Homeಕರ್ನಾಟಕದಲಿತ ಚಳವಳಿಯನ್ನು ಹೊಸ ತಲೆಮಾರು ಒಗ್ಗೂಡಿಸಬೇಕು: ಪ್ರೊ. ನಟರಾಜ್ ಹುಳಿಯಾರ್

ದಲಿತ ಚಳವಳಿಯನ್ನು ಹೊಸ ತಲೆಮಾರು ಒಗ್ಗೂಡಿಸಬೇಕು: ಪ್ರೊ. ನಟರಾಜ್ ಹುಳಿಯಾರ್

- Advertisement -
- Advertisement -

ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಪ್ರಕ್ರಿಯೆ ಪ್ರಸ್ತುತ ಒಂದು ಹಂತಕ್ಕೆ ಬಂದಿದೆ; ಈ ವಿಷಯ ಪರಿಹಾರದ ಬಳಿಕ ಹೊಸ ತಲೆಮಾರು ದಲಿತ ಚಳುವಳಿಯನ್ನು ಒಗ್ಗೂಡಿಸುವ ಕೆಲಸ ಮಾಡಬೇಕು ಎಂದು ಪ್ರೊ. ನಟರಾಜ್ ಹುಳಿಯಾರ್ ಕರೆಕೊಟ್ಟರು.

ಬೆಂಗಳೂರು ನಗರ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಪ್ರೊ. ಬಿ.ಕೃಷ್ಣಪ್ಪ ಅವರ 88ನೇ ಜನ್ಮದಿನದ ಪ್ರಯುಕ್ತ ನಡೆದ ‘ನಾಗರಿಕ ಹಕ್ಕು ರಕ್ಷಣಾ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಾಲೇಜಿನ ಪ್ರಾಂಶುಪಾಲರಾಗಿದ್ದ ಪ್ರೊ. ಬಿ.ಕೃಷ್ಣಪ್ಪ ಅವರು ಟೀಚರ್ ಆಗಿ ಚಳವಳಿ ಹೇಗೆ ನಡೆಸಬೇಕು ಎಂದು ಒಂದು ಮಾದರಿ ಹಾಕಿಕೊಟ್ಟರು. ಕನ್ನಡ ಸಾಹಿತ್ಯದಲ್ಲಿ ದಲಿತ ವಿಮರ್ಶೆ ಹೇಗಿರಬೇಕು? ವಿದ್ಯಾರ್ಥಿಗಳ ನಡುವೆ ಚಳವಳಿ ಹೇಗೆ ಕಟ್ಟಬೇಕು ಎಂದು ಹೇಳಿಕೊಟ್ಟರು. ಇಂದು ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಕೃಷ್ಣಪ್ಪ ಅವರ ಮಾದರಿ ನಮ್ಮ ಎದುರಿಗಿದೆ. ದಲಿತ ಚಳವಳಿಗೆ ಮಾತ್ರವಲ್ಲ, ಕರ್ನಾಟಕಕ್ಕೆ ಅವರ ಮಾದರಿ ಹಬ್ಬಿದೆ ಎಂದರು.

ಭದ್ರಾವತಿಯಲ್ಲಿ ವಿಎಸ್ಎನ್ಎಲ್ ಕಾರ್ಖಾನೆಯಲ್ಲಿ ದಲಿತ ನೌಕರರಿಗೆ ಪ್ರತ್ಯೇಕ ಚಹಾ ನೀಡಲಾಗುತ್ತಿತ್ತು. ಪ್ರಬಲ ಜಾತಿ ನೌಕರರೊಬ್ಬರು ಬಂದು ಎಲ್ಲರಿಗೂ ಚಹಾ ನೀಡಬೇಕಾಗಿತ್ತು. ಅದನ್ನು ವಿರೋಧಿಸುವ ಮೂಲಕ  ಹೋರಾಟ ಕಟ್ಟಿದರು. ಅಲ್ಲಿಂದ ಅವರು ಅಸ್ಪೃಶ್ಯತೆ ವಿರೋಧಿ ಹೋರಾಟಕ್ಕೆ ಚಾಲನೆ ಕೊಟ್ಟರು. 70ರ ದಶಕದಲ್ಲಿ ಕೃಷ್ಣಪ್ಪ ಅವರು ಸಮಾಜ ಕಲ್ಯಾಣ ಇಲಾಖೆ ಕೆಲಸದ ಬಗ್ಗೆ ಹಾಗೂ ರಾಜ್ಯ ಬಜೆಟ್ ಬಗ್ಗೆ ಚರ್ಚೆ ಮಾಡುತ್ತಿದ್ದರು. ಸಮಾಜ ಕಲ್ಯಾಣ ಇಲಾಖೆ ಏನೆಲ್ಲಾ ಮಾಡಬೇಕು ಎಂದು ಸಲಹೆ ಕೊಡುತ್ತಿದ್ದರು. ಅಂದು ಕೃಷ್ಣಪ್ಪ ಅವರು ಮಾಡಿದ ಹೋರಾಟದ ಪರಿಣಾಮವಾಗಿ ಸರ್ಕಾರ ಈಗ ದಲಿತರಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಹಣ ಮೀಸಲಿಟ್ಟಿದೆ ಎಂದು ಹೇಳಿದರು.

ಕೃಷ್ಣಪ್ಪ ಅವರ ಹೋರಾಟದ ಫಲದಿಂದ ಇಂದು ದಲಿತರ ಭೂಮಿ ಪರಭಾರೆ ಬಗ್ಗೆ ಕಾನೂನಾಗಿದೆ. ಕೃಷ್ಣಪ್ಪ ಅವರ ಗತಕಾಲವನ್ನು ನೆನೆಪಿಸಿಕೊಂಡು ನಾವು ಇಂದು ವಿಷಾದ ವ್ಯಕ್ತಪಡಿಸುತ್ತಿದ್ದೇವೆ. ದಲಿತ ಚಳವಳಿಗೆ ಸಾಹಿತಿಗಳು, ಬರಹಗಾರರು, ಶಿಕ್ಷಕರು, ರಾಜಕಾರಣಿಗಳು ಸೇರಿದಂತೆ ಎಲ್ಲ ವಲಯದಿಂದ ಪ್ರತಿನಿಧಿಗಳು ಇದ್ದರು. ಇಂದು ದಲಿತ ಚಳವಳಿಗೆ ಅವರೆಲ್ಲರ ಸಂಪರ್ಕ ಕಡಿಮೆಯಾಗಿದೆ. ದಲಿತ ಚಳವಳಿಗೆ ವಿವಿಧ ವಲಯಗಳಿಂದ ಬರುತ್ತಿದ್ದ ಬೆಂಬಲ ಕ್ಷೀಣಿಸಿದೆ. ದಲಿತ ಚಳವಳಿಗೆ ಕೃಷ್ಣಪ್ಪ ಅವರು ಕೊಟ್ಟ ನುಡಿಗಟ್ಟುಗಳು ಈಗಲೂ ನಮ್ಮ ಬಳಿಯಲ್ಲಿ ಇದೆ; ಎಲ್ಲ ವಲಯಗಳ ಬುದ್ದಿಜೀವಿಗಳು ದಲಿತ ಚಳವಳಿ ಜೊತೆಗೆ ಸೇರಬೇಕು. ಏಕೆಂದರೆ, ಅಮೆರಿಕದಲ್ಲಿ ಒಬಾಮ ಎರಡು ಅವಧಿಗೆ ಅಧ್ಯಕ್ಷರಾಗಲೂ ಇದೇ ಕಾರಣ. ಅಲ್ಲಿನ ಸಾಂಸ್ಕೃತಿಕ ಅಧಿಕಾರದಿಂದ ಇದು ಸಾಧ್ಯವಾಯಿತು. ಸಿನಿಮಾ, ಹಾಡುಗಾರರು, ಬರಹಗಾರರು ಸೇರಿದಂತೆ ಎಲ್ಲರೂ ಕಪ್ಪು ಜನರ ಬಗ್ಗೆ ಮಾತನಾಡಿದರು ಎಂದರು.

ನಾವು ಅಂಬೇಡ್ಕರ್‌ವಾದವನ್ನು ಪ್ರಚಾರ ಮಾಡಬೇಕು. ಅಂಬೇಡ್ಕರ್ ಅವರ ವೈಚಾರಿಕತೆ ಸಮಾಜದಲ್ಲಿ ಹಬ್ಬದ ಕಾರಣಕ್ಕೆ ಇಂದು ದೇಶದಲ್ಲಿ ಹಲವೆಡೆ ಕಾಲ್ತುಳಿತ ಆಗುತ್ತಿದೆ. ಅಂಬೇಡ್ಕರ್ ಅವರ ಜಾತಿ ವಿನಾಶದ ಮಾದರಿಯನ್ನು ಮರೆತಿರುವ ನಾವು, ಜಾತಿ ಉಪಜಾತಿಗಳನ್ನು ಪೋಷಿಸಿಕೊಂಡು ಹೋಗುತ್ತಿದ್ದೇವೆ. ಜಾತಿ ಪ್ರಜ್ಞೆಯನ್ನು ನಾವು ನಮ್ಮ ತಲೆಯಿಂದ ಹೋಗಲಾಡಿಸಬೇಕು. ಜಾತಿ ಇಂದು ಎಲ್ಲವನ್ನೂ ನಿಯಂತ್ರಣ ಮಾಡುತ್ತಿದೆ. ಊಳಿಗಮಾನ್ಯ ಜಾತಿ ಹಾಗೂ ಪಕ್ಷಗಳು ದಲಿತ ರಾಜಕಾರಣಿಗಳ ವಿರುದ್ಧ ಮಾತನಾಡಲು ದಲಿತ ರಾಜಕಾರಣಿಗೇ ಸುಪಾರಿ ನೀಡುತ್ತಿವೆ. ಅದಕ್ಕೆ ನಮ್ಮ ಮಾಧ್ಯಮಗಳೂ ಹೆಚ್ಚು ಪ್ರಚಾರ ಕೊಡುತ್ತಿವೆ ಎಂದು ಹೇಳಿದರು.

ದಲಿತ ಚಳವಳಿಯ ಯುಜನರಿಗೆ ನನ್ನದೊಂದು ಸಲಹೆ. ಒಳ ಮೀಸಲಾತಿ ಜಾರಿ ಪ್ರಕ್ರಿಯೆ ಒಂದು ಹಂತಕ್ಕೆ ಬಂದಿದೆ. ಅದು ಪರಿಹಾರ ಆದ ನಂತರ ಹೊಸ ತಲೆಮಾರು ದಲಿತ ಚಳುವಳಿಯನ್ನು ಒಗ್ಗೂಡಿಸುವ ಕೆಲಸ ಮಾಡಬೇಕು ಎಂದರು ಕಿವಿಮಾತು ಹೇಳಿದರು.

ಸಿದ್ಧಾಂತಗಳಿಗೆ ಮಾತ್ರ ಜಗತ್ತು ಬದಲಿಸುವ ಶಕ್ತಿ ಇದೆ

ಯಾವ ಬಾಂಬು-ಬಂದೂಕಿಗೂ ಜಗತ್ತನ್ನು ಬದಲಾಯಿಸುವ ಶಕ್ತಿ ಇಲ್ಲ. ಗಟ್ಟಿ ಸಿದ್ಧಾಂತಗಳಿಗೆ ಮಾತ್ರ ಆ ಶಕ್ತಿ ಇದೆ ಎಂದು ಚಿಂತಕರು ಹಾಗೂ ಮುಖ್ಯಮಂತ್ರಿಗಳ ಆಪ್ತ ಕಾರ್ಯರ್ಶಿಗಳಾದ ಡಾ. ಎನ್.ವೆಂಕಟೇಶಯ್ಯ ಪ್ರತಿಪಾದಿಸಿದರು.

ಅಂಬೇಡ್ಕರ್‌ವಾದ ವಿಶೇಷಾಂಕ ಬಿಡುಗಡೆಗೊಳಿಸಿ ಮಾತನಾಡಿದ ಅವರು, “ದಲಿತ ಚಳವಳಿಗೆ ಈಗ 51 ವರ್ಷ ತುಂಬುತ್ತಿದೆ. ಜಗತ್ತನ್ನು ಬದಲಾಯಿಸುವ ಶಕ್ತಿ ಗಟ್ಟಿ ಸಿದ್ಧಾಂತಗಳಿಗೆ ಮಾತ್ರ ಇದೆ. ಯಾವುದೇ ಬಾಂಬು-ಬಂದೂಕುಗಳಿಗೆ ಅಲ್ಲ. ಸಿದ್ಧಾಂತವು ಮನುಷ್ಯ ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ. ಸಿದ್ಧಾಂತವು ಸಮಾಜದ ಬದಲಾವಣೆಗೆ ಸದಾ ಶ್ರಮಿಸುತ್ತದೆ; ಇಲ್ಲದಿದ್ದರೆ ಆ ಸಿದ್ದಾಂತ ಜೀವಂತ ಇರುವುದಿಲ್ಲ ಎಂದರು.

ಕೃಷ್ಣಪ್ಪ ಅವರ ಹೋರಾಟದ ಮಾರ್ಗಗಳು ಭೂಮಿ, ವಸತಿ ಶಾಲೆ, ಮೂಢನಂಬಿಕೆ ಮತ್ತು ಅಸ್ಪೃಶ್ಯತೆ ವಿರೊಧಿಯಾಗಿತ್ತು. ಅವರು ಪ್ರಮುಖವಾಗಿ ನಾಲ್ಕೈದು ಹೋರಾಟಗಳನ್ನು ರೂಪಿಸಿದರು. 70ರ ದಶಕದಲ್ಲಿ ಅವರು ನಡೆಸಿದ ಭೂಮಿ ಹೋರಾಟದಿಂದ ಇಂದು ಲಕ್ಷಾಂತರ ಜನ ಭೂ ಹಿಡುವಳಿದಾರರಾಗಿದ್ದಾರೆ; ಅದರಲ್ಲಿ ಬಹುತೇಕರು ದಲಿತರಿದ್ದಾರೆ. ‘ಹೆಂಡ ಬೇಡ, ವಸತಿ ಶಾಲೆ ಕೊಡಿ’ ಎಂಬ ಚಳವಳಿಯಿಂದ ಇಂದು ಇಡೀ ದೇಶದಲ್ಲೇ ಕರ್ನಾಟಕದಲ್ಲಿ ಮಾತ್ರ 8.35 ಲಕ್ಷ ವಿದ್ಯಾರ್ಥಿಗಳು ಹಾಸ್ಟೆಲ್‌ಗಳಲ್ಲಿ ಕಲಿಯುತ್ತಿದ್ದಾರೆ. ವಿಶೇಷವೆಂದರೆ ಈ ಶಾಲೆಗಳಲ್ಲಿ ಫಲಿತಾಂಶ ಕೂಡ ಉತ್ತಮವಾಗಿದೆ. ವಸತಿ ಶಾಲೆಗಳಲ್ಲಿ ಓದಿದ ಮಕ್ಕಳು ಇಂದು ಐಎಎಸ್-ಐಪಿಎಸ್ ಆಗಿದ್ದಾರೆ. ಶೇ.98ರಷ್ಟು ಮಕ್ಕಳು ಪ್ರತಿವರ್ಷ ಉತ್ತೀರ್ಣರಾಗುತ್ತಿದ್ದಾರೆ. ದಲಿತ ಚಳವಳಿ ಮತ್ತು ಕೃಷ್ಣಪ್ಪ ಅವರ ಮುಂದಾಲೋಚನೆಗಳೇ ಇದಕ್ಕೆಲ್ಲಾ ಕಾರಣ. ಅಂದರೆ ಒಂದು ಗಟ್ಟಿ ಸಿದ್ಧಾಂತದಿಂದ ಮಾತ್ರ ಇದೆಲ್ಲ ಸಾಧ್ಯ” ಎಂದರು.

ಹಾವೇರಿ| ಪೌರ ಕಾರ್ಮಿಕರ ಮೇಲೆ ಹಲ್ಲೆ: ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...