Homeಕರ್ನಾಟಕದಲಿತ ಚಳವಳಿಯನ್ನು ಹೊಸ ತಲೆಮಾರು ಒಗ್ಗೂಡಿಸಬೇಕು: ಪ್ರೊ. ನಟರಾಜ್ ಹುಳಿಯಾರ್

ದಲಿತ ಚಳವಳಿಯನ್ನು ಹೊಸ ತಲೆಮಾರು ಒಗ್ಗೂಡಿಸಬೇಕು: ಪ್ರೊ. ನಟರಾಜ್ ಹುಳಿಯಾರ್

- Advertisement -
- Advertisement -

ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಪ್ರಕ್ರಿಯೆ ಪ್ರಸ್ತುತ ಒಂದು ಹಂತಕ್ಕೆ ಬಂದಿದೆ; ಈ ವಿಷಯ ಪರಿಹಾರದ ಬಳಿಕ ಹೊಸ ತಲೆಮಾರು ದಲಿತ ಚಳುವಳಿಯನ್ನು ಒಗ್ಗೂಡಿಸುವ ಕೆಲಸ ಮಾಡಬೇಕು ಎಂದು ಪ್ರೊ. ನಟರಾಜ್ ಹುಳಿಯಾರ್ ಕರೆಕೊಟ್ಟರು.

ಬೆಂಗಳೂರು ನಗರ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಪ್ರೊ. ಬಿ.ಕೃಷ್ಣಪ್ಪ ಅವರ 88ನೇ ಜನ್ಮದಿನದ ಪ್ರಯುಕ್ತ ನಡೆದ ‘ನಾಗರಿಕ ಹಕ್ಕು ರಕ್ಷಣಾ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಾಲೇಜಿನ ಪ್ರಾಂಶುಪಾಲರಾಗಿದ್ದ ಪ್ರೊ. ಬಿ.ಕೃಷ್ಣಪ್ಪ ಅವರು ಟೀಚರ್ ಆಗಿ ಚಳವಳಿ ಹೇಗೆ ನಡೆಸಬೇಕು ಎಂದು ಒಂದು ಮಾದರಿ ಹಾಕಿಕೊಟ್ಟರು. ಕನ್ನಡ ಸಾಹಿತ್ಯದಲ್ಲಿ ದಲಿತ ವಿಮರ್ಶೆ ಹೇಗಿರಬೇಕು? ವಿದ್ಯಾರ್ಥಿಗಳ ನಡುವೆ ಚಳವಳಿ ಹೇಗೆ ಕಟ್ಟಬೇಕು ಎಂದು ಹೇಳಿಕೊಟ್ಟರು. ಇಂದು ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಕೃಷ್ಣಪ್ಪ ಅವರ ಮಾದರಿ ನಮ್ಮ ಎದುರಿಗಿದೆ. ದಲಿತ ಚಳವಳಿಗೆ ಮಾತ್ರವಲ್ಲ, ಕರ್ನಾಟಕಕ್ಕೆ ಅವರ ಮಾದರಿ ಹಬ್ಬಿದೆ ಎಂದರು.

ಭದ್ರಾವತಿಯಲ್ಲಿ ವಿಎಸ್ಎನ್ಎಲ್ ಕಾರ್ಖಾನೆಯಲ್ಲಿ ದಲಿತ ನೌಕರರಿಗೆ ಪ್ರತ್ಯೇಕ ಚಹಾ ನೀಡಲಾಗುತ್ತಿತ್ತು. ಪ್ರಬಲ ಜಾತಿ ನೌಕರರೊಬ್ಬರು ಬಂದು ಎಲ್ಲರಿಗೂ ಚಹಾ ನೀಡಬೇಕಾಗಿತ್ತು. ಅದನ್ನು ವಿರೋಧಿಸುವ ಮೂಲಕ  ಹೋರಾಟ ಕಟ್ಟಿದರು. ಅಲ್ಲಿಂದ ಅವರು ಅಸ್ಪೃಶ್ಯತೆ ವಿರೋಧಿ ಹೋರಾಟಕ್ಕೆ ಚಾಲನೆ ಕೊಟ್ಟರು. 70ರ ದಶಕದಲ್ಲಿ ಕೃಷ್ಣಪ್ಪ ಅವರು ಸಮಾಜ ಕಲ್ಯಾಣ ಇಲಾಖೆ ಕೆಲಸದ ಬಗ್ಗೆ ಹಾಗೂ ರಾಜ್ಯ ಬಜೆಟ್ ಬಗ್ಗೆ ಚರ್ಚೆ ಮಾಡುತ್ತಿದ್ದರು. ಸಮಾಜ ಕಲ್ಯಾಣ ಇಲಾಖೆ ಏನೆಲ್ಲಾ ಮಾಡಬೇಕು ಎಂದು ಸಲಹೆ ಕೊಡುತ್ತಿದ್ದರು. ಅಂದು ಕೃಷ್ಣಪ್ಪ ಅವರು ಮಾಡಿದ ಹೋರಾಟದ ಪರಿಣಾಮವಾಗಿ ಸರ್ಕಾರ ಈಗ ದಲಿತರಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಹಣ ಮೀಸಲಿಟ್ಟಿದೆ ಎಂದು ಹೇಳಿದರು.

ಕೃಷ್ಣಪ್ಪ ಅವರ ಹೋರಾಟದ ಫಲದಿಂದ ಇಂದು ದಲಿತರ ಭೂಮಿ ಪರಭಾರೆ ಬಗ್ಗೆ ಕಾನೂನಾಗಿದೆ. ಕೃಷ್ಣಪ್ಪ ಅವರ ಗತಕಾಲವನ್ನು ನೆನೆಪಿಸಿಕೊಂಡು ನಾವು ಇಂದು ವಿಷಾದ ವ್ಯಕ್ತಪಡಿಸುತ್ತಿದ್ದೇವೆ. ದಲಿತ ಚಳವಳಿಗೆ ಸಾಹಿತಿಗಳು, ಬರಹಗಾರರು, ಶಿಕ್ಷಕರು, ರಾಜಕಾರಣಿಗಳು ಸೇರಿದಂತೆ ಎಲ್ಲ ವಲಯದಿಂದ ಪ್ರತಿನಿಧಿಗಳು ಇದ್ದರು. ಇಂದು ದಲಿತ ಚಳವಳಿಗೆ ಅವರೆಲ್ಲರ ಸಂಪರ್ಕ ಕಡಿಮೆಯಾಗಿದೆ. ದಲಿತ ಚಳವಳಿಗೆ ವಿವಿಧ ವಲಯಗಳಿಂದ ಬರುತ್ತಿದ್ದ ಬೆಂಬಲ ಕ್ಷೀಣಿಸಿದೆ. ದಲಿತ ಚಳವಳಿಗೆ ಕೃಷ್ಣಪ್ಪ ಅವರು ಕೊಟ್ಟ ನುಡಿಗಟ್ಟುಗಳು ಈಗಲೂ ನಮ್ಮ ಬಳಿಯಲ್ಲಿ ಇದೆ; ಎಲ್ಲ ವಲಯಗಳ ಬುದ್ದಿಜೀವಿಗಳು ದಲಿತ ಚಳವಳಿ ಜೊತೆಗೆ ಸೇರಬೇಕು. ಏಕೆಂದರೆ, ಅಮೆರಿಕದಲ್ಲಿ ಒಬಾಮ ಎರಡು ಅವಧಿಗೆ ಅಧ್ಯಕ್ಷರಾಗಲೂ ಇದೇ ಕಾರಣ. ಅಲ್ಲಿನ ಸಾಂಸ್ಕೃತಿಕ ಅಧಿಕಾರದಿಂದ ಇದು ಸಾಧ್ಯವಾಯಿತು. ಸಿನಿಮಾ, ಹಾಡುಗಾರರು, ಬರಹಗಾರರು ಸೇರಿದಂತೆ ಎಲ್ಲರೂ ಕಪ್ಪು ಜನರ ಬಗ್ಗೆ ಮಾತನಾಡಿದರು ಎಂದರು.

ನಾವು ಅಂಬೇಡ್ಕರ್‌ವಾದವನ್ನು ಪ್ರಚಾರ ಮಾಡಬೇಕು. ಅಂಬೇಡ್ಕರ್ ಅವರ ವೈಚಾರಿಕತೆ ಸಮಾಜದಲ್ಲಿ ಹಬ್ಬದ ಕಾರಣಕ್ಕೆ ಇಂದು ದೇಶದಲ್ಲಿ ಹಲವೆಡೆ ಕಾಲ್ತುಳಿತ ಆಗುತ್ತಿದೆ. ಅಂಬೇಡ್ಕರ್ ಅವರ ಜಾತಿ ವಿನಾಶದ ಮಾದರಿಯನ್ನು ಮರೆತಿರುವ ನಾವು, ಜಾತಿ ಉಪಜಾತಿಗಳನ್ನು ಪೋಷಿಸಿಕೊಂಡು ಹೋಗುತ್ತಿದ್ದೇವೆ. ಜಾತಿ ಪ್ರಜ್ಞೆಯನ್ನು ನಾವು ನಮ್ಮ ತಲೆಯಿಂದ ಹೋಗಲಾಡಿಸಬೇಕು. ಜಾತಿ ಇಂದು ಎಲ್ಲವನ್ನೂ ನಿಯಂತ್ರಣ ಮಾಡುತ್ತಿದೆ. ಊಳಿಗಮಾನ್ಯ ಜಾತಿ ಹಾಗೂ ಪಕ್ಷಗಳು ದಲಿತ ರಾಜಕಾರಣಿಗಳ ವಿರುದ್ಧ ಮಾತನಾಡಲು ದಲಿತ ರಾಜಕಾರಣಿಗೇ ಸುಪಾರಿ ನೀಡುತ್ತಿವೆ. ಅದಕ್ಕೆ ನಮ್ಮ ಮಾಧ್ಯಮಗಳೂ ಹೆಚ್ಚು ಪ್ರಚಾರ ಕೊಡುತ್ತಿವೆ ಎಂದು ಹೇಳಿದರು.

ದಲಿತ ಚಳವಳಿಯ ಯುಜನರಿಗೆ ನನ್ನದೊಂದು ಸಲಹೆ. ಒಳ ಮೀಸಲಾತಿ ಜಾರಿ ಪ್ರಕ್ರಿಯೆ ಒಂದು ಹಂತಕ್ಕೆ ಬಂದಿದೆ. ಅದು ಪರಿಹಾರ ಆದ ನಂತರ ಹೊಸ ತಲೆಮಾರು ದಲಿತ ಚಳುವಳಿಯನ್ನು ಒಗ್ಗೂಡಿಸುವ ಕೆಲಸ ಮಾಡಬೇಕು ಎಂದರು ಕಿವಿಮಾತು ಹೇಳಿದರು.

ಸಿದ್ಧಾಂತಗಳಿಗೆ ಮಾತ್ರ ಜಗತ್ತು ಬದಲಿಸುವ ಶಕ್ತಿ ಇದೆ

ಯಾವ ಬಾಂಬು-ಬಂದೂಕಿಗೂ ಜಗತ್ತನ್ನು ಬದಲಾಯಿಸುವ ಶಕ್ತಿ ಇಲ್ಲ. ಗಟ್ಟಿ ಸಿದ್ಧಾಂತಗಳಿಗೆ ಮಾತ್ರ ಆ ಶಕ್ತಿ ಇದೆ ಎಂದು ಚಿಂತಕರು ಹಾಗೂ ಮುಖ್ಯಮಂತ್ರಿಗಳ ಆಪ್ತ ಕಾರ್ಯರ್ಶಿಗಳಾದ ಡಾ. ಎನ್.ವೆಂಕಟೇಶಯ್ಯ ಪ್ರತಿಪಾದಿಸಿದರು.

ಅಂಬೇಡ್ಕರ್‌ವಾದ ವಿಶೇಷಾಂಕ ಬಿಡುಗಡೆಗೊಳಿಸಿ ಮಾತನಾಡಿದ ಅವರು, “ದಲಿತ ಚಳವಳಿಗೆ ಈಗ 51 ವರ್ಷ ತುಂಬುತ್ತಿದೆ. ಜಗತ್ತನ್ನು ಬದಲಾಯಿಸುವ ಶಕ್ತಿ ಗಟ್ಟಿ ಸಿದ್ಧಾಂತಗಳಿಗೆ ಮಾತ್ರ ಇದೆ. ಯಾವುದೇ ಬಾಂಬು-ಬಂದೂಕುಗಳಿಗೆ ಅಲ್ಲ. ಸಿದ್ಧಾಂತವು ಮನುಷ್ಯ ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ. ಸಿದ್ಧಾಂತವು ಸಮಾಜದ ಬದಲಾವಣೆಗೆ ಸದಾ ಶ್ರಮಿಸುತ್ತದೆ; ಇಲ್ಲದಿದ್ದರೆ ಆ ಸಿದ್ದಾಂತ ಜೀವಂತ ಇರುವುದಿಲ್ಲ ಎಂದರು.

ಕೃಷ್ಣಪ್ಪ ಅವರ ಹೋರಾಟದ ಮಾರ್ಗಗಳು ಭೂಮಿ, ವಸತಿ ಶಾಲೆ, ಮೂಢನಂಬಿಕೆ ಮತ್ತು ಅಸ್ಪೃಶ್ಯತೆ ವಿರೊಧಿಯಾಗಿತ್ತು. ಅವರು ಪ್ರಮುಖವಾಗಿ ನಾಲ್ಕೈದು ಹೋರಾಟಗಳನ್ನು ರೂಪಿಸಿದರು. 70ರ ದಶಕದಲ್ಲಿ ಅವರು ನಡೆಸಿದ ಭೂಮಿ ಹೋರಾಟದಿಂದ ಇಂದು ಲಕ್ಷಾಂತರ ಜನ ಭೂ ಹಿಡುವಳಿದಾರರಾಗಿದ್ದಾರೆ; ಅದರಲ್ಲಿ ಬಹುತೇಕರು ದಲಿತರಿದ್ದಾರೆ. ‘ಹೆಂಡ ಬೇಡ, ವಸತಿ ಶಾಲೆ ಕೊಡಿ’ ಎಂಬ ಚಳವಳಿಯಿಂದ ಇಂದು ಇಡೀ ದೇಶದಲ್ಲೇ ಕರ್ನಾಟಕದಲ್ಲಿ ಮಾತ್ರ 8.35 ಲಕ್ಷ ವಿದ್ಯಾರ್ಥಿಗಳು ಹಾಸ್ಟೆಲ್‌ಗಳಲ್ಲಿ ಕಲಿಯುತ್ತಿದ್ದಾರೆ. ವಿಶೇಷವೆಂದರೆ ಈ ಶಾಲೆಗಳಲ್ಲಿ ಫಲಿತಾಂಶ ಕೂಡ ಉತ್ತಮವಾಗಿದೆ. ವಸತಿ ಶಾಲೆಗಳಲ್ಲಿ ಓದಿದ ಮಕ್ಕಳು ಇಂದು ಐಎಎಸ್-ಐಪಿಎಸ್ ಆಗಿದ್ದಾರೆ. ಶೇ.98ರಷ್ಟು ಮಕ್ಕಳು ಪ್ರತಿವರ್ಷ ಉತ್ತೀರ್ಣರಾಗುತ್ತಿದ್ದಾರೆ. ದಲಿತ ಚಳವಳಿ ಮತ್ತು ಕೃಷ್ಣಪ್ಪ ಅವರ ಮುಂದಾಲೋಚನೆಗಳೇ ಇದಕ್ಕೆಲ್ಲಾ ಕಾರಣ. ಅಂದರೆ ಒಂದು ಗಟ್ಟಿ ಸಿದ್ಧಾಂತದಿಂದ ಮಾತ್ರ ಇದೆಲ್ಲ ಸಾಧ್ಯ” ಎಂದರು.

ಹಾವೇರಿ| ಪೌರ ಕಾರ್ಮಿಕರ ಮೇಲೆ ಹಲ್ಲೆ: ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...