Homeಕರ್ನಾಟಕದಲಿತ ಚಳವಳಿಯನ್ನು ಹೊಸ ತಲೆಮಾರು ಒಗ್ಗೂಡಿಸಬೇಕು: ಪ್ರೊ. ನಟರಾಜ್ ಹುಳಿಯಾರ್

ದಲಿತ ಚಳವಳಿಯನ್ನು ಹೊಸ ತಲೆಮಾರು ಒಗ್ಗೂಡಿಸಬೇಕು: ಪ್ರೊ. ನಟರಾಜ್ ಹುಳಿಯಾರ್

- Advertisement -
- Advertisement -

ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಪ್ರಕ್ರಿಯೆ ಪ್ರಸ್ತುತ ಒಂದು ಹಂತಕ್ಕೆ ಬಂದಿದೆ; ಈ ವಿಷಯ ಪರಿಹಾರದ ಬಳಿಕ ಹೊಸ ತಲೆಮಾರು ದಲಿತ ಚಳುವಳಿಯನ್ನು ಒಗ್ಗೂಡಿಸುವ ಕೆಲಸ ಮಾಡಬೇಕು ಎಂದು ಪ್ರೊ. ನಟರಾಜ್ ಹುಳಿಯಾರ್ ಕರೆಕೊಟ್ಟರು.

ಬೆಂಗಳೂರು ನಗರ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಪ್ರೊ. ಬಿ.ಕೃಷ್ಣಪ್ಪ ಅವರ 88ನೇ ಜನ್ಮದಿನದ ಪ್ರಯುಕ್ತ ನಡೆದ ‘ನಾಗರಿಕ ಹಕ್ಕು ರಕ್ಷಣಾ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಾಲೇಜಿನ ಪ್ರಾಂಶುಪಾಲರಾಗಿದ್ದ ಪ್ರೊ. ಬಿ.ಕೃಷ್ಣಪ್ಪ ಅವರು ಟೀಚರ್ ಆಗಿ ಚಳವಳಿ ಹೇಗೆ ನಡೆಸಬೇಕು ಎಂದು ಒಂದು ಮಾದರಿ ಹಾಕಿಕೊಟ್ಟರು. ಕನ್ನಡ ಸಾಹಿತ್ಯದಲ್ಲಿ ದಲಿತ ವಿಮರ್ಶೆ ಹೇಗಿರಬೇಕು? ವಿದ್ಯಾರ್ಥಿಗಳ ನಡುವೆ ಚಳವಳಿ ಹೇಗೆ ಕಟ್ಟಬೇಕು ಎಂದು ಹೇಳಿಕೊಟ್ಟರು. ಇಂದು ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಕೃಷ್ಣಪ್ಪ ಅವರ ಮಾದರಿ ನಮ್ಮ ಎದುರಿಗಿದೆ. ದಲಿತ ಚಳವಳಿಗೆ ಮಾತ್ರವಲ್ಲ, ಕರ್ನಾಟಕಕ್ಕೆ ಅವರ ಮಾದರಿ ಹಬ್ಬಿದೆ ಎಂದರು.

ಭದ್ರಾವತಿಯಲ್ಲಿ ವಿಎಸ್ಎನ್ಎಲ್ ಕಾರ್ಖಾನೆಯಲ್ಲಿ ದಲಿತ ನೌಕರರಿಗೆ ಪ್ರತ್ಯೇಕ ಚಹಾ ನೀಡಲಾಗುತ್ತಿತ್ತು. ಪ್ರಬಲ ಜಾತಿ ನೌಕರರೊಬ್ಬರು ಬಂದು ಎಲ್ಲರಿಗೂ ಚಹಾ ನೀಡಬೇಕಾಗಿತ್ತು. ಅದನ್ನು ವಿರೋಧಿಸುವ ಮೂಲಕ  ಹೋರಾಟ ಕಟ್ಟಿದರು. ಅಲ್ಲಿಂದ ಅವರು ಅಸ್ಪೃಶ್ಯತೆ ವಿರೋಧಿ ಹೋರಾಟಕ್ಕೆ ಚಾಲನೆ ಕೊಟ್ಟರು. 70ರ ದಶಕದಲ್ಲಿ ಕೃಷ್ಣಪ್ಪ ಅವರು ಸಮಾಜ ಕಲ್ಯಾಣ ಇಲಾಖೆ ಕೆಲಸದ ಬಗ್ಗೆ ಹಾಗೂ ರಾಜ್ಯ ಬಜೆಟ್ ಬಗ್ಗೆ ಚರ್ಚೆ ಮಾಡುತ್ತಿದ್ದರು. ಸಮಾಜ ಕಲ್ಯಾಣ ಇಲಾಖೆ ಏನೆಲ್ಲಾ ಮಾಡಬೇಕು ಎಂದು ಸಲಹೆ ಕೊಡುತ್ತಿದ್ದರು. ಅಂದು ಕೃಷ್ಣಪ್ಪ ಅವರು ಮಾಡಿದ ಹೋರಾಟದ ಪರಿಣಾಮವಾಗಿ ಸರ್ಕಾರ ಈಗ ದಲಿತರಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಹಣ ಮೀಸಲಿಟ್ಟಿದೆ ಎಂದು ಹೇಳಿದರು.

ಕೃಷ್ಣಪ್ಪ ಅವರ ಹೋರಾಟದ ಫಲದಿಂದ ಇಂದು ದಲಿತರ ಭೂಮಿ ಪರಭಾರೆ ಬಗ್ಗೆ ಕಾನೂನಾಗಿದೆ. ಕೃಷ್ಣಪ್ಪ ಅವರ ಗತಕಾಲವನ್ನು ನೆನೆಪಿಸಿಕೊಂಡು ನಾವು ಇಂದು ವಿಷಾದ ವ್ಯಕ್ತಪಡಿಸುತ್ತಿದ್ದೇವೆ. ದಲಿತ ಚಳವಳಿಗೆ ಸಾಹಿತಿಗಳು, ಬರಹಗಾರರು, ಶಿಕ್ಷಕರು, ರಾಜಕಾರಣಿಗಳು ಸೇರಿದಂತೆ ಎಲ್ಲ ವಲಯದಿಂದ ಪ್ರತಿನಿಧಿಗಳು ಇದ್ದರು. ಇಂದು ದಲಿತ ಚಳವಳಿಗೆ ಅವರೆಲ್ಲರ ಸಂಪರ್ಕ ಕಡಿಮೆಯಾಗಿದೆ. ದಲಿತ ಚಳವಳಿಗೆ ವಿವಿಧ ವಲಯಗಳಿಂದ ಬರುತ್ತಿದ್ದ ಬೆಂಬಲ ಕ್ಷೀಣಿಸಿದೆ. ದಲಿತ ಚಳವಳಿಗೆ ಕೃಷ್ಣಪ್ಪ ಅವರು ಕೊಟ್ಟ ನುಡಿಗಟ್ಟುಗಳು ಈಗಲೂ ನಮ್ಮ ಬಳಿಯಲ್ಲಿ ಇದೆ; ಎಲ್ಲ ವಲಯಗಳ ಬುದ್ದಿಜೀವಿಗಳು ದಲಿತ ಚಳವಳಿ ಜೊತೆಗೆ ಸೇರಬೇಕು. ಏಕೆಂದರೆ, ಅಮೆರಿಕದಲ್ಲಿ ಒಬಾಮ ಎರಡು ಅವಧಿಗೆ ಅಧ್ಯಕ್ಷರಾಗಲೂ ಇದೇ ಕಾರಣ. ಅಲ್ಲಿನ ಸಾಂಸ್ಕೃತಿಕ ಅಧಿಕಾರದಿಂದ ಇದು ಸಾಧ್ಯವಾಯಿತು. ಸಿನಿಮಾ, ಹಾಡುಗಾರರು, ಬರಹಗಾರರು ಸೇರಿದಂತೆ ಎಲ್ಲರೂ ಕಪ್ಪು ಜನರ ಬಗ್ಗೆ ಮಾತನಾಡಿದರು ಎಂದರು.

ನಾವು ಅಂಬೇಡ್ಕರ್‌ವಾದವನ್ನು ಪ್ರಚಾರ ಮಾಡಬೇಕು. ಅಂಬೇಡ್ಕರ್ ಅವರ ವೈಚಾರಿಕತೆ ಸಮಾಜದಲ್ಲಿ ಹಬ್ಬದ ಕಾರಣಕ್ಕೆ ಇಂದು ದೇಶದಲ್ಲಿ ಹಲವೆಡೆ ಕಾಲ್ತುಳಿತ ಆಗುತ್ತಿದೆ. ಅಂಬೇಡ್ಕರ್ ಅವರ ಜಾತಿ ವಿನಾಶದ ಮಾದರಿಯನ್ನು ಮರೆತಿರುವ ನಾವು, ಜಾತಿ ಉಪಜಾತಿಗಳನ್ನು ಪೋಷಿಸಿಕೊಂಡು ಹೋಗುತ್ತಿದ್ದೇವೆ. ಜಾತಿ ಪ್ರಜ್ಞೆಯನ್ನು ನಾವು ನಮ್ಮ ತಲೆಯಿಂದ ಹೋಗಲಾಡಿಸಬೇಕು. ಜಾತಿ ಇಂದು ಎಲ್ಲವನ್ನೂ ನಿಯಂತ್ರಣ ಮಾಡುತ್ತಿದೆ. ಊಳಿಗಮಾನ್ಯ ಜಾತಿ ಹಾಗೂ ಪಕ್ಷಗಳು ದಲಿತ ರಾಜಕಾರಣಿಗಳ ವಿರುದ್ಧ ಮಾತನಾಡಲು ದಲಿತ ರಾಜಕಾರಣಿಗೇ ಸುಪಾರಿ ನೀಡುತ್ತಿವೆ. ಅದಕ್ಕೆ ನಮ್ಮ ಮಾಧ್ಯಮಗಳೂ ಹೆಚ್ಚು ಪ್ರಚಾರ ಕೊಡುತ್ತಿವೆ ಎಂದು ಹೇಳಿದರು.

ದಲಿತ ಚಳವಳಿಯ ಯುಜನರಿಗೆ ನನ್ನದೊಂದು ಸಲಹೆ. ಒಳ ಮೀಸಲಾತಿ ಜಾರಿ ಪ್ರಕ್ರಿಯೆ ಒಂದು ಹಂತಕ್ಕೆ ಬಂದಿದೆ. ಅದು ಪರಿಹಾರ ಆದ ನಂತರ ಹೊಸ ತಲೆಮಾರು ದಲಿತ ಚಳುವಳಿಯನ್ನು ಒಗ್ಗೂಡಿಸುವ ಕೆಲಸ ಮಾಡಬೇಕು ಎಂದರು ಕಿವಿಮಾತು ಹೇಳಿದರು.

ಸಿದ್ಧಾಂತಗಳಿಗೆ ಮಾತ್ರ ಜಗತ್ತು ಬದಲಿಸುವ ಶಕ್ತಿ ಇದೆ

ಯಾವ ಬಾಂಬು-ಬಂದೂಕಿಗೂ ಜಗತ್ತನ್ನು ಬದಲಾಯಿಸುವ ಶಕ್ತಿ ಇಲ್ಲ. ಗಟ್ಟಿ ಸಿದ್ಧಾಂತಗಳಿಗೆ ಮಾತ್ರ ಆ ಶಕ್ತಿ ಇದೆ ಎಂದು ಚಿಂತಕರು ಹಾಗೂ ಮುಖ್ಯಮಂತ್ರಿಗಳ ಆಪ್ತ ಕಾರ್ಯರ್ಶಿಗಳಾದ ಡಾ. ಎನ್.ವೆಂಕಟೇಶಯ್ಯ ಪ್ರತಿಪಾದಿಸಿದರು.

ಅಂಬೇಡ್ಕರ್‌ವಾದ ವಿಶೇಷಾಂಕ ಬಿಡುಗಡೆಗೊಳಿಸಿ ಮಾತನಾಡಿದ ಅವರು, “ದಲಿತ ಚಳವಳಿಗೆ ಈಗ 51 ವರ್ಷ ತುಂಬುತ್ತಿದೆ. ಜಗತ್ತನ್ನು ಬದಲಾಯಿಸುವ ಶಕ್ತಿ ಗಟ್ಟಿ ಸಿದ್ಧಾಂತಗಳಿಗೆ ಮಾತ್ರ ಇದೆ. ಯಾವುದೇ ಬಾಂಬು-ಬಂದೂಕುಗಳಿಗೆ ಅಲ್ಲ. ಸಿದ್ಧಾಂತವು ಮನುಷ್ಯ ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ. ಸಿದ್ಧಾಂತವು ಸಮಾಜದ ಬದಲಾವಣೆಗೆ ಸದಾ ಶ್ರಮಿಸುತ್ತದೆ; ಇಲ್ಲದಿದ್ದರೆ ಆ ಸಿದ್ದಾಂತ ಜೀವಂತ ಇರುವುದಿಲ್ಲ ಎಂದರು.

ಕೃಷ್ಣಪ್ಪ ಅವರ ಹೋರಾಟದ ಮಾರ್ಗಗಳು ಭೂಮಿ, ವಸತಿ ಶಾಲೆ, ಮೂಢನಂಬಿಕೆ ಮತ್ತು ಅಸ್ಪೃಶ್ಯತೆ ವಿರೊಧಿಯಾಗಿತ್ತು. ಅವರು ಪ್ರಮುಖವಾಗಿ ನಾಲ್ಕೈದು ಹೋರಾಟಗಳನ್ನು ರೂಪಿಸಿದರು. 70ರ ದಶಕದಲ್ಲಿ ಅವರು ನಡೆಸಿದ ಭೂಮಿ ಹೋರಾಟದಿಂದ ಇಂದು ಲಕ್ಷಾಂತರ ಜನ ಭೂ ಹಿಡುವಳಿದಾರರಾಗಿದ್ದಾರೆ; ಅದರಲ್ಲಿ ಬಹುತೇಕರು ದಲಿತರಿದ್ದಾರೆ. ‘ಹೆಂಡ ಬೇಡ, ವಸತಿ ಶಾಲೆ ಕೊಡಿ’ ಎಂಬ ಚಳವಳಿಯಿಂದ ಇಂದು ಇಡೀ ದೇಶದಲ್ಲೇ ಕರ್ನಾಟಕದಲ್ಲಿ ಮಾತ್ರ 8.35 ಲಕ್ಷ ವಿದ್ಯಾರ್ಥಿಗಳು ಹಾಸ್ಟೆಲ್‌ಗಳಲ್ಲಿ ಕಲಿಯುತ್ತಿದ್ದಾರೆ. ವಿಶೇಷವೆಂದರೆ ಈ ಶಾಲೆಗಳಲ್ಲಿ ಫಲಿತಾಂಶ ಕೂಡ ಉತ್ತಮವಾಗಿದೆ. ವಸತಿ ಶಾಲೆಗಳಲ್ಲಿ ಓದಿದ ಮಕ್ಕಳು ಇಂದು ಐಎಎಸ್-ಐಪಿಎಸ್ ಆಗಿದ್ದಾರೆ. ಶೇ.98ರಷ್ಟು ಮಕ್ಕಳು ಪ್ರತಿವರ್ಷ ಉತ್ತೀರ್ಣರಾಗುತ್ತಿದ್ದಾರೆ. ದಲಿತ ಚಳವಳಿ ಮತ್ತು ಕೃಷ್ಣಪ್ಪ ಅವರ ಮುಂದಾಲೋಚನೆಗಳೇ ಇದಕ್ಕೆಲ್ಲಾ ಕಾರಣ. ಅಂದರೆ ಒಂದು ಗಟ್ಟಿ ಸಿದ್ಧಾಂತದಿಂದ ಮಾತ್ರ ಇದೆಲ್ಲ ಸಾಧ್ಯ” ಎಂದರು.

ಹಾವೇರಿ| ಪೌರ ಕಾರ್ಮಿಕರ ಮೇಲೆ ಹಲ್ಲೆ: ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...