Homeಮುಖಪುಟಕೃಷಿ ಮಸೂದೆ: ಪಂಜಾಬ್‌ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಪ್ ಶಾಸಕರ ಅಹೋರಾತ್ರಿ ಪ್ರತಿಭಟನೆ!

ಕೃಷಿ ಮಸೂದೆ: ಪಂಜಾಬ್‌ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಪ್ ಶಾಸಕರ ಅಹೋರಾತ್ರಿ ಪ್ರತಿಭಟನೆ!

ನಾವು ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗೆ ಪ್ರತಿಯಾಗಿ ರಾಜ್ಯ ಸರ್ಕಾರ ತರಲು ಹೊರಟಿರುವ ಮಸೂದೆಯನ್ನು ಬೆಂಬಲಿಸುತ್ತೇವೆ. ಆದರೆ ಆ ಮಸೂದೆಯಲ್ಲಿ ಏನಿದೆ ಎಂಬುದನ್ನು ನಮಗೆ ತಿಳಿಸಬೇಕಲ್ಲವೇ? - ಆಪ್

- Advertisement -
- Advertisement -

ಕೇಂದ್ರ ಸರ್ಕಾರ ಅಂಗೀಕರಿಸಿರುವ 3 ಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ರೈತ ಸಂಘಟನೆಗಳು, ವಿರೋಧ ಪಕ್ಷಗಳು ವ್ಯಾಪಕ ವಿರೋಧ ದಾಖಲಿಸಿದ್ದು, ಇಂದಿಗೂ ಪ್ರತಿಭಟನೆ ನಡೆಸುತ್ತಿವೆ. ಅದರಲ್ಲಿಯೂ ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಲ್ಲಿ ಹೋರಾಟ ಉತ್ತುಂಗಕ್ಕೆ ಮುಟ್ಟಿತ್ತು. ಪಂಜಾಬ್‌ನ ಆಡಳಿತರೂಢ ಕಾಂಗ್ರೆಸ್ ಸರ್ಕಾರ ಸಹ ದೊಡ್ಡ ಮಟ್ಟದಲ್ಲಿ ಹೋರಾಟಕ್ಕೆ ದನಿಗೂಡಿಸಿತ್ತು. ಈ ನಡುವೆ ಅದೇ ಪಂಜಾಬ್ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಹೊಸ ಕೃಷಿ ಮಸೂದೆ ಕುರಿತು ವಿರೋಧ ಪಕ್ಷ ಆಪ್ ಪ್ರತಿಭಟನೆ ಆರಂಭಿಸಿದೆ.

ಪಂಜಾಬ್ ಕಾಂಗ್ರೆಸ್ ಸರ್ಕಾರವು ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳಿಗೆ ಸೆಡ್ಡುಹೊಡೆದು ರಾಜ್ಯದಲ್ಲಿ ಹೊಸ ಕೃಷಿ ಮಸೂದೆಯನ್ನು ಅಂಗೀಕರಿಸಲು ಹೊರಟಿದೆ. ಆದರೆ ಆ ಕರಡು ಮಸೂದೆಯನ್ನು ಸರ್ಕಾರ ವಿರೋಧ ಪಕ್ಷಗಳೊಂದಿಗೆ ಹಂಚಿಕೊಳ್ಳುತ್ತಿಲ್ಲವೆಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಶಾಸಕರು ನಿನ್ನೆ ರಾತ್ರಿಯೆಲ್ಲ ವಿಧಾನಸಭಾ ಕಟ್ಟಡದಲ್ಲಿಯೇ ಉಳಿದು ಪ್ರತಿಭಟನೆ ದಾಖಲಿಸಿದ್ದಾರೆ.

ಈ ಗುರುವಾರ ಅಸೆಂಬ್ಲಿಯಲ್ಲಿ ಮಂಡನೆಯಾಗಲಿರುವ ಕರಡು ಕೃಷಿ ಮಸೂದೆಯನ್ನು ಬಹಿರಂಗಪಡಿಸಬೇಕು ಎಂಬುದು ಆಪ್ ಶಾಸಕರ ಬೇಡಿಕೆಯಾಗಿದೆ. “ನಾವು ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗೆ ಪ್ರತಿಯಾಗಿ ರಾಜ್ಯ ಸರ್ಕಾರ ತರಲು ಹೊರಟಿರುವ ಮಸೂದೆಯನ್ನು ಬೆಂಬಲಿಸುತ್ತೇವೆ. ಆದರೆ ಆ ಮಸೂದೆಯಲ್ಲಿ ಏನಿದೆ ಎಂಬುದನ್ನು ನಮಗೆ ತಿಳಿಸಬೇಕಲ್ಲವೇ? ಏನಿದೆ ಎಂದು ತಿಳಿಯದೇ ಶಾಸಕರು ಅದರ ಬಗ್ಗೆ ಚರ್ಚೆ ಮತ್ತು ವಾದ ನಡೆಸಲು ಸಾಧ್ಯವೇ ಎಂದು ವಿರೋಧ ಪಕ್ಷದ ನಾಯಕ ಹರ್ಪಾಲ್ ಚೀಮಾ ಪ್ರಶ್ನಿಸಿದ್ದಾರೆ.

ಇತ್ತೀಚೆಗೆ ತಾನೇ ಕೃಷಿ ಮಸೂದೆಗಳನ್ನು ವಿರೋಧಿಸಿ ಎನ್‌ಡಿಎ ತೊರೆದಿರುವ ಶಿರೋಮಣಿ ಅಕಾಲಿ ದಳವು ಹೊಸ ಮಸೂದೆಯನ್ನು ಸೋಮವಾರವೇ ಚರ್ಚೆಗೆ ಬಿಡಬೇಕಿತ್ತು ಎಂದು ಅಭಿಪ್ರಾಯಪಟ್ಟಿದೆ.

ಕಳೆದ ವರ್ಷ ರಾಜ್ಯ ಕ್ಯಾಬಿನೆಟ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಶಾಸಕ ನವಜ್ಯೋತ್‌ ಸಿಂಗ್ ಸಿಧು ಸೋಮವಾರ ಅಸೆಂಬ್ಲಿಗೆ ಹಾಜರಾಗಿದ್ದಾರೆ. ಅವರು ತಮ್ಮ ಯೂಟ್ಯೂಬ್‌ನಲ್ಲಿ ಕೇಂದ್ರದ ಕೃಷಿ ಕಾಯ್ದೆಗಳು ದೇಶದ ಒಕ್ಕೂಟ ವ್ಯವಸ್ಥೆಯ ಮೇಲಿನ ಗಧಾಪ್ರಹಾರ ಎಂದು ಕರೆದಿದ್ದಾರೆ.


ಇದನ್ನೂ ಓದಿ: ಕೃಷಿ ಮಸೂದೆಗೆ ವಿರೋಧ: ಪಂಜಾಬ್ BJP ಪ್ರಧಾನ ಕಾರ್ಯದರ್ಶಿ ರಾಜೀನಾಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...