್ರೇಕ್ಷರನ್ನು ಮನರಂಜಿಸಿದೆ. ಇದೀಗ ಮೊಟ್ಟ ಮೊದಲ ಬಾರಿಗೆ ಕೊಂಕಣಿ ಭಾಷೆಯ ‘ನಶೀಬಾಚೊ ಖೆಳ್’ ಎನ್ನುವ ಸಿನಿಮಾವನ್ನು ‘ನಸೀಬ್ ಏರೆಗುಂಡು ಏರೆಗಿಜ್ಜಿ’ ಹೆಸರಲ್ಲಿ ಡಬ್‌ ಮಾಡಲಾಗಿದ್ದು, ಮೋಂತಿ ಫೆಸ್ಟ್‌ನ ದಿನದಂದು (ಸೆ.8ರಂದು) ವಿ4 ಸ್ಟ್ರೀಮ್‌ನಲ್ಲಿ ತೆರೆ ಕಾಣಲಿದೆ. ಕರ್ನಾಟಕದ ಮೊಟ್ಟ ಮೊದಲ ಓಟಿಟಿ ಪ್ಲಾಟ್ ಫಾಮ್ ವಿ4ಸ್ಟ್ರೀಮ್ ಪ್ರಯೋಗ ಕುತೂಹಲ ಮೂಡಿಸಿದೆ.

ಸುಮಾರು 35 ವರ್ಷಗಳ ಹಿಂದೆ ಹೆನ್ರಿ ಡಿ ಸಿಲ್ವರವರು ರಚಿಸಿದ ಕಾಜಾರಾಚೆ ಉತಾರ್ ಎಂಬ ನಾಟಕದ ಮೂಲ ಕಥೆಯನ್ನಾಧರಿಸಿ ಮತ್ತು ಇದನ್ನು ಆಧುನಿಕತೆಗುಣವಾಗಿ ಚಲನಚಿತ್ರವಾಗಿ ತೆರೆಗೆ ತರಲಾಗಿದೆ. ಕ್ಯಾಮ್ ಫಿಲ್ಮ್ ಅರ್ಪಿಸುವ, ಪ್ರೆಸ್ಟಸ್ ಎಂಟರ್ ಪ್ರೈಸಸ್ ಲಾಂಭನದಲ್ಲಿ ತಯಾರಾಗಿರುವ ಈ ಸಿನಿಮಾವನ್ನು ಹೆನ್ರಿ ಡಿಸಿಲ್ವ ನಿರ್ಮಿಸಿದ್ದಾರೆ. ಹ್ಯಾರಿ ಫರ್ನಾಂಡೀಸ್ ನಿರ್ದೇಶಿಸಿದ ನಶೀಬಾಚೊ ಖೆಳ್ ಕೊಂಕಣಿ ಚಲನಚಿತ್ರವು ನಸೀಬ್ ಏರೆಗುಂಡು ಏರೆಗಿಜ್ಜಿ ತುಳುವಿಗೆ ಡಬ್ಬಿಂಗ್ ಮಾಡಲಾಗಿದ್ದು ಬುಧವಾರ ತೆರೆಕಾಣಲಿದೆ.

ವಿ4 ಸ್ಟುಡಿಯೋದಲ್ಲಿ ಈ ಚಿತ್ರದ ಡಬ್ಬಿಂಗ್ ಮಾಡಲಾಗಿದೆ. ನಟ ಸ್ವರಾಜ್ ಶೆಟ್ಟಿ, ನಿರೀಕ್ಷಾ ಶೆಟ್ಟಿ, ಶೈಲಶ್ರೀ ಅವರು ಕಂಠದಾನ ಮಾಡಿದ್ದಾರೆ. ಹಾಸ್ಯದಲ್ಲಿ ಜಗದೀಶ್ ಆಡ್ಯಾರ್ ಸಾಥ್ ನೀಡಿದ್ದಾರೆ. ಹಿನ್ನೆಲೆ ಗಾಯನದಲ್ಲಿ ವಿದ್ಯಾ ಸುವರ್ಣ, ವೈಷ್ಣವಿ ಕಿಣಿ, ಪ್ರಶಾಂತ್ ಕಂಕನಾಡಿ, ವಿನೋದ್ ಕೋಕಿಲಾ ಅವರು ಕಂಠ ಸಿರಿಯಲ್ಲಿ ಅದ್ಭುತವಾಗಿ ಹಾಡುಗಳು ಮೂಡಿ ಬಂದಿದೆ. ವಿನೋದ್ ರಾಜ್ ಕೋಕಿಲ ಅವರು ಸಂಗೀತ ನೀಡಿದ್ದಾರೆ. ರಂಜಿತ್ ಕದ್ರಿ, ಆಶ್ವಿನ್ ಬಂಟ್ವಾಳ್ ಅವರು ಸಾಹಿತ್ಯ ಒದಗಿಸಿದ್ದಾರೆ. ವಿನೋದ್ ರಾಜ್ ಕೋಕಿಲ್ ಅವರು ಆ ದೃಶ್ಯಕ್ಕೆ ತಕ್ಕಂತೆ ಹೊಸ ಹಾಡುಗಳನ್ನು ಸಂಯೋಜಿಸಿ ತುಳು ಸಿನಿಮಾಕ್ಕೆ ಹೊಸ ನಾಂದಿ ಹಾಡಿದ್ದಾರೆ. ಗೂಗಲ್ ಫ್ಲೇಸ್ಟೋರ್‌ನಿಂದ ವಿ4 ಆಪ್ ಡೌನ್ ಲೋಡ್ ಮಾಡಿಕೊಂಡು ಸಿನಿಮಾ ನೋಡಬಹುದು ಎಂದು ವಿ4 ಸ್ಟುಡಿಯೋ ತಿಳಿಸಿದೆ.

***

ಈ ಸಿನಿಮಾ 2006ರಲ್ಲಿ ನಶೀಬಾಚೋ ಖೆಳ್ ಎಂಬುದಾಗಿ ಕೊಂಕಣಿಯಲ್ಲಿ ತೆರೆ ಕಂಡಿದೆ. ಕೊಂಕಣಿಯಲ್ಲಿ 2 ಲಕ್ಷ ಕೊಂಕಣಿಗರು ಈ ಸಿನಿಮಾವನ್ನು ವೀಕ್ಷಿಸಿದ್ದಾರೆ. ಕೆನಡಾ, ಅಮೆರಿಕಾ, ಆಸ್ಟ್ರೇಲಿಯಾ, ಲಂಡನ್, ಇಸ್ರೇಲ್ ಮೊದಲಾದ ದೇಶಗಳಲ್ಲಿ ಸಿನಿಮಾ ತೆರೆ ಕಂಡಿದೆ. ಈಗ ತುಳುವಿಗೆ ಈ ಸಿನಿಮಾ ಡಬ್ ಆಗಿ ನಸೀಬ್ ಏರೆಗುಂಡು ಏರೆಗಿಜ್ಜಿ ಹೆಸರಿನಲ್ಲಿ ತೆರೆಕಾಣುತ್ತಿದೆ. ಹಾರಿ ಫೆರ್ನಾಂಡಿಸ್ ನಿರ್ದೇಶಿಸಿದ ಈ ಚಲನಚಿತ್ರವನ್ನು ಶಕ್ತಿನಗರದ ಕಲಾಂಗಣ, ಬಲ್ಮಠ, ಬೊಂದೇಲ್. ಉಡುಪಿ ಜಿಲ್ಲೆಯ ಬಾರ್ಕೂರ್, ಸಾಸ್ತಾನದಲ್ಲಿ ಚಿತ್ರೀಕರಿಸಲಾಗಿದೆ. ಉತ್ತಮ ಹಾಸ್ಯ ಮತ್ತು ಉತ್ತಮ ಕಥಾಹಂದರವನ್ನು ಒಳಗೊಂಡಿರುವ ಈ ಸಿನಿಮಾದಲ್ಲಿ ಎಲ್ಬೆನ್ ಮಸ್ಕರೇಸನ್, ಎಸ್ತೇರ್ ನೊರೊನ್ಹಾ, ರಂಜಿತ ಊವಿಸ್ ಸಾಸ್ತಾನ, ಪ್ರಿನ್ಸ್ ಜಾಕೋಬ್ ಗೋವಾ, ಸ್ಟೇನಿ ಅಲ್ಬಾಂಸ್, ಸುಜಾತ ಅಂದ್ರಾದೆ, ಗ್ಯಾಲ್ವಿನ್ ಫೆರ್ನಾಂಡಿಸ್ ಮೊದಲಾದರು ಈ ಚಿತ್ರದಲ್ಲಿ ನಟಿಸಿದ್ದಾರೆ.
– ಹೆನ್ರಿ ಡಿ’ಸಿಲ್ವ, ನಿರ್ಮಾಪಕರು

***

ವಿ4 ಸ್ಟೀಮ್‌ನ ಓಟಿಟಿ ಆರಂಭಗೊಂಡ ಬಳಿಕ ಈಗಾಗಲೇ 8 ಕನ್ನಡ ಸಿನಿಮಾಗಳನ್ನು ತುಳು ಭಾಷೆಗೆ ಡಬ್ಬಿಂಗ್ ಮಾಡಲಾಗಿದೆ. ಪಂಚತಂತ್ರ, ಪೆನ್ಸಿಲ್‌ಬಾಕ್ಸ್, ರುದ್ರಾಕ್ಷಿಪುರ, ಅಭಿಸಾರಿಕೆ, ರಂಗೋಲು, ನಮ್ ಗಣಿ ಬಿ.ಕಾಂ ಪಾಸ್, ಬೀರ್‌ಬಲ್. ಈ ಎಲ್ಲ ಚಿತ್ರಗಳು ಒಟಿಟಿಯಲ್ಲಿ ಹೆಸರು ಮಾಡಿದ ಚಿತ್ರಗಳು. ಇದನ್ನು ತುಳುವಿಗೆ ಡಬ್ ಮಾಡಲಾಗಿದೆ. ಅದಲ್ಲದೆ ಎಲ್.ಎಸ್. ಮೀಡಿಯಾ ಪ್ರೊಡಕ್ಷನ್‌ನಲ್ಲಿ ಮೂಡಿಬರಲಿರುವ ಐದು ಚಿತ್ರಗಳಲ್ಲಿ ಎರಡು ಕನ್ನಡ ಮತ್ತು ಎರಡು ತುಳು ಚಲನಚಿತ್ರ ನಿರ್ಮಾಣ ಹಂತದಲ್ಲಿವೆ. ಈಗಾಗಲೇ ಟು&ಮಿ ಚಿತ್ರ ವಿ4ಸ್ಟೀಮ್‌ನ ಓಟಿಟಿ ತೆರೆ ಕಂಡು ಯಶಸ್ಸನ್ನು ಕಂಡಿದೆ. ಈ ವರ್ಷದಲ್ಲಿ ಹನ್ನೆರಡಕ್ಕೂ ಅಧಿಕ ಚಿತ್ರಗಳು ಬಿಡುಗಡೆಯಾಗಲಿವೆ.

-ಲಕ್ಷ್ಮಣ್ ಕುಂದರ್, ವಿ4 ನ್ಯೂಸ್ ಆಡಳಿತ ನಿರ್ದೇಶಕರು

***

ಮೊಟ್ಟ ಮೊದಲ ಬಾರಿಗೆ ತುಳುವಿನಲ್ಲಿ ಕೊಂಕಣಿ ಚಿತ್ರವನ್ನು ಡಬ್ಬಿಂಗ್ ಮಾಡಲಾಗಿದೆ. ಚಿತ್ರದಲ್ಲಿ ಕಾಮಿಡಿ ಇರುವುದರಿಂದ ಸಿನಿ ಪ್ರೇಕ್ಷಕರು ಪ್ರೋತ್ಸಾಹಿಸುವುದು ಗ್ಯಾರಂಟಿ. ಉತ್ತಮ ಹ್ಯಾಸ ಹಾಗೂ ಉತ್ತಮ ಕಥಾ ಹಂದರವನ್ನು ಒಳಗೊಂಡಿರುವ ಈ ಸಿನಿಮಾ ಅತ್ಯುತ್ತಮವಾಗಿ ಮೂಡಿ ಬಂದಿದೆ.

-ವಿನೋದ್ ರಾಜ್ ಕೋಕಿಲ, ಸಂಗೀತ ನಿರ್ದೇಶಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...